Homeಮುಖಪುಟಆನ್‌ಲೈನ್‌ ತರಗತಿಗಳು ನಡೆಯುತ್ತಿದ್ದಾಗ ದೇಶದ ಹೆಚ್ಚಿನ ಶಾಲೆಗಳಲ್ಲಿ ಕಂಪ್ಯೂಟರ್, ಇಂಟರ್ನೆಟ್ ಸಂಪರ್ಕವಿರಲಿಲ್ಲ: ವರದಿ

ಆನ್‌ಲೈನ್‌ ತರಗತಿಗಳು ನಡೆಯುತ್ತಿದ್ದಾಗ ದೇಶದ ಹೆಚ್ಚಿನ ಶಾಲೆಗಳಲ್ಲಿ ಕಂಪ್ಯೂಟರ್, ಇಂಟರ್ನೆಟ್ ಸಂಪರ್ಕವಿರಲಿಲ್ಲ: ವರದಿ

- Advertisement -
- Advertisement -

ದೇಶದ ಒಟ್ಟು 14,89,115 ಶಾಲೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಶಾಲೆಗಳು (55.5% ರಷ್ಟು) ಕಂಪ್ಯೂಟರ್ ಸೌಲಭ್ಯಗಳನ್ನು ಹೊಂದಿಲ್ಲ ಮತ್ತು 2021-22 ಶೈಕ್ಷಣಿಕ ವರ್ಷದಲ್ಲಿ ಕೋವಿಡ್ ಕಾರಣದಿಂದ ಆನ್‌ಲೈನ್‌ ತರಗತಿಗಳು ನಡೆಯುತ್ತಿದ್ದಾಗ ಸುಮಾರು 66% ಶಾಲೆಗಳಲ್ಲಿ ಇಂಟರ್ನೆಟ್ ಸಂಪರ್ಕ ಇರಲಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ವರದಿ ತಿಳಿಸಿದೆ.

ಯುನಿಫೈಡ್ ಡಿಸ್ಟ್ರಿಕ್ಟ್ ಇನ್ಫರ್ಮೇಷನ್ ಸಿಸ್ಟಮ್ ಫಾರ್ ಎಜುಕೇಶನ್ (UIDSE+) ವರದಿಯು ಗುರುವಾರ ಬಿಡುಗಡೆಯಾಗಿದ್ದು, ಇದು ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಸ್ವಯಂಪ್ರೇರಿತ ಡೇಟಾವನ್ನು ಆಧರಿಸಿದೆ. 2021-22ನೇ ಶೈಕ್ಷಣಿಕ ವರ್ಷದಲ್ಲಿ ಕೇವಲ 6,82,566 ಶಾಲೆಗಳು ಕಂಪ್ಯೂಟರ್‌ಗಳನ್ನು ಹೊಂದಿದ್ದರೆ, ಅವುಗಳಲ್ಲಿ 5, 04, 989 ಇಂಟರ್ನೆಟ್ ಸಂಪರ್ಕವನ್ನು ಹೊಂದಿವೆ ಎಂದು ವರದಿ ಹೇಳಿದೆ.

ವರ್ಷವಿಡಿ ಲಾಕ್‌ಡೌನ್ ಕಾರಣಕ್ಕೆ, ಕೊರೊನಾ ಹರಡುವ ಭೀತಿಯಿಂದ ಶಾಲೆಗಳು ಮುಚ್ಚಿದ್ದಾಗ ಆನ್‌ಲೈನ್ ತರಗತಿ ನಡೆಸುತ್ತಿದ್ದೆವು ಎಂದು ಶಿಕ್ಷಣ ಇಲಾಖೆ ಹೇಳಿಕೊಂಡಿತ್ತು. ಆದರೆ ಬಹುತೇಕ ಶಾಲೆಗಳಲ್ಲಿ ಕಂಪ್ಯೂಟರ್ ಮತ್ತು ಇಂಟರ್ನೆಟ್ ಸಂಪರ್ಕ ಇಲ್ಲದೆ ಹೇಗೆ ಆನ್‌ಲೈನ್ ತರಗತಿಗಳನ್ನು ನಡೆಸಲಾಯಿತು ಎಂಬ ಪ್ರಶ್ನೆ ಉದ್ಭವಿಸಿದೆ.

