Homeಮುಖಪುಟದೆಹಲಿ ಹೋರಾಟದಲ್ಲಿ ಮೃತಪಟ್ಟ ಹೆಚ್ಚಿನ ರೈತರು 3 ಎಕರೆಗಿಂಲೂ ಕಡಿಮೆ ಜಮೀನು ಹೊಂದಿರುವವರು!

ದೆಹಲಿ ಹೋರಾಟದಲ್ಲಿ ಮೃತಪಟ್ಟ ಹೆಚ್ಚಿನ ರೈತರು 3 ಎಕರೆಗಿಂಲೂ ಕಡಿಮೆ ಜಮೀನು ಹೊಂದಿರುವವರು!

ವರ್ಷ ತುಂಬುತ್ತಿರುವ ರೈತ ಹೋರಟದಲ್ಲಿ ಸುಮಾರು 600 ರೈತರು ಸಾವನ್ನಪ್ಪಿದ್ದಾರೆ

- Advertisement -
- Advertisement -

ಒಕ್ಕೂಟ ಸರ್ಕಾರದ ಹೊಸ ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರು ಬೀಡು ಬಿಟ್ಟಾಗ, ಶ್ರೀಮಂತ ರೈತರು ಇದರ ಹಿಂದೆ ಇದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಈ ಹೇಳಿಕೆಗೆ ವಿರುದ್ಧವಾಗಿ, ಪಾಟಿಯಾಲಾದ ಪಂಜಾಬಿ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಇಬ್ಬರು ಅರ್ಥಶಾಸ್ತ್ರಜ್ಞರು ನಡೆಸಿದ ಅಧ್ಯಯನದಲ್ಲಿ ಕಂಡು ಬಂದಿದೆ. ಪ್ರತಿಭಟನೆಯ ಸಮಯದಲ್ಲಿ ಮೃತಪಟ್ಟ ರೈತರು ಸರಾಸರಿ 2.94 ಎಕರೆ ಜಮೀನಿಗಿಂತ ಹೆಚ್ಚು ಕೃಷಿ ಮಾಡಿಲ್ಲ ಎಂದು ಅಧ್ಯಯನವು ಬಹಿರಂಗಪಡಿಸಿದೆ.

ರೈತ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದ್ದು, ಇದುವರೆಗೂ ಅಲ್ಲಿ ಸುಮಾರು 600 ರೈತರು ಸಾವನ್ನಪ್ಪಿದ್ದಾರೆ ಎಂದು ಅಂದಾಜಿಸಲಾಗದೆ.

ಪಂಜಾಬಿ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರದ ಮಾಜಿ ಪ್ರಾಧ್ಯಾಪಕ ಲಖ್ವಿಂದರ್ ಸಿಂಗ್ ಮತ್ತು ಬಟಿಂಡಾದಲ್ಲಿರುವ ಪಂಜಾಬಿ ವಿಶ್ವವಿದ್ಯಾಲಯದ ಗುರು ಕಾಶಿ ಕ್ಯಾಂಪಸ್‌ನಲ್ಲಿ ಸಮಾಜ ವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಬಲ್ದೇವ್ ಸಿಂಗ್ ಶೆರ್ಗಿಲ್ ಅವರು ಸಿದ್ದಪಡಿಸಿದ ಅಧ್ಯಯನವು, “ಗುತ್ತಿಗೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದ ಭೂರಹಿತ ಮೃತ ರೈತರನ್ನು ಇದಕ್ಕೆ ಸೇರಿಸಿದರೆ ಕೃಷಿ ಭೂಮಿಯ ಸರಾಸರಿ ಗಾತ್ರವು 2.26 ಎಕರೆಗಳಿಗೆ ಇಳಿಯುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ರೈತ ಹೋರಾಟ ಬಿಜೆಪಿಯ ಕಪಾಳಕ್ಕೆ ಭಾರಿಸಿದೆ: ರೈತ ಮುಖಂಡ ಹರ್ನೇಕ್ ಸಿಂಗ್

ಅವರ ಪ್ರಕಾರ, ಕಳೆದ 11 ತಿಂಗಳ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ 600 ರೈತರಲ್ಲಿ 460 ರೈತರ ಮಾಹಿತಿಯನ್ನು ಆಧರಿಸಿ ಈ ಅಧ್ಯಯನವನ್ನು ಮಾಡಲಾಗಿದೆ. ಅಧ್ಯಯನ ನಡೆಸುವಾಗ ಮೃತರ ಕುಟುಂಬಗಳನ್ನು ವೈಯಕ್ತಿಕವಾಗಿ ಸಂಪರ್ಕಿಸಲಾಗಿದೆ ಎಂದು ಅವರು ದಿ ವೈರ್‌ಗೆ ತಿಳಿಸಿದ್ದಾರೆ.

