Homeಮುಖಪುಟದೆಹಲಿ ಹೋರಾಟದಲ್ಲಿ ಮೃತಪಟ್ಟ ಹೆಚ್ಚಿನ ರೈತರು 3 ಎಕರೆಗಿಂಲೂ ಕಡಿಮೆ ಜಮೀನು ಹೊಂದಿರುವವರು!

ದೆಹಲಿ ಹೋರಾಟದಲ್ಲಿ ಮೃತಪಟ್ಟ ಹೆಚ್ಚಿನ ರೈತರು 3 ಎಕರೆಗಿಂಲೂ ಕಡಿಮೆ ಜಮೀನು ಹೊಂದಿರುವವರು!

ವರ್ಷ ತುಂಬುತ್ತಿರುವ ರೈತ ಹೋರಟದಲ್ಲಿ ಸುಮಾರು 600 ರೈತರು ಸಾವನ್ನಪ್ಪಿದ್ದಾರೆ

- Advertisement -
- Advertisement -

ಒಕ್ಕೂಟ ಸರ್ಕಾರದ ಹೊಸ ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ಬೀಡು ಬಿಟ್ಟಾಗ, ಶ್ರೀಮಂತ ರೈತರು ಇದರ ಹಿಂದೆ ಇದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಈ ಹೇಳಿಕೆಗೆ ವಿರುದ್ಧವಾಗಿ, ಪಾಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಇಬ್ಬರು ಅರ್ಥಶಾಸ್ತ್ರಜ್ಞರು ನಡೆಸಿದ ಅಧ್ಯಯನದಲ್ಲಿ ಕಂಡು ಬಂದಿದೆ. ಪ್ರತಿಭಟನೆಯ ಸಮಯದಲ್ಲಿ ಮೃತಪಟ್ಟ ರೈತರು ಸರಾಸರಿ 2.94 ಎಕರೆ ಜಮೀನಿಗಿಂತ ಹೆಚ್ಚು ಕೃಷಿ ಮಾಡಿಲ್ಲ ಎಂದು ಅಧ್ಯಯನವು ಬಹಿರಂಗಪಡಿಸಿದೆ.

ರೈತ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದ್ದು, ಇದುವರೆಗೂ ಅಲ್ಲಿ ಸುಮಾರು 600 ರೈತರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗದೆ.

ಪಂಜಾಬಿ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರದ ಮಾಜಿ ಪ್ರಾಧ್ಯಾಪಕ ಲಖ್ವಿಂದರ್ ಸಿಂಗ್ ಮತ್ತು ಬಟಿಂಡಾದಲ್ಲಿರುವ ಪಂಜಾಬಿ ವಿಶ್ವವಿದ್ಯಾಲಯದ ಗುರು ಕಾಶಿ ಕ್ಯಾಂಪಸ್‌ನಲ್ಲಿ ಸಮಾಜ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಬಲ್ದೇವ್ ಸಿಂಗ್ ಶೆರ್ಗಿಲ್ ಅವರು ಸಿದ್ದಪಡಿಸಿದ ಅಧ್ಯಯನವು, “ಗುತ್ತಿಗೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದ ಭೂರಹಿತ ಮೃತ ರೈತರನ್ನು ಇದಕ್ಕೆ ಸೇರಿಸಿದರೆ ಕೃಷಿ ಭೂಮಿಯ ಸರಾಸರಿ ಗಾತ್ರವು 2.26 ಎಕರೆಗಳಿಗೆ ಇಳಿಯುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ರೈತ ಹೋರಾಟ ಬಿಜೆಪಿಯ ಕಪಾಳಕ್ಕೆ ಭಾರಿಸಿದೆ: ರೈತ ಮುಖಂಡ ಹರ್ನೇಕ್ ಸಿಂಗ್

