Homeಮುಖಪುಟದೆಹಲಿಗೆ ಬಂದಿಳಿದ ಮೋಸ್ಟ್ ವಾಂಟೆಡ್ ಅನ್ಮೋಲ್ ಬಿಷ್ಣೋಯಿ : ವಶಕ್ಕೆ ಪಡೆದ ಎನ್‌ಐಎ

ದೆಹಲಿಗೆ ಬಂದಿಳಿದ ಮೋಸ್ಟ್ ವಾಂಟೆಡ್ ಅನ್ಮೋಲ್ ಬಿಷ್ಣೋಯಿ : ವಶಕ್ಕೆ ಪಡೆದ ಎನ್‌ಐಎ

- Advertisement -
- Advertisement -

ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಅನ್ಮೋಲ್ ಬಿಷ್ಣೋಯ್ ಅಮೆರಿಕದಿಂದ ಗಡಿಪಾರು ಮಾಡಲ್ಪಟ್ಟ ನಂತರ ಬುಧವಾರ (ನವೆಂಬರ್ 19) ದೆಹಲಿಗೆ ಬಂದಿಳಿದಿದ್ದು, ಕೂಡಲೇ ಬಂಧಿಸಲಾಗಿದೆ. ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಕಾಗಿರುವ ಬಿಷ್ಣೋಯ್‌ನನ್ನು ಗಡಿಪಾರು ಮಾಡಿರುವುದು ಒಂದು ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ.

ಇದಕ್ಕೂ ಮೊದಲು, ಕಳೆದ ವರ್ಷ ಅಕ್ಟೋಬರ್ 12ರಂದು ಮುಂಬೈನ ಬಾಂದ್ರಾದಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಬಾಬಾ ಸಿದ್ದೀಕ್ ಅವರ ಕುಟುಂಬಕ್ಕೆ ಅನ್ಮೋಲ್ ಅನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ ತಿಳಿಸಿತ್ತು ಎಂದು ವರದಿಯಾಗಿದೆ.

“ಫೆಡರಲ್ ಸರ್ಕಾರವು ಅನ್ಮೋಲ್ ಬಿಷ್ಣೋಯಿಯನ್ನು ಯುನೈಟೆಡ್ ಸ್ಟೇಟ್ಸ್‌ನಿಂದ ಗಡಿಪಾರು ಮಾಡಿದೆ ಎಂದು ನಿಮಗೆ ತಿಳಿಸಲು ಈ ಇ-ಮೇಲ್ ಕಳುಹಿಸಲಾಗಿದೆ. ಅಪರಾಧಿಯನ್ನು ನವೆಂಬರ್ 18, 2025 ರಂದು ಗಡಿಪಾರು ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು 1-844-442-2553 ಗೆ ಕರೆ ಮಾಡಿ. ಈ ಅಧಿಸೂಚನೆಯನ್ನು ಡಿಹೆಚ್‌ಎಸ್‌-ವೈನ್ ಸೇವೆಯಿಂದ ಕಳುಹಿಸಲಾಗಿದೆ. ಈ ಮಾಹಿತಿಯು ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸುತ್ತೇವೆ” ಎಂದು ಡಿಹೆಚ್‌ಎಸ್‌-ವೈನ್ ಸೇವೆಯಿಂದ ಸಿದ್ದೀಕ್ ಕುಟುಂಬಕ್ಕೆ ಕಳುಹಿಸಲಾದ ಇ-ಮೇಲ್‌ನಲ್ಲಿ ಬರೆಯಲಾಗಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನ ಕಿರಿಯ ಸಹೋದರನಾಗಿರುವ ಅನ್ಮೋಲ್, ಮೇ 2022ರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಕೊಲೆ ಮತ್ತು ಅಕ್ಟೋಬರ್ 2024ರಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಅವರ ಕೊಲೆ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ.

