Homeಮುಖಪುಟಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ - ಸಿಪಿಐ(ಎಂ)

ಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ – ಸಿಪಿಐ(ಎಂ)

- Advertisement -
- Advertisement -

ಶತಮಾನಗಳಷ್ಟು ಹಳೆಯದಾದ ಮಸೀದಿಗಳನ್ನು ದೇವಾಲಯ ಎಂದು ಪ್ರತಿಪಾದಿಸುವ ಮೂಲಕ ಕೆಳ ನ್ಯಾಯಾಲಯಗಳಲ್ಲಿ ಮೊಕದ್ದಮೆ ಹೂಡಲಾಗುತ್ತಿರುವ ಮತ್ತು ಅದನ್ನು ಪರಿಗಣಿಸುತ್ತಿರುವ ಬಗ್ಗೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಪಾಲಿಟ್ ಬ್ಯೂರೋ ಸೋಮವಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991 ಅನ್ನು ಎತ್ತಿಹಿಡಿಯುವ ಮೂಲಕ ಅಂತಹ ದಾವೆಗಳನ್ನು ನಿಲ್ಲಿಸಲು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸದಿರುವುದು ದುರದೃಷ್ಟಕರ ಎಂದು ಪಕ್ಷವೂ ಹೇಳಿದೆ. ಮಸೀದಿಗಳ ವಿರುದ್ಧ

ಈ ಬಗ್ಗೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಪಕ್ಷದ ಪಾಲಿಟ್ ಬ್ಯೂರೊ, 2019ರ ಬಾಬರಿ ಮಸೀದಿ ಒಡೆದ ವಿವಾದದ ಕುರಿತು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್‌ನ ಐವರು ಸದಸ್ಯರ ಪೀಠವು ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ-1991 ರ ಸಿಂಧುತ್ವವನ್ನು ಮತ್ತು ಅದರ ಜಾರಿಯನ್ನು ಸ್ಪಷ್ಟವಾಗಿ ಎತ್ತಿಹಿಡಿದಿದೆ. ಈ ನಿರ್ದೇಶನದ ಪ್ರಕಾರ, ಕಾಯಿದೆಯನ್ನು ಉಲ್ಲಂಘಿಸುವ ಕಾನೂನು ಪ್ರಕ್ರಿಯೆಗಳಿಗೆ ತಡೆ ಹಾಕಲು ಮಧ್ಯಪ್ರವೇಶಿಸುವುದು ಸುಪ್ರೀಂ ಕೋರ್ಟ್‌ನ ಜವಾಬ್ದಾರಿಯಾಗಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಾರಣಾಸಿ ಮತ್ತು ಮಥುರಾ ನಂತರ, ಸಂಭಾಲ್‌ನಲ್ಲಿ, ಕೆಳ ನ್ಯಾಯಾಲಯವು 16 ನೇ ಶತಮಾನದ ಮಸೀದಿಯ ಸಮೀಕ್ಷೆಗೆ ಆದೇಶ ನೀಡಿತು. ಅದು ಹಿಂಸಾಚಾರಕ್ಕೆ ಕಾರಣವಾಗಿದ್ದು, ನಾಲ್ವರು ಮುಸ್ಲಿಂ ಯುವಕರನ್ನು ಕೊಲ್ಲಲಾಯಿತು ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ. ಅಜ್ಮೀರ್ ಷರೀಫ್ ದರ್ಗಾಕ್ಕೆ ಸಂಬಂಧಿಸಿದಂತೆ ಅಜ್ಮೀರ್‌ನ ಸಿವಿಲ್ ನ್ಯಾಯಾಲಯದಲ್ಲಿ ಸಲ್ಲಿಸಲಾದ ಇದೇ ರೀತಿಯ ಅರ್ಜಿಯನ್ನು ಪಕ್ಷವು ಉಲ್ಲೇಖಿಸಿದೆ.

