Homeಮುಖಪುಟಓಟಿಟಿಯಲ್ಲಿ ‘ಜೈ ಭೀಮ್‌’: ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

ಓಟಿಟಿಯಲ್ಲಿ ‘ಜೈ ಭೀಮ್‌’: ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

‘ಜೈಭೀಮ್‌’ ಹೊರತುಪಡಿಸಿ, ಸೂರಿಯಾ ಹಾಗೂ ಜ್ಯೋತಿಕ ಅವರ 2ಡಿ ಎಂಟರ್‌‌ಟೈನ್‌ಮೆಂಟ್‌ ನಿರ್ಮಾಣ ಸಂಸ್ಥೆಯು ಹಲವು ಸಿನಿಮಾಗಳ ಮೂಲಕ ಸಕ್ರಿಯವಾಗಿರುವುದನ್ನು ಕಾಣಬಹುದು.

- Advertisement -
- Advertisement -

ತಮಿಳಿನ ಖ್ಯಾತ ನಟ ಸೂರಿಯಾ ಅಭಿನಯದ ಹಾಗೂ ಸೂರ್ಯ ಅವರ ನಿರ್ಮಾಣ ಸಂಸ್ಥೆಯಿಂದಲೇ ಚಿತ್ರೀಕರಿಸಿಲಾಗಿರುವ ಬಹುನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

ಕೋರ್ಟ್ ರೂಮ್‌ ಡ್ರಾಮಾ ಎಂದೇ ಗುರುತಿಸಲಾಗಿರುವ ‘ಜೈ ಭೀಮ್‌’, ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ನವೆಂಬರ್‌ 2ರಂದು ಬಿಡುಗಡೆಯಾಗಲಿದೆ ಎಂದು ಸೂರಿಯಾ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಗರ್ಭಿಣಿ ಮಹಿಳೆಯೊಂದಿಗೆ ಮಗು ಹಾಗೂ ವಕೀಲರಾಗಿ ಸೂರ್ಯ ಕಾಣಿಸಿಕೊಂಡಿರುವ ಪೋಸ್ಟರ್‌ಅನ್ನು ಹಂಚಿಕೊಳ್ಳಲಾಗಿದೆ. ಜೈ ಭೀಮ್‌ ಸಿನಿಮಾವನ್ನು ಜ್ಞಾನವೇಲ್‌ ನಿರ್ದೇಶಿಸಿದ್ದು, 2ಡಿ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಸೂರಿಯಾ ಹಾಗೂ ಜ್ಯೋತಿಕ ನಿರ್ಮಾಣ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಟ ಮಾಡುವ ವಕೀಲನಾಗಿ ಸೂರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

‘ನ್ಯಾಯದ ಅನ್ವೇಷಣೆಯಲ್ಲಿನ ಧೈರ್ಯ ಮತ್ತು ನಂಬಿಕೆಯ ಈ ಕಥೆಯನ್ನು ತೆರೆಗೆ ತರಲು ಹೆಮ್ಮೆಯಾಗುತ್ತಿದೆ’ ಎಂದು ಸೂರಿಯಾ ತಮ್ಮ ಟ್ವೀಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ‘ಸೂರರೈ ಪೋಟ್ರು’ ಯಶಸ್ಸಿನ ಬಳಿಕ ಬಿಡುಗಡೆಯಾಗುತ್ತಿರುವ ಸೂರಿಯಾ ಅಭಿನಯದ ಸಿನಿಮಾ ಇದಾಗಿದೆ.

‘ಕರ್ಣನ್‌’ ಖ್ಯಾತಿಯ ರಜಿಶಾ ವಿಜಯನ್‌ ಪ್ರಧಾನ ಮಹಿಳಾ ಪಾತ್ರದಲ್ಲಿ ಅಭಿನಯಿಸಿದ್ದು, ಪ್ರಕಾಶ್‌ ರಾಜ್‌, ರಾವ್‌ ರಮೇಶ್‌ ಮತ್ತು ಲಿಜೋ ಮೋಲ್‌ ಜೋಸ್‌ ಥರದ ಪ್ರಮುಖ ಕಲಾವಿದರು ಈ ಚಿತ್ರದಲ್ಲಿದ್ದಾರೆ. ‘ಜೈ ಭೀಮ್‌’ ಸಿನಿಮಾ ತಮಿಳು ಸೇರಿದಂತೆ ದಕ್ಷಿಣ ಭಾರತದ ಇತರ ಭಾಷೆಗಳಿಗೂ ಡಬ್‌ ಆಗಲಿದೆ ಎನ್ನಲಾಗಿದೆ. ಸೀನ್‌ ರೋಲ್ಡನ್‌ ಅವರ ಸಂಗೀತ, ಎಸ್‌.ಆರ್‌.ಖದೀರ್‌ ಅವರ ಸಿನಿಮಾಟೋಗ್ರಫಿ, ಪಿಲೋಮಿನ್‌ ರಾಜ್‌ ಅವರ ಸಂಕಲನ ಈ ಸಿನಿಮಾಕ್ಕಿದೆ.

‘ಜೈ ಭೀಮ್‌’ ಹೊರತುಪಡಿಸಿ, ಸೂರಿಯಾ ಹಾಗೂ ಜ್ಯೋತಿಕ ಅವರ 2ಡಿ ಎಂಟರ್‌‌ಟೈನ್‌ಮೆಂಟ್‌ ನಿರ್ಮಾಣ ಸಂಸ್ಥೆಯು ಹಲವು ಸಿನಿಮಾಗಳ ಮೂಲಕ ಸಕ್ರಿಯವಾಗಿರುವುದನ್ನು ಕಾಣಬಹುದು. ರಾಜಕೀಯ ವಿಡಂಬನೆಯ ‘ರಾಮೇ ಆನ್ದಾಲುಮ್‌ ರಾವಣೇ ಆನ್ದಾಲುಮ್‌’ ಸಿನಿಮಾ ಕಳೆದ ವಾರ ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ಮತ್ತೊಂದು ಸಿನಿಮಾ ‘ಉಡಾನ್‌ಪಿರಪ್ಪೆ’ ಇದೇ ತಿಂಗಳು (ಅಕ್ಟೋಬರ್‌ 14) ಪ್ರೈಮ್‌ನಲ್ಲಿ ಬಿಡುಗಡೆಯಾಗುತ್ತಿದ್ದು, ಜ್ಯೋತಿಕ ಅಭಿನಯದ 50ನೇ ಸಿನಿಮಾ ಇದಾಗಿದೆ. ಸಸಿಕುಮಾರ್‌, ಸಮುದ್ರಕಣಿ, ಸೂರಿ, ನಿವೇದಿತಾ ಸತೀಶ್‌, ಸಿದ್ದು ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಓಟಿಟಿ ವೇದಿಕೆಯೊಂದಿಗೆ ಗಮನ ಸೆಳೆಯುತ್ತಿರುವ ಮಲಯಾಳಂನ ‘ಫಹಾದ್‌ ಫಾಸಿಲ್‌‌’ ಹಾದಿಯಲ್ಲೇ, ಸೂರಿಯಾ ಅವರು ಹೆಜ್ಜೆ ಇಟ್ಟಿರುವುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...