Homeಮುಖಪುಟಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು...

ಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು…

- Advertisement -
- Advertisement -

ಸಿನಿಮಾ ಇಂಡಸ್ಟ್ರಿ ಆರಂಭಗೊಂಡಾಗಿನಿಂದಲೂ ತನ್ನ ಬೇಡಿಕೆಯನ್ನೂ ಎಂದೂ ಕಳೆದುಕೊಂಡಿಲ್ಲ. ಸಿನಿಮಾ ಪ್ರೇಕ್ಷಕರಲ್ಲಿ ಎಂದೂ ಸಿನಿಮಾ ನೋಡುವ ಗೀಳು ಕಡಿಮೆಯಾಗಿದ್ದೇ ಇಲ್ಲ. ಕಳೆದ ಒಂದು ದಶಕದ ಹಿಂದೆ
ಕನ್ನಡ ಸಿನಿಮಾಗಳ ನಿರ್ಮಾಣ ತೀರಾ ಕಡಿಮೆ ಅಲ್ಲದಿದ್ದರೂ, ಇಂದಿಗೆ ಹೋಲಿಸಿದರೆ ಅಂದು ತಿಂಗಳಲ್ಲಿ ತೆರೆಕಾಣುತ್ತಿದ್ದ ಸಿನಿಮಾಗಳು ನಾಲ್ಕೈದಕ್ಕಿಂತ ಹೆಚ್ಚೇನೂ ಇರುತ್ತಿರಲಿಲ್ಲ. ಅವುಗಳಲ್ಲಿ ಒಳ್ಳೆಯ ಸಿನಿಮಾಗಳು ಬಂದರಂತೂ ವರ್ಷಾನುಗಟ್ಟಲೇ ಬದಲಾಗದೇ ಪ್ರದರ್ಶನವಾಗುತ್ತಿದ್ದವು. ಅಂತಹ ಸಿನಿಮಾಗಳನ್ನು ನೋಡಲು ಹೋಗುವುದೇ ಸಿನಿ ಪ್ರೇಕ್ಷಕರಲ್ಲಿ ಸಡಗರವನ್ನು ತಂದಿಡುತ್ತಿತ್ತು. ಹಳ್ಳಿಗಾಡಿನ ಜನರೋ ಆಟೋ ಮಾಡಿಕೊಂಡೋ ಅಥವಾ ಎತ್ತಿನ ಬಂಡಿ ಕಟ್ಟಿಕೊಂಡೋ ದೌಡಾಯಿಸುತ್ತಿದ್ದರು. ಈಗ ಆ ಟ್ರೆಂಡ್ ಬದಲಾಗಿದ್ದರೂ ಸಿನಿ ಪ್ರೇಕ್ಷಕರ ಸಂಖ್ಯೆಯಂತೂ ದುಪ್ಪಟ್ಟಾಗಿದೆ.

ಅಂದಹಾಗೆ ಈ ವರ್ಷದಲ್ಲಿ 163 ಕನ್ನಡ ಸಿನಿಮಾಗಳು ಥಿಯೇಟರ್‌ಗಳ ಮುಂದೆ ಬಂದು ನಿಂತಿದ್ದವು. ಅಂದರೆ ತಿಂಗಳಿಗೆ ಬರೋಬ್ಬರಿ 13-14 ಸಿನಿಮಾಗಳು ಬಿಡುಗಡೆಗೊಂಡಿವೆ. ಅವುಗಳಲ್ಲಿ ಸಕ್ಷಸ್ ಕಂಡಿದ್ದು ಮಾತ್ರ ಎರಡೇ ಸಿನಿಮಾಗಳು. ಟಿ.ಕೆ.ದಯನಂದ್‍ರವರ ಕ್ರಿಯೇಟಿವಿಯೊಂದಿಗೆ ಹೊಸ ರೀತಿಯಲ್ಲಿ ಕತೆ ಎಣೆಯಲಾಗಿದ್ದ, ರಿಷಬ್ ಶೆಟ್ಟಿ ಅಭಿನಯದ “ಬೆಲ್ ಬಾಟಂ” ಮತ್ತು ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾಗಳು ನೂರು ದಿನಗಳ ಗಡಿ ಮುಟ್ಟಿದ್ದವು. ಸಿನಿಮಾದಲ್ಲಿನ ಹೊಸತನದೊಂದಿಗೆ ಈ ವರ್ಷದ ಬೆಸ್ಟ್ ಸಿನಿಮಾ ಎನಿಸಿಕೊಂಡಿರುವ ಬೆಲ್ ಬಾಟಂ ಕಥೆ ಬಾಲಿವುಡ್‍ಗೂ ರಿಮೇಕ್ ಆಗುತ್ತಿರುವುದು ವಿಶೇಷ.

