Homeಅಂಕಣಗಳುಮೋಟಮ್ಮಾ ಕಾಂಗ್ರೆಸಿಗಲ್ಲಾದವಳು..

ಮೋಟಮ್ಮಾ ಕಾಂಗ್ರೆಸಿಗಲ್ಲಾದವಳು..

- Advertisement -
- Advertisement -

ತಿಪಟೂರಿನ ಹುಡುಗರು ಶಿಕ್ಷಣ ಸಚಿವರ ಮನೆಯ ಮುಂದೆ ಹೋಗಿ ಒಂದು ಹರಕಲು ಚೆಡ್ಡಿಗೆ ಬೆಂಕಿಕಡ್ಡಿ ಗೀರಿದ ತಕ್ಷಣ ಈ ರಾಜ್ಯದ ಗೃಹಮಂತ್ರಿಯಲ್ಲದೆ ಮುಖ್ಯಮಂತ್ರಿ ಸಮೇತ ಶಿಕ್ಷಣ ಸಚಿವರ ಮನೆಗೆ ಬೆಂಕಿ ಹಾಕಲು ಹೋಗಿದ್ದ ಕಿಡಿಗೇಡಿಗಳನ್ನ ಸುಮ್ಮನೆ ಬಿಡುವುದಿಲ್ಲ ಎಂದಿದ್ದಲ್ಲದೆ ಪೊಲೀಸರಿಗೆ ಹೇಳಿ ಹಾಕಬಾರದ ಕೇಸನ್ನೆಲ್ಲಾ ಹಾಕಿ ಜೈಲಿಗೆ ತಳ್ಳಿದರಂತಲ್ಲಾ. ಹೀಗೆ ಚೆಡ್ಡಿ ಸುದ್ದಿ ಮುನ್ನಲೆಗೆ ಬಂದು ಹಲವರ ಬಾಯಲ್ಲಿ ಹರಿದಾಡುತ್ತಿರುವಾಗ ಚೆಡ್ಡಿಗಳಿಗೊಂದು ಸೂಕ್ತ ಕಾರ್ಯಕ್ರಮವೇ ಹೊಳೆಯಿತಂತಲ್ಲಾ. ಅದರಂತೆ ಸಿದ್ದರಾಮಯ್ಯನವರ ಮನೆಗೆ ಚೆಡ್ಡಿ ಹೊತ್ತುಕೊಂಡು ಹೋಗಿ ಸುರಿಯುವುದು. ಇಂತಹ ಅಸಹ್ಯಕರ ಕೆಲಸಕ್ಕೆ ಯಾರು ಸೂಕ್ತ ಎಂದು ಚೆಡ್ಡಿಗಳ ಪಡೆಯಲ್ಲಿ ಚರ್ಚೆ ನಡೆಯುತ್ತಿರುವಾಗ ದೂರದಲ್ಲಿ ನಾರಾಯಣಸ್ವಾಮಿ ಸಿಟ್ಟಿನಿಂದ ಬರುತ್ತಿರುವುದು ಕಾಣಿಸಿ ಎಲ್ಲರು ನಿಟ್ಟುಸಿರುಬಿಟ್ಟರಂತೆ. ಸಿದ್ದರಾಮಯ್ಯನವರ ಮನೆ ಮುಂದೆ ಚೆಡ್ಡಿ ಸುರಿಯಲು ಈತನೇ ಸರಿಯಾದ ವ್ಯಕ್ತಿ, ಏಕೆಂದರೆ ಬಿಜೆಪಿಗೆ ಬಂದು ಬಹಳ ದಿನವಾಗಿಲ್ಲ, ಆದ್ದರಿಂದ ಹೇಳಿದ ಕೆಲಸ ಮಾಡುವುದರಲ್ಲಿ ಯಾವ ಅನುಮಾನವೂ ಇಲ್ಲ ಎಂದುಕೊಂಡರಂತಲ್ಲಾ. ಕೇಳಿದ ಕೂಡಲೇ ನಾರಾಯಣಸ್ವಾಮಿ ಚೆಡ್ಡಿ ತುಂಬಿಕೊಂಡು ಸಿದ್ದು ಮನೆಕಡೆ ಓಡಿದರಂತಲ್ಲಾ, ಧೂತ್ತೇರಿ.

