Homeಮುಖಪುಟಆನ್‌ಲೈನ್‌ ತರಗತಿಗಳು ನಡೆಯುತ್ತಿದ್ದಾಗ ದೇಶದ ಹೆಚ್ಚಿನ ಶಾಲೆಗಳಲ್ಲಿ ಕಂಪ್ಯೂಟರ್, ಇಂಟರ್ನೆಟ್ ಸಂಪರ್ಕವಿರಲಿಲ್ಲ: ವರದಿ

ಆನ್‌ಲೈನ್‌ ತರಗತಿಗಳು ನಡೆಯುತ್ತಿದ್ದಾಗ ದೇಶದ ಹೆಚ್ಚಿನ ಶಾಲೆಗಳಲ್ಲಿ ಕಂಪ್ಯೂಟರ್, ಇಂಟರ್ನೆಟ್ ಸಂಪರ್ಕವಿರಲಿಲ್ಲ: ವರದಿ

- Advertisement -
- Advertisement -

ದೇಶದ ಒಟ್ಟು 14,89,115 ಶಾಲೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಶಾಲೆಗಳು (55.5% ರಷ್ಟು) ಕಂಪ್ಯೂಟರ್ ಸೌಲಭ್ಯಗಳನ್ನು ಹೊಂದಿಲ್ಲ ಮತ್ತು 2021-22 ಶೈಕ್ಷಣಿಕ ವರ್ಷದಲ್ಲಿ ಕೋವಿಡ್ ಕಾರಣದಿಂದ ಆನ್‌ಲೈನ್‌ ತರಗತಿಗಳು ನಡೆಯುತ್ತಿದ್ದಾಗ ಸುಮಾರು 66% ಶಾಲೆಗಳಲ್ಲಿ ಇಂಟರ್ನೆಟ್ ಸಂಪರ್ಕ ಇರಲಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ವರದಿ ತಿಳಿಸಿದೆ.

ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫರ್ಮೇಷನ್ ಸಿಸ್ಟಮ್ ಫಾರ್ ಎಜುಕೇಶನ್ (UIDSE+) ವರದಿಯು ಗುರುವಾರ ಬಿಡುಗಡೆಯಾಗಿದ್ದು, ಇದು ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಸ್ವಯಂಪ್ರೇರಿತ ಡೇಟಾವನ್ನು ಆಧರಿಸಿದೆ. 2021-22ನೇ ಶೈಕ್ಷಣಿಕ ವರ್ಷದಲ್ಲಿ ಕೇವಲ 6,82,566 ಶಾಲೆಗಳು ಕಂಪ್ಯೂಟರ್‌ಗಳನ್ನು ಹೊಂದಿದ್ದರೆ, ಅವುಗಳಲ್ಲಿ 5, 04, 989 ಇಂಟರ್ನೆಟ್ ಸಂಪರ್ಕವನ್ನು ಹೊಂದಿವೆ ಎಂದು ವರದಿ ಹೇಳಿದೆ.

ವರ್ಷವಿಡಿ ಲಾಕ್‌ಡೌನ್ ಕಾರಣಕ್ಕೆ, ಕೊರೊನಾ ಹರಡುವ ಭೀತಿಯಿಂದ ಶಾಲೆಗಳು ಮುಚ್ಚಿದ್ದಾಗ ಆನ್‌ಲೈನ್ ತರಗತಿ ನಡೆಸುತ್ತಿದ್ದೆವು ಎಂದು ಶಿಕ್ಷಣ ಇಲಾಖೆ ಹೇಳಿಕೊಂಡಿತ್ತು. ಆದರೆ ಬಹುತೇಕ ಶಾಲೆಗಳಲ್ಲಿ ಕಂಪ್ಯೂಟರ್ ಮತ್ತು ಇಂಟರ್ನೆಟ್ ಸಂಪರ್ಕ ಇಲ್ಲದೆ ಹೇಗೆ ಆನ್‌ಲೈನ್ ತರಗತಿಗಳನ್ನು ನಡೆಸಲಾಯಿತು ಎಂಬ ಪ್ರಶ್ನೆ ಉದ್ಭವಿಸಿದೆ.

