Homeಮುಖಪುಟಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು...

ಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು…

- Advertisement -
- Advertisement -

ಸಿನಿಮಾ ಇಂಡಸ್ಟ್ರಿ ಆರಂಭಗೊಂಡಾಗಿನಿಂದಲೂ ತನ್ನ ಬೇಡಿಕೆಯನ್ನೂ ಎಂದೂ ಕಳೆದುಕೊಂಡಿಲ್ಲ. ಸಿನಿಮಾ ಪ್ರೇಕ್ಷಕರಲ್ಲಿ ಎಂದೂ ಸಿನಿಮಾ ನೋಡುವ ಗೀಳು ಕಡಿಮೆಯಾಗಿದ್ದೇ ಇಲ್ಲ. ಕಳೆದ ಒಂದು ದಶಕದ ಹಿಂದೆ
ಕನ್ನಡ ಸಿನಿಮಾಗಳ ನಿರ್ಮಾಣ ತೀರಾ ಕಡಿಮೆ ಅಲ್ಲದಿದ್ದರೂ, ಇಂದಿಗೆ ಹೋಲಿಸಿದರೆ ಅಂದು ತಿಂಗಳಲ್ಲಿ ತೆರೆಕಾಣುತ್ತಿದ್ದ ಸಿನಿಮಾಗಳು ನಾಲ್ಕೈದಕ್ಕಿಂತ ಹೆಚ್ಚೇನೂ ಇರುತ್ತಿರಲಿಲ್ಲ. ಅವುಗಳಲ್ಲಿ ಒಳ್ಳೆಯ ಸಿನಿಮಾಗಳು ಬಂದರಂತೂ ವರ್ಷಾನುಗಟ್ಟಲೇ ಬದಲಾಗದೇ ಪ್ರದರ್ಶನವಾಗುತ್ತಿದ್ದವು. ಅಂತಹ ಸಿನಿಮಾಗಳನ್ನು ನೋಡಲು ಹೋಗುವುದೇ ಸಿನಿ ಪ್ರೇಕ್ಷಕರಲ್ಲಿ ಸಡಗರವನ್ನು ತಂದಿಡುತ್ತಿತ್ತು. ಹಳ್ಳಿಗಾಡಿನ ಜನರೋ ಆಟೋ ಮಾಡಿಕೊಂಡೋ ಅಥವಾ ಎತ್ತಿನ ಬಂಡಿ ಕಟ್ಟಿಕೊಂಡೋ ದೌಡಾಯಿಸುತ್ತಿದ್ದರು. ಈಗ ಆ ಟ್ರೆಂಡ್ ಬದಲಾಗಿದ್ದರೂ ಸಿನಿ ಪ್ರೇಕ್ಷಕರ ಸಂಖ್ಯೆಯಂತೂ ದುಪ್ಪಟ್ಟಾಗಿದೆ.

ಅಂದಹಾಗೆ ಈ ವರ್ಷದಲ್ಲಿ 163 ಕನ್ನಡ ಸಿನಿಮಾಗಳು ಥಿಯೇಟರ್‌ಗಳ ಮುಂದೆ ಬಂದು ನಿಂತಿದ್ದವು. ಅಂದರೆ ತಿಂಗಳಿಗೆ ಬರೋಬ್ಬರಿ 13-14 ಸಿನಿಮಾಗಳು ಬಿಡುಗಡೆಗೊಂಡಿವೆ. ಅವುಗಳಲ್ಲಿ ಸಕ್ಷಸ್ ಕಂಡಿದ್ದು ಮಾತ್ರ ಎರಡೇ ಸಿನಿಮಾಗಳು. ಟಿ.ಕೆ.ದಯನಂದ್‍ರವರ ಕ್ರಿಯೇಟಿವಿಯೊಂದಿಗೆ ಹೊಸ ರೀತಿಯಲ್ಲಿ ಕತೆ ಎಣೆಯಲಾಗಿದ್ದ, ರಿಷಬ್ ಶೆಟ್ಟಿ ಅಭಿನಯದ “ಬೆಲ್ ಬಾಟಂ” ಮತ್ತು ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾಗಳು ನೂರು ದಿನಗಳ ಗಡಿ ಮುಟ್ಟಿದ್ದವು. ಸಿನಿಮಾದಲ್ಲಿನ ಹೊಸತನದೊಂದಿಗೆ ಈ ವರ್ಷದ ಬೆಸ್ಟ್ ಸಿನಿಮಾ ಎನಿಸಿಕೊಂಡಿರುವ ಬೆಲ್ ಬಾಟಂ ಕಥೆ ಬಾಲಿವುಡ್‍ಗೂ ರಿಮೇಕ್ ಆಗುತ್ತಿರುವುದು ವಿಶೇಷ.