******

ಚೆಡ್ಡಿಗೆ ಚೆಡ್ಡಿಗಳದ್ದೇ ಆದ ಒಂದು ಇತಿಹಾಸವಿದೆ. ಆರೆಸ್ಸೆಸ್ ಪಡೆ ನಿರ್ಮಿಸಿದ ಮಹಾನುಭಾವರು ಮಾಡಿದ ಯೂನಿಫಾರಂ ಅದು. ಆ ಯೂನಿಫಾರಂಗಾಗಿ ಪೂರ್ಣಪ್ರಮಾಣದ ಪ್ಯಾಂಟ್ ಹೊಲಿಸುವ ಶಕ್ತಿ ಯಾರಲ್ಲೂ ಇರಲಿಲ್ಲ, ಆದ್ದರಿಂದ ಬಡತನದಲ್ಲಿ ತಯಾರಾಗುತ್ತಿದ್ದ ಆ ಪಡೆಗೆ ಪ್ಯಾಂಟ್ ಬದಲು ಚೆಡ್ಡಿ ತೊಟ್ಟುಕೊಂಡು ಬರಲು ಹೇಳಲಾಯ್ತು. ಬಹುಪಯೋಗಿ ಚೆಡ್ಡಿ ಸಂಘದ ಪಥಸಂಚಲನೆಯ ಭಾಗ್ಯ ಪಡೆಯಿತು. ನಿಜಕ್ಕೂ ಚೆಡ್ಡಿ ಅಂದು ಬಡತನದ ಸಂಕೇತ. ಅದನ್ನ ತೊಟ್ಟವನ ಕಾಲುಗಳಿಗೂ ಕೈಯಲ್ಲಿದ್ದ ಲಾಟಿಗೂ ಅಂತಹ ವ್ಯತ್ಯಾಸವೇ ಕಾಣುತ್ತಿರಲಿಲ್ಲ. ಜೊತೆಗೆ ಕುಳಿತಾಗ ಮಾನ ತೆಗೆಯುವ ಆ ಚೆಡ್ಡಿಯಿಂದ ಮುಕ್ತಿ ಪಡೆದು ಪ್ಯಾಂಟ್ ಹೊಲಿಸಿಕೊಳ್ಳಬೇಕಾದರೆ ಚೆಡ್ಡಿಗಳೇ ಪವರ್ರಿಗೆ ಬರಬೇಕಾಯ್ತು. ಈಗ ಚೆಡ್ಡಿಗಳಿಂದ ಚೆಡ್ಡಿ ಮಾಯವಾಗಿ ಪ್ಯಾಂಟ್‌ಗೆ ಭಡ್ತಿ ಪಡೆಯಲಾಗಿದೆ. ಆದರೂ, ಬ್ರಾಹ್ಮಣ ಸತ್ತರೂ ಬ್ರಾಹ್ಮಣ್ಯ ಬೆನ್ನುಬಿಡದಂತೆ ಈ ನಾಡನ್ನು ಚೆಡ್ಡಿ ಸಂಗತಿಗಳು ಆವರಿಸಿರುವ ಈ ಸಮಯದಲ್ಲಿ ಚೆಡ್ಡಿ ಪಡೆ ಮನೆಮನೆಗೆ ಹೋಗಿ ಚೆಡ್ಡಿ ಭಿಕ್ಷೆ ಕೇಳುತ್ತಿವೆಯಂತಲ್ಲಾ. ಸಾಮಾನ್ಯರು ತಮಾಶೆ ಮುಖದಲ್ಲಿ ತಮ್ಮ ಮನೆಯಲ್ಲಿದ್ದ ಬರ್ಮುಡಾ ಚೆಡ್ಡಿಗಳನ್ನೆ ಭಿಕ್ಷೆಯಾಗಿ ನೀಡುತ್ತಿರುವಾಗ ನಮ್ಮ ಜೆಡಿಎಸ್ ಪಕ್ಷದ ಧೀಮಂತ ನಾಯಕರಾದ ಕುಮಾರಸ್ವಾಮಿಯವರು ಚೆಡ್ಡಿಯನ್ನು ಕೀಳಾಗಿ ಕಾಣುವಂತ ಅಗತ್ಯವಿಲ್ಲ, ನಮ್ಮ ರೈತರೂ ಕೂಡ ಚೆಡ್ಡಿಯನ್ನ ಇಕ್ಕಿಕೊಳ್ಳುತ್ತಾರೆ ಎಂದು ಚೆಡ್ಡಿಗಳ ಮಾನ ಉಳಿಸುವ ಮಾತನಾಡುತ್ತಿರಬೇಕಾದರೆ, ಮಂಡ್ಯದ ಹೈದರು ನಮ್ಮದು ಪಟಪಟ್ಟಿ ಚೆಡ್ಡಿಕಲ ಖಾಕಿ ಚೆಡ್ಡಿಯಲ್ಲ ಎಂದರಂತಲ್ಲಾ, ಥೂತ್ತೇರಿ.

