Homeಮುಖಪುಟದೆಹಲಿಗೆ ಬಂದಿಳಿದ ಮೋಸ್ಟ್ ವಾಂಟೆಡ್ ಅನ್ಮೋಲ್ ಬಿಷ್ಣೋಯಿ : ವಶಕ್ಕೆ ಪಡೆದ ಎನ್‌ಐಎ

ದೆಹಲಿಗೆ ಬಂದಿಳಿದ ಮೋಸ್ಟ್ ವಾಂಟೆಡ್ ಅನ್ಮೋಲ್ ಬಿಷ್ಣೋಯಿ : ವಶಕ್ಕೆ ಪಡೆದ ಎನ್‌ಐಎ

- Advertisement -
- Advertisement -

ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಅನ್ಮೋಲ್ ಬಿಷ್ಣೋಯ್ ಅಮೆರಿಕದಿಂದ ಗಡಿಪಾರು ಮಾಡಲ್ಪಟ್ಟ ನಂತರ ಬುಧವಾರ (ನವೆಂಬರ್ 19) ದೆಹಲಿಗೆ ಬಂದಿಳಿದಿದ್ದು, ಕೂಡಲೇ ಬಂಧಿಸಲಾಗಿದೆ. ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಕಾಗಿರುವ ಬಿಷ್ಣೋಯ್‌ನನ್ನು ಗಡಿಪಾರು ಮಾಡಿರುವುದು ಒಂದು ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ.

ಇದಕ್ಕೂ ಮೊದಲು, ಕಳೆದ ವರ್ಷ ಅಕ್ಟೋಬರ್ 12ರಂದು ಮುಂಬೈನ ಬಾಂದ್ರಾದಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಬಾಬಾ ಸಿದ್ದೀಕ್ ಅವರ ಕುಟುಂಬಕ್ಕೆ ಅನ್ಮೋಲ್ ಅನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ ತಿಳಿಸಿತ್ತು ಎಂದು ವರದಿಯಾಗಿದೆ.

“ಫೆಡರಲ್ ಸರ್ಕಾರವು ಅನ್ಮೋಲ್ ಬಿಷ್ಣೋಯಿಯನ್ನು ಯುನೈಟೆಡ್ ಸ್ಟೇಟ್ಸ್‌ನಿಂದ ಗಡಿಪಾರು ಮಾಡಿದೆ ಎಂದು ನಿಮಗೆ ತಿಳಿಸಲು ಈ ಇ-ಮೇಲ್ ಕಳುಹಿಸಲಾಗಿದೆ. ಅಪರಾಧಿಯನ್ನು ನವೆಂಬರ್ 18, 2025 ರಂದು ಗಡಿಪಾರು ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು 1-844-442-2553 ಗೆ ಕರೆ ಮಾಡಿ. ಈ ಅಧಿಸೂಚನೆಯನ್ನು ಡಿಹೆಚ್‌ಎಸ್‌-ವೈನ್ ಸೇವೆಯಿಂದ ಕಳುಹಿಸಲಾಗಿದೆ. ಈ ಮಾಹಿತಿಯು ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸುತ್ತೇವೆ” ಎಂದು ಡಿಹೆಚ್‌ಎಸ್‌-ವೈನ್ ಸೇವೆಯಿಂದ ಸಿದ್ದೀಕ್ ಕುಟುಂಬಕ್ಕೆ ಕಳುಹಿಸಲಾದ ಇ-ಮೇಲ್‌ನಲ್ಲಿ ಬರೆಯಲಾಗಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನ ಕಿರಿಯ ಸಹೋದರನಾಗಿರುವ ಅನ್ಮೋಲ್, ಮೇ 2022ರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಕೊಲೆ ಮತ್ತು ಅಕ್ಟೋಬರ್ 2024ರಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಅವರ ಕೊಲೆ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ.

