Homeಮುಖಪುಟಓಟಿಟಿಯಲ್ಲಿ ‘ಜೈ ಭೀಮ್‌’: ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

ಓಟಿಟಿಯಲ್ಲಿ ‘ಜೈ ಭೀಮ್‌’: ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

‘ಜೈಭೀಮ್‌’ ಹೊರತುಪಡಿಸಿ, ಸೂರಿಯಾ ಹಾಗೂ ಜ್ಯೋತಿಕ ಅವರ 2ಡಿ ಎಂಟರ್‌‌ಟೈನ್‌ಮೆಂಟ್‌ ನಿರ್ಮಾಣ ಸಂಸ್ಥೆಯು ಹಲವು ಸಿನಿಮಾಗಳ ಮೂಲಕ ಸಕ್ರಿಯವಾಗಿರುವುದನ್ನು ಕಾಣಬಹುದು.

- Advertisement -
- Advertisement -

ತಮಿಳಿನ ಖ್ಯಾತ ನಟ ಸೂರಿಯಾ ಅಭಿನಯದ ಹಾಗೂ ಸೂರ್ಯ ಅವರ ನಿರ್ಮಾಣ ಸಂಸ್ಥೆಯಿಂದಲೇ ಚಿತ್ರೀಕರಿಸಿಲಾಗಿರುವ ಬಹುನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

ಕೋರ್ಟ್ ರೂಮ್‌ ಡ್ರಾಮಾ ಎಂದೇ ಗುರುತಿಸಲಾಗಿರುವ ‘ಜೈ ಭೀಮ್‌’, ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ನವೆಂಬರ್‌ 2ರಂದು ಬಿಡುಗಡೆಯಾಗಲಿದೆ ಎಂದು ಸೂರಿಯಾ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಗರ್ಭಿಣಿ ಮಹಿಳೆಯೊಂದಿಗೆ ಮಗು ಹಾಗೂ ವಕೀಲರಾಗಿ ಸೂರ್ಯ ಕಾಣಿಸಿಕೊಂಡಿರುವ ಪೋಸ್ಟರ್‌ಅನ್ನು ಹಂಚಿಕೊಳ್ಳಲಾಗಿದೆ. ಜೈ ಭೀಮ್‌ ಸಿನಿಮಾವನ್ನು ಜ್ಞಾನವೇಲ್‌ ನಿರ್ದೇಶಿಸಿದ್ದು, 2ಡಿ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಸೂರಿಯಾ ಹಾಗೂ ಜ್ಯೋತಿಕ ನಿರ್ಮಾಣ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಟ ಮಾಡುವ ವಕೀಲನಾಗಿ ಸೂರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

‘ನ್ಯಾಯದ ಅನ್ವೇಷಣೆಯಲ್ಲಿನ ಧೈರ್ಯ ಮತ್ತು ನಂಬಿಕೆಯ ಈ ಕಥೆಯನ್ನು ತೆರೆಗೆ ತರಲು ಹೆಮ್ಮೆಯಾಗುತ್ತಿದೆ’ ಎಂದು ಸೂರಿಯಾ ತಮ್ಮ ಟ್ವೀಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ‘ಸೂರರೈ ಪೋಟ್ರು’ ಯಶಸ್ಸಿನ ಬಳಿಕ ಬಿಡುಗಡೆಯಾಗುತ್ತಿರುವ ಸೂರಿಯಾ ಅಭಿನಯದ ಸಿನಿಮಾ ಇದಾಗಿದೆ.

‘ಕರ್ಣನ್‌’ ಖ್ಯಾತಿಯ ರಜಿಶಾ ವಿಜಯನ್‌ ಪ್ರಧಾನ ಮಹಿಳಾ ಪಾತ್ರದಲ್ಲಿ ಅಭಿನಯಿಸಿದ್ದು, ಪ್ರಕಾಶ್‌ ರಾಜ್‌, ರಾವ್‌ ರಮೇಶ್‌ ಮತ್ತು ಲಿಜೋ ಮೋಲ್‌ ಜೋಸ್‌ ಥರದ ಪ್ರಮುಖ ಕಲಾವಿದರು ಈ ಚಿತ್ರದಲ್ಲಿದ್ದಾರೆ. ‘ಜೈ ಭೀಮ್‌’ ಸಿನಿಮಾ ತಮಿಳು ಸೇರಿದಂತೆ ದಕ್ಷಿಣ ಭಾರತದ ಇತರ ಭಾಷೆಗಳಿಗೂ ಡಬ್‌ ಆಗಲಿದೆ ಎನ್ನಲಾಗಿದೆ. ಸೀನ್‌ ರೋಲ್ಡನ್‌ ಅವರ ಸಂಗೀತ, ಎಸ್‌.ಆರ್‌.ಖದೀರ್‌ ಅವರ ಸಿನಿಮಾಟೋಗ್ರಫಿ, ಪಿಲೋಮಿನ್‌ ರಾಜ್‌ ಅವರ ಸಂಕಲನ ಈ ಸಿನಿಮಾಕ್ಕಿದೆ.

‘ಜೈ ಭೀಮ್‌’ ಹೊರತುಪಡಿಸಿ, ಸೂರಿಯಾ ಹಾಗೂ ಜ್ಯೋತಿಕ ಅವರ 2ಡಿ ಎಂಟರ್‌‌ಟೈನ್‌ಮೆಂಟ್‌ ನಿರ್ಮಾಣ ಸಂಸ್ಥೆಯು ಹಲವು ಸಿನಿಮಾಗಳ ಮೂಲಕ ಸಕ್ರಿಯವಾಗಿರುವುದನ್ನು ಕಾಣಬಹುದು. ರಾಜಕೀಯ ವಿಡಂಬನೆಯ ‘ರಾಮೇ ಆನ್ದಾಲುಮ್‌ ರಾವಣೇ ಆನ್ದಾಲುಮ್‌’ ಸಿನಿಮಾ ಕಳೆದ ವಾರ ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ಮತ್ತೊಂದು ಸಿನಿಮಾ ‘ಉಡಾನ್‌ಪಿರಪ್ಪೆ’ ಇದೇ ತಿಂಗಳು (ಅಕ್ಟೋಬರ್‌ 14) ಪ್ರೈಮ್‌ನಲ್ಲಿ ಬಿಡುಗಡೆಯಾಗುತ್ತಿದ್ದು, ಜ್ಯೋತಿಕ ಅಭಿನಯದ 50ನೇ ಸಿನಿಮಾ ಇದಾಗಿದೆ. ಸಸಿಕುಮಾರ್‌, ಸಮುದ್ರಕಣಿ, ಸೂರಿ, ನಿವೇದಿತಾ ಸತೀಶ್‌, ಸಿದ್ದು ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಓಟಿಟಿ ವೇದಿಕೆಯೊಂದಿಗೆ ಗಮನ ಸೆಳೆಯುತ್ತಿರುವ ಮಲಯಾಳಂನ ‘ಫಹಾದ್‌ ಫಾಸಿಲ್‌‌’ ಹಾದಿಯಲ್ಲೇ, ಸೂರಿಯಾ ಅವರು ಹೆಜ್ಜೆ ಇಟ್ಟಿರುವುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ...

ಗುಂಪು ಹತ್ಯೆ ಪ್ರಕರಣ ಹಿಂಪಡೆಯಲು ಮುಂದಾದ ಯುಪಿ ಸರ್ಕಾರ : ಹೈಕೋರ್ಟ್ ಮೆಟ್ಟಿಲೇರಿದ ಅಖ್ಲಾಕ್ ಪತ್ನಿ

ದಾದ್ರಿ ಗುಂಪು ಹತ್ಯೆ ಪ್ರಕರಣದ ಬಲಿಪಶು ಮೊಹಮ್ಮದ್ ಅಖ್ಲಾಕ್ ಅವರ ಪತ್ನಿ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಮತ್ತು ಗೌತಮ್ ಬುದ್ಧ ನಗರದ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್ ಸಲ್ಲಿಸಿರುವ...

ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್...

ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು...

ಮಧ್ಯಪ್ರದೇಶ | ಅಂಧ ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ನಾಯಕಿ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಿಜೆಪಿ ನಾಯಕಿಯೊಬ್ಬರು ಅಂಧ ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ಅಂಧ ಮಹಿಳೆಯ ಅಂಗವೈಕಲ್ಯವದ ಕುರಿತು ಬಿಜೆಪಿ ನಾಯಕಿ ಅವಹೇಳನಕಾರಿ ಹೇಳಿಕೆ ನೀಡಿರುವುದು...

‘ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳ ಮಾರಾಟಕ್ಕೆ ಅವಕಾಶವಿಲ್ಲ’ : ಸಾಂತಾ ಟೋಪಿ ಮಾರಾಟಗಾರರಿಗೆ ದುಷ್ಕರ್ಮಿಗಳಿಂದ ಕಿರುಕುಳ

ಒಡಿಶಾದ ಭುವನೇಶ್ವರ ನಗರದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಸ್ತೆ ಬದಿ ಸಾಂತಾ ಕ್ಲಾಸ್ ಟೋಪಿಗಳನ್ನು ಮಾರಾಟ ಮಾಡುತ್ತಿದ್ದ ಬಡ ವ್ಯಾಪಾರಿಗಳಿಗೆ ದುಷ್ಕರ್ಮಿಗಳ ಗುಂಪು ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ...

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್‌ಗೆ ದೆಹಲಿ ಹೈಕೋರ್ಟಿನಿಂದ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿನ ನಡೆದಿದೆ ಎನ್ನಲಾದ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ಕುರಿತು, ಕಾಂಗ್ರೆಸ್ ಸಂಸದೀಯ...

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ...

ಶಿಕ್ಷಣ ಸಂಸ್ಥೆಗಳು ‘ಕೋಮುವಾದದ ಪ್ರಯೋಗಶಾಲೆʼಗಳಾಗಲು ಅವಕಾಶ ನೀಡುವುದಿಲ್ಲ: ಕೇರಳ ಸರ್ಕಾರ

ಶಾಲೆಗಳಲ್ಲಿ ಕ್ರಿಸ್‌ಮಸ್‌ ಆಚರಣೆಗೆ ಹಿಂದುತ್ವ ಗುಂಪುಗಳು ಅಡ್ಡಿಪಡಿಸುತ್ತಿವೆ ಎಂಬ ಆರೋಪದ ಕುರಿತು ಕೇರಳದ ಶಿಕ್ಷಣ ಸಚಿವ ಶಿವನ್ ಕುಟ್ಟಿ ಭಾನುವಾರ (ಡಿ.22) ಪ್ರತಿಕ್ರಿಯಿಸಿದ್ದು, ಶಿಕ್ಷಣ ಸಂಸ್ಥೆಗಳು ಕೋಮುವಾದದ ಪ್ರಯೋಗ ಶಾಲೆಗಳಾಗಲು ಅವಕಾಶ ನೀಡುವುದಿಲ್ಲ...