Homeಕರ್ನಾಟಕಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

ಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

- Advertisement -
- Advertisement -

ಬೆಂಗಳೂರಿಗೆ ಬೇರೆ ಬೇರೆ ಭಾಗಗಳಿಂದ ಮಾರಕ ಆಯುಧಗಳು, ಮಾದಕ ವಸ್ತುಗಳು, ನಕಲಿ ನೋಟುಗಳು ಹರಿದು ಬರುವುದು ಸಾಮಾನ್ಯ ಸಂಗತಿ. ಕೆಲವು ಸಲ ಪೊಲೀಸರ ಕಾರ್ಯಾಚರಣೆ ವೇಳೆ ಇಂತಹ ಜಾಲಗಳು ಪತ್ತೆಯಾಗುತ್ತವೆ. ಬೆಂಗಳೂರಿನ ಪೊಲೀಸರು ಹಿಂದೆ ಉತ್ತರ ಪ್ರದೇಶ, ಬಿಹಾರ ಮೂಲದಿಂದ ಬರುತ್ತಿದ್ದ ದೇಸಿ ಗನ್‌ ಗಳು, ನಾಡಾ ಕೋವಿಗಳು, ಕಚ್ಚಾ ಬಾಂಬ್‌ಗಳನ್ನು ಸಾಕಷ್ಟು ಸಾರಿ ಹಿಡಿದಿದ್ದರು. ಭೀಮಾ ತೀರದಲ್ಲೂ ಆಗಾಗ ಇಂತಹ ಬಂಧನಗಳು ಬೆಳಕಿಗೆ ಬಂದಿದ್ದವು. ಈಗ ಮತ್ತೊಮ್ಮೆ ಸಿಸಿಬಿ ಪೊಲೀಸರು ಹೈದ್ರಾಬಾದ್‌ನಲ್ಲಿ ಅಂತಹದ್ದೇ ಕಾರ್ಯಚರಣೆ ನಡೆಸಿದ್ದಾರೆ. ಬೆಂಗಳೂರಿನ ಡಾನ್‌ಗಳಿಗೆ, ರೌಡಿಗಳಿಗೆ ಗನ್‌ಗಳನ್ನು ಪೂರೈಸುತ್ತಿದ್ದ ಆರೋಪಿಗಳನ್ನು ಹೈದ್ರಾಬಾದ್‌ನಲ್ಲಿ ಶನಿವಾರ, ಜೂನ್‌ 12 ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 3 ದೇಸಿ ಗನ್‌ಗಳು 15 ಸುತ್ತಿಗಾಗುವಷ್ಟು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ  ಗನ್‌ ಪೂರೈಕೆಯಲ್ಲಿ ಆರೋಪಿಗೆ ಸಹಾಯ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳೂ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಕಡುಬೀಸನಹಳ್ಳಿ ರೋಹಿತ್‌ ಎಂಬ ರೌಡಿಶೀಟರ್‌ ನೀಡಿದ ಮಾಹಿತಿಯ ಆಧಾರದ ಮೇಲೆ ಬೆಂಗಳೂರಿನ ಸೆಂಟ್ರಲ್‌ ಕ್ರೈಂ ಬ್ರ್ಯಾಂಚ್‌ ಪೊಲೀಸರು ರಹಸ್ಯ ಕಾರ್ಯಾಚರಣೆ ನಡೆಸಿ ಬೆಂಗಳೂರ-ಹೈದ್ರಾಬಾದ್‌ ಆಯುಧ ಪೂರೈಕೆ ಜಾಲವನ್ನು ಬೇಧಿಸಿದ್ದಾರೆ.

ಏಪ್ರಿಲ್‌ 8 ರಂದು ಸಿಸಿಬಿ ಪೊಲೀಸರು ಕಡುಬೀಸನಹಳ್ಳಿ ಸೋಮ ಎಂಬವನ ಮೇಲೆ ನಡೆದ ದಾಳಿ ಪ್ರಯತ್ನದಲ್ಲಿ ರೌಡಿಶೀಟರ್ ರೋಹಿತ್‌ ಸೇರಿ 11 ಜನರನ್ನು ಬಂಧಿಸಿದ್ದರು. ನಂತರ ರೋಹಿತ್‌ ಗೆ ಆಯುಧ ಪೂರೈಸುವವರ ಕುರಿತಾಗಿ ತನಿಖೆ ನಡೆಸಿದಾಗ ಕಲ್ಬುರ್ಗಿ ಮೂಲದ ಸುಂಕಾರಿ ಸತೀಶ ಅಲಿಯಾಸ್‌ ಮಾರ್ಕೆಟ್‌ ಸತೀಶ ಎಂಬ ವ್ಯಕ್ತಿಯ ಬಗ್ಗೆ ತಿಳಿದುಬಂದಿದೆ. ಮಾರ್ಕೆಟ್‌ ಸತೀಶ ರೌಡಿ ಶೀಟರ್‌ ಆಗಿದ್ದು ಕರ್ನಾಟಕ ಮತ್ತು ಹೈದ್ರಾಬಾದ್‌ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದರು.

ಶನಿವಾರ, 12 ಜೂನ್‌ ಅಂದು ಸಿಸಿಬಿ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಹೈದ್ರಾಬಾದ್‌ನ ಸೈದಾಬಾದ್‌ನಲ್ಲಿ ಅಡಗಿದ್ದ ಮಾರ್ಕೆಟ್‌ ಸತೀಶನನ್ನು ಬಂಧಿಸಿದ್ದಾರೆ. ಮಾರ್ಕೆಟ್‌ ಸತೀಶ್‌ ಈ ಹಿಂದೆ ಕರ್ನಾಟಕ ಗೂಂಡಾ ಖಾಯ್ದೆಯ ಅಂಡಿ ಬಂಧಿತನಾಗಿದ್ದ ವ್ಯಕ್ತಿ. ಆತ ಮಧ್ಯಪ್ರದೇಶದಿಂದ ಗನ್‌ ಮತ್ತು ಇತರ ಆಯುಧಗಳನ್ನು ತರಿಸಿ ಸುಮಾರು  2,00,000 ರೂ.ಗಳಿಗೆ ಬೆಂಗಳೂರಿನ ರೌಡಿಗಳಿಗೆ ಮಾರುತ್ತಿದ್ದ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.‌


ಇದನ್ನೂ ಓದಿ : ಜಿ-7 ಶೃಂಗಸಭೆ: ’ಒಂದು ಭೂಮಿ, ಒಂದು ಆರೋಗ್ಯ’ ವಿಧಾನ ಅಳವಡಿಸಿಕೊಳ್ಳಲು ಪ್ರಧಾನಿ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...