Homeಮುಖಪುಟಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು...

ಈ ವರ್ಷ ಕನ್ನಡದಲ್ಲಿ ಗೆದ್ದುದ್ದಕ್ಕಿಂತ ಬಿದ್ದ ಸಿನಿಮಾಗಳೇ ಹೆಚ್ಚು…

- Advertisement -
- Advertisement -

ಸಿನಿಮಾ ಇಂಡಸ್ಟ್ರಿ ಆರಂಭಗೊಂಡಾಗಿನಿಂದಲೂ ತನ್ನ ಬೇಡಿಕೆಯನ್ನೂ ಎಂದೂ ಕಳೆದುಕೊಂಡಿಲ್ಲ. ಸಿನಿಮಾ ಪ್ರೇಕ್ಷಕರಲ್ಲಿ ಎಂದೂ ಸಿನಿಮಾ ನೋಡುವ ಗೀಳು ಕಡಿಮೆಯಾಗಿದ್ದೇ ಇಲ್ಲ. ಕಳೆದ ಒಂದು ದಶಕದ ಹಿಂದೆ
ಕನ್ನಡ ಸಿನಿಮಾಗಳ ನಿರ್ಮಾಣ ತೀರಾ ಕಡಿಮೆ ಅಲ್ಲದಿದ್ದರೂ, ಇಂದಿಗೆ ಹೋಲಿಸಿದರೆ ಅಂದು ತಿಂಗಳಲ್ಲಿ ತೆರೆಕಾಣುತ್ತಿದ್ದ ಸಿನಿಮಾಗಳು ನಾಲ್ಕೈದಕ್ಕಿಂತ ಹೆಚ್ಚೇನೂ ಇರುತ್ತಿರಲಿಲ್ಲ. ಅವುಗಳಲ್ಲಿ ಒಳ್ಳೆಯ ಸಿನಿಮಾಗಳು ಬಂದರಂತೂ ವರ್ಷಾನುಗಟ್ಟಲೇ ಬದಲಾಗದೇ ಪ್ರದರ್ಶನವಾಗುತ್ತಿದ್ದವು. ಅಂತಹ ಸಿನಿಮಾಗಳನ್ನು ನೋಡಲು ಹೋಗುವುದೇ ಸಿನಿ ಪ್ರೇಕ್ಷಕರಲ್ಲಿ ಸಡಗರವನ್ನು ತಂದಿಡುತ್ತಿತ್ತು. ಹಳ್ಳಿಗಾಡಿನ ಜನರೋ ಆಟೋ ಮಾಡಿಕೊಂಡೋ ಅಥವಾ ಎತ್ತಿನ ಬಂಡಿ ಕಟ್ಟಿಕೊಂಡೋ ದೌಡಾಯಿಸುತ್ತಿದ್ದರು. ಈಗ ಆ ಟ್ರೆಂಡ್ ಬದಲಾಗಿದ್ದರೂ ಸಿನಿ ಪ್ರೇಕ್ಷಕರ ಸಂಖ್ಯೆಯಂತೂ ದುಪ್ಪಟ್ಟಾಗಿದೆ.

ಅಂದಹಾಗೆ ಈ ವರ್ಷದಲ್ಲಿ 163 ಕನ್ನಡ ಸಿನಿಮಾಗಳು ಥಿಯೇಟರ್‌ಗಳ ಮುಂದೆ ಬಂದು ನಿಂತಿದ್ದವು. ಅಂದರೆ ತಿಂಗಳಿಗೆ ಬರೋಬ್ಬರಿ 13-14 ಸಿನಿಮಾಗಳು ಬಿಡುಗಡೆಗೊಂಡಿವೆ. ಅವುಗಳಲ್ಲಿ ಸಕ್ಷಸ್ ಕಂಡಿದ್ದು ಮಾತ್ರ ಎರಡೇ ಸಿನಿಮಾಗಳು. ಟಿ.ಕೆ.ದಯನಂದ್‍ರವರ ಕ್ರಿಯೇಟಿವಿಯೊಂದಿಗೆ ಹೊಸ ರೀತಿಯಲ್ಲಿ ಕತೆ ಎಣೆಯಲಾಗಿದ್ದ, ರಿಷಬ್ ಶೆಟ್ಟಿ ಅಭಿನಯದ “ಬೆಲ್ ಬಾಟಂ” ಮತ್ತು ದರ್ಶನ್ ಅಭಿನಯದ ‘ಯಜಮಾನ’ ಸಿನಿಮಾಗಳು ನೂರು ದಿನಗಳ ಗಡಿ ಮುಟ್ಟಿದ್ದವು. ಸಿನಿಮಾದಲ್ಲಿನ ಹೊಸತನದೊಂದಿಗೆ ಈ ವರ್ಷದ ಬೆಸ್ಟ್ ಸಿನಿಮಾ ಎನಿಸಿಕೊಂಡಿರುವ ಬೆಲ್ ಬಾಟಂ ಕಥೆ ಬಾಲಿವುಡ್‍ಗೂ ರಿಮೇಕ್ ಆಗುತ್ತಿರುವುದು ವಿಶೇಷ.