ಈ ವರ್ಷದ ಏಪ್ರಿಲ್ 14ರಂದು ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹಿಂದೆಯೂ ಈತನ ಕೈವಾಡವಿದೆ ಎಂದು ಆರೋಪಿಸಲಾಗಿದೆ.

ಅನ್ಮೋಲ್ ಭಾರತದ ‘ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆತನ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿತ್ತು.

ನಕಲಿ ಪಾಸ್‌ಪೋರ್ಟ್ ಬಳಸಿ ಅನ್ಮೋಲ್ ದೇಶ ಬಿಟ್ಟು ಪಲಾಯನ ಮಾಡಿ, ನೇಪಾಳಕ್ಕೆ, ನಂತರ ದುಬೈ, ಕೀನ್ಯಾಕ್ಕೆ ಪ್ರಯಾಣ ಬೆಳೆಸಿ ಕೊನೆಗೆ ಅಮೆರಿಕ ತಲುಪಿದ್ದ ಎಂದು ವರದಿಗಳು ಹೇಳಿವೆ. ಕಳೆದ ನವೆಂಬರ್‌ನಲ್ಲಿ ಆತನನ್ನು ಬಂಧಿಸಿದ್ದ ಅಮೆರಿಕದ ಅಧಿಕಾರಿಗಳು, ನಂತರ ಗಡಿಪಾರು ಪ್ರಕ್ರಿಯೆ ಪ್ರಾರಂಭಿಸಿದ್ದರು.

ಪಂಜಾಬ್‌ನ ಫಜಿಲ್ಕಾ ಮೂಲದ ಅನ್ಮೋಲ್, ಸಹೋದರ ಲಾರೆನ್ಸ್ ಬಿಷ್ಣೋಯ್‌ನ ಪ್ರಮುಖ ವಿದೇಶಿ ನಿರ್ವಾಹಕರಾಗಿದ್ದ. ಸುಲಿಗೆ ದಂಧೆಗಳನ್ನು ನಿರ್ದೇಶಿಸುತ್ತಿದ್ದ. ಬೆದರಿಕೆಯೊಡ್ಡುತ್ತಿದ್ದ ಮತ್ತು ಎನ್‌ಕ್ರಿಪ್ಟ್ ಮಾಡಿದ ಮಾರ್ಗಗಳ ಮೂಲಕ ಕಾರ್ಯಯೋಜನೆಗಳನ್ನು ಸಂಘಟಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಏಪ್ರಿಲ್ 2023ರಲ್ಲಿ ಕ್ಯಾಲಿಫೋರ್ನಿಯಾದಲ್ಲಿ ನಡೆದ ಪಂಜಾಬಿ ಮದುವೆಯಲ್ಲಿ ಆತ ಕಾಣಿಸಿಕೊಂಡಿದ್ದ ಎನ್ನಲಾಗಿದೆ.

ಮೇ 2022ರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲಿ ಅನ್ಮೋಲ್ ಪಾತ್ರ ಸೇರಿದಂತೆ ಸುಮಾರು 18 ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. ವಿದೇಶದಿಂದ ಕಾರ್ಯಾಚರಣೆ ನಡೆಸುವಾಗ ಸಂಚು ರೂಪಿಸಿದ ಮತ್ತು ದಾಳಿಕೋರರಿಗೆ ಶಸ್ತ್ರಾಸ್ತ್ರಗಳು ಮತ್ತು ಲಾಜಿಸ್ಟಿಕಲ್ ಬೆಂಬಲವನ್ನು ವ್ಯವಸ್ಥೆ ಮಾಡಿದ ಆರೋಪ ಆತನ ಮೇಲಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಮುಂಬೈನಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆಯೂ ಆತನ ಬೇಕಾಗಿದ್ದ. ಫೇಸ್‌ಬುಕ್‌ ಪೋಸ್ಟ್ ಮೂಲಕ ಆತ ಈ ದಾಳಿಯ ಹೊಣೆ ಹೊತ್ತಿದ್ದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

'ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್' ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, "ಸಿನಿಮಾದ...

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...