Homeಕರ್ನಾಟಕಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

ಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

- Advertisement -
- Advertisement -

ಬೆಂಗಳೂರಿಗೆ ಬೇರೆ ಬೇರೆ ಭಾಗಗಳಿಂದ ಮಾರಕ ಆಯುಧಗಳು, ಮಾದಕ ವಸ್ತುಗಳು, ನಕಲಿ ನೋಟುಗಳು ಹರಿದು ಬರುವುದು ಸಾಮಾನ್ಯ ಸಂಗತಿ. ಕೆಲವು ಸಲ ಪೊಲೀಸರ ಕಾರ್ಯಾಚರಣೆ ವೇಳೆ ಇಂತಹ ಜಾಲಗಳು ಪತ್ತೆಯಾಗುತ್ತವೆ. ಬೆಂಗಳೂರಿನ ಪೊಲೀಸರು ಹಿಂದೆ ಉತ್ತರ ಪ್ರದೇಶ, ಬಿಹಾರ ಮೂಲದಿಂದ ಬರುತ್ತಿದ್ದ ದೇಸಿ ಗನ್‌ ಗಳು, ನಾಡಾ ಕೋವಿಗಳು, ಕಚ್ಚಾ ಬಾಂಬ್‌ಗಳನ್ನು ಸಾಕಷ್ಟು ಸಾರಿ ಹಿಡಿದಿದ್ದರು. ಭೀಮಾ ತೀರದಲ್ಲೂ ಆಗಾಗ ಇಂತಹ ಬಂಧನಗಳು ಬೆಳಕಿಗೆ ಬಂದಿದ್ದವು. ಈಗ ಮತ್ತೊಮ್ಮೆ ಸಿಸಿಬಿ ಪೊಲೀಸರು ಹೈದ್ರಾಬಾದ್‌ನಲ್ಲಿ ಅಂತಹದ್ದೇ ಕಾರ್ಯಚರಣೆ ನಡೆಸಿದ್ದಾರೆ. ಬೆಂಗಳೂರಿನ ಡಾನ್‌ಗಳಿಗೆ, ರೌಡಿಗಳಿಗೆ ಗನ್‌ಗಳನ್ನು ಪೂರೈಸುತ್ತಿದ್ದ ಆರೋಪಿಗಳನ್ನು ಹೈದ್ರಾಬಾದ್‌ನಲ್ಲಿ ಶನಿವಾರ, ಜೂನ್‌ 12 ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 3 ದೇಸಿ ಗನ್‌ಗಳು 15 ಸುತ್ತಿಗಾಗುವಷ್ಟು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ  ಗನ್‌ ಪೂರೈಕೆಯಲ್ಲಿ ಆರೋಪಿಗೆ ಸಹಾಯ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳೂ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕಡುಬೀಸನಹಳ್ಳಿ ರೋಹಿತ್‌ ಎಂಬ ರೌಡಿಶೀಟರ್‌ ನೀಡಿದ ಮಾಹಿತಿಯ ಆಧಾರದ ಮೇಲೆ ಬೆಂಗಳೂರಿನ ಸೆಂಟ್ರಲ್‌ ಕ್ರೈಂ ಬ್ರ್ಯಾಂಚ್‌ ಪೊಲೀಸರು ರಹಸ್ಯ ಕಾರ್ಯಾಚರಣೆ ನಡೆಸಿ ಬೆಂಗಳೂರ-ಹೈದ್ರಾಬಾದ್‌ ಆಯುಧ ಪೂರೈಕೆ ಜಾಲವನ್ನು ಬೇಧಿಸಿದ್ದಾರೆ.

ಏಪ್ರಿಲ್‌ 8 ರಂದು ಸಿಸಿಬಿ ಪೊಲೀಸರು ಕಡುಬೀಸನಹಳ್ಳಿ ಸೋಮ ಎಂಬವನ ಮೇಲೆ ನಡೆದ ದಾಳಿ ಪ್ರಯತ್ನದಲ್ಲಿ ರೌಡಿಶೀಟರ್ ರೋಹಿತ್‌ ಸೇರಿ 11 ಜನರನ್ನು ಬಂಧಿಸಿದ್ದರು. ನಂತರ ರೋಹಿತ್‌ ಗೆ ಆಯುಧ ಪೂರೈಸುವವರ ಕುರಿತಾಗಿ ತನಿಖೆ ನಡೆಸಿದಾಗ ಕಲ್ಬುರ್ಗಿ ಮೂಲದ ಸುಂಕಾರಿ ಸತೀಶ ಅಲಿಯಾಸ್‌ ಮಾರ್ಕೆಟ್‌ ಸತೀಶ ಎಂಬ ವ್ಯಕ್ತಿಯ ಬಗ್ಗೆ ತಿಳಿದುಬಂದಿದೆ. ಮಾರ್ಕೆಟ್‌ ಸತೀಶ ರೌಡಿ ಶೀಟರ್‌ ಆಗಿದ್ದು ಕರ್ನಾಟಕ ಮತ್ತು ಹೈದ್ರಾಬಾದ್‌ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದರು.

ಶನಿವಾರ, 12 ಜೂನ್‌ ಅಂದು ಸಿಸಿಬಿ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಹೈದ್ರಾಬಾದ್‌ನ ಸೈದಾಬಾದ್‌ನಲ್ಲಿ ಅಡಗಿದ್ದ ಮಾರ್ಕೆಟ್‌ ಸತೀಶನನ್ನು ಬಂಧಿಸಿದ್ದಾರೆ. ಮಾರ್ಕೆಟ್‌ ಸತೀಶ್‌ ಈ ಹಿಂದೆ ಕರ್ನಾಟಕ ಗೂಂಡಾ ಖಾಯ್ದೆಯ ಅಂಡಿ ಬಂಧಿತನಾಗಿದ್ದ ವ್ಯಕ್ತಿ. ಆತ ಮಧ್ಯಪ್ರದೇಶದಿಂದ ಗನ್‌ ಮತ್ತು ಇತರ ಆಯುಧಗಳನ್ನು ತರಿಸಿ ಸುಮಾರು  2,00,000 ರೂ.ಗಳಿಗೆ ಬೆಂಗಳೂರಿನ ರೌಡಿಗಳಿಗೆ ಮಾರುತ್ತಿದ್ದ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.‌


ಇದನ್ನೂ ಓದಿ : ಜಿ-7 ಶೃಂಗಸಭೆ: ’ಒಂದು ಭೂಮಿ, ಒಂದು ಆರೋಗ್ಯ’ ವಿಧಾನ ಅಳವಡಿಸಿಕೊಳ್ಳಲು ಪ್ರಧಾನಿ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...