ಅಧ್ಯಯನವು, ಪ್ರತಿಭಟನೆಯ ಸಮಯದಲ್ಲಿ ಪ್ರಾಣ ಕಳೆದುಕೊಂಡವರು ಸಣ್ಣ ಮತ್ತು ಅತಿ ಸಣ್ಣ ರೈತರು ಮತ್ತು ಭೂರಹಿತ ಕೃಷಿಕರು ಎಂದು ಸೂಚಿಸುತ್ತದೆ.

ಅಧ್ಯಯನವು ಪ್ರತಿಭಟನೆಯಲ್ಲಿ ಪಂಜಾಬ್‌ನ ಪ್ರದೇಶವಾರು ಭಾಗವಹಿಸುವಿಕೆ ಮತ್ತು ಸಾವುಗಳ ಮಾಹಿತಿಯನ್ನೂ ಕಳೆ ಹಾಕಿದೆ. ರಾಜ್ಯದ ಮಾಲ್ವಾ ಪ್ರದೇಶವು ಪ್ರತಿಭಟನೆಗಳಲ್ಲಿ ಗರಿಷ್ಠ ಭಾಗವಹಿಸುವಿಕೆ ಮತ್ತು ಗರಿಷ್ಠ ಸಾವುಗಳನ್ನು ಕಂಡಿದೆ ಎಂದು ಅಧ್ಯಯನದಿಂದ ಬಹಿರಂಗವಾಗಿದೆ.

ಪಂಜಾಬ್ ಮೂರು ಪ್ರದೇಶಗಳಾಗಿ ವಿಂಗಡಿಸಲಾದ 23 ಜಿಲ್ಲೆಗಳನ್ನು ಹೊಂದಿದೆ: ಮಾಲ್ವಾ 15 ಜಿಲ್ಲೆಗಳನ್ನು ಹೊಂದಿದ್ದರೆ ದೋಬಾ ಮತ್ತು ಮಜಾ ಪ್ರದೇಶಗಳು ತಲಾ ನಾಲ್ಕು ಜಿಲ್ಲೆಗಳನ್ನು ಹೊಂದಿವೆ. ಅಧ್ಯಯನದ ಪ್ರಕಾರ, ಸಾವನ್ನಪ್ಪಿದ 80% ರೈತರು ಪಂಜಾಬ್‌ನ ಮಾಲ್ವಾ ಪ್ರದೇಶದವರು. ಈ ಪ್ರದೇಶವು ತುಲನಾತ್ಮಕವಾಗಿ ಹೆಚ್ಚಿನ ಸರಾಸರಿ ಕೃಷಿ ಪ್ರದೇಶವನ್ನು ಹೊಂದಿದ್ದು, ನಂತರ ದೋಬಾ ಮತ್ತು ಮಜಾ ಬರುತ್ತದೆ.

ದೋಬಾ ಮತ್ತು ಮಜಾ ಪ್ರದೇಶದ ಕೃಷಿ ಪ್ರತಿಭಟನೆಯ ಸಾವುಗಳ ಪಾಲು ಕ್ರಮವಾಗಿ 12.83% ಮತ್ತು 7.39% ಆಗಿದೆ ಎಂದು ಅಧ್ಯಯನ ತಿಳಿಸಿದೆ.

ಇದನ್ನೂ ಓದಿ: ಬಿಜೆಪಿ ನಾಯಕರಿಗೆ ರೈತರಿಂದ ಘೇರಾವ್‌; ಕೈಮುಗಿದು ಕ್ಷಮೆಯಾಚಿಸಿದ ಮಾಜಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...