ಇಂದಿಗೂ ದೇಶದ ಕೇವಲ 2.2% ಶಾಲೆಗಳು ಮಾತ್ರ ಡಿಜಿಟಲ್ ಲೈಬ್ರರಿಗಳನ್ನು ಹೊಂದಿವೆ ಮತ್ತು ಅವುಗಳಲ್ಲಿ 14.9% ರಷ್ಟು ಮಾತ್ರ “ಸ್ಮಾರ್ಟ್ ಕ್ಲಾಸ್‌ರೂಮ್‌ಗಳನ್ನು” ಹೊಂದಿದ್ದು, ಡಿಜಿಟಲ್ ಬೋರ್ಡ್‌ಗಳು, ಸ್ಮಾರ್ಟ್ ಬೋರ್ಡ್‌ಗಳು ಮತ್ತು ಸ್ಮಾರ್ಟ್ ಟಿವಿಗಳೊಂದಿಗೆ ಬೋಧನೆಗಾಗಿ ಬಳಸಲಾಗುತ್ತದೆ ಎಂದು ವರದಿ ತಿಳಿಸಿದೆ.

ಆಘಾತಕಾರಿ ವಿಷಯವೆಂದರೆ ದೇಶದ ಸುಮಾರು 10.6% ಶಾಲೆಗಳು ವಿದ್ಯುತ್ ಹೊಂದಿಲ್ಲ ಮತ್ತು 23.04% ಶಾಲೆಗಳಿಗೆ ಆಟದ ಮೈದಾನಗಳಿಲ್ಲ. ಸುಮಾರು 12.7% ರಷ್ಟು ಶಾಲೆಗಳಲ್ಲಿ ಗ್ರಂಥಾಲಯಗಳು ಮತ್ತು ವಾಚನಾಲಯಗಳಿಲ್ಲ ಎಂದು ತಿಳಿದುಬಂದಿದೆ.

2021-22ರಲ್ಲಿ ಕೇವಲ 26.96% ಶಾಲೆಗಳು ವಿಶೇಷ ಅಗತ್ಯತೆಯುಳ್ಳ ಮಕ್ಕಳ ಸ್ನೇಹಿ ಶೌಚಾಲಯಗಳನ್ನು ಹೊಂದಿವೆ. ಮೆಟ್ಟಿಲುಗಳು ಮಾತ್ರವಲ್ಲದೆ ಇಳಿಜಾರಿನ ವ್ಯವಸ್ಥೆಯು ಕೇವಲ ಅರ್ಧದಷ್ಟು ಶಾಲೆಗಳಲ್ಲಿ ಮಾತ್ರ ಇದೆ ಎನ್ನಲಾಗಿದೆ.

ಆದರೆ ಈ ಎಲ್ಲಾ ಕೊರತೆಗಳ ನಡುವೆಯು ಶಾಲೆಗೆ ಸೇರುವ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಮಕ್ಕಳ ಸಂಖ್ಯೆ ಹೆಚ್ಚುತ್ತಿರುವುದನ್ನು ವರದಿ ಗುರುತಿಸಿದೆ. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಸಂಖ್ಯೆಯು 2020-21ರಲ್ಲಿ 4.78 ಕೋಟಿಯಿಂದ 4.83 ಕೋಟಿಗೆ ಏರಿಕೆಯಾಗಿದೆ. ಅದೇ ರೀತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಂಖ್ಯೆ 2.49 ಕೋಟಿಯಿಂದ 2.51 ಕೋಟಿಗೆ ಮತ್ತು ಇತರ ಹಿಂದುಳಿದ ಜಾತಿ (ಒಬಿಸಿ) ವಿದ್ಯಾರ್ಥಿಗಳು 11.35 ಕೋಟಿಯಿಂದ 11.49 ಕೋಟಿಗೆ ಏರಿದ್ದಾರೆ ”ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ದೇಶದ ಪ್ರತಿಯೊಬ್ಬ ಮಕ್ಕಳಿಗೂ ಗುಣಮಟ್ಟದ ಉಚಿತ ಶಿಕ್ಷಣ ಒದಗಿಸಬೇಕೆಂದು ನಮ್ಮ ಸಂವಿಧಾನ ಹೇಳುತ್ತದೆ. 2009ರ ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಒದಗಿಸಬೇಕಿದೆ. ಆದರೆ ಶಾಲೆಗಳ ಮೂಲಸೌಕರ್ಯ, ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನಮ್ಮ ಶಾಲೆಗಳು ತೀವ್ರ ಹಿಂದುಳಿದಿವೆ. ಅದರಲ್ಲಿಯೂ ಸರ್ಕಾರಿ ಶಾಲೆಗಳ ಪರಿಸ್ಥಿತಿ ಶೋಚನೀಯವಾಗಿರುವುದನ್ನು ಈ ವರದಿ ಒತ್ತಿ ಹೇಳುತ್ತಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಶಾಲೆಗಳ ಅಭಿವೃದ್ಧಿಯತ್ತ ಸರ್ಕಾರ ಗಮನವಹಿಸಬೇಕಿದೆ.

ಇದನ್ನೂ ಓದಿ; ‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...