Homeಮುಖಪುಟಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ - ಸಿಪಿಐ(ಎಂ)

ಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ – ಸಿಪಿಐ(ಎಂ)

- Advertisement -
- Advertisement -

ಶತಮಾನಗಳಷ್ಟು ಹಳೆಯದಾದ ಮಸೀದಿಗಳನ್ನು ದೇವಾಲಯ ಎಂದು ಪ್ರತಿಪಾದಿಸುವ ಮೂಲಕ ಕೆಳ ನ್ಯಾಯಾಲಯಗಳಲ್ಲಿ ಮೊಕದ್ದಮೆ ಹೂಡಲಾಗುತ್ತಿರುವ ಮತ್ತು ಅದನ್ನು ಪರಿಗಣಿಸುತ್ತಿರುವ ಬಗ್ಗೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಪಾಲಿಟ್ ಬ್ಯೂರೋ ಸೋಮವಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991 ಅನ್ನು ಎತ್ತಿಹಿಡಿಯುವ ಮೂಲಕ ಅಂತಹ ದಾವೆಗಳನ್ನು ನಿಲ್ಲಿಸಲು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸದಿರುವುದು ದುರದೃಷ್ಟಕರ ಎಂದು ಪಕ್ಷವೂ ಹೇಳಿದೆ. ಮಸೀದಿಗಳ ವಿರುದ್ಧ

ಈ ಬಗ್ಗೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಪಕ್ಷದ ಪಾಲಿಟ್ ಬ್ಯೂರೊ, 2019ರ ಬಾಬರಿ ಮಸೀದಿ ಒಡೆದ ವಿವಾದದ ಕುರಿತು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್‌ನ ಐವರು ಸದಸ್ಯರ ಪೀಠವು ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ-1991 ರ ಸಿಂಧುತ್ವವನ್ನು ಮತ್ತು ಅದರ ಜಾರಿಯನ್ನು ಸ್ಪಷ್ಟವಾಗಿ ಎತ್ತಿಹಿಡಿದಿದೆ. ಈ ನಿರ್ದೇಶನದ ಪ್ರಕಾರ, ಕಾಯಿದೆಯನ್ನು ಉಲ್ಲಂಘಿಸುವ ಕಾನೂನು ಪ್ರಕ್ರಿಯೆಗಳಿಗೆ ತಡೆ ಹಾಕಲು ಮಧ್ಯಪ್ರವೇಶಿಸುವುದು ಸುಪ್ರೀಂ ಕೋರ್ಟ್‌ನ ಜವಾಬ್ದಾರಿಯಾಗಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಾರಣಾಸಿ ಮತ್ತು ಮಥುರಾ ನಂತರ, ಸಂಭಾಲ್‌ನಲ್ಲಿ, ಕೆಳ ನ್ಯಾಯಾಲಯವು 16 ನೇ ಶತಮಾನದ ಮಸೀದಿಯ ಸಮೀಕ್ಷೆಗೆ ಆದೇಶ ನೀಡಿತು. ಅದು ಹಿಂಸಾಚಾರಕ್ಕೆ ಕಾರಣವಾಗಿದ್ದು, ನಾಲ್ವರು ಮುಸ್ಲಿಂ ಯುವಕರನ್ನು ಕೊಲ್ಲಲಾಯಿತು ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ. ಅಜ್ಮೀರ್ ಷರೀಫ್ ದರ್ಗಾಕ್ಕೆ ಸಂಬಂಧಿಸಿದಂತೆ ಅಜ್ಮೀರ್‌ನ ಸಿವಿಲ್ ನ್ಯಾಯಾಲಯದಲ್ಲಿ ಸಲ್ಲಿಸಲಾದ ಇದೇ ರೀತಿಯ ಅರ್ಜಿಯನ್ನು ಪಕ್ಷವು ಉಲ್ಲೇಖಿಸಿದೆ.

