Homeಮುಖಪುಟಓಟಿಟಿಯಲ್ಲಿ ‘ಜೈ ಭೀಮ್‌’: ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

ಓಟಿಟಿಯಲ್ಲಿ ‘ಜೈ ಭೀಮ್‌’: ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

‘ಜೈಭೀಮ್‌’ ಹೊರತುಪಡಿಸಿ, ಸೂರಿಯಾ ಹಾಗೂ ಜ್ಯೋತಿಕ ಅವರ 2ಡಿ ಎಂಟರ್‌‌ಟೈನ್‌ಮೆಂಟ್‌ ನಿರ್ಮಾಣ ಸಂಸ್ಥೆಯು ಹಲವು ಸಿನಿಮಾಗಳ ಮೂಲಕ ಸಕ್ರಿಯವಾಗಿರುವುದನ್ನು ಕಾಣಬಹುದು.

- Advertisement -
- Advertisement -

ತಮಿಳಿನ ಖ್ಯಾತ ನಟ ಸೂರಿಯಾ ಅಭಿನಯದ ಹಾಗೂ ಸೂರ್ಯ ಅವರ ನಿರ್ಮಾಣ ಸಂಸ್ಥೆಯಿಂದಲೇ ಚಿತ್ರೀಕರಿಸಿಲಾಗಿರುವ ಬಹುನಿರೀಕ್ಷಿತ ‘ಜೈ ಭೀಮ್‌’ ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

ಕೋರ್ಟ್ ರೂಮ್‌ ಡ್ರಾಮಾ ಎಂದೇ ಗುರುತಿಸಲಾಗಿರುವ ‘ಜೈ ಭೀಮ್‌’, ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ನವೆಂಬರ್‌ 2ರಂದು ಬಿಡುಗಡೆಯಾಗಲಿದೆ ಎಂದು ಸೂರಿಯಾ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಗರ್ಭಿಣಿ ಮಹಿಳೆಯೊಂದಿಗೆ ಮಗು ಹಾಗೂ ವಕೀಲರಾಗಿ ಸೂರ್ಯ ಕಾಣಿಸಿಕೊಂಡಿರುವ ಪೋಸ್ಟರ್‌ಅನ್ನು ಹಂಚಿಕೊಳ್ಳಲಾಗಿದೆ. ಜೈ ಭೀಮ್‌ ಸಿನಿಮಾವನ್ನು ಜ್ಞಾನವೇಲ್‌ ನಿರ್ದೇಶಿಸಿದ್ದು, 2ಡಿ ಎಂಟರ್‌ಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಸೂರಿಯಾ ಹಾಗೂ ಜ್ಯೋತಿಕ ನಿರ್ಮಾಣ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳ ಪರವಾಗಿ ಹೋರಾಟ ಮಾಡುವ ವಕೀಲನಾಗಿ ಸೂರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

‘ನ್ಯಾಯದ ಅನ್ವೇಷಣೆಯಲ್ಲಿನ ಧೈರ್ಯ ಮತ್ತು ನಂಬಿಕೆಯ ಈ ಕಥೆಯನ್ನು ತೆರೆಗೆ ತರಲು ಹೆಮ್ಮೆಯಾಗುತ್ತಿದೆ’ ಎಂದು ಸೂರಿಯಾ ತಮ್ಮ ಟ್ವೀಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ‘ಸೂರರೈ ಪೋಟ್ರು’ ಯಶಸ್ಸಿನ ಬಳಿಕ ಬಿಡುಗಡೆಯಾಗುತ್ತಿರುವ ಸೂರಿಯಾ ಅಭಿನಯದ ಸಿನಿಮಾ ಇದಾಗಿದೆ.

‘ಕರ್ಣನ್‌’ ಖ್ಯಾತಿಯ ರಜಿಶಾ ವಿಜಯನ್‌ ಪ್ರಧಾನ ಮಹಿಳಾ ಪಾತ್ರದಲ್ಲಿ ಅಭಿನಯಿಸಿದ್ದು, ಪ್ರಕಾಶ್‌ ರಾಜ್‌, ರಾವ್‌ ರಮೇಶ್‌ ಮತ್ತು ಲಿಜೋ ಮೋಲ್‌ ಜೋಸ್‌ ಥರದ ಪ್ರಮುಖ ಕಲಾವಿದರು ಈ ಚಿತ್ರದಲ್ಲಿದ್ದಾರೆ. ‘ಜೈ ಭೀಮ್‌’ ಸಿನಿಮಾ ತಮಿಳು ಸೇರಿದಂತೆ ದಕ್ಷಿಣ ಭಾರತದ ಇತರ ಭಾಷೆಗಳಿಗೂ ಡಬ್‌ ಆಗಲಿದೆ ಎನ್ನಲಾಗಿದೆ. ಸೀನ್‌ ರೋಲ್ಡನ್‌ ಅವರ ಸಂಗೀತ, ಎಸ್‌.ಆರ್‌.ಖದೀರ್‌ ಅವರ ಸಿನಿಮಾಟೋಗ್ರಫಿ, ಪಿಲೋಮಿನ್‌ ರಾಜ್‌ ಅವರ ಸಂಕಲನ ಈ ಸಿನಿಮಾಕ್ಕಿದೆ.

‘ಜೈ ಭೀಮ್‌’ ಹೊರತುಪಡಿಸಿ, ಸೂರಿಯಾ ಹಾಗೂ ಜ್ಯೋತಿಕ ಅವರ 2ಡಿ ಎಂಟರ್‌‌ಟೈನ್‌ಮೆಂಟ್‌ ನಿರ್ಮಾಣ ಸಂಸ್ಥೆಯು ಹಲವು ಸಿನಿಮಾಗಳ ಮೂಲಕ ಸಕ್ರಿಯವಾಗಿರುವುದನ್ನು ಕಾಣಬಹುದು. ರಾಜಕೀಯ ವಿಡಂಬನೆಯ ‘ರಾಮೇ ಆನ್ದಾಲುಮ್‌ ರಾವಣೇ ಆನ್ದಾಲುಮ್‌’ ಸಿನಿಮಾ ಕಳೆದ ವಾರ ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ಮತ್ತೊಂದು ಸಿನಿಮಾ ‘ಉಡಾನ್‌ಪಿರಪ್ಪೆ’ ಇದೇ ತಿಂಗಳು (ಅಕ್ಟೋಬರ್‌ 14) ಪ್ರೈಮ್‌ನಲ್ಲಿ ಬಿಡುಗಡೆಯಾಗುತ್ತಿದ್ದು, ಜ್ಯೋತಿಕ ಅಭಿನಯದ 50ನೇ ಸಿನಿಮಾ ಇದಾಗಿದೆ. ಸಸಿಕುಮಾರ್‌, ಸಮುದ್ರಕಣಿ, ಸೂರಿ, ನಿವೇದಿತಾ ಸತೀಶ್‌, ಸಿದ್ದು ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಓಟಿಟಿ ವೇದಿಕೆಯೊಂದಿಗೆ ಗಮನ ಸೆಳೆಯುತ್ತಿರುವ ಮಲಯಾಳಂನ ‘ಫಹಾದ್‌ ಫಾಸಿಲ್‌‌’ ಹಾದಿಯಲ್ಲೇ, ಸೂರಿಯಾ ಅವರು ಹೆಜ್ಜೆ ಇಟ್ಟಿರುವುದು ಇದರಿಂದ ಸ್ಪಷ್ಟವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...