Homeಮುಖಪುಟದೆಹಲಿಗೆ ಬಂದಿಳಿದ ಮೋಸ್ಟ್ ವಾಂಟೆಡ್ ಅನ್ಮೋಲ್ ಬಿಷ್ಣೋಯಿ : ವಶಕ್ಕೆ ಪಡೆದ ಎನ್‌ಐಎ

ದೆಹಲಿಗೆ ಬಂದಿಳಿದ ಮೋಸ್ಟ್ ವಾಂಟೆಡ್ ಅನ್ಮೋಲ್ ಬಿಷ್ಣೋಯಿ : ವಶಕ್ಕೆ ಪಡೆದ ಎನ್‌ಐಎ

- Advertisement -
- Advertisement -

ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಅನ್ಮೋಲ್ ಬಿಷ್ಣೋಯ್ ಅಮೆರಿಕದಿಂದ ಗಡಿಪಾರು ಮಾಡಲ್ಪಟ್ಟ ನಂತರ ಬುಧವಾರ (ನವೆಂಬರ್ 19) ದೆಹಲಿಗೆ ಬಂದಿಳಿದಿದ್ದು, ಕೂಡಲೇ ಬಂಧಿಸಲಾಗಿದೆ. ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಕಾಗಿರುವ ಬಿಷ್ಣೋಯ್‌ನನ್ನು ಗಡಿಪಾರು ಮಾಡಿರುವುದು ಒಂದು ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ.

ಇದಕ್ಕೂ ಮೊದಲು, ಕಳೆದ ವರ್ಷ ಅಕ್ಟೋಬರ್ 12ರಂದು ಮುಂಬೈನ ಬಾಂದ್ರಾದಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಬಾಬಾ ಸಿದ್ದೀಕ್ ಅವರ ಕುಟುಂಬಕ್ಕೆ ಅನ್ಮೋಲ್ ಅನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ ತಿಳಿಸಿತ್ತು ಎಂದು ವರದಿಯಾಗಿದೆ.

“ಫೆಡರಲ್ ಸರ್ಕಾರವು ಅನ್ಮೋಲ್ ಬಿಷ್ಣೋಯಿಯನ್ನು ಯುನೈಟೆಡ್ ಸ್ಟೇಟ್ಸ್‌ನಿಂದ ಗಡಿಪಾರು ಮಾಡಿದೆ ಎಂದು ನಿಮಗೆ ತಿಳಿಸಲು ಈ ಇ-ಮೇಲ್ ಕಳುಹಿಸಲಾಗಿದೆ. ಅಪರಾಧಿಯನ್ನು ನವೆಂಬರ್ 18, 2025 ರಂದು ಗಡಿಪಾರು ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು 1-844-442-2553 ಗೆ ಕರೆ ಮಾಡಿ. ಈ ಅಧಿಸೂಚನೆಯನ್ನು ಡಿಹೆಚ್‌ಎಸ್‌-ವೈನ್ ಸೇವೆಯಿಂದ ಕಳುಹಿಸಲಾಗಿದೆ. ಈ ಮಾಹಿತಿಯು ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸುತ್ತೇವೆ” ಎಂದು ಡಿಹೆಚ್‌ಎಸ್‌-ವೈನ್ ಸೇವೆಯಿಂದ ಸಿದ್ದೀಕ್ ಕುಟುಂಬಕ್ಕೆ ಕಳುಹಿಸಲಾದ ಇ-ಮೇಲ್‌ನಲ್ಲಿ ಬರೆಯಲಾಗಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನ ಕಿರಿಯ ಸಹೋದರನಾಗಿರುವ ಅನ್ಮೋಲ್, ಮೇ 2022ರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಕೊಲೆ ಮತ್ತು ಅಕ್ಟೋಬರ್ 2024ರಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಅವರ ಕೊಲೆ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ.

