Homeಮುಖಪುಟಕೇಂದ್ರದ ಗೃಹ, ರೈಲ್ವೆ, ಬ್ಯಾಂಕ್‌ ಸಿಬ್ಬಂದಿಗಳ ಮೇಲೆ ಹೆಚ್ಚು ಭ್ರಷ್ಟಾಚಾರದ ದೂರು ದಾಖಲು:ಸಿವಿಸಿ ವರದಿ

ಕೇಂದ್ರದ ಗೃಹ, ರೈಲ್ವೆ, ಬ್ಯಾಂಕ್‌ ಸಿಬ್ಬಂದಿಗಳ ಮೇಲೆ ಹೆಚ್ಚು ಭ್ರಷ್ಟಾಚಾರದ ದೂರು ದಾಖಲು:ಸಿವಿಸಿ ವರದಿ

- Advertisement -
- Advertisement -

2022ರಲ್ಲಿ ಅತಿ ಹೆಚ್ಚು ಭ್ರಷ್ಟಾಚಾರದ ದೂರುಗಳು ಕೇಂದ್ರ ಗೃಹ ಸಚಿವಾಲಯದ ಉದ್ಯೋಗಿಗಳ ವಿರುದ್ಧ, ರೈಲ್ವೆ ಮತ್ತು ಬ್ಯಾಂಕ್‌ಗಳಲ್ಲಿ ಕೆಲಸ ಮಾಡುವವರ ವಿರುದ್ಧ ದಾಖಲಾಗಿವೆ ಎಂದು ಕೇಂದ್ರ ಜಾಗೃತ ಆಯೋಗ(ಸಿವಿಸಿ)(ಸೆಂಟ್ರಲ್ ವಿಜಿಲೆನ್ಸ್ ಕಮಿಷನ್) ಇತ್ತೀಚಿನ ವಾರ್ಷಿಕ ವರದಿಯಲ್ಲಿ ತಿಳಿಸಿದೆ.

ಒಟ್ಟಾರೆಯಾಗಿ 2022ರಲ್ಲಿ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿನ ವಿವಿಧ ಗ್ರೇಡ್ ನ ಅಧಿಕಾರಿಗಳ ವಿರುದ್ಧ ಒಟ್ಟು 1,15,203 ದೂರುಗಳನ್ನು ಸ್ವೀಕರಿಸಲಾಗಿದೆ. ಅದರಲ್ಲಿ 85,437 ಕೇಸ್ ಗಳ ವಿಲೇವಾರಿ ಮಾಡಲಾಗಿದ್ದು, 29,766 ಬಾಕಿ ಉಳಿದಿವೆ ಎಂದು ವರದಿ ತಿಳಿಸಿದೆ.

ಕೇಂದ್ರ ಜಾಗೃತ ಆಯೋಗ ಈ ಕುರಿತು ಪರಿಶೀಲಿಸಲು ರಾಜ್ಯಗಳ ಮುಖ್ಯ ವಿಜಿಲೆನ್ಸ್ ಅಧಿಕಾರಿಗಳಿಗೆ ಮೂರು ತಿಂಗಳ ಕಾಲಾವಧಿಯನ್ನು ನೀಡಿದೆ ಎಂದು ವರದಿ ತಿಳಿಸಿದೆ.

ಗೃಹ ಸಚಿವಾಲಯದ ಸಿಬ್ಬಂದಿಗಳಿಗೆ ಸಂಬಂಧಿಸಿದ  46,643 ದೂರುಗಳು ಕಳೆದ ವರ್ಷ ಬಂದಿವೆ. ರೈಲ್ವೆಯಲ್ಲಿ  10,580 ಮತ್ತು ಬ್ಯಾಂಕ್‌ಗಳಲ್ಲಿ 8,129 ದೂರುಗಳು ಬಂದಿವೆ ಎಂದು ವರದಿ ತಿಳಿಸಿದೆ.

ಗೃಹ ಸಚಿವಾಲಯದ ಉದ್ಯೋಗಿಗಳ ವಿರುದ್ಧದ ಒಟ್ಟು ದೂರುಗಳಲ್ಲಿ 23,919 ವಿಲೇವಾರಿಯಾಗಿದೆ ಮತ್ತು 22,724 ವಿಲೇವಾರಿಗೆ ಬಾಕಿ ಇದೆ. 19,198 ಮೂರು ತಿಂಗಳಿಗಿಂತ ಹೆಚ್ಚು ಕಾಲಗಳಿಂದ ಬಾಕಿಯಿದೆ ಎಂದು ವರದಿ ಹೇಳಿದೆ.

ರೈಲ್ವೆಯು 9,663 ದೂರುಗಳನ್ನು ವಿಲೇವಾರಿ ಮಾಡಿದ್ದರೆ, 917  ಪ್ರಕರಣಗಳು  ಬಾಕಿ ಉಳಿದಿವೆ. 9 ಪ್ರಕರಣ ಮೂರು ತಿಂಗಳಿಗಿಂತ ಹೆಚ್ಚು ಕಾಲ ಬಾಕಿ ಇದೆ ಎಂದು ಇತ್ತೀಚೆಗೆ ಸಾರ್ವಜನಿಕವಾಗಿ ಪ್ರಕಟವಾದ ವರದಿಯಲ್ಲಿ ತಿಳಿಸಲಾಗಿದೆ.

ಬ್ಯಾಂಕ್‌ಗಳು 7,762 ಭ್ರಷ್ಟಾಚಾರ ದೂರುಗಳನ್ನು ವಿಲೇವಾರಿ ಮಾಡಿದ್ದು, 367 ಬಾಕಿ ಉಳಿದಿವೆ ಎಂದು ವರದಿ ತಿಳಿಸಿದೆ.

CVCಯ ವರದಿಯ ಪ್ರಕಾರ, ಕಲ್ಲಿದ್ದಲು ಸಚಿವಾಲಯದಲ್ಲಿರುವ  ಉದ್ಯೋಗಿಗಳ ವಿರುದ್ಧ 4,304 ದೂರುಗಳು ದಾಖಲಾಗಿದೆ ಅದರಲ್ಲಿ  4,050 ಪ್ರಕರಣ ವಿಲೇವಾರಿ ಮಾಡಲಾಗಿದೆ. 4,236 ಪ್ರಕರಣ ಕಾರ್ಮಿಕ ಸಚಿವಾಲಯದ ವಿರುದ್ಧ ದಾಖಲಾಗಿದ್ದು ಅದರಲ್ಲಿ  4,016 ಪ್ರಕರಣ ವಿಲೇವಾರಿ ಮಾಡಲಾಗಿದೆ.  2,617 ಪ್ರಕರಣಗಳು ಪೆಟ್ರೋಲಿಯಂ ಸಚಿವಾಲಯದ ಉದ್ಯೋಗಿಗಳ ವಿರುದ್ಧ ದಾಖಲಾಗಿದೆ. ಅದರಲ್ಲಿ  2,409 ಪ್ರರಕಣಗಳ ವಿಲೇವಾರಿ ಮಾಡಲಾಗಿದೆ.

ಇದನ್ನು ಓದಿ: ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿ ಪುನರ್ ರಚನೆ: ಸಚಿನ್ ಪೈಲಟ್, ಶಶಿ ತರೂರ್ ಗೆ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...