ಇಷ್ಟೆ ಅಲ್ಲದೆ, ನೆರೆಯ ಬಾಂಗ್ಲಾದೇಶದ ಪರಿಸ್ಥಿತಿಯ ಕುರಿತು, ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪಕ್ಷವು ಪುನರುಚ್ಚರಿಸಿದೆ. ಈ ನಿಟ್ಟಿನಲ್ಲಿ ಅಲ್ಲಿನ ಆಡಳಿತವು ಇಸ್ಲಾಮಿ ಮೂಲಭೂತವಾದಿ ಶಕ್ತಿಗಳ ಚಟುವಟಿಕೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಸಿಪಿಎಂ ಹೇಳಿದೆ. ಮಸೀದಿಗಳ ವಿರುದ್ಧ

ಅದೇ ಸಮಯದಲ್ಲಿ, ಭಾರತದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಮತ್ತು ಹಿಂದುತ್ವ ಸಂಘಟನೆಗಳ ಪ್ರಯತ್ನಗಳನ್ನು ಪೊಲಿಟ್ ಬ್ಯೂರೋ ಖಂಡಿಸಿದ್ದು, “ಬಾಂಗ್ಲಾದೇಶದ ವಿಚಾರವನ್ನು ಎತ್ತಿಕೊಂಡು ಪ್ರಚೋದಿಸಲು ಅವರು ಪ್ರಯತ್ನಿಸುತ್ತಿದ್ದು, ಅಂತಹ ವಿಧಾನವು ಬಾಂಗ್ಲಾದೇಶದ ಅಲ್ಪಸಂಖ್ಯಾತರ ಹಿತಾಸಕ್ತಿಗಳಿಗೆ ಸಹಾಯವಾಗುವುದಿಲ್ಲ” ಎಂದು ಪಕ್ಷವು ಹೇಳಿದೆ.

ಎರಡೂ ದೇಶಗಳಲ್ಲಿನ ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳು ಉಭಯ ದೇಶಗಳ ಜನರ ಹಿತಾಸಕ್ತಿಗಳಿಗೆ ಹಾನಿ ಮಾಡುವ ಎಲ್ಲಾ ರೀತಿಯ ಕೋಮುವಾದದ ವಿರುದ್ಧ ತೀವ್ರವಾಗಿ ಹೋರಾಟ ಮಾಡುವಂತೆ ಸಿಪಿಐಎಂ ಕರೆ ನೀಡಿದೆ.

ಅಷ್ಟೆ ಅಲ್ಲದೆ, ವಯನಾಡಿನಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತ ದುರಂತದ ಸಂತ್ರಸ್ತರಿಗೆ ಕೇರಳಕ್ಕೆ ಸರಿಯಾದ ನೆರವನ್ನು ನಿರಾಕರಿಸುವಲ್ಲಿ ಸರ್ಕಾರದ ನಿರ್ದಯ ಉದಾಸೀನತೆಯನ್ನು ಅದು ಕಟುವಾಗಿ ಟೀಕಿಸಿದೆ. “ತಕ್ಷಣದ ಪರಿಹಾರಕ್ಕಾಗಿ 214.68 ಕೋಟಿ ರೂ. ಮತ್ತು ಸಮಗ್ರ ಚೇತರಿಕೆ ಮತ್ತು ಪುನರ್ನಿರ್ಮಾಣಕ್ಕಾಗಿ 2,319.1 ಕೋಟಿ ರೂ.ಗಾಗಿ ಕೇರಳ ತುರ್ತು ಮನವಿ ಮಾಡಿದ್ದರೂ, ಕೇಂದ್ರವು ನಾಲ್ಕು ತಿಂಗಳು ಕಳೆದರೂ ಅನುದಾನವನ್ನು ಅನುಮೋದಿಸಲು ವಿಫಲವಾಗಿದೆ” ಎಂದು ಪಕ್ಷವೂ ಹೇಳಿದೆ.

