Homeಮುಖಪುಟಎಡಿಆರ್ ವರದಿ - 5 ವರ್ಷಗಳಲ್ಲಿ ಪಕ್ಷಾಂತರಗೊಂಡ 44.9% ಶಾಸಕರು ಸೇರಿದ್ದು ಬಿಜೆಪಿಗೆ!

ಎಡಿಆರ್ ವರದಿ – 5 ವರ್ಷಗಳಲ್ಲಿ ಪಕ್ಷಾಂತರಗೊಂಡ 44.9% ಶಾಸಕರು ಸೇರಿದ್ದು ಬಿಜೆಪಿಗೆ!

- Advertisement -
- Advertisement -

2016 ರಿಂದ 2020 ರವರೆಗೆ ಪಕ್ಷಗಳನ್ನು ಬದಲಾಯಿಸಿ, ಉಪ ಚುನಾವಣೆಯಲ್ಲಿ ಲಾಭಗಳಿಸಿದ ಅತಿದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಈ ಪ್ರಕ್ರಿಯೆಯಲ್ಲಿ ಅತ್ಯಂತ ಹೆಚ್ಚಿನ ನಷ್ಟ ಕಾಂಗ್ರೆಸ್‌ಗೆ ಉಂಟಾಗಿದ್ದು, ಪಕ್ಷದಿಂದ ಅತೀ ಹೆಚ್ಚಿನ ಶಾಸಕರು ಪಕ್ಷಾಂತರಗೊಂಡಿದ್ದಾರೆ.

ಗುರುವಾರ ಬಿಡುಗಡೆಯಾದ ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯು ಕಳೆದ ಐದು ವರ್ಷಗಳಲ್ಲಿ ಪಕ್ಷಗಳನ್ನು ಬದಲಾಯಿಸಿ ಉಪಚುನಾವಣೆ ಮೂಲಕ ಗೆದ್ದ 443 ಶಾಸಕರು ಮತ್ತು ಸಂಸದರ ಚುನಾವಣಾ ಅಫಿಡವಿಟ್‌ಗಳನ್ನು ವಿಶ್ಲೇಷಿಸಿದೆ.

ದೇಶದಾದ್ಯಂತ ತಮ್ಮ ಪಕ್ಷಗಳನ್ನು ತೊರೆದ 405 ಶಾಸಕರಲ್ಲಿ 42% ಜನರು ಕಾಂಗ್ರೆಸ್ ಮೂಲದವರು ಎಂದು ವರದಿ ಕಂಡುಹಿಡಿದಿದೆ. ಬಿಜೆಪಿ ತೊರೆದು ಬೇರೆ ಪಕ್ಷ ಸೇರಿದವರು ಕೇವಲ 4.4%.

ಇದನ್ನೂ ಓದಿ: ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ಮತ್ತೊಂದೆಡೆ, ಬೇರೆ ಪಕ್ಷಗಳಿಂದ ಸೇರ್ಪಡೆಗೊಂಡ 44.9% ಶಾಸಕರು ಬಿಜೆಪಿಯನ್ನು ಆಯ್ಕೆ ಮಾಡಿಕೊಂಡಿದ್ದು, ಕಾಂಗ್ರೆಸ್ ಆಯ್ಕೆ ಮಾಡಿಕೊಂಡವರು 9.4% ಮಾತ್ರ. ಇತ್ತೀಚಿನ ದಿನಗಳಲ್ಲಿ ಮಧ್ಯಪ್ರದೇಶ, ಮಣಿಪುರ, ಗೋವಾ, ಅರುಣಾಚಲ ಪ್ರದೇಶ ಮತ್ತು ಕರ್ನಾಟಕದ ರಾಜ್ಯ ಸರ್ಕಾರಗಳು ಬೀಳಲು ಶಾಸಕರ ಪಕ್ಷಾಂತರವೇ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪಕ್ಷಗಳನ್ನು ಬದಲಾಯಿಸಿದ 12 ಲೋಕಸಭಾ ಸದಸ್ಯರಲ್ಲಿ ಐವರು ಬಿಜೆಪಿಯವರಾಗಿದ್ದು, ರಾಜ್ಯಸಭೆಯಲ್ಲಿ, ತ್ಯಜಿಸಿದ 17 ಜನರಲ್ಲಿ ಏಳು ಮಂದಿ ಕಾಂಗ್ರೆಸ್ ಮೂಲದವದ್ದಾಗಿದ್ದಾರೆ. ಬೇರೆ ಪಕ್ಷಗಳಿಗೆ ಸೇರ್ಪಡೆಯಾದ ಶಾಸಕರು ಮತ್ತು ಸಂಸದರ ಸರಾಸರಿ ಆಸ್ತಿ 39% ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

ಹಣ, ಅಧಿಕಾರ, ಪಕ್ಷಗಳ ಕಾರ್ಯಚಟುವಟಿಕೆಗಳ ಬಗ್ಗೆ ಕಾನೂನುಗಳ ಅನುಪಸ್ಥಿತಿ ಮತ್ತು ನಾಯಕರಲ್ಲಿ ಪ್ರಾಮಾಣಿಕತೆ ಇಲ್ಲದೆ ಇರುವುದು ಈ ಪಕ್ಷಾಂತರಕ್ಕೆ ಕಾರಣ ಎಂದು ಎಡಿಆರ್ ವರದಿಯಲ್ಲಿ ಹೇಳಲಾಗಿದೆ.

ಈ ಪ್ರವೃತ್ತಿಗಳನ್ನು ನಿಯಂತ್ರಿಸುವ ತನಕ, ಪ್ರಸ್ತುತ ಚುನಾವಣಾ ಮತ್ತು ರಾಜಕೀಯ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ. ಈ ಲೋಪದೋಷಗಳನ್ನು ಸರಿಪಡಿಸಲು ವಿಫಲವಾದರೆ ಅದು ಪ್ರಜಾಪ್ರಭುತ್ವದ ಅಪಹಾಸ್ಯ ಮಾಡಿದಂತಾಗುತ್ತದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಸರ್ಕಾರದ ಸಂವಹನಕ್ಕೆ ಸಚಿವರ ಚರ್ಚೆಯ ವರದಿ; ಕಳೆ ಕೀಳುವ ನೆಪದಲ್ಲಿ ತೆನೆ ಚಿವುಟುವ ಹುನ್ನಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...