ಈ ವರ್ಷದ ಏಪ್ರಿಲ್ 14ರಂದು ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹಿಂದೆಯೂ ಈತನ ಕೈವಾಡವಿದೆ ಎಂದು ಆರೋಪಿಸಲಾಗಿದೆ.

ಅನ್ಮೋಲ್ ಭಾರತದ ‘ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆತನ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿತ್ತು.

ನಕಲಿ ಪಾಸ್‌ಪೋರ್ಟ್ ಬಳಸಿ ಅನ್ಮೋಲ್ ದೇಶ ಬಿಟ್ಟು ಪಲಾಯನ ಮಾಡಿ, ನೇಪಾಳಕ್ಕೆ, ನಂತರ ದುಬೈ, ಕೀನ್ಯಾಕ್ಕೆ ಪ್ರಯಾಣ ಬೆಳೆಸಿ ಕೊನೆಗೆ ಅಮೆರಿಕ ತಲುಪಿದ್ದ ಎಂದು ವರದಿಗಳು ಹೇಳಿವೆ. ಕಳೆದ ನವೆಂಬರ್‌ನಲ್ಲಿ ಆತನನ್ನು ಬಂಧಿಸಿದ್ದ ಅಮೆರಿಕದ ಅಧಿಕಾರಿಗಳು, ನಂತರ ಗಡಿಪಾರು ಪ್ರಕ್ರಿಯೆ ಪ್ರಾರಂಭಿಸಿದ್ದರು.

ಪಂಜಾಬ್‌ನ ಫಜಿಲ್ಕಾ ಮೂಲದ ಅನ್ಮೋಲ್, ಸಹೋದರ ಲಾರೆನ್ಸ್ ಬಿಷ್ಣೋಯ್‌ನ ಪ್ರಮುಖ ವಿದೇಶಿ ನಿರ್ವಾಹಕರಾಗಿದ್ದ. ಸುಲಿಗೆ ದಂಧೆಗಳನ್ನು ನಿರ್ದೇಶಿಸುತ್ತಿದ್ದ. ಬೆದರಿಕೆಯೊಡ್ಡುತ್ತಿದ್ದ ಮತ್ತು ಎನ್‌ಕ್ರಿಪ್ಟ್ ಮಾಡಿದ ಮಾರ್ಗಗಳ ಮೂಲಕ ಕಾರ್ಯಯೋಜನೆಗಳನ್ನು ಸಂಘಟಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಏಪ್ರಿಲ್ 2023ರಲ್ಲಿ ಕ್ಯಾಲಿಫೋರ್ನಿಯಾದಲ್ಲಿ ನಡೆದ ಪಂಜಾಬಿ ಮದುವೆಯಲ್ಲಿ ಆತ ಕಾಣಿಸಿಕೊಂಡಿದ್ದ ಎನ್ನಲಾಗಿದೆ.

ಮೇ 2022ರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲಿ ಅನ್ಮೋಲ್ ಪಾತ್ರ ಸೇರಿದಂತೆ ಸುಮಾರು 18 ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. ವಿದೇಶದಿಂದ ಕಾರ್ಯಾಚರಣೆ ನಡೆಸುವಾಗ ಸಂಚು ರೂಪಿಸಿದ ಮತ್ತು ದಾಳಿಕೋರರಿಗೆ ಶಸ್ತ್ರಾಸ್ತ್ರಗಳು ಮತ್ತು ಲಾಜಿಸ್ಟಿಕಲ್ ಬೆಂಬಲವನ್ನು ವ್ಯವಸ್ಥೆ ಮಾಡಿದ ಆರೋಪ ಆತನ ಮೇಲಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಮುಂಬೈನಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆಯೂ ಆತನ ಬೇಕಾಗಿದ್ದ. ಫೇಸ್‌ಬುಕ್‌ ಪೋಸ್ಟ್ ಮೂಲಕ ಆತ ಈ ದಾಳಿಯ ಹೊಣೆ ಹೊತ್ತಿದ್ದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...