Homeಮುಖಪುಟಓಟಿಟಿಯಲ್ಲಿ ‘ಜೈ ಭೀಮ್‌’: ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

ಓಟಿಟಿಯಲ್ಲಿ ‘ಜೈ ಭೀಮ್‌’: ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

‘ಜೈಭೀಮ್‌’ ಹೊರತುಪಡಿಸಿ, ಸೂರಿಯಾ ಹಾಗೂ ಜ್ಯೋತಿಕ ಅವರ 2ಡಿ ಎಂಟರ್‌‌ಟೈನ್‌ಮೆಂಟ್‌ ನಿರ್ಮಾಣ ಸಂಸ್ಥೆಯು ಹಲವು ಸಿನಿಮಾಗಳ ಮೂಲಕ ಸಕ್ರಿಯವಾಗಿರುವುದನ್ನು ಕಾಣಬಹುದು.

- Advertisement -
- Advertisement -

ತಮಿಳಿನ ಖ್ಯಾತ ನಟ ಸೂರಿಯಾ ಅಭಿನಯದ ಹಾಗೂ ಸೂರ್ಯ ಅವರ ನಿರ್ಮಾಣ ಸಂಸ್ಥೆಯಿಂದಲೇ ಚಿತ್ರೀಕರಿಸಿಲಾಗಿರುವ ಬಹುನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

ಕೋರ್ಟ್ ರೂಮ್‌ ಡ್ರಾಮಾ ಎಂದೇ ಗುರುತಿಸಲಾಗಿರುವ ‘ಜೈ ಭೀಮ್‌’, ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ನವೆಂಬರ್‌ 2ರಂದು ಬಿಡುಗಡೆಯಾಗಲಿದೆ ಎಂದು ಸೂರಿಯಾ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಗರ್ಭಿಣಿ ಮಹಿಳೆಯೊಂದಿಗೆ ಮಗು ಹಾಗೂ ವಕೀಲರಾಗಿ ಸೂರ್ಯ ಕಾಣಿಸಿಕೊಂಡಿರುವ ಪೋಸ್ಟರ್‌ಅನ್ನು ಹಂಚಿಕೊಳ್ಳಲಾಗಿದೆ. ಜೈ ಭೀಮ್‌ ಸಿನಿಮಾವನ್ನು ಜ್ಞಾನವೇಲ್‌ ನಿರ್ದೇಶಿಸಿದ್ದು, 2ಡಿ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಸೂರಿಯಾ ಹಾಗೂ ಜ್ಯೋತಿಕ ನಿರ್ಮಾಣ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಟ ಮಾಡುವ ವಕೀಲನಾಗಿ ಸೂರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

‘ನ್ಯಾಯದ ಅನ್ವೇಷಣೆಯಲ್ಲಿನ ಧೈರ್ಯ ಮತ್ತು ನಂಬಿಕೆಯ ಈ ಕಥೆಯನ್ನು ತೆರೆಗೆ ತರಲು ಹೆಮ್ಮೆಯಾಗುತ್ತಿದೆ’ ಎಂದು ಸೂರಿಯಾ ತಮ್ಮ ಟ್ವೀಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ‘ಸೂರರೈ ಪೋಟ್ರು’ ಯಶಸ್ಸಿನ ಬಳಿಕ ಬಿಡುಗಡೆಯಾಗುತ್ತಿರುವ ಸೂರಿಯಾ ಅಭಿನಯದ ಸಿನಿಮಾ ಇದಾಗಿದೆ.

‘ಕರ್ಣನ್‌’ ಖ್ಯಾತಿಯ ರಜಿಶಾ ವಿಜಯನ್‌ ಪ್ರಧಾನ ಮಹಿಳಾ ಪಾತ್ರದಲ್ಲಿ ಅಭಿನಯಿಸಿದ್ದು, ಪ್ರಕಾಶ್‌ ರಾಜ್‌, ರಾವ್‌ ರಮೇಶ್‌ ಮತ್ತು ಲಿಜೋ ಮೋಲ್‌ ಜೋಸ್‌ ಥರದ ಪ್ರಮುಖ ಕಲಾವಿದರು ಈ ಚಿತ್ರದಲ್ಲಿದ್ದಾರೆ. ‘ಜೈ ಭೀಮ್‌’ ಸಿನಿಮಾ ತಮಿಳು ಸೇರಿದಂತೆ ದಕ್ಷಿಣ ಭಾರತದ ಇತರ ಭಾಷೆಗಳಿಗೂ ಡಬ್‌ ಆಗಲಿದೆ ಎನ್ನಲಾಗಿದೆ. ಸೀನ್‌ ರೋಲ್ಡನ್‌ ಅವರ ಸಂಗೀತ, ಎಸ್‌.ಆರ್‌.ಖದೀರ್‌ ಅವರ ಸಿನಿಮಾಟೋಗ್ರಫಿ, ಪಿಲೋಮಿನ್‌ ರಾಜ್‌ ಅವರ ಸಂಕಲನ ಈ ಸಿನಿಮಾಕ್ಕಿದೆ.

‘ಜೈ ಭೀಮ್‌’ ಹೊರತುಪಡಿಸಿ, ಸೂರಿಯಾ ಹಾಗೂ ಜ್ಯೋತಿಕ ಅವರ 2ಡಿ ಎಂಟರ್‌‌ಟೈನ್‌ಮೆಂಟ್‌ ನಿರ್ಮಾಣ ಸಂಸ್ಥೆಯು ಹಲವು ಸಿನಿಮಾಗಳ ಮೂಲಕ ಸಕ್ರಿಯವಾಗಿರುವುದನ್ನು ಕಾಣಬಹುದು. ರಾಜಕೀಯ ವಿಡಂಬನೆಯ ‘ರಾಮೇ ಆನ್ದಾಲುಮ್‌ ರಾವಣೇ ಆನ್ದಾಲುಮ್‌’ ಸಿನಿಮಾ ಕಳೆದ ವಾರ ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ಮತ್ತೊಂದು ಸಿನಿಮಾ ‘ಉಡಾನ್‌ಪಿರಪ್ಪೆ’ ಇದೇ ತಿಂಗಳು (ಅಕ್ಟೋಬರ್‌ 14) ಪ್ರೈಮ್‌ನಲ್ಲಿ ಬಿಡುಗಡೆಯಾಗುತ್ತಿದ್ದು, ಜ್ಯೋತಿಕ ಅಭಿನಯದ 50ನೇ ಸಿನಿಮಾ ಇದಾಗಿದೆ. ಸಸಿಕುಮಾರ್‌, ಸಮುದ್ರಕಣಿ, ಸೂರಿ, ನಿವೇದಿತಾ ಸತೀಶ್‌, ಸಿದ್ದು ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಓಟಿಟಿ ವೇದಿಕೆಯೊಂದಿಗೆ ಗಮನ ಸೆಳೆಯುತ್ತಿರುವ ಮಲಯಾಳಂನ ‘ಫಹಾದ್‌ ಫಾಸಿಲ್‌‌’ ಹಾದಿಯಲ್ಲೇ, ಸೂರಿಯಾ ಅವರು ಹೆಜ್ಜೆ ಇಟ್ಟಿರುವುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...