ಉಳಿದಂತೆ ಭಾರಿ ನಿರೀಕ್ಷೆ ಹುಟ್ಟಿಸಿದ್ದ, ಬಿಡುಗಡೆಗೂ ಮುನ್ನ ಭಾರಿ ಸದ್ದು ಮಾಡಿದ್ದ ಪೈಲ್ವಾನ್, ನಟಸಾರ್ವಭೌಮ, ಕುರುಕ್ಷೇತ್ರ ಸಿನಿಮಾಗಳು ಬಿಡುಗಡೆಯಾದ ನಂತರ ಸದ್ದು-ಸುದ್ದಿಯಿಲ್ಲದೆ ತೆರೆಹಿಂದೆ ಸರಿದವು. ಅದರಲ್ಲೂ ಪೈಲ್ವಾನ್ ಸದ್ದು ಮಾಡಿದ್ದು ಮಾತ್ರ ಪೈರಸಿ ವಿಚಾರಕ್ಕಷ್ಟೇ. ಅಲ್ಲದೆ ಸದ್ದೇ ಮಾಡದೆ ಬಂದ ‘ಕೆಮಿಸ್ಟ್ರಿ ಆಫ್ ಕರಿಯಪ್ಪಾ’ ಸಿನಿಮಾ ಮಾತ್ರ 75 ದಿನಗದ ಗಡಿ ಮುಟ್ಟಿತ್ತಷ್ಟೇ.

ಹಿಂದೆ ಒಂದೊಳ್ಳೆ ಎಮೋಷನಲ್ ಫ್ಯಾಮಿಲಿ ಸೆಂಟಿಮೆಂಟ್ ಕತೆಯಿಟ್ಟು ಸಿನಿಮಾ ಮಾಡಿದರೆ ಸಾಕು ಸಿನಿ ಪ್ರೇಮಿಗಳ ಭಾವ ಉಕ್ಕಿದಂತೆ, ನಿರ್ಮಾಪಕರ ಖಜಾನೆಯೂ ಉಕ್ಕುತ್ತಿತ್ತು. ಅದನ್ನೇ ನೆಚ್ಚಿ ಕೊಂಡಿದ್ದ ಸೆಂಟಿಮೆಂಟಲ್ ಸಿನಿಮಾಗಳಿಗೆ ಹೆಸರಾಗಿದ್ದ ಶಿವರಾಜ್‍ಕುಮಾರ್ ಅಭಿನಯದ ‘ಕವಚ’ ಸಿನಿಮಾ ಒಳ್ಳೆ ಹೆಸರು ಪಡೆದುಕೊಂಡರೂ ಈಗಿನ ಜನರೇಷನ್‍ನಲ್ಲಿ ಸೆಂಟಿಮೆಂಟ್ ವರ್ಕ್ ಔಟ್ ಆಗೋದಿಲ್ಲ ಎಂಬ ಪಾಠ ಕಲಿಸಿದೆ. ಅಲ್ಲದೆ 99, ಗೀತಾ, ರಂಗನಾಯಕಿಯಂತಹ ಕೆಲವು ಸಿನಿಮಾಗಳು ಫಲ ಕೊಡಲಿಲ್ಲ ಪಾಪ.

ಒಟ್ಟಿನಲ್ಲಿ ಬದಲಾಗುತ್ತಿರುವ ಸಿನಿ ಪ್ರಿಯರ ನಿರೀಕ್ಷೆ ಏನೆಂಬುದನ್ನು ಅರ್ಥ ಮಾಡಿಕೊಳ್ಳದ ಕನ್ನಡ ಚಿತ್ರರಂಗದ 163 ಸಿನಿಮಾಗಳ ಪೈಕಿ 160 ಸಿನಿಮಾಗಳು ಮಕಾಡೆಯಾಗಿರುವುದು ಬೇಸರದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...