Homeಮುಖಪುಟದೆಹಲಿ ಹೋರಾಟದಲ್ಲಿ ಮೃತಪಟ್ಟ ಹೆಚ್ಚಿನ ರೈತರು 3 ಎಕರೆಗಿಂಲೂ ಕಡಿಮೆ ಜಮೀನು ಹೊಂದಿರುವವರು!

ದೆಹಲಿ ಹೋರಾಟದಲ್ಲಿ ಮೃತಪಟ್ಟ ಹೆಚ್ಚಿನ ರೈತರು 3 ಎಕರೆಗಿಂಲೂ ಕಡಿಮೆ ಜಮೀನು ಹೊಂದಿರುವವರು!

ವರ್ಷ ತುಂಬುತ್ತಿರುವ ರೈತ ಹೋರಟದಲ್ಲಿ ಸುಮಾರು 600 ರೈತರು ಸಾವನ್ನಪ್ಪಿದ್ದಾರೆ

- Advertisement -
- Advertisement -

ಒಕ್ಕೂಟ ಸರ್ಕಾರದ ಹೊಸ ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ಬೀಡು ಬಿಟ್ಟಾಗ, ಶ್ರೀಮಂತ ರೈತರು ಇದರ ಹಿಂದೆ ಇದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಈ ಹೇಳಿಕೆಗೆ ವಿರುದ್ಧವಾಗಿ, ಪಾಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಇಬ್ಬರು ಅರ್ಥಶಾಸ್ತ್ರಜ್ಞರು ನಡೆಸಿದ ಅಧ್ಯಯನದಲ್ಲಿ ಕಂಡು ಬಂದಿದೆ. ಪ್ರತಿಭಟನೆಯ ಸಮಯದಲ್ಲಿ ಮೃತಪಟ್ಟ ರೈತರು ಸರಾಸರಿ 2.94 ಎಕರೆ ಜಮೀನಿಗಿಂತ ಹೆಚ್ಚು ಕೃಷಿ ಮಾಡಿಲ್ಲ ಎಂದು ಅಧ್ಯಯನವು ಬಹಿರಂಗಪಡಿಸಿದೆ.

ರೈತ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದ್ದು, ಇದುವರೆಗೂ ಅಲ್ಲಿ ಸುಮಾರು 600 ರೈತರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗದೆ.

ಪಂಜಾಬಿ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರದ ಮಾಜಿ ಪ್ರಾಧ್ಯಾಪಕ ಲಖ್ವಿಂದರ್ ಸಿಂಗ್ ಮತ್ತು ಬಟಿಂಡಾದಲ್ಲಿರುವ ಪಂಜಾಬಿ ವಿಶ್ವವಿದ್ಯಾಲಯದ ಗುರು ಕಾಶಿ ಕ್ಯಾಂಪಸ್‌ನಲ್ಲಿ ಸಮಾಜ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಬಲ್ದೇವ್ ಸಿಂಗ್ ಶೆರ್ಗಿಲ್ ಅವರು ಸಿದ್ದಪಡಿಸಿದ ಅಧ್ಯಯನವು, “ಗುತ್ತಿಗೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದ ಭೂರಹಿತ ಮೃತ ರೈತರನ್ನು ಇದಕ್ಕೆ ಸೇರಿಸಿದರೆ ಕೃಷಿ ಭೂಮಿಯ ಸರಾಸರಿ ಗಾತ್ರವು 2.26 ಎಕರೆಗಳಿಗೆ ಇಳಿಯುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ರೈತ ಹೋರಾಟ ಬಿಜೆಪಿಯ ಕಪಾಳಕ್ಕೆ ಭಾರಿಸಿದೆ: ರೈತ ಮುಖಂಡ ಹರ್ನೇಕ್ ಸಿಂಗ್

