Homeಮುಖಪುಟ‘ಅತ್ಯಂತ ಸ್ಪಷ್ಟ’ - ಮತ್ತೆ ರೈತರ ಪರ ಟ್ವೀಟ್ ಮಾಡಿದ ಬಿಜೆಪಿ ನಾಯಕ ವರುಣ್ ಗಾಂಧಿ

‘ಅತ್ಯಂತ ಸ್ಪಷ್ಟ’ – ಮತ್ತೆ ರೈತರ ಪರ ಟ್ವೀಟ್ ಮಾಡಿದ ಬಿಜೆಪಿ ನಾಯಕ ವರುಣ್ ಗಾಂಧಿ

- Advertisement -
- Advertisement -

ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಮತ್ತೊಮ್ಮೆ ಲಿಖಿಂಪುರ್‌ ಹತ್ಯಾಕಾಂಡದ ರೈತರ ಪರವಾಗಿ ನಿಂತಿದ್ದು, ರೈತರ ಅಮಾಯಕ ರಕ್ತಕ್ಕೆ ಉತ್ತರದಾಯಿತ್ವ ಇರಬೇಕು ಎಂದು ಅವರು ಹೇಳಿದ್ದಾರೆ. ಭಾನುವಾರ ಯುಪಿಯ ಲಖಿಂಪುರ್ ಖೇರಿಯಲ್ಲಿ ಏನಾಯಿತು ಎಂಬುದನ್ನು ಬಹಿರಂಗಪಡಿಸುವ ದೀರ್ಘ ಮತ್ತು ಉತ್ತಮ ಗುಣಮಟ್ಟದ ವೀಡಿಯೊವನ್ನು ಅವರು ಟ್ವೀಟ್ ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿ ಪಕ್ಷದ ನಾಯಕರಾಗಿರುವ ವರುಣ್‌ ಗಾಂಧಿ ಅವರು ಭಾನುವಾರ ಲಖಿಂಪುರ್ ಖೇರಿಯಲ್ಲಿ ನಡೆದ ಘಟನೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಹತ್ಯಾಕಾಂಡಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಜನರು ಮೃತಪಟ್ಟಿದ್ದರು.

ಇದನ್ನೂ ಓದಿ: ರೈತರ ಮೇಲೆ ಕಾರು ಹರಿಸುತ್ತಿರುವ ವೈರಲ್ ವಿಡಿಯೋ ಹಂಚಿಕೊಂಡ ಬಿಜೆಪಿ ಸಂಸದ ವರುಣ್ ಗಾಂಧಿ

ಗುರುವಾರ ಘಟನೆಯ ಸ್ಪಷ್ಟ ಮತ್ತು ಧೀರ್ಘ ವಿಡಿಯೊವನ್ನು ಟ್ವೀಟ್ ಮಾಡಿರುವ ವರುಣ್‌ ಗಾಂಧಿ, “ವೀಡಿಯೊ ಅತ್ಯಂತ ಸ್ಪಷ್ಟವಾಗಿದೆ. ಪ್ರತಿಭಟನಾಕಾರರನ್ನು ಕೊಲೆ ಮಾಡುವ ಮೂಲಕ ಮೌನಗೊಳಿಸಲು ಸಾಧ್ಯವಿಲ್ಲ. ಅಂದು ಚೆಲ್ಲಿದ ರೈತರ ಮುಗ್ಧ ರಕ್ತಕ್ಕೆ ಹೊಣೆಗಾರಿಕೆ ವಹಿಸಬೇಕು. ಪ್ರತಿಯೊಬ್ಬ ರೈತನ ಮನಸ್ಸಿನಲ್ಲಿ ಹಠ ಮತ್ತು ಕ್ರೌರ್ಯದ ಸಂದೇಶ ಪ್ರವೇಶಿಸುವ ಮೊದಲು ನ್ಯಾಯ ಒದಗಿಸಬೇಕು” ಎಂದು ಹೇಳಿದ್ದಾರೆ.

ಮಂಗಳವಾರ ಘಟನೆಯ ಬಗ್ಗೆಗಿನ ಸಣ್ಣ ವೈರಲ್ ವಿಡಿಯೊವನ್ನು ಹಂಚಿಕೊಂಡಿದ್ದ ವರುಣ್‌, “ಈ ವೀಡಿಯೊ ಎಲ್ಲರ ಆತ್ಮವನ್ನು ಕಲಕುತ್ತದೆ” ಎಂದು ಹೇಳಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದ್ದರು.

ಅಂದು ಅವರು ತನ್ನ ಟ್ವೀಟ್‌ನಲ್ಲಿ, “ಲಖಿಂಪುರ್ ಖೇರಿಯಲ್ಲಿ ಉದ್ದೇಶಪೂರ್ವಕವಾಗಿ ವಾಹನವನ್ನು ರೈತರ ಮೇಲೆ ಹರಿಸಿರುವ ಈ ವಿಡಿಯೋ ಎಲ್ಲರ ಆತ್ಮವನ್ನೂ ಕಲಕುತ್ತದೆ. ಪೊಲೀಸರು ಈ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿ ಈ ವಾಹನಗಳ ಮಾಲೀಕರು, ಅದರಲ್ಲಿ ಕುಳಿತಿರುವ ಜನರು ಮತ್ತು ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳನ್ನು ತಕ್ಷಣ ಬಂಧಿಸಬೇಕು” ಎಂದು ಬರೆದಿದ್ದರು.

ರೈತರ ಸಾವಿನಲ್ಲಿ ಭಾಗಿಯಾದವರನ್ನು ಖಂಡಿಸಿದ್ದಲ್ಲದೆ, ಸರ್ಕಾರವು ತಾಳ್ಮೆಯಿಂದ ಮತ್ತು ಸಂಯಮದಿಂದ ವರ್ತಿಬೇಕು ಎಂದು ಒತ್ತಾಯಿಸಿದ್ದರು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಬೇಕು ಮತ್ತು ಮೃತಪಟ್ಟ ರೈತರ ಕುಟುಂಬಗಳಿಗೆ 1 ಕೋಟಿ ರೂ. ಪರಿಹಾರ ನೀಡುವಂತೆ ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದರು.

 ಇದನ್ನೂ ಓದಿ: ರೈತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಯುಪಿ ಸಿಎಂಗೆ ಪತ್ರ ಬರೆದ ಬಿಜೆಪಿ ಸಂಸದ ವರುಣ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....