Homeಮುಖಪುಟ'ನಿಮ್ಮ ಪಾದ ತೊಳೆಯಲು ಗಂಗಾ ಮಾತೆ ಬಂದಿದ್ದಾಳೆ, ನಿಮ್ಮನ್ನು ಸೀದಾ ಸ್ವರ್ಗಕ್ಕೆ ಕೊಂಡೊಯ್ಯುತ್ತಾಳೆ': ಪ್ರವಾಹ ಸಂತ್ರಸ್ತರಿಗೆ...

‘ನಿಮ್ಮ ಪಾದ ತೊಳೆಯಲು ಗಂಗಾ ಮಾತೆ ಬಂದಿದ್ದಾಳೆ, ನಿಮ್ಮನ್ನು ಸೀದಾ ಸ್ವರ್ಗಕ್ಕೆ ಕೊಂಡೊಯ್ಯುತ್ತಾಳೆ’: ಪ್ರವಾಹ ಸಂತ್ರಸ್ತರಿಗೆ ಹೇಳಿದ ಉತ್ತರ ಪ್ರದೇಶ ಸಚಿವ

- Advertisement -
- Advertisement -

ಕಾನ್ಪುರದ ದೇಹತ್ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಉತ್ತರ ಪ್ರದೇಶದ ಸಚಿವರೊಬ್ಬರು, “ಗಂಗಾ ಮಾತೆ ನಿಮ್ಮ ಪಾದಗಳನ್ನು ತೊಳೆಯಲು ಬಂದಿದ್ದಾಳೆ. ಆಕೆಯ ದರ್ಶನದಿಂದ ನೀವು ಸ್ವರ್ಗಕ್ಕೆ ಹೋಗುತ್ತೀರಿ” ಎಂದು ಬೇಜವಬ್ದಾರಿ ಹೇಳಿಕೆ ನೀಡುವ ಮೂಲಕ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

“ಗಂಗಾ ಮೈಯಾ ತೋ ಅಪ್ನೇ ಪುತ್ರೋನ್ ಕೆ ಪೈರ್ ಧೋನೇ ಆತಿ ಹೈ…ಉನ್ಕೆ ದರ್ಶನ್ ಸೇ ಪುತ್ರ್ ಸೀಧೆ ಸ್ವರ್ಗ್ ಜಾತಾ ಹೈ..ಯೇ ವಿರೋಧೀ ಲೋಗ್ ಆಪ್ಕೋ ಉಲ್ಟಾ ಪಡ್ತಾ ಹೈ” (ಗಂಗಾ ಮಾತೆ ತನ್ನ ಮಕ್ಕಳ ಪಾದಗಳನ್ನು ತೊಳೆಯಲು ಬಂದಿದ್ದಾಳೆ. ಆಕೆಯ ‘ದರ್ಶನ’ದಿಂದ ಮಕ್ಕಳು ಸ್ವರ್ಗಕ್ಕೆ ಹೋಗುತ್ತಾರೆ. ವಿರೋಧ ಪಕ್ಷಗಳು ನಿಮಗೆ ತಪ್ಪು ಮಾಹಿತಿ ನೀಡುತ್ತಿವೆ) ಉತ್ತರ ಪ್ರದೇಶದ ಸಚಿವ ಸಂಜಯ್ ನಿಶಾದ್ ದೇಹತ್ ಜಿಲ್ಲೆಯ ಭೋಗ್ನಿಪುರ ಪ್ರದೇಶದ ಪ್ರವಾಹ ಸಂತ್ರಸ್ತರಿಗೆ ಹೇಳಿರುವ ವಿಡಿಯೋ ಮಂಗಳವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ತಮ್ಮ ಮನೆಗಳನ್ನು ಕಳೆದುಕೊಂಡ ಪ್ರವಾಹ ಸಂತ್ರಸ್ತರು ಎಲ್ಲಿಗೆ ಹೋಗಬೇಕೋ ಗೊತ್ತಾಗುತ್ತಿಲ್ಲ ಎಂದು ಅಳಲು ತೋಡಿಕೊಂಡಾಗ, ಸಚಿವರು ಮೇಲಿನಂತೆ ಉತ್ತರಿಸಿದ್ದಾರೆ ಎಂದು ವರದಿಗಳು ಹೇಳಿವೆ.

“ಇಡೀ ಪ್ರದೇಶವೇ ಮುಳುಗಿದೆ, ನಮ್ಮ ಮನೆಗಳು ಕುಸಿದಿವೆ. ಎಲ್ಲಿಗೆ ಹೋಗಬೇಕೋ ನಮಗೆ ಗೊತ್ತಾಗುತ್ತಿಲ್ಲ” ಎಂದು ಸಚಿವರಿಗೆ ತಮ್ಮ ನೋವು ಹೇಳಿಕೊಂಡ ಜನರು, ಪರಿಹಾರದ ನಿರೀಕ್ಷೆಯಲಿದ್ದರು. ಆದರೆ, ಸಚಿವರು ಬೇಜವಬ್ದಾರಿಯ ವಿಚಿತ್ರ ಪ್ರತಿಕ್ರಿಯೆ ನೀಡಿದ್ದಾರೆ ಎಂದು ವರದಿಯಾಗಿದೆ.

ಸಚಿವರ ಹೇಳಿಕೆಗೆ ಸಂತ್ರಸ್ತರು ದಿಗ್ಭ್ರಮೆ ವ್ಯಕ್ತಪಡಿಸಿದ್ದು, ತಾವು ಭೇಟಿ ನೀಡುತ್ತಿರುವ ಹಳ್ಳಿಗಳು ಯಮುನಾ ನದಿಯ ದಂಡೆಯ ಮೇಲೆ ಇವೆಯೇ ಹೊರತು, ಗಂಗಾ ನದಿ ದಂಡೆ ಮೇಲೆ ಅಲ್ಲ ಎಂಬುವುದು ಸಚಿವರಿಗೆ ಗೊತ್ತಿರಲಿಲ್ಲ ಎಂದಿದ್ದಾರೆ.

ಆಗ್ರಾ, ಚಿತ್ರಕೂಟ, ಲಖಿಂಪುರ ಖೇರಿ, ಬಲ್ಲಿಯಾ, ಬಂದಾ, ಘಾಝಿಪುರ, ಚಂದೌಲಿ, ಜಲೌನ್, ಇಟಾವಾ ಸೇರಿದಂತೆ ಉತ್ತರ ಪ್ರದೇಶದ 17 ಜಿಲ್ಲೆಗಳ 402 ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿವೆ. ಗಂಗಾ, ಯಮುನಾ ಸೇರಿದಂತೆ ಪ್ರಮುಖ ನದಿಗಳು ಹಲವೆಡೆ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ವರದಿಗಳು ವಿವರಿಸಿವೆ.

ಉತ್ತರಪ್ರದೇಶ: ದಾರಿ ಬಿಡುವ ವಿಚಾರಕ್ಕೆ ಗಲಾಟೆ; ದಲಿತ ಇ-ರಿಕ್ಷಾ ಚಾಲಕನ ಥಳಿಸಿ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...