ಈ ವರ್ಷದ ಏಪ್ರಿಲ್ 14ರಂದು ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹಿಂದೆಯೂ ಈತನ ಕೈವಾಡವಿದೆ ಎಂದು ಆರೋಪಿಸಲಾಗಿದೆ.

ಅನ್ಮೋಲ್ ಭಾರತದ ‘ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆತನ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿತ್ತು.

ನಕಲಿ ಪಾಸ್‌ಪೋರ್ಟ್ ಬಳಸಿ ಅನ್ಮೋಲ್ ದೇಶ ಬಿಟ್ಟು ಪಲಾಯನ ಮಾಡಿ, ನೇಪಾಳಕ್ಕೆ, ನಂತರ ದುಬೈ, ಕೀನ್ಯಾಕ್ಕೆ ಪ್ರಯಾಣ ಬೆಳೆಸಿ ಕೊನೆಗೆ ಅಮೆರಿಕ ತಲುಪಿದ್ದ ಎಂದು ವರದಿಗಳು ಹೇಳಿವೆ. ಕಳೆದ ನವೆಂಬರ್‌ನಲ್ಲಿ ಆತನನ್ನು ಬಂಧಿಸಿದ್ದ ಅಮೆರಿಕದ ಅಧಿಕಾರಿಗಳು, ನಂತರ ಗಡಿಪಾರು ಪ್ರಕ್ರಿಯೆ ಪ್ರಾರಂಭಿಸಿದ್ದರು.

ಪಂಜಾಬ್‌ನ ಫಜಿಲ್ಕಾ ಮೂಲದ ಅನ್ಮೋಲ್, ಸಹೋದರ ಲಾರೆನ್ಸ್ ಬಿಷ್ಣೋಯ್‌ನ ಪ್ರಮುಖ ವಿದೇಶಿ ನಿರ್ವಾಹಕರಾಗಿದ್ದ. ಸುಲಿಗೆ ದಂಧೆಗಳನ್ನು ನಿರ್ದೇಶಿಸುತ್ತಿದ್ದ. ಬೆದರಿಕೆಯೊಡ್ಡುತ್ತಿದ್ದ ಮತ್ತು ಎನ್‌ಕ್ರಿಪ್ಟ್ ಮಾಡಿದ ಮಾರ್ಗಗಳ ಮೂಲಕ ಕಾರ್ಯಯೋಜನೆಗಳನ್ನು ಸಂಘಟಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಏಪ್ರಿಲ್ 2023ರಲ್ಲಿ ಕ್ಯಾಲಿಫೋರ್ನಿಯಾದಲ್ಲಿ ನಡೆದ ಪಂಜಾಬಿ ಮದುವೆಯಲ್ಲಿ ಆತ ಕಾಣಿಸಿಕೊಂಡಿದ್ದ ಎನ್ನಲಾಗಿದೆ.

ಮೇ 2022ರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲಿ ಅನ್ಮೋಲ್ ಪಾತ್ರ ಸೇರಿದಂತೆ ಸುಮಾರು 18 ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. ವಿದೇಶದಿಂದ ಕಾರ್ಯಾಚರಣೆ ನಡೆಸುವಾಗ ಸಂಚು ರೂಪಿಸಿದ ಮತ್ತು ದಾಳಿಕೋರರಿಗೆ ಶಸ್ತ್ರಾಸ್ತ್ರಗಳು ಮತ್ತು ಲಾಜಿಸ್ಟಿಕಲ್ ಬೆಂಬಲವನ್ನು ವ್ಯವಸ್ಥೆ ಮಾಡಿದ ಆರೋಪ ಆತನ ಮೇಲಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಮುಂಬೈನಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆಯೂ ಆತನ ಬೇಕಾಗಿದ್ದ. ಫೇಸ್‌ಬುಕ್‌ ಪೋಸ್ಟ್ ಮೂಲಕ ಆತ ಈ ದಾಳಿಯ ಹೊಣೆ ಹೊತ್ತಿದ್ದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...