Homeಮುಖಪುಟಓಟಿಟಿಯಲ್ಲಿ ‘ಜೈ ಭೀಮ್‌’: ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

ಓಟಿಟಿಯಲ್ಲಿ ‘ಜೈ ಭೀಮ್‌’: ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

‘ಜೈಭೀಮ್‌’ ಹೊರತುಪಡಿಸಿ, ಸೂರಿಯಾ ಹಾಗೂ ಜ್ಯೋತಿಕ ಅವರ 2ಡಿ ಎಂಟರ್‌‌ಟೈನ್‌ಮೆಂಟ್‌ ನಿರ್ಮಾಣ ಸಂಸ್ಥೆಯು ಹಲವು ಸಿನಿಮಾಗಳ ಮೂಲಕ ಸಕ್ರಿಯವಾಗಿರುವುದನ್ನು ಕಾಣಬಹುದು.

- Advertisement -
- Advertisement -

ತಮಿಳಿನ ಖ್ಯಾತ ನಟ ಸೂರಿಯಾ ಅಭಿನಯದ ಹಾಗೂ ಸೂರ್ಯ ಅವರ ನಿರ್ಮಾಣ ಸಂಸ್ಥೆಯಿಂದಲೇ ಚಿತ್ರೀಕರಿಸಿಲಾಗಿರುವ ಬಹುನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

ಕೋರ್ಟ್ ರೂಮ್‌ ಡ್ರಾಮಾ ಎಂದೇ ಗುರುತಿಸಲಾಗಿರುವ ‘ಜೈ ಭೀಮ್‌’, ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ನವೆಂಬರ್‌ 2ರಂದು ಬಿಡುಗಡೆಯಾಗಲಿದೆ ಎಂದು ಸೂರಿಯಾ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಗರ್ಭಿಣಿ ಮಹಿಳೆಯೊಂದಿಗೆ ಮಗು ಹಾಗೂ ವಕೀಲರಾಗಿ ಸೂರ್ಯ ಕಾಣಿಸಿಕೊಂಡಿರುವ ಪೋಸ್ಟರ್‌ಅನ್ನು ಹಂಚಿಕೊಳ್ಳಲಾಗಿದೆ. ಜೈ ಭೀಮ್‌ ಸಿನಿಮಾವನ್ನು ಜ್ಞಾನವೇಲ್‌ ನಿರ್ದೇಶಿಸಿದ್ದು, 2ಡಿ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಸೂರಿಯಾ ಹಾಗೂ ಜ್ಯೋತಿಕ ನಿರ್ಮಾಣ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಟ ಮಾಡುವ ವಕೀಲನಾಗಿ ಸೂರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

‘ನ್ಯಾಯದ ಅನ್ವೇಷಣೆಯಲ್ಲಿನ ಧೈರ್ಯ ಮತ್ತು ನಂಬಿಕೆಯ ಈ ಕಥೆಯನ್ನು ತೆರೆಗೆ ತರಲು ಹೆಮ್ಮೆಯಾಗುತ್ತಿದೆ’ ಎಂದು ಸೂರಿಯಾ ತಮ್ಮ ಟ್ವೀಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ‘ಸೂರರೈ ಪೋಟ್ರು’ ಯಶಸ್ಸಿನ ಬಳಿಕ ಬಿಡುಗಡೆಯಾಗುತ್ತಿರುವ ಸೂರಿಯಾ ಅಭಿನಯದ ಸಿನಿಮಾ ಇದಾಗಿದೆ.

‘ಕರ್ಣನ್‌’ ಖ್ಯಾತಿಯ ರಜಿಶಾ ವಿಜಯನ್‌ ಪ್ರಧಾನ ಮಹಿಳಾ ಪಾತ್ರದಲ್ಲಿ ಅಭಿನಯಿಸಿದ್ದು, ಪ್ರಕಾಶ್‌ ರಾಜ್‌, ರಾವ್‌ ರಮೇಶ್‌ ಮತ್ತು ಲಿಜೋ ಮೋಲ್‌ ಜೋಸ್‌ ಥರದ ಪ್ರಮುಖ ಕಲಾವಿದರು ಈ ಚಿತ್ರದಲ್ಲಿದ್ದಾರೆ. ‘ಜೈ ಭೀಮ್‌’ ಸಿನಿಮಾ ತಮಿಳು ಸೇರಿದಂತೆ ದಕ್ಷಿಣ ಭಾರತದ ಇತರ ಭಾಷೆಗಳಿಗೂ ಡಬ್‌ ಆಗಲಿದೆ ಎನ್ನಲಾಗಿದೆ. ಸೀನ್‌ ರೋಲ್ಡನ್‌ ಅವರ ಸಂಗೀತ, ಎಸ್‌.ಆರ್‌.ಖದೀರ್‌ ಅವರ ಸಿನಿಮಾಟೋಗ್ರಫಿ, ಪಿಲೋಮಿನ್‌ ರಾಜ್‌ ಅವರ ಸಂಕಲನ ಈ ಸಿನಿಮಾಕ್ಕಿದೆ.

‘ಜೈ ಭೀಮ್‌’ ಹೊರತುಪಡಿಸಿ, ಸೂರಿಯಾ ಹಾಗೂ ಜ್ಯೋತಿಕ ಅವರ 2ಡಿ ಎಂಟರ್‌‌ಟೈನ್‌ಮೆಂಟ್‌ ನಿರ್ಮಾಣ ಸಂಸ್ಥೆಯು ಹಲವು ಸಿನಿಮಾಗಳ ಮೂಲಕ ಸಕ್ರಿಯವಾಗಿರುವುದನ್ನು ಕಾಣಬಹುದು. ರಾಜಕೀಯ ವಿಡಂಬನೆಯ ‘ರಾಮೇ ಆನ್ದಾಲುಮ್‌ ರಾವಣೇ ಆನ್ದಾಲುಮ್‌’ ಸಿನಿಮಾ ಕಳೆದ ವಾರ ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ಮತ್ತೊಂದು ಸಿನಿಮಾ ‘ಉಡಾನ್‌ಪಿರಪ್ಪೆ’ ಇದೇ ತಿಂಗಳು (ಅಕ್ಟೋಬರ್‌ 14) ಪ್ರೈಮ್‌ನಲ್ಲಿ ಬಿಡುಗಡೆಯಾಗುತ್ತಿದ್ದು, ಜ್ಯೋತಿಕ ಅಭಿನಯದ 50ನೇ ಸಿನಿಮಾ ಇದಾಗಿದೆ. ಸಸಿಕುಮಾರ್‌, ಸಮುದ್ರಕಣಿ, ಸೂರಿ, ನಿವೇದಿತಾ ಸತೀಶ್‌, ಸಿದ್ದು ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಓಟಿಟಿ ವೇದಿಕೆಯೊಂದಿಗೆ ಗಮನ ಸೆಳೆಯುತ್ತಿರುವ ಮಲಯಾಳಂನ ‘ಫಹಾದ್‌ ಫಾಸಿಲ್‌‌’ ಹಾದಿಯಲ್ಲೇ, ಸೂರಿಯಾ ಅವರು ಹೆಜ್ಜೆ ಇಟ್ಟಿರುವುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...