Homeಮುಖಪುಟಎಡಿಆರ್ ವರದಿ - 5 ವರ್ಷಗಳಲ್ಲಿ ಪಕ್ಷಾಂತರಗೊಂಡ 44.9% ಶಾಸಕರು ಸೇರಿದ್ದು ಬಿಜೆಪಿಗೆ!

ಎಡಿಆರ್ ವರದಿ – 5 ವರ್ಷಗಳಲ್ಲಿ ಪಕ್ಷಾಂತರಗೊಂಡ 44.9% ಶಾಸಕರು ಸೇರಿದ್ದು ಬಿಜೆಪಿಗೆ!

- Advertisement -
- Advertisement -

2016 ರಿಂದ 2020 ರವರೆಗೆ ಪಕ್ಷಗಳನ್ನು ಬದಲಾಯಿಸಿ, ಉಪ ಚುನಾವಣೆಯಲ್ಲಿ ಲಾಭಗಳಿಸಿದ ಅತಿದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಈ ಪ್ರಕ್ರಿಯೆಯಲ್ಲಿ ಅತ್ಯಂತ ಹೆಚ್ಚಿನ ನಷ್ಟ ಕಾಂಗ್ರೆಸ್‌ಗೆ ಉಂಟಾಗಿದ್ದು, ಪಕ್ಷದಿಂದ ಅತೀ ಹೆಚ್ಚಿನ ಶಾಸಕರು ಪಕ್ಷಾಂತರಗೊಂಡಿದ್ದಾರೆ.

ಗುರುವಾರ ಬಿಡುಗಡೆಯಾದ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯು ಕಳೆದ ಐದು ವರ್ಷಗಳಲ್ಲಿ ಪಕ್ಷಗಳನ್ನು ಬದಲಾಯಿಸಿ ಉಪಚುನಾವಣೆ ಮೂಲಕ ಗೆದ್ದ 443 ಶಾಸಕರು ಮತ್ತು ಸಂಸದರ ಚುನಾವಣಾ ಅಫಿಡವಿಟ್‌ಗಳನ್ನು ವಿಶ್ಲೇಷಿಸಿದೆ.

ದೇಶದಾದ್ಯಂತ ತಮ್ಮ ಪಕ್ಷಗಳನ್ನು ತೊರೆದ 405 ಶಾಸಕರಲ್ಲಿ 42% ಜನರು ಕಾಂಗ್ರೆಸ್ ಮೂಲದವರು ಎಂದು ವರದಿ ಕಂಡುಹಿಡಿದಿದೆ. ಬಿಜೆಪಿ ತೊರೆದು ಬೇರೆ ಪಕ್ಷ ಸೇರಿದವರು ಕೇವಲ 4.4%.

ಇದನ್ನೂ ಓದಿ: ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ಮತ್ತೊಂದೆಡೆ, ಬೇರೆ ಪಕ್ಷಗಳಿಂದ ಸೇರ್ಪಡೆಗೊಂಡ 44.9% ಶಾಸಕರು ಬಿಜೆಪಿಯನ್ನು ಆಯ್ಕೆ ಮಾಡಿಕೊಂಡಿದ್ದು, ಕಾಂಗ್ರೆಸ್ ಆಯ್ಕೆ ಮಾಡಿಕೊಂಡವರು 9.4% ಮಾತ್ರ. ಇತ್ತೀಚಿನ ದಿನಗಳಲ್ಲಿ ಮಧ್ಯಪ್ರದೇಶ, ಮಣಿಪುರ, ಗೋವಾ, ಅರುಣಾಚಲ ಪ್ರದೇಶ ಮತ್ತು ಕರ್ನಾಟಕದ ರಾಜ್ಯ ಸರ್ಕಾರಗಳು ಬೀಳಲು ಶಾಸಕರ ಪಕ್ಷಾಂತರವೇ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪಕ್ಷಗಳನ್ನು ಬದಲಾಯಿಸಿದ 12 ಲೋಕಸಭಾ ಸದಸ್ಯರಲ್ಲಿ ಐವರು ಬಿಜೆಪಿಯವರಾಗಿದ್ದು, ರಾಜ್ಯಸಭೆಯಲ್ಲಿ, ತ್ಯಜಿಸಿದ 17 ಜನರಲ್ಲಿ ಏಳು ಮಂದಿ ಕಾಂಗ್ರೆಸ್ ಮೂಲದವದ್ದಾಗಿದ್ದಾರೆ. ಬೇರೆ ಪಕ್ಷಗಳಿಗೆ ಸೇರ್ಪಡೆಯಾದ ಶಾಸಕರು ಮತ್ತು ಸಂಸದರ ಸರಾಸರಿ ಆಸ್ತಿ 39% ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

ಹಣ, ಅಧಿಕಾರ, ಪಕ್ಷಗಳ ಕಾರ್ಯಚಟುವಟಿಕೆಗಳ ಬಗ್ಗೆ ಕಾನೂನುಗಳ ಅನುಪಸ್ಥಿತಿ ಮತ್ತು ನಾಯಕರಲ್ಲಿ ಪ್ರಾಮಾಣಿಕತೆ ಇಲ್ಲದೆ ಇರುವುದು ಈ ಪಕ್ಷಾಂತರಕ್ಕೆ ಕಾರಣ ಎಂದು ಎಡಿಆರ್ ವರದಿಯಲ್ಲಿ ಹೇಳಲಾಗಿದೆ.

ಈ ಪ್ರವೃತ್ತಿಗಳನ್ನು ನಿಯಂತ್ರಿಸುವ ತನಕ, ಪ್ರಸ್ತುತ ಚುನಾವಣಾ ಮತ್ತು ರಾಜಕೀಯ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ. ಈ ಲೋಪದೋಷಗಳನ್ನು ಸರಿಪಡಿಸಲು ವಿಫಲವಾದರೆ ಅದು ಪ್ರಜಾಪ್ರಭುತ್ವದ ಅಪಹಾಸ್ಯ ಮಾಡಿದಂತಾಗುತ್ತದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಸರ್ಕಾರದ ಸಂವಹನಕ್ಕೆ ಸಚಿವರ ಚರ್ಚೆಯ ವರದಿ; ಕಳೆ ಕೀಳುವ ನೆಪದಲ್ಲಿ ತೆನೆ ಚಿವುಟುವ ಹುನ್ನಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...