Homeಮುಖಪುಟಕೋವಿಡ್ ಸೋಂಕಿತ ಬಹುತೇಕ ರಾಜಕಾರಣಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ! ಏಕೆ?

ಕೋವಿಡ್ ಸೋಂಕಿತ ಬಹುತೇಕ ರಾಜಕಾರಣಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ! ಏಕೆ?

ಭಾರತಕ್ಕೆ ಕೊರೊನಾ ಕಾಲಿಟ್ಟು ಆರು ತಿಂಗಳಾಗಿದೆ. ಆದರೂ ಆಳುವ ಸರ್ಕಾರಗಳು ದಕ್ಷ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಕಟ್ಟುವಲ್ಲಿ ವಿಫಲರಾಗಿದ್ದಾರೆ ಅಥವಾ ಆ ಇಚ್ಛಾಶಕ್ತಿ ಅವರಲಿಲ್ಲ

- Advertisement -
- Advertisement -

ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಇದರ ರಭಸಕ್ಕೆ ತುತ್ತಾಗುತ್ತಿರುವವರಲ್ಲಿ ಸಿನಿಮಾ ತಾರೆಯರು ಸೇರಿಂದಂತೆ ರಾಜಕಾರಣಿಗಳು ಹೊರತಾಗಿಲ್ಲ. ಆದರೆ ನಾವು ಅತ್ಯುತ್ತಮ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಹೊಂದಿದ್ದೇವೆ ಎಂದು ಹೇಳಿಕೊಳ್ಳುವ ಆಳುವ ಸರ್ಕಾರಗಳ ಸಚಿವರು ಮಾತ್ರ ತಮಗೆ ವೈರಸ್ ತಗುಲಿದಾಗ ಸರ್ಕಾರಿ ಆಸ್ಪತ್ರೆ ಬಿಟ್ಟು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ! ಈ ಕುರಿತು ಸ್ಕ್ರೋಲ್‌.ಇನ್ ವಿಶೇಷ ವರದಿ ಮಾಡಿದೆ.

ನಿನ್ನೆ ಮಧ್ಯಾಹ್ನ ಗೃಹ ಸಚಿವ ಅಮಿತ್‌ ಷಾರವರು ತಮಗೆ ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದ್ದರು. ತಮಗೆ ಯಾವುದೇ ರೋಗಲಕ್ಷಣಗಳು ಇಲ್ಲಿದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ಟ್ವೀಟ್‌ ಮಾಡಿ ಕೂಡಲೇ ಗುರ್ಗಾವ್‌ ಬಳಿಯ ಮೇದಂತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಇದನ್ನೂ ಓದಿ: ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲಾದ ಗೃಹಸಚಿವ ಅಮಿತ್ ಷಾ 


ನಂತರ ಸಂಜೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕೊರೊನಾ ಪಾಸಿಟಿವ್ ಆಗಿದ್ದಾರೆ. ಕೂಡಲೇ ಅವರು ಬೆಂಗಳೂರಿನ ಮಣಿಪಾಲ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಬಹಳ ಹತ್ತಿರದಿಂದ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಯಡಿಯೂರಪ್ಪನವರ ಮಗಳು ಸಹ ಕೋವಿಡ್ ಪಾಸಿಟಿವ್ ಆಗಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್ ಕೊರೊನಾ ಪಾಸಿಟಿವ್ ಆಗಿದ್ದು, ಅವರು ಭೋಪಾಲ್‌ ಚಿರಾಯು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಅಲ್ಲಿನ ರಾಜ್ಯ ಕಾಂಗ್ರೆಸ್ ಸರ್ಕಾರಿ ಆಸ್ಪತ್ರೆಯಲ್ಲಿ ಏಕೆ ಚಿಕಿತ್ಸೆ ಪಡಯುತ್ತಿಲ್ಲ ಎಂದು ಟೀಕಿಸಿದೆ.

ತಮಿಳುನಾಡಿನ ರಾಜ್ಯಪಾಲರಾದ ಭನ್ವರಿಲಾಲ್ ಪುರೋಹಿತ್ ಸಹ ಕೊರೊನಾ ಪಾಸಿಟಿವ್ ಆಗಿದ್ದಾರೆ. ಇವರಿಗೆ ಯಾವುದೇ ರೋಗಲಕ್ಷಣಗಳಿಲ್ಲದ ಕಾರಣ ಮನೆಯಲ್ಲಿಯೇ ಐಸೋಲೇಷನ್‌ನಲ್ಲಿರಲು ವೈದ್ಯರು ಸೂಚಿಸಿದ್ದಾರೆ. ಇವರಿಗೆ ಟೆಸ್ಟ್ ಸೇರಿದಂತೆ ಇತರ ಮಾರ್ಗದರ್ಶನಗಳನ್ನು ನೀಡುವ ಕೆಲಸವನ್ನು ಕಾವೇರಿ ಎಂಬ ಖಾಸಗಿ ಆಸ್ಪತ್ರೆ ನಿರ್ವಹಿಸುತ್ತಿದೆ.

