Homeಮುಖಪುಟ'ನಿಮ್ಮ ಪಾದ ತೊಳೆಯಲು ಗಂಗಾ ಮಾತೆ ಬಂದಿದ್ದಾಳೆ, ನಿಮ್ಮನ್ನು ಸೀದಾ ಸ್ವರ್ಗಕ್ಕೆ ಕೊಂಡೊಯ್ಯುತ್ತಾಳೆ': ಪ್ರವಾಹ ಸಂತ್ರಸ್ತರಿಗೆ...

‘ನಿಮ್ಮ ಪಾದ ತೊಳೆಯಲು ಗಂಗಾ ಮಾತೆ ಬಂದಿದ್ದಾಳೆ, ನಿಮ್ಮನ್ನು ಸೀದಾ ಸ್ವರ್ಗಕ್ಕೆ ಕೊಂಡೊಯ್ಯುತ್ತಾಳೆ’: ಪ್ರವಾಹ ಸಂತ್ರಸ್ತರಿಗೆ ಹೇಳಿದ ಉತ್ತರ ಪ್ರದೇಶ ಸಚಿವ

- Advertisement -
- Advertisement -

ಕಾನ್ಪುರದ ದೇಹತ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಉತ್ತರ ಪ್ರದೇಶದ ಸಚಿವರೊಬ್ಬರು, “ಗಂಗಾ ಮಾತೆ ನಿಮ್ಮ ಪಾದಗಳನ್ನು ತೊಳೆಯಲು ಬಂದಿದ್ದಾಳೆ. ಆಕೆಯ ದರ್ಶನದಿಂದ ನೀವು ಸ್ವರ್ಗಕ್ಕೆ ಹೋಗುತ್ತೀರಿ” ಎಂದು ಬೇಜವಬ್ದಾರಿ ಹೇಳಿಕೆ ನೀಡುವ ಮೂಲಕ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

“ಗಂಗಾ ಮೈಯಾ ತೋ ಅಪ್ನೇ ಪುತ್ರೋನ್ ಕೆ ಪೈರ್ ಧೋನೇ ಆತಿ ಹೈ…ಉನ್ಕೆ ದರ್ಶನ್ ಸೇ ಪುತ್ರ್ ಸೀಧೆ ಸ್ವರ್ಗ್ ಜಾತಾ ಹೈ..ಯೇ ವಿರೋಧೀ ಲೋಗ್ ಆಪ್ಕೋ ಉಲ್ಟಾ ಪಡ್ತಾ ಹೈ” (ಗಂಗಾ ಮಾತೆ ತನ್ನ ಮಕ್ಕಳ ಪಾದಗಳನ್ನು ತೊಳೆಯಲು ಬಂದಿದ್ದಾಳೆ. ಆಕೆಯ ‘ದರ್ಶನ’ದಿಂದ ಮಕ್ಕಳು ಸ್ವರ್ಗಕ್ಕೆ ಹೋಗುತ್ತಾರೆ. ವಿರೋಧ ಪಕ್ಷಗಳು ನಿಮಗೆ ತಪ್ಪು ಮಾಹಿತಿ ನೀಡುತ್ತಿವೆ) ಉತ್ತರ ಪ್ರದೇಶದ ಸಚಿವ ಸಂಜಯ್ ನಿಶಾದ್ ದೇಹತ್ ಜಿಲ್ಲೆಯ ಭೋಗ್ನಿಪುರ ಪ್ರದೇಶದ ಪ್ರವಾಹ ಸಂತ್ರಸ್ತರಿಗೆ ಹೇಳಿರುವ ವಿಡಿಯೋ ಮಂಗಳವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ತಮ್ಮ ಮನೆಗಳನ್ನು ಕಳೆದುಕೊಂಡ ಪ್ರವಾಹ ಸಂತ್ರಸ್ತರು ಎಲ್ಲಿಗೆ ಹೋಗಬೇಕೋ ಗೊತ್ತಾಗುತ್ತಿಲ್ಲ ಎಂದು ಅಳಲು ತೋಡಿಕೊಂಡಾಗ, ಸಚಿವರು ಮೇಲಿನಂತೆ ಉತ್ತರಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಇಡೀ ಪ್ರದೇಶವೇ ಮುಳುಗಿದೆ, ನಮ್ಮ ಮನೆಗಳು ಕುಸಿದಿವೆ. ಎಲ್ಲಿಗೆ ಹೋಗಬೇಕೋ ನಮಗೆ ಗೊತ್ತಾಗುತ್ತಿಲ್ಲ” ಎಂದು ಸಚಿವರಿಗೆ ತಮ್ಮ ನೋವು ಹೇಳಿಕೊಂಡ ಜನರು, ಪರಿಹಾರದ ನಿರೀಕ್ಷೆಯಲಿದ್ದರು. ಆದರೆ, ಸಚಿವರು ಬೇಜವಬ್ದಾರಿಯ ವಿಚಿತ್ರ ಪ್ರತಿಕ್ರಿಯೆ ನೀಡಿದ್ದಾರೆ ಎಂದು ವರದಿಯಾಗಿದೆ.

ಸಚಿವರ ಹೇಳಿಕೆಗೆ ಸಂತ್ರಸ್ತರು ದಿಗ್ಭ್ರಮೆ ವ್ಯಕ್ತಪಡಿಸಿದ್ದು, ತಾವು ಭೇಟಿ ನೀಡುತ್ತಿರುವ ಹಳ್ಳಿಗಳು ಯಮುನಾ ನದಿಯ ದಂಡೆಯ ಮೇಲೆ ಇವೆಯೇ ಹೊರತು, ಗಂಗಾ ನದಿ ದಂಡೆ ಮೇಲೆ ಅಲ್ಲ ಎಂಬುವುದು ಸಚಿವರಿಗೆ ಗೊತ್ತಿರಲಿಲ್ಲ ಎಂದಿದ್ದಾರೆ.

ಆಗ್ರಾ, ಚಿತ್ರಕೂಟ, ಲಖಿಂಪುರ ಖೇರಿ, ಬಲ್ಲಿಯಾ, ಬಂದಾ, ಘಾಝಿಪುರ, ಚಂದೌಲಿ, ಜಲೌನ್, ಇಟಾವಾ ಸೇರಿದಂತೆ ಉತ್ತರ ಪ್ರದೇಶದ 17 ಜಿಲ್ಲೆಗಳ 402 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. ಗಂಗಾ, ಯಮುನಾ ಸೇರಿದಂತೆ ಪ್ರಮುಖ ನದಿಗಳು ಹಲವೆಡೆ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ವರದಿಗಳು ವಿವರಿಸಿವೆ.

ಉತ್ತರಪ್ರದೇಶ: ದಾರಿ ಬಿಡುವ ವಿಚಾರಕ್ಕೆ ಗಲಾಟೆ; ದಲಿತ ಇ-ರಿಕ್ಷಾ ಚಾಲಕನ ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...