ಇಂದಿಗೂ ದೇಶದ ಕೇವಲ 2.2% ಶಾಲೆಗಳು ಮಾತ್ರ ಡಿಜಿಟಲ್ ಲೈಬ್ರರಿಗಳನ್ನು ಹೊಂದಿವೆ ಮತ್ತು ಅವುಗಳಲ್ಲಿ 14.9% ರಷ್ಟು ಮಾತ್ರ “ಸ್ಮಾರ್ಟ್ ಕ್ಲಾಸ್‌ರೂಮ್‌ಗಳನ್ನು” ಹೊಂದಿದ್ದು, ಡಿಜಿಟಲ್ ಬೋರ್ಡ್‌ಗಳು, ಸ್ಮಾರ್ಟ್ ಬೋರ್ಡ್‌ಗಳು ಮತ್ತು ಸ್ಮಾರ್ಟ್ ಟಿವಿಗಳೊಂದಿಗೆ ಬೋಧನೆಗಾಗಿ ಬಳಸಲಾಗುತ್ತದೆ ಎಂದು ವರದಿ ತಿಳಿಸಿದೆ.

ಆಘಾತಕಾರಿ ವಿಷಯವೆಂದರೆ ದೇಶದ ಸುಮಾರು 10.6% ಶಾಲೆಗಳು ವಿದ್ಯುತ್ ಹೊಂದಿಲ್ಲ ಮತ್ತು 23.04% ಶಾಲೆಗಳಿಗೆ ಆಟದ ಮೈದಾನಗಳಿಲ್ಲ. ಸುಮಾರು 12.7% ರಷ್ಟು ಶಾಲೆಗಳಲ್ಲಿ ಗ್ರಂಥಾಲಯಗಳು ಮತ್ತು ವಾಚನಾಲಯಗಳಿಲ್ಲ ಎಂದು ತಿಳಿದುಬಂದಿದೆ.

2021-22ರಲ್ಲಿ ಕೇವಲ 26.96% ಶಾಲೆಗಳು ವಿಶೇಷ ಅಗತ್ಯತೆಯುಳ್ಳ ಮಕ್ಕಳ ಸ್ನೇಹಿ ಶೌಚಾಲಯಗಳನ್ನು ಹೊಂದಿವೆ. ಮೆಟ್ಟಿಲುಗಳು ಮಾತ್ರವಲ್ಲದೆ ಇಳಿಜಾರಿನ ವ್ಯವಸ್ಥೆಯು ಕೇವಲ ಅರ್ಧದಷ್ಟು ಶಾಲೆಗಳಲ್ಲಿ ಮಾತ್ರ ಇದೆ ಎನ್ನಲಾಗಿದೆ.

ಆದರೆ ಈ ಎಲ್ಲಾ ಕೊರತೆಗಳ ನಡುವೆಯು ಶಾಲೆಗೆ ಸೇರುವ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಮಕ್ಕಳ ಸಂಖ್ಯೆ ಹೆಚ್ಚುತ್ತಿರುವುದನ್ನು ವರದಿ ಗುರುತಿಸಿದೆ. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಸಂಖ್ಯೆಯು 2020-21ರಲ್ಲಿ 4.78 ಕೋಟಿಯಿಂದ 4.83 ಕೋಟಿಗೆ ಏರಿಕೆಯಾಗಿದೆ. ಅದೇ ರೀತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಂಖ್ಯೆ 2.49 ಕೋಟಿಯಿಂದ 2.51 ಕೋಟಿಗೆ ಮತ್ತು ಇತರ ಹಿಂದುಳಿದ ಜಾತಿ (ಒಬಿಸಿ) ವಿದ್ಯಾರ್ಥಿಗಳು 11.35 ಕೋಟಿಯಿಂದ 11.49 ಕೋಟಿಗೆ ಏರಿದ್ದಾರೆ ”ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ದೇಶದ ಪ್ರತಿಯೊಬ್ಬ ಮಕ್ಕಳಿಗೂ ಗುಣಮಟ್ಟದ ಉಚಿತ ಶಿಕ್ಷಣ ಒದಗಿಸಬೇಕೆಂದು ನಮ್ಮ ಸಂವಿಧಾನ ಹೇಳುತ್ತದೆ. 2009ರ ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಒದಗಿಸಬೇಕಿದೆ. ಆದರೆ ಶಾಲೆಗಳ ಮೂಲಸೌಕರ್ಯ, ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನಮ್ಮ ಶಾಲೆಗಳು ತೀವ್ರ ಹಿಂದುಳಿದಿವೆ. ಅದರಲ್ಲಿಯೂ ಸರ್ಕಾರಿ ಶಾಲೆಗಳ ಪರಿಸ್ಥಿತಿ ಶೋಚನೀಯವಾಗಿರುವುದನ್ನು ಈ ವರದಿ ಒತ್ತಿ ಹೇಳುತ್ತಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಶಾಲೆಗಳ ಅಭಿವೃದ್ಧಿಯತ್ತ ಸರ್ಕಾರ ಗಮನವಹಿಸಬೇಕಿದೆ.

ಇದನ್ನೂ ಓದಿ; ‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...