ಇಷ್ಟೆ ಅಲ್ಲದೆ, ನೆರೆಯ ಬಾಂಗ್ಲಾದೇಶದ ಪರಿಸ್ಥಿತಿಯ ಕುರಿತು, ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪಕ್ಷವು ಪುನರುಚ್ಚರಿಸಿದೆ. ಈ ನಿಟ್ಟಿನಲ್ಲಿ ಅಲ್ಲಿನ ಆಡಳಿತವು ಇಸ್ಲಾಮಿ ಮೂಲಭೂತವಾದಿ ಶಕ್ತಿಗಳ ಚಟುವಟಿಕೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಸಿಪಿಎಂ ಹೇಳಿದೆ. ಮಸೀದಿಗಳ ವಿರುದ್ಧ

ಅದೇ ಸಮಯದಲ್ಲಿ, ಭಾರತದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಮತ್ತು ಹಿಂದುತ್ವ ಸಂಘಟನೆಗಳ ಪ್ರಯತ್ನಗಳನ್ನು ಪೊಲಿಟ್ ಬ್ಯೂರೋ ಖಂಡಿಸಿದ್ದು, “ಬಾಂಗ್ಲಾದೇಶದ ವಿಚಾರವನ್ನು ಎತ್ತಿಕೊಂಡು ಪ್ರಚೋದಿಸಲು ಅವರು ಪ್ರಯತ್ನಿಸುತ್ತಿದ್ದು, ಅಂತಹ ವಿಧಾನವು ಬಾಂಗ್ಲಾದೇಶದ ಅಲ್ಪಸಂಖ್ಯಾತರ ಹಿತಾಸಕ್ತಿಗಳಿಗೆ ಸಹಾಯವಾಗುವುದಿಲ್ಲ” ಎಂದು ಪಕ್ಷವು ಹೇಳಿದೆ.

ಎರಡೂ ದೇಶಗಳಲ್ಲಿನ ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಶಕ್ತಿಗಳು ಉಭಯ ದೇಶಗಳ ಜನರ ಹಿತಾಸಕ್ತಿಗಳಿಗೆ ಹಾನಿ ಮಾಡುವ ಎಲ್ಲಾ ರೀತಿಯ ಕೋಮುವಾದದ ವಿರುದ್ಧ ತೀವ್ರವಾಗಿ ಹೋರಾಟ ಮಾಡುವಂತೆ ಸಿಪಿಐಎಂ ಕರೆ ನೀಡಿದೆ.

ಅಷ್ಟೆ ಅಲ್ಲದೆ, ವಯನಾಡಿನಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತ ದುರಂತದ ಸಂತ್ರಸ್ತರಿಗೆ ಕೇರಳಕ್ಕೆ ಸರಿಯಾದ ನೆರವನ್ನು ನಿರಾಕರಿಸುವಲ್ಲಿ ಸರ್ಕಾರದ ನಿರ್ದಯ ಉದಾಸೀನತೆಯನ್ನು ಅದು ಕಟುವಾಗಿ ಟೀಕಿಸಿದೆ. “ತಕ್ಷಣದ ಪರಿಹಾರಕ್ಕಾಗಿ 214.68 ಕೋಟಿ ರೂ. ಮತ್ತು ಸಮಗ್ರ ಚೇತರಿಕೆ ಮತ್ತು ಪುನರ್ನಿರ್ಮಾಣಕ್ಕಾಗಿ 2,319.1 ಕೋಟಿ ರೂ.ಗಾಗಿ ಕೇರಳ ತುರ್ತು ಮನವಿ ಮಾಡಿದ್ದರೂ, ಕೇಂದ್ರವು ನಾಲ್ಕು ತಿಂಗಳು ಕಳೆದರೂ ಅನುದಾನವನ್ನು ಅನುಮೋದಿಸಲು ವಿಫಲವಾಗಿದೆ” ಎಂದು ಪಕ್ಷವೂ ಹೇಳಿದೆ.