ಅವರ ಪ್ರಕಾರ, ಕಳೆದ 11 ತಿಂಗಳ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 600 ರೈತರಲ್ಲಿ 460 ರೈತರ ಮಾಹಿತಿಯನ್ನು ಆಧರಿಸಿ ಈ ಅಧ್ಯಯನವನ್ನು ಮಾಡಲಾಗಿದೆ. ಅಧ್ಯಯನ ನಡೆಸುವಾಗ ಮೃತರ ಕುಟುಂಬಗಳನ್ನು ವೈಯಕ್ತಿಕವಾಗಿ ಸಂಪರ್ಕಿಸಲಾಗಿದೆ ಎಂದು ಅವರು ದಿ ವೈರ್‌ಗೆ ತಿಳಿಸಿದ್ದಾರೆ.

ಅಧ್ಯಯನವು, ಪ್ರತಿಭಟನೆಯ ಸಮಯದಲ್ಲಿ ಪ್ರಾಣ ಕಳೆದುಕೊಂಡವರು ಸಣ್ಣ ಮತ್ತು ಅತಿ ಸಣ್ಣ ರೈತರು ಮತ್ತು ಭೂರಹಿತ ಕೃಷಿಕರು ಎಂದು ಸೂಚಿಸುತ್ತದೆ.

ಅಧ್ಯಯನವು ಪ್ರತಿಭಟನೆಯಲ್ಲಿ ಪಂಜಾಬ್‌ನ ಪ್ರದೇಶವಾರು ಭಾಗವಹಿಸುವಿಕೆ ಮತ್ತು ಸಾವುಗಳ ಮಾಹಿತಿಯನ್ನೂ ಕಳೆ ಹಾಕಿದೆ. ರಾಜ್ಯದ ಮಾಲ್ವಾ ಪ್ರದೇಶವು ಪ್ರತಿಭಟನೆಗಳಲ್ಲಿ ಗರಿಷ್ಠ ಭಾಗವಹಿಸುವಿಕೆ ಮತ್ತು ಗರಿಷ್ಠ ಸಾವುಗಳನ್ನು ಕಂಡಿದೆ ಎಂದು ಅಧ್ಯಯನದಿಂದ ಬಹಿರಂಗವಾಗಿದೆ.

ಪಂಜಾಬ್ ಮೂರು ಪ್ರದೇಶಗಳಾಗಿ ವಿಂಗಡಿಸಲಾದ 23 ಜಿಲ್ಲೆಗಳನ್ನು ಹೊಂದಿದೆ: ಮಾಲ್ವಾ 15 ಜಿಲ್ಲೆಗಳನ್ನು ಹೊಂದಿದ್ದರೆ ದೋಬಾ ಮತ್ತು ಮಜಾ ಪ್ರದೇಶಗಳು ತಲಾ ನಾಲ್ಕು ಜಿಲ್ಲೆಗಳನ್ನು ಹೊಂದಿವೆ. ಅಧ್ಯಯನದ ಪ್ರಕಾರ, ಸಾವನ್ನಪ್ಪಿದ 80% ರೈತರು ಪಂಜಾಬ್‌ನ ಮಾಲ್ವಾ ಪ್ರದೇಶದವರು. ಈ ಪ್ರದೇಶವು ತುಲನಾತ್ಮಕವಾಗಿ ಹೆಚ್ಚಿನ ಸರಾಸರಿ ಕೃಷಿ ಪ್ರದೇಶವನ್ನು ಹೊಂದಿದ್ದು, ನಂತರ ದೋಬಾ ಮತ್ತು ಮಜಾ ಬರುತ್ತದೆ.

ದೋಬಾ ಮತ್ತು ಮಜಾ ಪ್ರದೇಶದ ಕೃಷಿ ಪ್ರತಿಭಟನೆಯ ಸಾವುಗಳ ಪಾಲು ಕ್ರಮವಾಗಿ 12.83% ಮತ್ತು 7.39% ಆಗಿದೆ ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...