ತಮಿಳುನಾಡಿನ ಇಂಧನ ಸಚಿವ ಪಿ ತಂಗಮಣಿ ಅಪೋಲೊ ಆಸ್ಪತ್ರೆಯಲ್ಲಿ, ಶಿಕ್ಷಣ ಸಚಿವ ಕೆ.ಪಿ ಅನ್ಬುಗಳಂ ಮತ್ತು ಸಹಕಾರ ಸಚಿವ ಸೆಲ್ಲೂರು ಕೆ.ರಾಜ್ ಮದ್ರಾಸ್ ಇನ್ಸ್ಟಿಟ್ಯೂಟ್ ಆಫ್ ಆರ್ಥೋಪೆಡಿಕ್ ಅಂಡ್ ಟ್ರಾಮಾಲಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಪಂಜಾಬ್‌ನ ಗ್ರಾಮೀಣಾಭಿವೃದ್ದಿ ಸಚಿವ ತ್ರಿಪಾಠ್ ಸಿಂಗ್ ಭಾಜ್ವಾ ಕೊರೊನಾ ಪಾಸಿಟಿವ್ ಆಗಿದ್ದು ಅವರು ಮೊಹಾಲಿಯ ಫೋರ್ಟಿಸ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೆಹಲಿಯ ಆರೋಗ್ಯ ಸಚಿವ ಸತ್ಯೆಂದರ್ ಜೈನ್ ಕೊರೊನಾ ಪಾಸಿಟಿವ್ ಆದಾಗ ಜೂನ್ 15 ರಂದು ಸರ್ಕಾರಿ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಜೂನ್ 16 ರಂದು ಅವರನ್ನು ದೆಹಲಿಯ ಮಾಕ್ಸ್‌ ಆಸ್ಪತ್ರೆಗೆ ವರ್ಗಾಹಿಸಲಾಯಿತು. ಅವರಿಗೆ ಪ್ಲಾಸ್ಲಾ ಚಿಕಿತ್ಸೆ ಅಗತ್ಯವಿದ್ದು, ಅದನ್ನು ಮಾಡಲು ಸರ್ಕಾರಿ ಆಸ್ಪತ್ರೆಗೆ ಅನುಮತಿ ಸಿಗದಿದ್ದ ಕಾರಣಕ್ಕೆ ಮಾತ್ರ ಅವರನ್ನು ವರ್ಗಾಹಿಸಲಾಗಿತ್ತು ಎಂದು ಹೇಳಲಾಗಿದೆ.

ಉತ್ತರ ಪ್ರದೇಶದ ವೃತ್ತಿಪರ ಶಿಕ್ಷಣ ಸಚಿವೆ ಕಮಲ್ ರಾಣಿ ವರುಣ್ ಕೊರೊನಾ ಪಾಸಿಟಿವ್ ಆದಾಗ ಲಕ್ನೋದ ಸಂಜಯ್ ಗಾಂಧಿ ಪೋಸ್ಟ್‌ ಗ್ರಾಜುಯೇಟ್ ಇನ್ಸ್ಟಿಟ್ಯೂಟ್‌ ಆಫ್‌ ಮೆಡಿಕಲ್ ಸೈನ್ಸನ್ಸ್‌ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಆಗಸ್ಟ್ 2 ರಂದು ನಿಧನ ಹೊಂದಿದ್ದರು.

ಇವಿಷ್ಟು ಉದಾಹರಣೆಗಳಾದರೆ ಇನ್ನು ಹಲವಾರು ರಾಜಕಾರಣಿಗಳು, ಚಿತ್ರನಟರು ಕೊರೊನಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆಳುವ ಸರ್ಕಾರಗಳಿಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆ ಇಲ್ಲ ಎಂದರೆ ಏನರ್ಥ?

ಈ ಎಲ್ಲರೂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗಿದ್ದರೆ ಒಂದಷ್ಟು ಮೂಲಸೌಕರ್ಯ ಹೆಚ್ಚುತ್ತಿತ್ತು ಮತ್ತು ವೈದ್ಯರು, ಸಿಬ್ಬಂದಿ ಇನ್ನಷ್ಟು ದಕ್ಷತೆಯಿಂದ ಕೆಲಸ ಮಾಡುತ್ತಿದ್ದರು ಎಂದು ಟ್ವಿಟ್ಟರ್ ಬಳಕೆದಾರರೊಬ್ಬರು ಒತ್ತಾಯಿಸಿದ್ದಾರೆ.

ಭಾರತಕ್ಕೆ ಕೊರೊನಾ ಕಾಲಿಟ್ಟು ಆರು ತಿಂಗಳಾಗಿದೆ. ಆದರೂ ಆಳುವ ಸರ್ಕಾರಗಳು ದಕ್ಷ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಕಟ್ಟುವಲ್ಲಿ ವಿಫಲರಾಗಿದ್ದಾರೆ ಅಥವಾ ಆ ಇಚ್ಛಾಶಕ್ತಿ ಅವರಲಿಲ್ಲ ಎಂಬುದು ತಿಳಿಯುತ್ತದೆ. ಎಲ್ಲಿಯವರೆಗೆ ಅತ್ಯುತ್ತಮ ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆ ಖಾತ್ರಿಯಾಗುವುದಿಲ್ಲವೋ ಅಲ್ಲಿಯವರೆಗೆ ದೇಶದ ಜನಸಾಮಾನ್ಯರು ನೆಮ್ಮದಿಯಿಂದ ಇರಲು ಸಾಧ್ಯವಾಗುವುದಿಲ್ಲ.


ಇದನ್ನೂ ಓದಿ: ಕೊರೊನಾದಿಂದ ಸಾವನಪ್ಪಿದ ಉತ್ತರಪ್ರದೇಶದ ಸಚಿವೆ ಕಮಲ್ ರಾಣಿ ವರುಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...