Homeಕರ್ನಾಟಕಸ್ವಾತಂತ್ರ್ಯಕ್ಕಾಗಿ ಬ್ರಾಹ್ಮಣರೇ ಹೆಚ್ಚಾಗಿ ಹೋರಾಡಿ ಮಡಿದಿದ್ದಾರೆ: ರಾಮದಾಸ್‌

ಸ್ವಾತಂತ್ರ್ಯಕ್ಕಾಗಿ ಬ್ರಾಹ್ಮಣರೇ ಹೆಚ್ಚಾಗಿ ಹೋರಾಡಿ ಮಡಿದಿದ್ದಾರೆ: ರಾಮದಾಸ್‌

- Advertisement -
- Advertisement -

ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಾಹ್ಮಣರೇ ಅತೀ ಹೆಚ್ಚು ಸಂಖ್ಯೆಯಲ್ಲೇ ಭಾಗವಹಿಸಿ ಮಡಿದವರಾಗಿದ್ದಾರೆ ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿರುವುದಾಗಿ ವರದಿಯಾಗಿದೆ.

ಮೈಸೂರು ನಗರದ ಆದರ್ಶ ಸೇವಾ ಸಂಘ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಹಾಗೂ ವಿಪ್ರ ಪರಿಷತ್ ಜಂಟಿಯಾಗಿ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಪ್ರಶಸ್ತಿ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದವರಲ್ಲಿ ಬ್ರಾಹ್ಮಣರೇ ಅತೀ ಹೆಚ್ಚು ಎನ್ನುವುದಕ್ಕೆ ಸರ್ಕಾರಿ ದಾಖಲೆಗಳಿವೆ. ಯಾವುದೇ ಸಾಮಾಜಿಕ ಹೋರಾಟದಲ್ಲಿ ವಿಪ್ರರ ಪಾತ್ರವನ್ನು ಕಡೆಗಣಿಸುವಂತಿಲ್ಲ ಎಂದು ರಾಮ್‌ದಾಸ್‌ ಹೇಳಿರುವುದಾಗಿ ಮೈಸೂರಿನ ಪ್ರಾದೇಶಿಕ ದಿನಪತ್ರಿಕೆ ‘ಆಂದೋಲನ’ ವರದಿ ಮಾಡಿದೆ.

ಬಳಿಕ ಮಾತನಾಡಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್, ಬ್ರಾಹ್ಮಣ ಸಮಾಜ ಎತ್ತ ಸಾಗುತ್ತಿದೆ ಎಂಬುದರ ಕುರಿತು ಹಿರಿಯರಾದ ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕು. ಭವಿಷ್ಯದಲ್ಲಿ ಸಮಾನ ಸ್ಥಾನ-ಮಾನ, ಏನು-ಎತ್ತ ಎಂಬ ಆತಂಕ ಸೃಷ್ಟಿಯಾಗಿರುವುದು ನಿಜ. ಹಾಗಂತ ನಾವು ಎದೆಗುಂದಬೇಕಾಗಿಲ್ಲ. ನಮ್ಮ ಪರಂಪರೆಯ ಸಂಸ್ಕೃತಿಯನ್ನು ಪುನರ್ ರೂಪಿಸಿಕೊಂಡರೆ ಮಾತ್ರ ವಿಪ್ರರಿಗೆ ಗೌರವ ಸಿಗಲು ಸಾಧ್ಯ ಎಂದು ಕರೆ ನೀಡಿದ್ದಾರೆ.

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ರಾಜ್ಯಾಧ್ಯಾಕ್ಷ ಸಚ್ಚಿದಾನಂದ ಮೂರ್ತಿ ಮಾತನಾಡಿ, ನಮಗೆ ಜಾತಿ ಗಣತಿಯಲ್ಲಿ ಅನ್ಯಾಯವಾಗಿದೆ. ರಾಜ್ಯದ ಲ್ಲಿ 42 ಲಕ್ಷ ಜನಸಂಖ್ಯೆ ಇದ್ದ ನಾವು ಉಪ ಪಂಗಡ ಹೆಸರನ್ನು ದಾಖಲಿಸದ ಪರಿಣಾಮ ಜನಸಂಖ್ಯೆ 17 ಲಕ್ಷಕ್ಕೆ ಇಳಿಕೆಯಾಗಿರುವುದು ಅಂಕಿ-ಸಂಖ್ಯೆಯಲ್ಲಿದೆ. ಇದು ನಮಗೆ ನಾವೇ ಮಾಡಿಕೊಂಡ ಅನ್ಯಾಯ. ಮುಂದಿನ ಗಣತಿಯಲ್ಲಾದರೂ ಉಪ ಪಂಗಡಗಳಿಂದ, ತ್ರಿಮತದಿಂದ ಹೊರ ಬಂದು ಒಂದೇ ಹೆಸರಲ್ಲಿ ಗಣತಿಯಲ್ಲಿ ದಾಖಲಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಸ್ವಾತಂತ್ರ್ಯ ಹೋರಾಟಗಾರರ ಪಟ್ಟಿಯಲ್ಲಿ ನೆಹರೂ ಫೋಟೋ- ಪರಿಚಯ ಕಿತ್ತೆಸೆದ ಬಿಜೆಪಿ ಸರ್ಕಾರ; ಜನಾಕ್ರೋಶ

ಗಣಪತಿ ಸಚ್ಚಿದಾನಂದ ಆಶ್ರಮದ ದತ್ತ ವಿಜಯಾನಂದ ಸ್ವಾಮೀಜಿ ಹಾಜರಿದ್ದರು. ಆದರ್ಶ ಸೇವಾ ಸಂಘ ಅಧ್ಯಕ್ಷ ಜಿ.ನಾಗರಾಜು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಡಾ ನಿಕಟಪೂರ್ವ ಅಧ್ಯಕ್ಷ ಎಚ್.ವಿ.ರಾಜೀವ್ ಹಾಗೂ ಆದರ್ಶ ಸೇವಾ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.

ರಾಮದಾಸ್ ಅವರ ಈ ಹಿಂದಿನ ಹೇಳಿಕೆಗಳನ್ನು ಉಲ್ಲೇಖಿಸಿ ಕನ್ನಡಪರ ಹೋರಾಟಗಾರ ಎಸ್.ಸಿ.ದಿನೇಶ್‌ಕುಮಾರ್‌ ಟೀಕಿಸಿದ್ದಾರೆ. ರಾಮದಾಸ್‌ ಈ ಹಿಂದೆ ಹಲವು ಸುಳ್ಳುಗಳನ್ನು ಹೇಳಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...