Homeಮುಖಪುಟಆನ್‌ಲೈನ್‌ ತರಗತಿಗಳು ನಡೆಯುತ್ತಿದ್ದಾಗ ದೇಶದ ಹೆಚ್ಚಿನ ಶಾಲೆಗಳಲ್ಲಿ ಕಂಪ್ಯೂಟರ್, ಇಂಟರ್ನೆಟ್ ಸಂಪರ್ಕವಿರಲಿಲ್ಲ: ವರದಿ

ಆನ್‌ಲೈನ್‌ ತರಗತಿಗಳು ನಡೆಯುತ್ತಿದ್ದಾಗ ದೇಶದ ಹೆಚ್ಚಿನ ಶಾಲೆಗಳಲ್ಲಿ ಕಂಪ್ಯೂಟರ್, ಇಂಟರ್ನೆಟ್ ಸಂಪರ್ಕವಿರಲಿಲ್ಲ: ವರದಿ

- Advertisement -
- Advertisement -

ದೇಶದ ಒಟ್ಟು 14,89,115 ಶಾಲೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಶಾಲೆಗಳು (55.5% ರಷ್ಟು) ಕಂಪ್ಯೂಟರ್ ಸೌಲಭ್ಯಗಳನ್ನು ಹೊಂದಿಲ್ಲ ಮತ್ತು 2021-22 ಶೈಕ್ಷಣಿಕ ವರ್ಷದಲ್ಲಿ ಕೋವಿಡ್ ಕಾರಣದಿಂದ ಆನ್‌ಲೈನ್‌ ತರಗತಿಗಳು ನಡೆಯುತ್ತಿದ್ದಾಗ ಸುಮಾರು 66% ಶಾಲೆಗಳಲ್ಲಿ ಇಂಟರ್ನೆಟ್ ಸಂಪರ್ಕ ಇರಲಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ವರದಿ ತಿಳಿಸಿದೆ.

ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫರ್ಮೇಷನ್ ಸಿಸ್ಟಮ್ ಫಾರ್ ಎಜುಕೇಶನ್ (UIDSE+) ವರದಿಯು ಗುರುವಾರ ಬಿಡುಗಡೆಯಾಗಿದ್ದು, ಇದು ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಸ್ವಯಂಪ್ರೇರಿತ ಡೇಟಾವನ್ನು ಆಧರಿಸಿದೆ. 2021-22ನೇ ಶೈಕ್ಷಣಿಕ ವರ್ಷದಲ್ಲಿ ಕೇವಲ 6,82,566 ಶಾಲೆಗಳು ಕಂಪ್ಯೂಟರ್‌ಗಳನ್ನು ಹೊಂದಿದ್ದರೆ, ಅವುಗಳಲ್ಲಿ 5, 04, 989 ಇಂಟರ್ನೆಟ್ ಸಂಪರ್ಕವನ್ನು ಹೊಂದಿವೆ ಎಂದು ವರದಿ ಹೇಳಿದೆ.

ವರ್ಷವಿಡಿ ಲಾಕ್‌ಡೌನ್ ಕಾರಣಕ್ಕೆ, ಕೊರೊನಾ ಹರಡುವ ಭೀತಿಯಿಂದ ಶಾಲೆಗಳು ಮುಚ್ಚಿದ್ದಾಗ ಆನ್‌ಲೈನ್ ತರಗತಿ ನಡೆಸುತ್ತಿದ್ದೆವು ಎಂದು ಶಿಕ್ಷಣ ಇಲಾಖೆ ಹೇಳಿಕೊಂಡಿತ್ತು. ಆದರೆ ಬಹುತೇಕ ಶಾಲೆಗಳಲ್ಲಿ ಕಂಪ್ಯೂಟರ್ ಮತ್ತು ಇಂಟರ್ನೆಟ್ ಸಂಪರ್ಕ ಇಲ್ಲದೆ ಹೇಗೆ ಆನ್‌ಲೈನ್ ತರಗತಿಗಳನ್ನು ನಡೆಸಲಾಯಿತು ಎಂಬ ಪ್ರಶ್ನೆ ಉದ್ಭವಿಸಿದೆ.

