Homeಮುಖಪುಟದೆಹಲಿ ಹೋರಾಟದಲ್ಲಿ ಮೃತಪಟ್ಟ ಹೆಚ್ಚಿನ ರೈತರು 3 ಎಕರೆಗಿಂಲೂ ಕಡಿಮೆ ಜಮೀನು ಹೊಂದಿರುವವರು!

ದೆಹಲಿ ಹೋರಾಟದಲ್ಲಿ ಮೃತಪಟ್ಟ ಹೆಚ್ಚಿನ ರೈತರು 3 ಎಕರೆಗಿಂಲೂ ಕಡಿಮೆ ಜಮೀನು ಹೊಂದಿರುವವರು!

ವರ್ಷ ತುಂಬುತ್ತಿರುವ ರೈತ ಹೋರಟದಲ್ಲಿ ಸುಮಾರು 600 ರೈತರು ಸಾವನ್ನಪ್ಪಿದ್ದಾರೆ

- Advertisement -
- Advertisement -

ಒಕ್ಕೂಟ ಸರ್ಕಾರದ ಹೊಸ ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ಬೀಡು ಬಿಟ್ಟಾಗ, ಶ್ರೀಮಂತ ರೈತರು ಇದರ ಹಿಂದೆ ಇದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಈ ಹೇಳಿಕೆಗೆ ವಿರುದ್ಧವಾಗಿ, ಪಾಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಇಬ್ಬರು ಅರ್ಥಶಾಸ್ತ್ರಜ್ಞರು ನಡೆಸಿದ ಅಧ್ಯಯನದಲ್ಲಿ ಕಂಡು ಬಂದಿದೆ. ಪ್ರತಿಭಟನೆಯ ಸಮಯದಲ್ಲಿ ಮೃತಪಟ್ಟ ರೈತರು ಸರಾಸರಿ 2.94 ಎಕರೆ ಜಮೀನಿಗಿಂತ ಹೆಚ್ಚು ಕೃಷಿ ಮಾಡಿಲ್ಲ ಎಂದು ಅಧ್ಯಯನವು ಬಹಿರಂಗಪಡಿಸಿದೆ.

ರೈತ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದ್ದು, ಇದುವರೆಗೂ ಅಲ್ಲಿ ಸುಮಾರು 600 ರೈತರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗದೆ.

ಪಂಜಾಬಿ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರದ ಮಾಜಿ ಪ್ರಾಧ್ಯಾಪಕ ಲಖ್ವಿಂದರ್ ಸಿಂಗ್ ಮತ್ತು ಬಟಿಂಡಾದಲ್ಲಿರುವ ಪಂಜಾಬಿ ವಿಶ್ವವಿದ್ಯಾಲಯದ ಗುರು ಕಾಶಿ ಕ್ಯಾಂಪಸ್‌ನಲ್ಲಿ ಸಮಾಜ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಬಲ್ದೇವ್ ಸಿಂಗ್ ಶೆರ್ಗಿಲ್ ಅವರು ಸಿದ್ದಪಡಿಸಿದ ಅಧ್ಯಯನವು, “ಗುತ್ತಿಗೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದ ಭೂರಹಿತ ಮೃತ ರೈತರನ್ನು ಇದಕ್ಕೆ ಸೇರಿಸಿದರೆ ಕೃಷಿ ಭೂಮಿಯ ಸರಾಸರಿ ಗಾತ್ರವು 2.26 ಎಕರೆಗಳಿಗೆ ಇಳಿಯುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ರೈತ ಹೋರಾಟ ಬಿಜೆಪಿಯ ಕಪಾಳಕ್ಕೆ ಭಾರಿಸಿದೆ: ರೈತ ಮುಖಂಡ ಹರ್ನೇಕ್ ಸಿಂಗ್

