HomeUncategorizedಮುರ್ಷಿದಾಬಾದ್ ಗಲಭೆಯಲ್ಲಿ ಹೆಚ್ಚಿನ ಬಲಿಪಶುಗಳು ಮಹಿಳೆಯರು: ಮಹಿಳಾ ಆಯೋಗದ ಮುಖ್ಯಸ್ಥೆಯಿಂದ ಸಂತ್ರಸ್ತರ ಭೇಟಿ

ಮುರ್ಷಿದಾಬಾದ್ ಗಲಭೆಯಲ್ಲಿ ಹೆಚ್ಚಿನ ಬಲಿಪಶುಗಳು ಮಹಿಳೆಯರು: ಮಹಿಳಾ ಆಯೋಗದ ಮುಖ್ಯಸ್ಥೆಯಿಂದ ಸಂತ್ರಸ್ತರ ಭೇಟಿ

- Advertisement -
- Advertisement -

ಮುರ್ಷಿದಾಬಾದ್: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮತ್ತು ಮಾಲ್ಡಾದಲ್ಲಿ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭಾನುವಾರದಂದು ಭೇಟಿ ನೀಡಿದ ರಾಷ್ಟ್ರೀಯ ಮಹಿಳಾ ಆಯೋಗದ (NCW) ಮುಖ್ಯಸ್ಥೆ ವಿಜಯಾ ರಹತ್ಕರ್ ಅವರು, “ಕೋಮು ಹಿಂಸಾಚಾರದ ಅತಿದೊಡ್ಡ ಬಲಿಪಶುಗಳು ಯಾವಾಗಲೂ ಮಹಿಳೆಯರು ಮತ್ತು ಮಕ್ಕಳು” ಎಂದು ಹೇಳಿದರು ಮತ್ತು ಅವರ ಮೇಲೆ ಅತ್ಯಂತ “ಅಮಾನವೀಯ ರೀತಿಯಲ್ಲಿ” ಬೆದರಿಕೆ ಮತ್ತು ದಾಳಿ ನಡೆಸಲಾಗಿದೆ ಎಂದಿದ್ದಾರೆ.

ವಕ್ಫ್ ಕಾಯ್ದೆ ವಿರೋಧಿ ಪ್ರತಿಭಟನೆಗಳಿಂದಾಗಿ ಮುರ್ಷಿದಾಬಾದ್ ಮತ್ತು ನೆರೆಯ ಪ್ರದೇಶಗಳಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ತಂದೆ-ಮಗ ಜೋಡಿ ಸೇರಿದಂತೆ ಮೂವರು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

“ನಾನು ಅನೇಕ ಮಹಿಳೆಯರೊಂದಿಗೆ ಮಾತನಾಡಿದೆ ಮತ್ತು ಅಂತಹ ಕೋಮು ಹಿಂಸಾಚಾರದ ದೊಡ್ಡ ಬಲಿಪಶುಗಳು ಯಾವಾಗಲೂ ಮಹಿಳೆಯರು ಮತ್ತು ಮಕ್ಕಳು ಎಂದು ನಾನು ಅರಿತುಕೊಂಡೆ. ಹಲವಾರು ಮನೆಗಳನ್ನು ನಾಶಪಡಿಸಲಾಗಿದೆ ಮತ್ತು ಬೆಂಕಿ ಹಚ್ಚಲಾಗಿದೆ. ಅವರನ್ನು (ಜನರನ್ನು) ಲೂಟಿ ಮಾಡಲಾಗಿದೆ ಮತ್ತು ಹಿಂಸಿಸಲಾಗಿದೆ. ಈ ಹಿಂಸಾಚಾರವು ಮಹಿಳೆಯರ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಅವರು ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ತಮ್ಮ ಮನೆಗಳಿಂದ ಎಳೆದೊಯ್ದು, ಕ್ರೂರವಾಗಿ ಹಲ್ಲೆ ನಡೆಸಿ, ಅಮಾನವೀಯ ರೀತಿಯಲ್ಲಿ ಬೆದರಿಕೆ ಹಾಕಿದ ಮಹಿಳೆಯರ ನೋವು ಊಹಿಸಲೂ ಸಾಧ್ಯವಿಲ್ಲ. ಕೆಲವರಿಗೆ ತಮ್ಮ ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡುತ್ತೇವೆ ಕಳುಹಿಸಿ ಎಂದು ದುಷ್ಕರ್ಮಿಗಳು ಹೇಳಿದ್ದಾರೆ. ಸುರಕ್ಷತೆ ಮತ್ತು ನ್ಯಾಯವನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಪಶ್ಚಿಮ ಬಂಗಾಳ ಸರ್ಕಾರದ ಮೇಲಿದೆ ಎಂದು ಮಹಿಳಾ ಆಯೋಗದ ಮುಖ್ಯಸ್ಥೆ ಹೇಳಿದರು.