ಇಂದಿಗೂ ದೇಶದ ಕೇವಲ 2.2% ಶಾಲೆಗಳು ಮಾತ್ರ ಡಿಜಿಟಲ್ ಲೈಬ್ರರಿಗಳನ್ನು ಹೊಂದಿವೆ ಮತ್ತು ಅವುಗಳಲ್ಲಿ 14.9% ರಷ್ಟು ಮಾತ್ರ “ಸ್ಮಾರ್ಟ್ ಕ್ಲಾಸ್‌ರೂಮ್‌ಗಳನ್ನು” ಹೊಂದಿದ್ದು, ಡಿಜಿಟಲ್ ಬೋರ್ಡ್‌ಗಳು, ಸ್ಮಾರ್ಟ್ ಬೋರ್ಡ್‌ಗಳು ಮತ್ತು ಸ್ಮಾರ್ಟ್ ಟಿವಿಗಳೊಂದಿಗೆ ಬೋಧನೆಗಾಗಿ ಬಳಸಲಾಗುತ್ತದೆ ಎಂದು ವರದಿ ತಿಳಿಸಿದೆ.

ಆಘಾತಕಾರಿ ವಿಷಯವೆಂದರೆ ದೇಶದ ಸುಮಾರು 10.6% ಶಾಲೆಗಳು ವಿದ್ಯುತ್ ಹೊಂದಿಲ್ಲ ಮತ್ತು 23.04% ಶಾಲೆಗಳಿಗೆ ಆಟದ ಮೈದಾನಗಳಿಲ್ಲ. ಸುಮಾರು 12.7% ರಷ್ಟು ಶಾಲೆಗಳಲ್ಲಿ ಗ್ರಂಥಾಲಯಗಳು ಮತ್ತು ವಾಚನಾಲಯಗಳಿಲ್ಲ ಎಂದು ತಿಳಿದುಬಂದಿದೆ.

2021-22ರಲ್ಲಿ ಕೇವಲ 26.96% ಶಾಲೆಗಳು ವಿಶೇಷ ಅಗತ್ಯತೆಯುಳ್ಳ ಮಕ್ಕಳ ಸ್ನೇಹಿ ಶೌಚಾಲಯಗಳನ್ನು ಹೊಂದಿವೆ. ಮೆಟ್ಟಿಲುಗಳು ಮಾತ್ರವಲ್ಲದೆ ಇಳಿಜಾರಿನ ವ್ಯವಸ್ಥೆಯು ಕೇವಲ ಅರ್ಧದಷ್ಟು ಶಾಲೆಗಳಲ್ಲಿ ಮಾತ್ರ ಇದೆ ಎನ್ನಲಾಗಿದೆ.

ಆದರೆ ಈ ಎಲ್ಲಾ ಕೊರತೆಗಳ ನಡುವೆಯು ಶಾಲೆಗೆ ಸೇರುವ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಮಕ್ಕಳ ಸಂಖ್ಯೆ ಹೆಚ್ಚುತ್ತಿರುವುದನ್ನು ವರದಿ ಗುರುತಿಸಿದೆ. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಸಂಖ್ಯೆಯು 2020-21ರಲ್ಲಿ 4.78 ಕೋಟಿಯಿಂದ 4.83 ಕೋಟಿಗೆ ಏರಿಕೆಯಾಗಿದೆ. ಅದೇ ರೀತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಂಖ್ಯೆ 2.49 ಕೋಟಿಯಿಂದ 2.51 ಕೋಟಿಗೆ ಮತ್ತು ಇತರ ಹಿಂದುಳಿದ ಜಾತಿ (ಒಬಿಸಿ) ವಿದ್ಯಾರ್ಥಿಗಳು 11.35 ಕೋಟಿಯಿಂದ 11.49 ಕೋಟಿಗೆ ಏರಿದ್ದಾರೆ ”ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ದೇಶದ ಪ್ರತಿಯೊಬ್ಬ ಮಕ್ಕಳಿಗೂ ಗುಣಮಟ್ಟದ ಉಚಿತ ಶಿಕ್ಷಣ ಒದಗಿಸಬೇಕೆಂದು ನಮ್ಮ ಸಂವಿಧಾನ ಹೇಳುತ್ತದೆ. 2009ರ ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಒದಗಿಸಬೇಕಿದೆ. ಆದರೆ ಶಾಲೆಗಳ ಮೂಲಸೌಕರ್ಯ, ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನಮ್ಮ ಶಾಲೆಗಳು ತೀವ್ರ ಹಿಂದುಳಿದಿವೆ. ಅದರಲ್ಲಿಯೂ ಸರ್ಕಾರಿ ಶಾಲೆಗಳ ಪರಿಸ್ಥಿತಿ ಶೋಚನೀಯವಾಗಿರುವುದನ್ನು ಈ ವರದಿ ಒತ್ತಿ ಹೇಳುತ್ತಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಶಾಲೆಗಳ ಅಭಿವೃದ್ಧಿಯತ್ತ ಸರ್ಕಾರ ಗಮನವಹಿಸಬೇಕಿದೆ.

ಇದನ್ನೂ ಓದಿ; ‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....