Homeಮುಖಪುಟದೆಹಲಿಗೆ ಬಂದಿಳಿದ ಮೋಸ್ಟ್ ವಾಂಟೆಡ್ ಅನ್ಮೋಲ್ ಬಿಷ್ಣೋಯಿ : ವಶಕ್ಕೆ ಪಡೆದ ಎನ್‌ಐಎ

ದೆಹಲಿಗೆ ಬಂದಿಳಿದ ಮೋಸ್ಟ್ ವಾಂಟೆಡ್ ಅನ್ಮೋಲ್ ಬಿಷ್ಣೋಯಿ : ವಶಕ್ಕೆ ಪಡೆದ ಎನ್‌ಐಎ

- Advertisement -
- Advertisement -

ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಅನ್ಮೋಲ್ ಬಿಷ್ಣೋಯ್ ಅಮೆರಿಕದಿಂದ ಗಡಿಪಾರು ಮಾಡಲ್ಪಟ್ಟ ನಂತರ ಬುಧವಾರ (ನವೆಂಬರ್ 19) ದೆಹಲಿಗೆ ಬಂದಿಳಿದಿದ್ದು, ಕೂಡಲೇ ಬಂಧಿಸಲಾಗಿದೆ. ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಕಾಗಿರುವ ಬಿಷ್ಣೋಯ್‌ನನ್ನು ಗಡಿಪಾರು ಮಾಡಿರುವುದು ಒಂದು ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ.

ಇದಕ್ಕೂ ಮೊದಲು, ಕಳೆದ ವರ್ಷ ಅಕ್ಟೋಬರ್ 12ರಂದು ಮುಂಬೈನ ಬಾಂದ್ರಾದಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಬಾಬಾ ಸಿದ್ದೀಕ್ ಅವರ ಕುಟುಂಬಕ್ಕೆ ಅನ್ಮೋಲ್ ಅನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ ತಿಳಿಸಿತ್ತು ಎಂದು ವರದಿಯಾಗಿದೆ.

“ಫೆಡರಲ್ ಸರ್ಕಾರವು ಅನ್ಮೋಲ್ ಬಿಷ್ಣೋಯಿಯನ್ನು ಯುನೈಟೆಡ್ ಸ್ಟೇಟ್ಸ್‌ನಿಂದ ಗಡಿಪಾರು ಮಾಡಿದೆ ಎಂದು ನಿಮಗೆ ತಿಳಿಸಲು ಈ ಇ-ಮೇಲ್ ಕಳುಹಿಸಲಾಗಿದೆ. ಅಪರಾಧಿಯನ್ನು ನವೆಂಬರ್ 18, 2025 ರಂದು ಗಡಿಪಾರು ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು 1-844-442-2553 ಗೆ ಕರೆ ಮಾಡಿ. ಈ ಅಧಿಸೂಚನೆಯನ್ನು ಡಿಹೆಚ್‌ಎಸ್‌-ವೈನ್ ಸೇವೆಯಿಂದ ಕಳುಹಿಸಲಾಗಿದೆ. ಈ ಮಾಹಿತಿಯು ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸುತ್ತೇವೆ” ಎಂದು ಡಿಹೆಚ್‌ಎಸ್‌-ವೈನ್ ಸೇವೆಯಿಂದ ಸಿದ್ದೀಕ್ ಕುಟುಂಬಕ್ಕೆ ಕಳುಹಿಸಲಾದ ಇ-ಮೇಲ್‌ನಲ್ಲಿ ಬರೆಯಲಾಗಿದೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್‌ನ ಕಿರಿಯ ಸಹೋದರನಾಗಿರುವ ಅನ್ಮೋಲ್, ಮೇ 2022ರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಕೊಲೆ ಮತ್ತು ಅಕ್ಟೋಬರ್ 2024ರಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಅವರ ಕೊಲೆ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಾಗಿದ್ದ.