ಉಳಿದಂತೆ ಭಾರಿ ನಿರೀಕ್ಷೆ ಹುಟ್ಟಿಸಿದ್ದ, ಬಿಡುಗಡೆಗೂ ಮುನ್ನ ಭಾರಿ ಸದ್ದು ಮಾಡಿದ್ದ ಪೈಲ್ವಾನ್, ನಟಸಾರ್ವಭೌಮ, ಕುರುಕ್ಷೇತ್ರ ಸಿನಿಮಾಗಳು ಬಿಡುಗಡೆಯಾದ ನಂತರ ಸದ್ದು-ಸುದ್ದಿಯಿಲ್ಲದೆ ತೆರೆಹಿಂದೆ ಸರಿದವು. ಅದರಲ್ಲೂ ಪೈಲ್ವಾನ್ ಸದ್ದು ಮಾಡಿದ್ದು ಮಾತ್ರ ಪೈರಸಿ ವಿಚಾರಕ್ಕಷ್ಟೇ. ಅಲ್ಲದೆ ಸದ್ದೇ ಮಾಡದೆ ಬಂದ ‘ಕೆಮಿಸ್ಟ್ರಿ ಆಫ್ ಕರಿಯಪ್ಪಾ’ ಸಿನಿಮಾ ಮಾತ್ರ 75 ದಿನಗದ ಗಡಿ ಮುಟ್ಟಿತ್ತಷ್ಟೇ.

ಹಿಂದೆ ಒಂದೊಳ್ಳೆ ಎಮೋಷನಲ್ ಫ್ಯಾಮಿಲಿ ಸೆಂಟಿಮೆಂಟ್ ಕತೆಯಿಟ್ಟು ಸಿನಿಮಾ ಮಾಡಿದರೆ ಸಾಕು ಸಿನಿ ಪ್ರೇಮಿಗಳ ಭಾವ ಉಕ್ಕಿದಂತೆ, ನಿರ್ಮಾಪಕರ ಖಜಾನೆಯೂ ಉಕ್ಕುತ್ತಿತ್ತು. ಅದನ್ನೇ ನೆಚ್ಚಿ ಕೊಂಡಿದ್ದ ಸೆಂಟಿಮೆಂಟಲ್ ಸಿನಿಮಾಗಳಿಗೆ ಹೆಸರಾಗಿದ್ದ ಶಿವರಾಜ್‍ಕುಮಾರ್ ಅಭಿನಯದ ‘ಕವಚ’ ಸಿನಿಮಾ ಒಳ್ಳೆ ಹೆಸರು ಪಡೆದುಕೊಂಡರೂ ಈಗಿನ ಜನರೇಷನ್‍ನಲ್ಲಿ ಸೆಂಟಿಮೆಂಟ್ ವರ್ಕ್ ಔಟ್ ಆಗೋದಿಲ್ಲ ಎಂಬ ಪಾಠ ಕಲಿಸಿದೆ. ಅಲ್ಲದೆ 99, ಗೀತಾ, ರಂಗನಾಯಕಿಯಂತಹ ಕೆಲವು ಸಿನಿಮಾಗಳು ಫಲ ಕೊಡಲಿಲ್ಲ ಪಾಪ.

ಒಟ್ಟಿನಲ್ಲಿ ಬದಲಾಗುತ್ತಿರುವ ಸಿನಿ ಪ್ರಿಯರ ನಿರೀಕ್ಷೆ ಏನೆಂಬುದನ್ನು ಅರ್ಥ ಮಾಡಿಕೊಳ್ಳದ ಕನ್ನಡ ಚಿತ್ರರಂಗದ 163 ಸಿನಿಮಾಗಳ ಪೈಕಿ 160 ಸಿನಿಮಾಗಳು ಮಕಾಡೆಯಾಗಿರುವುದು ಬೇಸರದ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....