ತಮ್ಮ ಭೇಟಿಯ ವಿವರಗಳನ್ನು ಹಂಚಿಕೊಂಡ ರಹತ್ಕರ್, ಸುಟ್ಟುಹೋದ ಮನೆಗಳು ಮತ್ತು ಪರಿಹಾರ ಶಿಬಿರಗಳಲ್ಲಿ ಹಲವಾರು ಮಹಿಳೆಯರು ಮತ್ತು ಮಕ್ಕಳನ್ನು ಭೇಟಿಯಾದೆ ಮತ್ತು ಅವರ ಸಂಕಷ್ಟದ ನೇರ ಕಥೆಗಳನ್ನು ಕೇಳಿದೆ ಎಂದು ಹೇಳಿದರು. “ನಾಲ್ಕು ದಿನಗಳ ಹಿಂದೆ ತಾಯಿಯಾದ ಮಹಿಳೆಯೊಬ್ಬರು ತಮ್ಮ ನಾಲ್ಕು ದಿನಗಳ ಮಗುವಿನೊಂದಿಗೆ ತಮ್ಮ ಜೀವಗಳನ್ನು ಉಳಿಸಿಕೊಳ್ಳಲು ಓಡುತ್ತಿರುವುದನ್ನು ನೀವು ಊಹಿಸಬಲ್ಲಿರಾ!” ಎಂದು ಅವರು ಪ್ರಶ್ನಿಸಿದರು.

ಗಲಭೆ ಪೀಡಿತ ಜನರಿಗೆ ಸಹಾಯ ಮಾಡುವಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ವಹಿಸಿದ್ದ ಪಾತ್ರಕ್ಕಾಗಿ ರಹತ್ಕರ್ ಅವರನ್ನು ಶ್ಲಾಘಿಸಿದರು. ಬಿಎಸ್‌ಎಫ್ ತಮಗೆ ಎಲ್ಲಾ ಸಹಾಯವನ್ನು ನೀಡಿದೆ ಮತ್ತು ಅಲ್ಲಿನ ಸಂತ್ರಸ್ತರು ಇವರಿಂದ ಮಾತ್ರ ಜೀವಂತವಾಗಿದ್ದಾರೆ ಎಂದು ಅಲ್ಲಿನ ಜನರು ಹೇಳಿದರು ಎಂದು ಅವರು ಹೇಳಿದರು.

ಎನ್‌ಸಿಡಬ್ಲ್ಯೂ ಅಧ್ಯಕ್ಷರ ಪ್ರಕಾರ, ಮುರ್ಷಿದಾಬಾದ್ ಮತ್ತು ಪೀಡಿತ ಪ್ರದೇಶಗಳ ಮಹಿಳೆಯರು ತಮ್ಮ ಎಲ್ಲಾ ಕನಸುಗಳು ಭಗ್ನಗೊಂಡಿವೆ ಮತ್ತು ಅವರಿಗೆ ಏನೂ ಉಳಿದಿಲ್ಲ ಎಂದು ಹೇಳಿದರು.

ಎನ್‌ಸಿಡಬ್ಲ್ಯೂ ಮುಖ್ಯಸ್ಥರು ಪಶ್ಚಿಮ ಬಂಗಾಳ ಸರ್ಕಾರಕ್ಕೆ ತ್ವರಿತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. “ಇವರು ನಮ್ಮ ಸ್ವಂತ ಹೆಣ್ಣುಮಕ್ಕಳು ಮತ್ತು ಮಹಿಳೆಯರು ಆಗಿರುವುದರಿಂದ ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ನಾವು ಬಂಗಾಳ ಸರ್ಕಾರಕ್ಕೆ ಮನವಿ ಮಾಡುತ್ತೇವೆ” ಎಂದು ಅವರು ಹೇಳಿದರು.

ಪಶ್ಚಿಮ ಬಂಗಾಳ ರಾಜ್ಯ ಮಹಿಳಾ ಆಯೋಗವು ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಬೇಕೆಂದು ಅವರು ಕರೆ ನೀಡಿದರು. “ಹೋಗಿ ಅವರ ಬಗ್ಗೆ ನಿಮ್ಮ ಸಹಾನುಭೂತಿ ತೋರಿಸಿ, ಕನಿಷ್ಠ ನೀವು ಅವರೊಂದಿಗೆ ಇದ್ದೀರಿ ಎಂದು ಹೇಳಿ. ಇದು ನಿಮ್ಮ ಕೆಲಸ!” ಎಂದಿದ್ದಾರೆ.

ಕೇಂದ್ರದ ಮುಂದೆ ವಿವರವಾದ ವರದಿಯನ್ನು ಸಲ್ಲಿಸಲಾಗುವುದು ಮತ್ತು ಪ್ರತಿಗಳನ್ನು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ಕಳುಹಿಸಲಾಗುವುದು ಎಂದು ರಹತ್ಕರ್ ಹೇಳಿದರು.

ಕಾಂಗ್ರೆಸ್ಸಿನಿಂದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ರ್ಯಾಲಿ; ನಿತೀಶ್ ‘ಖುರ್ಚಿ’ಗಾಗಿ ಬಿಜೆಪಿ ಜೊತೆ ಮೈತ್ರಿ; ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...