ಉಳಿದಂತೆ ಭಾರಿ ನಿರೀಕ್ಷೆ ಹುಟ್ಟಿಸಿದ್ದ, ಬಿಡುಗಡೆಗೂ ಮುನ್ನ ಭಾರಿ ಸದ್ದು ಮಾಡಿದ್ದ ಪೈಲ್ವಾನ್, ನಟಸಾರ್ವಭೌಮ, ಕುರುಕ್ಷೇತ್ರ ಸಿನಿಮಾಗಳು ಬಿಡುಗಡೆಯಾದ ನಂತರ ಸದ್ದು-ಸುದ್ದಿಯಿಲ್ಲದೆ ತೆರೆಹಿಂದೆ ಸರಿದವು. ಅದರಲ್ಲೂ ಪೈಲ್ವಾನ್ ಸದ್ದು ಮಾಡಿದ್ದು ಮಾತ್ರ ಪೈರಸಿ ವಿಚಾರಕ್ಕಷ್ಟೇ. ಅಲ್ಲದೆ ಸದ್ದೇ ಮಾಡದೆ ಬಂದ ‘ಕೆಮಿಸ್ಟ್ರಿ ಆಫ್ ಕರಿಯಪ್ಪಾ’ ಸಿನಿಮಾ ಮಾತ್ರ 75 ದಿನಗದ ಗಡಿ ಮುಟ್ಟಿತ್ತಷ್ಟೇ.

ಹಿಂದೆ ಒಂದೊಳ್ಳೆ ಎಮೋಷನಲ್ ಫ್ಯಾಮಿಲಿ ಸೆಂಟಿಮೆಂಟ್ ಕತೆಯಿಟ್ಟು ಸಿನಿಮಾ ಮಾಡಿದರೆ ಸಾಕು ಸಿನಿ ಪ್ರೇಮಿಗಳ ಭಾವ ಉಕ್ಕಿದಂತೆ, ನಿರ್ಮಾಪಕರ ಖಜಾನೆಯೂ ಉಕ್ಕುತ್ತಿತ್ತು. ಅದನ್ನೇ ನೆಚ್ಚಿ ಕೊಂಡಿದ್ದ ಸೆಂಟಿಮೆಂಟಲ್ ಸಿನಿಮಾಗಳಿಗೆ ಹೆಸರಾಗಿದ್ದ ಶಿವರಾಜ್‍ಕುಮಾರ್ ಅಭಿನಯದ ‘ಕವಚ’ ಸಿನಿಮಾ ಒಳ್ಳೆ ಹೆಸರು ಪಡೆದುಕೊಂಡರೂ ಈಗಿನ ಜನರೇಷನ್‍ನಲ್ಲಿ ಸೆಂಟಿಮೆಂಟ್ ವರ್ಕ್ ಔಟ್ ಆಗೋದಿಲ್ಲ ಎಂಬ ಪಾಠ ಕಲಿಸಿದೆ. ಅಲ್ಲದೆ 99, ಗೀತಾ, ರಂಗನಾಯಕಿಯಂತಹ ಕೆಲವು ಸಿನಿಮಾಗಳು ಫಲ ಕೊಡಲಿಲ್ಲ ಪಾಪ.

ಒಟ್ಟಿನಲ್ಲಿ ಬದಲಾಗುತ್ತಿರುವ ಸಿನಿ ಪ್ರಿಯರ ನಿರೀಕ್ಷೆ ಏನೆಂಬುದನ್ನು ಅರ್ಥ ಮಾಡಿಕೊಳ್ಳದ ಕನ್ನಡ ಚಿತ್ರರಂಗದ 163 ಸಿನಿಮಾಗಳ ಪೈಕಿ 160 ಸಿನಿಮಾಗಳು ಮಕಾಡೆಯಾಗಿರುವುದು ಬೇಸರದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...