Homeಕರ್ನಾಟಕಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

ಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

- Advertisement -
- Advertisement -

ಬೆಂಗಳೂರಿಗೆ ಬೇರೆ ಬೇರೆ ಭಾಗಗಳಿಂದ ಮಾರಕ ಆಯುಧಗಳು, ಮಾದಕ ವಸ್ತುಗಳು, ನಕಲಿ ನೋಟುಗಳು ಹರಿದು ಬರುವುದು ಸಾಮಾನ್ಯ ಸಂಗತಿ. ಕೆಲವು ಸಲ ಪೊಲೀಸರ ಕಾರ್ಯಾಚರಣೆ ವೇಳೆ ಇಂತಹ ಜಾಲಗಳು ಪತ್ತೆಯಾಗುತ್ತವೆ. ಬೆಂಗಳೂರಿನ ಪೊಲೀಸರು ಹಿಂದೆ ಉತ್ತರ ಪ್ರದೇಶ, ಬಿಹಾರ ಮೂಲದಿಂದ ಬರುತ್ತಿದ್ದ ದೇಸಿ ಗನ್‌ ಗಳು, ನಾಡಾ ಕೋವಿಗಳು, ಕಚ್ಚಾ ಬಾಂಬ್‌ಗಳನ್ನು ಸಾಕಷ್ಟು ಸಾರಿ ಹಿಡಿದಿದ್ದರು. ಭೀಮಾ ತೀರದಲ್ಲೂ ಆಗಾಗ ಇಂತಹ ಬಂಧನಗಳು ಬೆಳಕಿಗೆ ಬಂದಿದ್ದವು. ಈಗ ಮತ್ತೊಮ್ಮೆ ಸಿಸಿಬಿ ಪೊಲೀಸರು ಹೈದ್ರಾಬಾದ್‌ನಲ್ಲಿ ಅಂತಹದ್ದೇ ಕಾರ್ಯಚರಣೆ ನಡೆಸಿದ್ದಾರೆ. ಬೆಂಗಳೂರಿನ ಡಾನ್‌ಗಳಿಗೆ, ರೌಡಿಗಳಿಗೆ ಗನ್‌ಗಳನ್ನು ಪೂರೈಸುತ್ತಿದ್ದ ಆರೋಪಿಗಳನ್ನು ಹೈದ್ರಾಬಾದ್‌ನಲ್ಲಿ ಶನಿವಾರ, ಜೂನ್‌ 12 ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 3 ದೇಸಿ ಗನ್‌ಗಳು 15 ಸುತ್ತಿಗಾಗುವಷ್ಟು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ  ಗನ್‌ ಪೂರೈಕೆಯಲ್ಲಿ ಆರೋಪಿಗೆ ಸಹಾಯ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳೂ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕಡುಬೀಸನಹಳ್ಳಿ ರೋಹಿತ್‌ ಎಂಬ ರೌಡಿಶೀಟರ್‌ ನೀಡಿದ ಮಾಹಿತಿಯ ಆಧಾರದ ಮೇಲೆ ಬೆಂಗಳೂರಿನ ಸೆಂಟ್ರಲ್‌ ಕ್ರೈಂ ಬ್ರ್ಯಾಂಚ್‌ ಪೊಲೀಸರು ರಹಸ್ಯ ಕಾರ್ಯಾಚರಣೆ ನಡೆಸಿ ಬೆಂಗಳೂರ-ಹೈದ್ರಾಬಾದ್‌ ಆಯುಧ ಪೂರೈಕೆ ಜಾಲವನ್ನು ಬೇಧಿಸಿದ್ದಾರೆ.

ಏಪ್ರಿಲ್‌ 8 ರಂದು ಸಿಸಿಬಿ ಪೊಲೀಸರು ಕಡುಬೀಸನಹಳ್ಳಿ ಸೋಮ ಎಂಬವನ ಮೇಲೆ ನಡೆದ ದಾಳಿ ಪ್ರಯತ್ನದಲ್ಲಿ ರೌಡಿಶೀಟರ್ ರೋಹಿತ್‌ ಸೇರಿ 11 ಜನರನ್ನು ಬಂಧಿಸಿದ್ದರು. ನಂತರ ರೋಹಿತ್‌ ಗೆ ಆಯುಧ ಪೂರೈಸುವವರ ಕುರಿತಾಗಿ ತನಿಖೆ ನಡೆಸಿದಾಗ ಕಲ್ಬುರ್ಗಿ ಮೂಲದ ಸುಂಕಾರಿ ಸತೀಶ ಅಲಿಯಾಸ್‌ ಮಾರ್ಕೆಟ್‌ ಸತೀಶ ಎಂಬ ವ್ಯಕ್ತಿಯ ಬಗ್ಗೆ ತಿಳಿದುಬಂದಿದೆ. ಮಾರ್ಕೆಟ್‌ ಸತೀಶ ರೌಡಿ ಶೀಟರ್‌ ಆಗಿದ್ದು ಕರ್ನಾಟಕ ಮತ್ತು ಹೈದ್ರಾಬಾದ್‌ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದರು.

ಶನಿವಾರ, 12 ಜೂನ್‌ ಅಂದು ಸಿಸಿಬಿ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಹೈದ್ರಾಬಾದ್‌ನ ಸೈದಾಬಾದ್‌ನಲ್ಲಿ ಅಡಗಿದ್ದ ಮಾರ್ಕೆಟ್‌ ಸತೀಶನನ್ನು ಬಂಧಿಸಿದ್ದಾರೆ. ಮಾರ್ಕೆಟ್‌ ಸತೀಶ್‌ ಈ ಹಿಂದೆ ಕರ್ನಾಟಕ ಗೂಂಡಾ ಖಾಯ್ದೆಯ ಅಂಡಿ ಬಂಧಿತನಾಗಿದ್ದ ವ್ಯಕ್ತಿ. ಆತ ಮಧ್ಯಪ್ರದೇಶದಿಂದ ಗನ್‌ ಮತ್ತು ಇತರ ಆಯುಧಗಳನ್ನು ತರಿಸಿ ಸುಮಾರು  2,00,000 ರೂ.ಗಳಿಗೆ ಬೆಂಗಳೂರಿನ ರೌಡಿಗಳಿಗೆ ಮಾರುತ್ತಿದ್ದ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.‌


ಇದನ್ನೂ ಓದಿ : ಜಿ-7 ಶೃಂಗಸಭೆ: ’ಒಂದು ಭೂಮಿ, ಒಂದು ಆರೋಗ್ಯ’ ವಿಧಾನ ಅಳವಡಿಸಿಕೊಳ್ಳಲು ಪ್ರಧಾನಿ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....