******

“ಬಿದಿರು ನೀನ್ಯಾರಿಗಲ್ಲದವಳು” ಎಂಬ ಹೆಸರಿನಲ್ಲಿ ಮೋಟಮ್ಮನವರ ಆತ್ಮವೃತ್ತಾಂತ ಪ್ರಕಟವಾಗಿದೆ. ಬಿದಿರು ಅನಾದಿ ಕಾಲದಿಂದ ಮನುಕುವನ್ನು ಪೊರೆದ ಸಂಜೀವಿನಿಯಂತಹ ಸಸ್ಯ. ’ಹುಟ್ಟುತ್ತ ಹುಲ್ಲಾದೆ ಬೆಳೆಯುತ್ತ ಮರವಾದೆ’ ಎಂದು ಹೇಳುವ ಬಿದಿರು, ’ಕಂದನಿಗೆ ತೊಟ್ಟಿಲಾದೆ ಕೃಷ್ಣನಿಗೆ ಕೊಳಲಾದೆ ಹತ್ತುವವಗೆ ಏಣಿಯಾದೆ ಸತ್ತವಗೆ ಚಟ್ಟವಾದೆ’ ಎಂದು ಇಡೀ ಮನುಷ್ಯನ ಬದುಕಿಗೆ ಆಸರೆಯಾದದ್ದು ಒಂದು ಅದ್ಭುತವಾದ ತತ್ವಪದ. ಇದನ್ನು ಬರೆದ ಶಿಶುನಾಳ ಷರೀಪರು ಅಜರಾಮರ. ತಮ್ಮ ಆತ್ಮವೃತ್ತಾಂತಕ್ಕೆ ಈ ಹೆಸರಿಟ್ಟ ಮೋಟಮ್ಮ ದಿಟ್ಟ ಮಹಿಳೆ ಹಾಗೆ ಸ್ವಲ್ಪ ದಡ್ಡತನವೂ ಇದೆ. ಇಲ್ಲವಾದರೆ ಬಿಜೆಪಿಯವರಿಗೂ ಬೇಕಾಗದೆ ಮನೆಯಲ್ಲಿರುವ ಎಸ್.ಎಂ ಕೃಷ್ಣರಿಂದ ಈ ಪುಸ್ತಕ ಬಿಡುಗಡೆ ಮಾಡಿಸುತ್ತಿರಲಿಲ್ಲ. ಕೃಷ್ಣ ಕರ್ನಾಟಕ ಕಂಡ ಸಜ್ಜನ ರಾಜಕಾರಣಿ. ತನ್ನ ಕಾರಿನ ಡ್ರೈವರನ್ನು ಕೂಡ ಬಹುವಚನದಲ್ಲಿ ಮಾತಾಡಿಸುವ ಕೃಷ್ಣ ಕಾಡುಗಳ್ಳ ವೀರಪ್ಪನ್‌ನನ್ನ ವೀರಪ್ಪನ್‌ರವರೆ ಎಂದು ಸಂಬೋಧಿಸಿ ಸುದ್ದಿಯಾಗಿದ್ದರು. ಬೆಳ್ಳಿ ಚಮಚ ಬಾಯಲ್ಲಿಟ್ಟುಕೊಂಡೇ ಬಂದ ಕೃಷ್ಣ ಎಂಟತ್ತು ಜನ ಅಕ್ಕತಂಗಿಯರೊಡನೆ ಬೆಳೆದು ಅಮೆರಿಕಕ್ಕೆ ಹೋಗಿ ಓದಿ ಬಂದು ಬಿಸಿಲಲ್ಲಿ ಪ್ರತಿಭಟಿಸದೆ ಜಾಥ ಮಾಡದೆ, ಬೆವರಿಳಿಸದೆ ರಾಜಕಾರಣ ಮಾಡಿದವರು. ಕಾಂಗ್ರೆಸಿನಲ್ಲಿ ಪ್ರಧಾನಿ ಪಟ್ಟವನ್ನು ಬಿಟ್ಟು ಇನ್ನೆಲ್ಲವನ್ನೂ ಅನುಭವಿಸಿದವರು. ವಯೋಮಾನದ ಕಾರಣಕ್ಕೆ ಮನೆಗೆ ಬಂದವರು. ಹಾಗೆ ಸುಮ್ಮನಿರದೆ ಬಿಜೆಪಿಯ ವೃದ್ಧಾಶ್ರಮಕ್ಕೆ ಸೇರಿಕೊಂಡರೆಂದು ಕಾಂಗೈಗಳು ಆಡಿಕೊಳ್ಳುತ್ತಿರುವಾಗ ಹೋರಾಟದಿಂದಲೇ ಮೇಲೆ ಬಂದ ಮೋಟಮ್ಮ ಬರೆದ ಬಿದಿರು ನೀನ್ಯಾರಿಗಲ್ಲದವಳ ಬಿಡುಗಡೆಗೂ, ಕೃಷ್ಣರ ಬದುಕಿಗೂ, ಮೋಟಮ್ಮನ ಬಾಳಿಗೂ ಯಾವ ಸಂಬಂಧವೂ ಇಲ್ಲವಂತಲ್ಲಾ, ಥೂತ್ತೇರಿ.