“ಭೂಕುಸಿತವನ್ನು ‘ತೀವ್ರ ಸ್ವರೂಪದ ವಿಪತ್ತು’ ಎಂದು ವರ್ಗೀಕರಿಸಲು ನಿರಾಕರಣೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಸಾಲವನ್ನು ಮನ್ನಾ ಮಾಡಲು ಇಷ್ಟವಿಲ್ಲದಿರುವುದು ಸಹ ತೀವ್ರವಾದ ಅನ್ಯಾಯವನ್ನು ಪ್ರತಿಬಿಂಬಿಸುತ್ತದೆ. ಜೊತೆಗೆ ಇದು ಅಮಾನವೀಯ ವಿಧಾನವಾಗಿದ್ದು, ಬಿಕ್ಕಟ್ಟಿನ ಸಮಯದಲ್ಲಿ ಫೆಡರಲ್ ಬೆಂಬಲದ ತತ್ವಗಳನ್ನು ದುರ್ಬಲಗೊಳಿಸುತ್ತದೆ” ಎಂದು ಸಿಪಿಎಂ ಹೇಳಿದೆ. ರಾಜ್ಯ ಸರ್ಕಾರ ಹೇಳಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಪಾಲಿಟ್ ಬ್ಯೂರೋ ಕೇಂದ್ರಕ್ಕೆ ಮನವಿ ಮಾಡಿದೆ.

ಪಕ್ಷದ ಹೇಳಿಕೆಯಲ್ಲಿ, ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ರೈತರ ಮೇಲಿನ ಪೊಲೀಸರ ದಬ್ಬಾಳಿಕೆಯನ್ನು ಖಂಡಿಸಿದೆ. ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಮತ್ತು ಇತರ ಸಂಘಟನೆಗಳ ಸುಮಾರು 150 ಮುಖಂಡರು ಮತ್ತು ಕಾರ್ಯಕರ್ತರನ್ನು ಜೈಲಿಗೆ ಹಾಕಲಾಗಿದೆ ಎಂದು ಪಕ್ಷ ತಿಳಿಸಿದೆ. ಬಂಧಿತ ರೈತರು ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಹಲವು ಕಾರ್ಯಕರ್ತರ ಗೃಹಬಂಧನ ನಡೆಯುತ್ತಿದೆ. ಹೋರಾಟದ ಮುಂಚೂಣಿಯಲ್ಲಿದ್ದ ಮಹಿಳೆಯರ ಮೇಲೆ ಪೊಲೀಸರು ನಡೆಸಿದ ಹಲ್ಲೆ ಆಘಾತಕಾರಿಯಾಗಿದೆ ಎಂದು ಪಕ್ಷವೂ ಹೇಳಿದೆ.

“…ಈ ಹೋರಾಟಕ್ಕೆ ಸಿಪಿಐ(ಎಂ) ಸಂಪೂರ್ಣ ಬೆಂಬಲ ನೀಡುತ್ತದೆ. ದಬ್ಬಾಳಿಕೆಯನ್ನು ಕೂಡಲೇ ನಿಲ್ಲಿಸಬೇಕು ಮತ್ತು ಸರಕಾರವು ನ್ಯಾಯಯುತ ಬೇಡಿಕೆಗಳನ್ನು ಒಪ್ಪಿಕೊಂಡು ಅವುಗಳನ್ನು ಜಾರಿಗೊಳಿಸಬೇಕು ಎಂದು” ಎಂದು ಪಕ್ಷ ಹೇಳಿದೆ. ನವದೆಹಲಿಯಲ್ಲಿ ನಡೆದ ಪಾಲಿಟ್‌ ಬ್ಯೂರೋ ಸಭೆಯ ನಂತರ ಈ ಹೇಳಿಕೆಯನ್ನು ನೀಡಲಾಗಿದೆ.

ಇದನ್ನೂ ಓದಿ: ‘ಪಾಶ್‌ ಕಾಯಿದೆ’ಯಡಿ ರಾಜಕೀಯ ಪಕ್ಷಗಳನ್ನು ಸೇರಿಸುವಂತೆ ಕೋರಿ ಅರ್ಜಿ; ಇಸಿಐ ಸಂಪರ್ಕಿಸುವಂತೆ ಸೂಚಿಸಿದ ಸುಪ್ರೀಂ

‘ಪಾಶ್‌ ಕಾಯಿದೆ’ಯಡಿ ರಾಜಕೀಯ ಪಕ್ಷಗಳನ್ನು ಸೇರಿಸುವಂತೆ ಕೋರಿ ಅರ್ಜಿ; ಇಸಿಐ ಸಂಪರ್ಕಿಸುವಂತೆ ಸೂಚಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...