Homeಮುಖಪುಟಕೃಷಿ ಕಾಯ್ದೆಗಳ ಕರಾಳತೆ ಹೆಚ್ಚಿನ ರೈತರಿಗೆ ಅರ್ಥವಾದರೆ ಬೆಂಕಿ ಹೊತ್ತಿಕೊಳ್ಳುತ್ತದೆ: ರಾಹುಲ್

ಕೃಷಿ ಕಾಯ್ದೆಗಳ ಕರಾಳತೆ ಹೆಚ್ಚಿನ ರೈತರಿಗೆ ಅರ್ಥವಾದರೆ ಬೆಂಕಿ ಹೊತ್ತಿಕೊಳ್ಳುತ್ತದೆ: ರಾಹುಲ್

"ದೇಶದ ಇಂದಿನ ಪರಿಸ್ಥಿತಿಯ ಬಗ್ಗೆ ಎಲ್ಲರಿಗೂ ತಿಳಿಯುತ್ತಿದೆ. ಏನು ನಡೆಯುತ್ತಿದೆ ಎಂಬುದನ್ನು ಎಲ್ಲರೂ ಸ್ಪಷ್ಟವಾಗಿ ಗಮನಿಸುತ್ತಿದ್ದಾರೆ. ಕೇವಲ ಇಬ್ಬರಿಂದ ಮೂವರು ಉದ್ಯಮಿಗಳ ಹಿತ ಕಾಪಾಡುವುದಕ್ಕೋಸ್ಕರ ಪ್ರಧಾನಿ ಮೋದಿ ದೇಶವನ್ನು ನಡೆಸುತ್ತಿದ್ದಾರೆ"

- Advertisement -
- Advertisement -

“ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ಕರಾಳತೆ ಹೆಚ್ಚಿನ ರೈತರಿಗೆ ಅರ್ಥವಾದರೆ ದೇಶದಾದ್ಯಂತ ಬೆಂಕಿ ಹೊತ್ತಿಕೊಳ್ಳುತ್ತದೆ” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಕೇರಳದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಕೃಷಿ ಕಾಯ್ದೆಗಳ ಬಗೆಗಿನ ವಿವರಗಳು ಹೆಚ್ಚಿನ ರೈತರಿಗೆ ಅರ್ಥವಾಗುತ್ತಿಲ್ಲ. ಒಂದು ವೇಳೆ ಅವರಿಗೆ ಅರ್ಥವಾದರೆ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಆರಂಭಗೊಳ್ಳುತ್ತವೆ. ದೇಶದಾದ್ಯಂತ ಬೆಂಕಿ ಹೊತ್ತಿಕೊಳ್ಳುತ್ತದೆ” ಎಂದು ಹೇಳಿದರು.

“ದೇಶದ ಇಂದಿನ ಪರಿಸ್ಥಿತಿಯ ಬಗ್ಗೆ ಎಲ್ಲರಿಗೂ ತಿಳಿಯುತ್ತಿದೆ. ಏನು ನಡೆಯುತ್ತಿದೆ ಎಂಬುದನ್ನು ಎಲ್ಲರೂ ಸ್ಪಷ್ಟವಾಗಿ ಗಮನಿಸುತ್ತಿದ್ದಾರೆ. ಕೇವಲ ಇಬ್ಬರಿಂದ ಮೂವರು ಉದ್ಯಮಿಗಳ ಹಿತ ಕಾಪಾಡುವುದಕ್ಕೋಸ್ಕರ ಪ್ರಧಾನಿ ಮೋದಿ ದೇಶವನ್ನು ನಡೆಸುತ್ತಿದ್ದಾರೆ” ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಯೋಗೇಂದ್ರ ಯಾದವ್ ಸೇರಿ 20 ರೈತ ಮುಖಂಡರಿಗೆ ನೋಟಿಸ್ ನೀಡಿದ ದೆಹಲಿ ಪೊಲೀಸ್

ಕೇರಳ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಬುಧವಾರ, ಪ್ರಧಾನಿ ಮೋದಿಯ ಮೇಲೆ ನೇರ ವಾಗ್ದಾಳಿ ನಡೆಸಿದರು. “ಚೀನಾ ಭಾರತದ ಭೂಭಾಗವನ್ನು ಆಕ್ರಮಿಸಿಕೊಂಡಿದ್ದರೂ ಸಹ 56 ಇಂಚಿನ ಎದೆಗೆ ಏನಾಗಿದೆ. ಯಾಕೆ ಯಾವುದೇ ನಿರ್ದಾಕ್ಷೀಣ್ಯ ಕ್ರಮಗಳನ್ನು ಕೈಗೊಂಡಿಲ್ಲ” ಎಂದು ಪ್ರಶ್ನಿಸಿದರು.

“ಪ್ರಧಾನಿ ಅಸಮರ್ಥರಾಗಿದ್ದಾರೆ. ಅವರ ವೈಫಲ್ಯಕ್ಕೆ ಆರ್‌ಎಸ್‌ಎಸ್‌ನಿಂದ ದೇಶದಲ್ಲಿ ಹರಡುತ್ತಿರುವ ದ್ವೇಷವೇ ಕಾರಣ. ಪ್ರಧಾನಿ ದೇಶವನ್ನು ಒಡೆದಿದ್ದಾರೆ ಮತ್ತು ದ್ವೇಷವನ್ನು ಹರಡುತ್ತಿರುವುದರಿಂದಲೇ ಚೀನಿಯರು ದೇಶದೊಳಗೆ ನುಸುಳಲು ತೀರ್ಮಾನಿಸಿದ್ದಾರೆ. ಪ್ರಧಾನಿ ಈ ದೇಶವನ್ನು ದುರ್ಬಲಗೊಳಿಸಿದ್ದಾರೆ ಮತ್ತು ಅವರು ನಮ್ಮ ವಿರುದ್ಧ ನಿಲ್ಲಲು ಸಾಧ್ಯವಿಲ್ಲ ಎಂಬುದು ತಿಳಿಸಿದೆ. ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ಜಾರಿ ಮೂಲಕ ಪ್ರಧಾನಿ ದೇಶದ ಆರ್ಥಿಕತೆಯನ್ನು ನಾಶಪಡಿಸಿದ್ದಾರೆ” ಎಂದು ಆರೋಪಿಸಿದರು.


ಇದನ್ನೂ ಓದಿ: ಹೊಸ ರೂಪಾಂತರಿ ವೈರಸ್‌ನ 153 ಪ್ರಕರಣ ದಾಖಲು: ಕೇಂದ್ರ ಆರೋಗ್ಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...