ಎಸ್.ಎಂ ಕೃಷ್ಣ

******

ನಮ್ಮ ನಡುವಿನ ದಲಿತರೆಲ್ಲಾ ತಮ್ಮತಮ್ಮ ಬದುಕಿನ ವೃತ್ತಾಂತ ಬರೆಯಬಹುದು, ಏಕೆಂದರೆ ಅವರ ಬದುಕೆ ಹಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ತಮ್ಮತಮ್ಮ ಆತ್ಮ ವೃತ್ತಾಂತ ಬರೆದುಕೊಳ್ಳುತ್ತಿರುವ ಮೇಲುವರ್ಗದ ಜನ ಅಲ್ಲಲ್ಲಿ ತಮಗೆ ಕಿತ್ತು ತಿನ್ನುವ ಬಡತನ, ನಿರ್ಗತಿಕತನದ ನಿದರ್ಶನ ನೀಡುತ್ತಿದ್ದಾರೆ. ಹಾಗಾದರೆ ನಮ್ಮ ನಡುವಿನ ದಲಿತರು ತಮ್ಮ ಬಡತನಕ್ಕೆ ಯಾವ ಪದ ಬಳಸಬೇಕೆಂಬುದೇ ಸಮಸ್ಯೆಯಾಗಿದೆಯಂತಲ್ಲಾ. ಏಕೆಂದರೆ ಇಂತಹವನೊಬ್ಬ ದಾಖಲಿಸುವ ಬಡತನದ ಪರಿಸರದಲ್ಲಿ ಬರಿ ಅನ್ನ ಸಾರಿತ್ತೆ ವಿನಹ, ಅದಕ್ಕೆ ಹಪ್ಪಳ ಉಪ್ಪಿನ ಕಾಯಿ, ಸಂಡಿಗೆ, ತಿಳಿಸಾರು, ಮೊಸರು ಯಾವುದೂ ಇರಲಿಲ್ಲ ಎಂದು ಅಳುತ್ತಿರುವ ಸಮಯಕ್ಕೆ, ದಲಿತನೊಬ್ಬ ತೋಟದಲ್ಲಿ ಹೂತ ಎತ್ತನ್ನು ಹೊರತೆಗೆದು, ಮಾಂಸಖಂಡವನ್ನ ಎತ್ತಿಕೊಂಡು ಹೋಗಿದ್ದ ದಾಖಲೆಯೂ ಇದೆ. ಹಾಗಾದರೆ ಕಿತ್ತುತಿನ್ನುವ ಬಡತನ ಅಂದರೆ ಏನೆಂಬುದು ಸಮಸ್ಯೆಯಾಗಿದೆಯಲ್ಲಾ. ಇಂತಿರುವಾಗ ತುಂಬಾ ನಿರ್ಗತಿಕರೆ ಇರುವ ಮೂಡಿಗೆರೆಯಿಂದ ಬಂದ ಮೋಟಮ್ಮ ಮೀಸಲು ಕ್ಷೇತ್ರದಿಂದ ಸರಾಗವಾಗಿ ಗೆದ್ದು ಬಂದವರು. ಸರಾಗವಾಗಿ ಮಂತ್ರಿಯಾದವರು, ಬಂದ ಸರಕಾರದಲೆಲ್ಲಾ ಮಂತ್ರಿಯಾಗಬೇಕೆಂದು ಅಪೇಕ್ಷೆಪಟ್ಟವರು. ಆದರೆ ತಮ್ಮ ಸರದಿ ಮುಗಿಯಿತೆಂದು ಅರಿಯದವರು. ಅದಕ್ಕೆ ಈವತ್ತಿನ ಗೋಳಾಟವಿದೆಂಬುದು ಚಂದ್ರಪ್ಪ, ನಿಂಗಯ್ಯ ಕುಮಾರಸ್ವಾಮಿಯ ಅಭಿಪ್ರಾಯವಾಗಿದೆಯಲ್ಲಾ, ಥೂತ್ತೇರಿ.