ಅವರ ಪ್ರಕಾರ, ಕಳೆದ 11 ತಿಂಗಳ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 600 ರೈತರಲ್ಲಿ 460 ರೈತರ ಮಾಹಿತಿಯನ್ನು ಆಧರಿಸಿ ಈ ಅಧ್ಯಯನವನ್ನು ಮಾಡಲಾಗಿದೆ. ಅಧ್ಯಯನ ನಡೆಸುವಾಗ ಮೃತರ ಕುಟುಂಬಗಳನ್ನು ವೈಯಕ್ತಿಕವಾಗಿ ಸಂಪರ್ಕಿಸಲಾಗಿದೆ ಎಂದು ಅವರು ದಿ ವೈರ್‌ಗೆ ತಿಳಿಸಿದ್ದಾರೆ.

ಅಧ್ಯಯನವು, ಪ್ರತಿಭಟನೆಯ ಸಮಯದಲ್ಲಿ ಪ್ರಾಣ ಕಳೆದುಕೊಂಡವರು ಸಣ್ಣ ಮತ್ತು ಅತಿ ಸಣ್ಣ ರೈತರು ಮತ್ತು ಭೂರಹಿತ ಕೃಷಿಕರು ಎಂದು ಸೂಚಿಸುತ್ತದೆ.

ಅಧ್ಯಯನವು ಪ್ರತಿಭಟನೆಯಲ್ಲಿ ಪಂಜಾಬ್‌ನ ಪ್ರದೇಶವಾರು ಭಾಗವಹಿಸುವಿಕೆ ಮತ್ತು ಸಾವುಗಳ ಮಾಹಿತಿಯನ್ನೂ ಕಳೆ ಹಾಕಿದೆ. ರಾಜ್ಯದ ಮಾಲ್ವಾ ಪ್ರದೇಶವು ಪ್ರತಿಭಟನೆಗಳಲ್ಲಿ ಗರಿಷ್ಠ ಭಾಗವಹಿಸುವಿಕೆ ಮತ್ತು ಗರಿಷ್ಠ ಸಾವುಗಳನ್ನು ಕಂಡಿದೆ ಎಂದು ಅಧ್ಯಯನದಿಂದ ಬಹಿರಂಗವಾಗಿದೆ.

ಪಂಜಾಬ್ ಮೂರು ಪ್ರದೇಶಗಳಾಗಿ ವಿಂಗಡಿಸಲಾದ 23 ಜಿಲ್ಲೆಗಳನ್ನು ಹೊಂದಿದೆ: ಮಾಲ್ವಾ 15 ಜಿಲ್ಲೆಗಳನ್ನು ಹೊಂದಿದ್ದರೆ ದೋಬಾ ಮತ್ತು ಮಜಾ ಪ್ರದೇಶಗಳು ತಲಾ ನಾಲ್ಕು ಜಿಲ್ಲೆಗಳನ್ನು ಹೊಂದಿವೆ. ಅಧ್ಯಯನದ ಪ್ರಕಾರ, ಸಾವನ್ನಪ್ಪಿದ 80% ರೈತರು ಪಂಜಾಬ್‌ನ ಮಾಲ್ವಾ ಪ್ರದೇಶದವರು. ಈ ಪ್ರದೇಶವು ತುಲನಾತ್ಮಕವಾಗಿ ಹೆಚ್ಚಿನ ಸರಾಸರಿ ಕೃಷಿ ಪ್ರದೇಶವನ್ನು ಹೊಂದಿದ್ದು, ನಂತರ ದೋಬಾ ಮತ್ತು ಮಜಾ ಬರುತ್ತದೆ.

ದೋಬಾ ಮತ್ತು ಮಜಾ ಪ್ರದೇಶದ ಕೃಷಿ ಪ್ರತಿಭಟನೆಯ ಸಾವುಗಳ ಪಾಲು ಕ್ರಮವಾಗಿ 12.83% ಮತ್ತು 7.39% ಆಗಿದೆ ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...