ಅವರ ಪ್ರಕಾರ, ಕಳೆದ 11 ತಿಂಗಳ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 600 ರೈತರಲ್ಲಿ 460 ರೈತರ ಮಾಹಿತಿಯನ್ನು ಆಧರಿಸಿ ಈ ಅಧ್ಯಯನವನ್ನು ಮಾಡಲಾಗಿದೆ. ಅಧ್ಯಯನ ನಡೆಸುವಾಗ ಮೃತರ ಕುಟುಂಬಗಳನ್ನು ವೈಯಕ್ತಿಕವಾಗಿ ಸಂಪರ್ಕಿಸಲಾಗಿದೆ ಎಂದು ಅವರು ದಿ ವೈರ್‌ಗೆ ತಿಳಿಸಿದ್ದಾರೆ.

ಅಧ್ಯಯನವು, ಪ್ರತಿಭಟನೆಯ ಸಮಯದಲ್ಲಿ ಪ್ರಾಣ ಕಳೆದುಕೊಂಡವರು ಸಣ್ಣ ಮತ್ತು ಅತಿ ಸಣ್ಣ ರೈತರು ಮತ್ತು ಭೂರಹಿತ ಕೃಷಿಕರು ಎಂದು ಸೂಚಿಸುತ್ತದೆ.

ಅಧ್ಯಯನವು ಪ್ರತಿಭಟನೆಯಲ್ಲಿ ಪಂಜಾಬ್‌ನ ಪ್ರದೇಶವಾರು ಭಾಗವಹಿಸುವಿಕೆ ಮತ್ತು ಸಾವುಗಳ ಮಾಹಿತಿಯನ್ನೂ ಕಳೆ ಹಾಕಿದೆ. ರಾಜ್ಯದ ಮಾಲ್ವಾ ಪ್ರದೇಶವು ಪ್ರತಿಭಟನೆಗಳಲ್ಲಿ ಗರಿಷ್ಠ ಭಾಗವಹಿಸುವಿಕೆ ಮತ್ತು ಗರಿಷ್ಠ ಸಾವುಗಳನ್ನು ಕಂಡಿದೆ ಎಂದು ಅಧ್ಯಯನದಿಂದ ಬಹಿರಂಗವಾಗಿದೆ.

ಪಂಜಾಬ್ ಮೂರು ಪ್ರದೇಶಗಳಾಗಿ ವಿಂಗಡಿಸಲಾದ 23 ಜಿಲ್ಲೆಗಳನ್ನು ಹೊಂದಿದೆ: ಮಾಲ್ವಾ 15 ಜಿಲ್ಲೆಗಳನ್ನು ಹೊಂದಿದ್ದರೆ ದೋಬಾ ಮತ್ತು ಮಜಾ ಪ್ರದೇಶಗಳು ತಲಾ ನಾಲ್ಕು ಜಿಲ್ಲೆಗಳನ್ನು ಹೊಂದಿವೆ. ಅಧ್ಯಯನದ ಪ್ರಕಾರ, ಸಾವನ್ನಪ್ಪಿದ 80% ರೈತರು ಪಂಜಾಬ್‌ನ ಮಾಲ್ವಾ ಪ್ರದೇಶದವರು. ಈ ಪ್ರದೇಶವು ತುಲನಾತ್ಮಕವಾಗಿ ಹೆಚ್ಚಿನ ಸರಾಸರಿ ಕೃಷಿ ಪ್ರದೇಶವನ್ನು ಹೊಂದಿದ್ದು, ನಂತರ ದೋಬಾ ಮತ್ತು ಮಜಾ ಬರುತ್ತದೆ.

ದೋಬಾ ಮತ್ತು ಮಜಾ ಪ್ರದೇಶದ ಕೃಷಿ ಪ್ರತಿಭಟನೆಯ ಸಾವುಗಳ ಪಾಲು ಕ್ರಮವಾಗಿ 12.83% ಮತ್ತು 7.39% ಆಗಿದೆ ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...