“ಭೂಕುಸಿತವನ್ನು ‘ತೀವ್ರ ಸ್ವರೂಪದ ವಿಪತ್ತು’ ಎಂದು ವರ್ಗೀಕರಿಸಲು ನಿರಾಕರಣೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಸಾಲವನ್ನು ಮನ್ನಾ ಮಾಡಲು ಇಷ್ಟವಿಲ್ಲದಿರುವುದು ಸಹ ತೀವ್ರವಾದ ಅನ್ಯಾಯವನ್ನು ಪ್ರತಿಬಿಂಬಿಸುತ್ತದೆ. ಜೊತೆಗೆ ಇದು ಅಮಾನವೀಯ ವಿಧಾನವಾಗಿದ್ದು, ಬಿಕ್ಕಟ್ಟಿನ ಸಮಯದಲ್ಲಿ ಫೆಡರಲ್ ಬೆಂಬಲದ ತತ್ವಗಳನ್ನು ದುರ್ಬಲಗೊಳಿಸುತ್ತದೆ” ಎಂದು ಸಿಪಿಎಂ ಹೇಳಿದೆ. ರಾಜ್ಯ ಸರ್ಕಾರ ಹೇಳಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಪಾಲಿಟ್ ಬ್ಯೂರೋ ಕೇಂದ್ರಕ್ಕೆ ಮನವಿ ಮಾಡಿದೆ.

ಪಕ್ಷದ ಹೇಳಿಕೆಯಲ್ಲಿ, ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ರೈತರ ಮೇಲಿನ ಪೊಲೀಸರ ದಬ್ಬಾಳಿಕೆಯನ್ನು ಖಂಡಿಸಿದೆ. ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಮತ್ತು ಇತರ ಸಂಘಟನೆಗಳ ಸುಮಾರು 150 ಮುಖಂಡರು ಮತ್ತು ಕಾರ್ಯಕರ್ತರನ್ನು ಜೈಲಿಗೆ ಹಾಕಲಾಗಿದೆ ಎಂದು ಪಕ್ಷ ತಿಳಿಸಿದೆ. ಬಂಧಿತ ರೈತರು ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಹಲವು ಕಾರ್ಯಕರ್ತರ ಗೃಹಬಂಧನ ನಡೆಯುತ್ತಿದೆ. ಹೋರಾಟದ ಮುಂಚೂಣಿಯಲ್ಲಿದ್ದ ಮಹಿಳೆಯರ ಮೇಲೆ ಪೊಲೀಸರು ನಡೆಸಿದ ಹಲ್ಲೆ ಆಘಾತಕಾರಿಯಾಗಿದೆ ಎಂದು ಪಕ್ಷವೂ ಹೇಳಿದೆ.

“…ಈ ಹೋರಾಟಕ್ಕೆ ಸಿಪಿಐ(ಎಂ) ಸಂಪೂರ್ಣ ಬೆಂಬಲ ನೀಡುತ್ತದೆ. ದಬ್ಬಾಳಿಕೆಯನ್ನು ಕೂಡಲೇ ನಿಲ್ಲಿಸಬೇಕು ಮತ್ತು ಸರಕಾರವು ನ್ಯಾಯಯುತ ಬೇಡಿಕೆಗಳನ್ನು ಒಪ್ಪಿಕೊಂಡು ಅವುಗಳನ್ನು ಜಾರಿಗೊಳಿಸಬೇಕು ಎಂದು” ಎಂದು ಪಕ್ಷ ಹೇಳಿದೆ. ನವದೆಹಲಿಯಲ್ಲಿ ನಡೆದ ಪಾಲಿಟ್‌ ಬ್ಯೂರೋ ಸಭೆಯ ನಂತರ ಈ ಹೇಳಿಕೆಯನ್ನು ನೀಡಲಾಗಿದೆ.

ಇದನ್ನೂ ಓದಿ: ‘ಪಾಶ್‌ ಕಾಯಿದೆ’ಯಡಿ ರಾಜಕೀಯ ಪಕ್ಷಗಳನ್ನು ಸೇರಿಸುವಂತೆ ಕೋರಿ ಅರ್ಜಿ; ಇಸಿಐ ಸಂಪರ್ಕಿಸುವಂತೆ ಸೂಚಿಸಿದ ಸುಪ್ರೀಂ

‘ಪಾಶ್‌ ಕಾಯಿದೆ’ಯಡಿ ರಾಜಕೀಯ ಪಕ್ಷಗಳನ್ನು ಸೇರಿಸುವಂತೆ ಕೋರಿ ಅರ್ಜಿ; ಇಸಿಐ ಸಂಪರ್ಕಿಸುವಂತೆ ಸೂಚಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...