Homeಮುಖಪುಟಓಟಿಟಿಯಲ್ಲಿ ‘ಜೈ ಭೀಮ್‌’: ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

ಓಟಿಟಿಯಲ್ಲಿ ‘ಜೈ ಭೀಮ್‌’: ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

‘ಜೈಭೀಮ್‌’ ಹೊರತುಪಡಿಸಿ, ಸೂರಿಯಾ ಹಾಗೂ ಜ್ಯೋತಿಕ ಅವರ 2ಡಿ ಎಂಟರ್‌‌ಟೈನ್‌ಮೆಂಟ್‌ ನಿರ್ಮಾಣ ಸಂಸ್ಥೆಯು ಹಲವು ಸಿನಿಮಾಗಳ ಮೂಲಕ ಸಕ್ರಿಯವಾಗಿರುವುದನ್ನು ಕಾಣಬಹುದು.

- Advertisement -
- Advertisement -

ತಮಿಳಿನ ಖ್ಯಾತ ನಟ ಸೂರಿಯಾ ಅಭಿನಯದ ಹಾಗೂ ಸೂರ್ಯ ಅವರ ನಿರ್ಮಾಣ ಸಂಸ್ಥೆಯಿಂದಲೇ ಚಿತ್ರೀಕರಿಸಿಲಾಗಿರುವ ಬಹುನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

ಕೋರ್ಟ್ ರೂಮ್‌ ಡ್ರಾಮಾ ಎಂದೇ ಗುರುತಿಸಲಾಗಿರುವ ‘ಜೈ ಭೀಮ್‌’, ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ನವೆಂಬರ್‌ 2ರಂದು ಬಿಡುಗಡೆಯಾಗಲಿದೆ ಎಂದು ಸೂರಿಯಾ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಗರ್ಭಿಣಿ ಮಹಿಳೆಯೊಂದಿಗೆ ಮಗು ಹಾಗೂ ವಕೀಲರಾಗಿ ಸೂರ್ಯ ಕಾಣಿಸಿಕೊಂಡಿರುವ ಪೋಸ್ಟರ್‌ಅನ್ನು ಹಂಚಿಕೊಳ್ಳಲಾಗಿದೆ. ಜೈ ಭೀಮ್‌ ಸಿನಿಮಾವನ್ನು ಜ್ಞಾನವೇಲ್‌ ನಿರ್ದೇಶಿಸಿದ್ದು, 2ಡಿ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಸೂರಿಯಾ ಹಾಗೂ ಜ್ಯೋತಿಕ ನಿರ್ಮಾಣ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಟ ಮಾಡುವ ವಕೀಲನಾಗಿ ಸೂರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

‘ನ್ಯಾಯದ ಅನ್ವೇಷಣೆಯಲ್ಲಿನ ಧೈರ್ಯ ಮತ್ತು ನಂಬಿಕೆಯ ಈ ಕಥೆಯನ್ನು ತೆರೆಗೆ ತರಲು ಹೆಮ್ಮೆಯಾಗುತ್ತಿದೆ’ ಎಂದು ಸೂರಿಯಾ ತಮ್ಮ ಟ್ವೀಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ‘ಸೂರರೈ ಪೋಟ್ರು’ ಯಶಸ್ಸಿನ ಬಳಿಕ ಬಿಡುಗಡೆಯಾಗುತ್ತಿರುವ ಸೂರಿಯಾ ಅಭಿನಯದ ಸಿನಿಮಾ ಇದಾಗಿದೆ.

‘ಕರ್ಣನ್‌’ ಖ್ಯಾತಿಯ ರಜಿಶಾ ವಿಜಯನ್‌ ಪ್ರಧಾನ ಮಹಿಳಾ ಪಾತ್ರದಲ್ಲಿ ಅಭಿನಯಿಸಿದ್ದು, ಪ್ರಕಾಶ್‌ ರಾಜ್‌, ರಾವ್‌ ರಮೇಶ್‌ ಮತ್ತು ಲಿಜೋ ಮೋಲ್‌ ಜೋಸ್‌ ಥರದ ಪ್ರಮುಖ ಕಲಾವಿದರು ಈ ಚಿತ್ರದಲ್ಲಿದ್ದಾರೆ. ‘ಜೈ ಭೀಮ್‌’ ಸಿನಿಮಾ ತಮಿಳು ಸೇರಿದಂತೆ ದಕ್ಷಿಣ ಭಾರತದ ಇತರ ಭಾಷೆಗಳಿಗೂ ಡಬ್‌ ಆಗಲಿದೆ ಎನ್ನಲಾಗಿದೆ. ಸೀನ್‌ ರೋಲ್ಡನ್‌ ಅವರ ಸಂಗೀತ, ಎಸ್‌.ಆರ್‌.ಖದೀರ್‌ ಅವರ ಸಿನಿಮಾಟೋಗ್ರಫಿ, ಪಿಲೋಮಿನ್‌ ರಾಜ್‌ ಅವರ ಸಂಕಲನ ಈ ಸಿನಿಮಾಕ್ಕಿದೆ.

‘ಜೈ ಭೀಮ್‌’ ಹೊರತುಪಡಿಸಿ, ಸೂರಿಯಾ ಹಾಗೂ ಜ್ಯೋತಿಕ ಅವರ 2ಡಿ ಎಂಟರ್‌‌ಟೈನ್‌ಮೆಂಟ್‌ ನಿರ್ಮಾಣ ಸಂಸ್ಥೆಯು ಹಲವು ಸಿನಿಮಾಗಳ ಮೂಲಕ ಸಕ್ರಿಯವಾಗಿರುವುದನ್ನು ಕಾಣಬಹುದು. ರಾಜಕೀಯ ವಿಡಂಬನೆಯ ‘ರಾಮೇ ಆನ್ದಾಲುಮ್‌ ರಾವಣೇ ಆನ್ದಾಲುಮ್‌’ ಸಿನಿಮಾ ಕಳೆದ ವಾರ ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ಮತ್ತೊಂದು ಸಿನಿಮಾ ‘ಉಡಾನ್‌ಪಿರಪ್ಪೆ’ ಇದೇ ತಿಂಗಳು (ಅಕ್ಟೋಬರ್‌ 14) ಪ್ರೈಮ್‌ನಲ್ಲಿ ಬಿಡುಗಡೆಯಾಗುತ್ತಿದ್ದು, ಜ್ಯೋತಿಕ ಅಭಿನಯದ 50ನೇ ಸಿನಿಮಾ ಇದಾಗಿದೆ. ಸಸಿಕುಮಾರ್‌, ಸಮುದ್ರಕಣಿ, ಸೂರಿ, ನಿವೇದಿತಾ ಸತೀಶ್‌, ಸಿದ್ದು ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಓಟಿಟಿ ವೇದಿಕೆಯೊಂದಿಗೆ ಗಮನ ಸೆಳೆಯುತ್ತಿರುವ ಮಲಯಾಳಂನ ‘ಫಹಾದ್‌ ಫಾಸಿಲ್‌‌’ ಹಾದಿಯಲ್ಲೇ, ಸೂರಿಯಾ ಅವರು ಹೆಜ್ಜೆ ಇಟ್ಟಿರುವುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...