ಈ ವರ್ಷದ ಏಪ್ರಿಲ್ 14ರಂದು ಬಾಂದ್ರಾ ಪ್ರದೇಶದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಯ ಹಿಂದೆಯೂ ಈತನ ಕೈವಾಡವಿದೆ ಎಂದು ಆರೋಪಿಸಲಾಗಿದೆ.

ಅನ್ಮೋಲ್ ಭಾರತದ ‘ಮೋಸ್ಟ್ ವಾಂಟೆಡ್’ ಪಟ್ಟಿಯಲ್ಲಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆತನ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿತ್ತು.

ನಕಲಿ ಪಾಸ್‌ಪೋರ್ಟ್ ಬಳಸಿ ಅನ್ಮೋಲ್ ದೇಶ ಬಿಟ್ಟು ಪಲಾಯನ ಮಾಡಿ, ನೇಪಾಳಕ್ಕೆ, ನಂತರ ದುಬೈ, ಕೀನ್ಯಾಕ್ಕೆ ಪ್ರಯಾಣ ಬೆಳೆಸಿ ಕೊನೆಗೆ ಅಮೆರಿಕ ತಲುಪಿದ್ದ ಎಂದು ವರದಿಗಳು ಹೇಳಿವೆ. ಕಳೆದ ನವೆಂಬರ್‌ನಲ್ಲಿ ಆತನನ್ನು ಬಂಧಿಸಿದ್ದ ಅಮೆರಿಕದ ಅಧಿಕಾರಿಗಳು, ನಂತರ ಗಡಿಪಾರು ಪ್ರಕ್ರಿಯೆ ಪ್ರಾರಂಭಿಸಿದ್ದರು.

ಪಂಜಾಬ್‌ನ ಫಜಿಲ್ಕಾ ಮೂಲದ ಅನ್ಮೋಲ್, ಸಹೋದರ ಲಾರೆನ್ಸ್ ಬಿಷ್ಣೋಯ್‌ನ ಪ್ರಮುಖ ವಿದೇಶಿ ನಿರ್ವಾಹಕರಾಗಿದ್ದ. ಸುಲಿಗೆ ದಂಧೆಗಳನ್ನು ನಿರ್ದೇಶಿಸುತ್ತಿದ್ದ. ಬೆದರಿಕೆಯೊಡ್ಡುತ್ತಿದ್ದ ಮತ್ತು ಎನ್‌ಕ್ರಿಪ್ಟ್ ಮಾಡಿದ ಮಾರ್ಗಗಳ ಮೂಲಕ ಕಾರ್ಯಯೋಜನೆಗಳನ್ನು ಸಂಘಟಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಏಪ್ರಿಲ್ 2023ರಲ್ಲಿ ಕ್ಯಾಲಿಫೋರ್ನಿಯಾದಲ್ಲಿ ನಡೆದ ಪಂಜಾಬಿ ಮದುವೆಯಲ್ಲಿ ಆತ ಕಾಣಿಸಿಕೊಂಡಿದ್ದ ಎನ್ನಲಾಗಿದೆ.

ಮೇ 2022ರಲ್ಲಿ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲಿ ಅನ್ಮೋಲ್ ಪಾತ್ರ ಸೇರಿದಂತೆ ಸುಮಾರು 18 ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ. ವಿದೇಶದಿಂದ ಕಾರ್ಯಾಚರಣೆ ನಡೆಸುವಾಗ ಸಂಚು ರೂಪಿಸಿದ ಮತ್ತು ದಾಳಿಕೋರರಿಗೆ ಶಸ್ತ್ರಾಸ್ತ್ರಗಳು ಮತ್ತು ಲಾಜಿಸ್ಟಿಕಲ್ ಬೆಂಬಲವನ್ನು ವ್ಯವಸ್ಥೆ ಮಾಡಿದ ಆರೋಪ ಆತನ ಮೇಲಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಮುಂಬೈನಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆಯೂ ಆತನ ಬೇಕಾಗಿದ್ದ. ಫೇಸ್‌ಬುಕ್‌ ಪೋಸ್ಟ್ ಮೂಲಕ ಆತ ಈ ದಾಳಿಯ ಹೊಣೆ ಹೊತ್ತಿದ್ದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...