*****

ಹಾಗೆ ನೋಡಿದರೆ ಮೂಡಿಗೆರೆಯಿಂದ ಬಂದವರೆಲ್ಲಾ ತುಂಬಾ ಸಜ್ಜನ ರಾಜಕಾರಣಿಗಳು. ಕೆ.ಹೆಚ್ ರಂಗನಾಥ್, ಪಿ. ತಿಪ್ಪಯ್ಯ ಮೇಷ್ಟ್ರು, ಬಿ.ಬಿ ನಿಂಗಯ್ಯ, ಮೋಟಮ್ಮ, ಕುಮಾರಸ್ವಾಮಿ ಇವರೆಲ್ಲಾ ಜಿಲ್ಲೆ ಕಂಡರಿಯದ ರಾಜಕೀಯ ಪ್ರತಿಭೆಗಳು. ಇಲ್ಲಿ ರಂಗನಾಥ್, ಬಿ.ಬಿ ನಿಂಗಯ್ಯ ಹೊರತಾಗಿ ಇನ್ನೆಲ್ಲರು ಮೇಲು ಜಾತಿ ಜನರ ಸೇವಕರಂತೆ ವರ್ತಿಸಿದ್ದಾರೆ. ಮೇಲು ಜಾತಿಯ ಪಾರ್ಟಿ ಪ್ರೆಸಿಡೆಂಟ್, ಶಾಸಕ ತಿಪ್ಪಯ್ಯರನ್ನು ಕರೆದು “ರೀ ತಿಪ್ಪಯ್ಯಾ ಒಂದು ಪ್ಯಾಕ್ ಸಿಗರೇಟು ಬೆಂಕಿಪಟ್ನ” ತಗಂಬನ್ರಿ ಎಂದು ಕಳಿಸಿದ ಉದಾಹರಣೆಯಿದೆ. ಇಂತಹ ಕೆಲಸ ಮಾಡದವರು ಸೋಲುತ್ತಾರೆ. ಹಾಗೆ ಮಾಡಿಬಿಡಬಲ್ಲ ಕುಮಾರಸ್ವಾಮಿ ಈಗಿನ ಬಿಜೆಪಿ ಶಾಸಕ. ಇಂತವರನ್ನ ಕಂಡರೆ ಬಿಜೆಪಿ ಜನರಿಗೆ ಇಷ್ಟ. ಅದು ಬಿಟ್ಟು ದಿಟ್ಟ ಸ್ವಾಭಿಮಾನದ ಮಹಿಳೆಯಾದ ಮೋಟಮ್ಮ ಮತ್ತೆ ಇಲ್ಲಿಂದ ಮೇಲೆ ಬರಲಾರರು. ಏಕೆಂದರೆ ಬೆಂಗಳೂರಲ್ಲಿ ಭವ್ಯವಾದ ಮನೆ ಕಟ್ಟಿಕೊಂಡು ಸಾಮಾಜಿಕ ಕಾಳಜಿಯಿಂದ ಅಗಾಗ್ಗೆ ಸ್ಲಂಗೆ ಭೇಟಿ ಕೊಡುವಂತೆ ಮೂಡಿಗೆರೆಗೆ ಬರುವ ಮೋಟಮ್ಮ ಇಲ್ಲಿಂದ ಚುಕ್ತಾ ಆಗಿಯಾಗಿದೆ. ಅದಕ್ಕೆ ತಮ್ಮ ಪುಸ್ತಕ ಬಿಡುಗಡೆಗೆ ಎಸ್.ಎಂ ಕೃಷ್ಣರನ್ನು ಕರೆದಿರುವುದು. ಮುಂದೆ ಅವರು ಮೂಡಿಗೆರೆ ಶಾಸಕಿಯಾಗಬೇಕಾದರೆ ಕುಮಾರಸ್ವಾಮಿ ಕೆಲಸಗಳನ್ನ ಮೀರಿಸಬೇಕು. ಅದ್ಯಾವುವೆಂದರೆ ಎಲ್ಲರ ಮನೆಗಳ ಕೋಣೆಗೆ ನುಗ್ಗಿ ಚಟ್ನಿ ಇಲ್ಲದಿದ್ದರು ರೊಟ್ಟಿ ಈಸಿಕೊಂಡು ತಿನ್ನುವುದು, ಸಾರಿಲ್ಲದಿದ್ದರೂ ಮುದ್ದೆ ನುಂಗುವುದು ಹೀಗೆ. ಇದು ಮೋಟಮ್ಮ, ನಿಂಗಪ್ಪ, ಚಂದ್ರಪ್ಪನಿಂದ ಸಾಧ್ಯವಿಲ್ಲ ಎಂದು ಬಿಜೆಪಿಗಳೇ ನಿರಾಳವಾಗಿದ್ದಾರಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಮೋಟಮ್ಮನವರ ಆತ್ಮಕಥನ ’ಬಿದಿರು ನೀನ್ಯಾರಿಗಲ್ಲದವಳು’ವಿನಿಂದ ಆಯ್ದ ಭಾಗ; ಇಂದಿರಾಜಿಗೆ ಮರುಹುಟ್ಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...