Homeಅಂತರಾಷ್ಟ್ರೀಯವಿಶ್ವ ತಾಯ್ನುಡಿ ದಿನ: ಜಗತ್ತಿನ 40% ಜನ ತಾವು ಮಾತಾಡುವ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿಲ್ಲ!

ವಿಶ್ವ ತಾಯ್ನುಡಿ ದಿನ: ಜಗತ್ತಿನ 40% ಜನ ತಾವು ಮಾತಾಡುವ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿಲ್ಲ!

- Advertisement -
- Advertisement -

ಭಾಷಾ ಮತ್ತು ಸಾಂಸ್ಕೃತಿಕ ವೈವಿಧ್ಯತೆ ಮತ್ತು ಬಹುಭಾಷೆಯನ್ನು ಉತ್ತೇಜಿಸಲು ಫೆಬ್ರವರಿ 21 ರಂದು (ಸೋಮವಾರ) ಅಂತರರಾಷ್ಟ್ರೀಯ ಮಾತೃಭಾಷಾ ದಿನವನ್ನು (ತಾಯ್ನುಡಿ ದಿನ) ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಈ ದಿನದ ಆಚರಣೆಯನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (UNESCO) 1999 ರಲ್ಲಿ ಅನುಮೋದಿಸಿತು.

“ಮಾತೃಭಾಷೆ ಆಧಾರಿತ ಬಹುಭಾಷಾ ಶಿಕ್ಷಣವು ವೈವಿಧ್ಯತೆ ಮತ್ತು ಒಳಗೊಳ್ಳುವಿಕೆಯ ಗೌರವವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆದರೆ ವಿಶ್ವದ ಜನಸಂಖ್ಯೆಯ ಶೇಕಡಾ 40 ರಷ್ಟು ಜನ ತಾವು ಮಾತನಾಡುವ ಅಥವಾ ಅರ್ಥಮಾಡಿಕೊಳ್ಳುವ ಭಾಷೆಯಲ್ಲಿ ಶಿಕ್ಷಣವನ್ನು ಹೊಂದಿಲ್ಲ” ಎಂದು ಯುನೆಸ್ಕೊ ಕಳವಳ ವ್ಯಕ್ತಪಡಿಸಿದೆ.

ಹೀಗಾಗಿ 2022 ರ ಅಂತರರಾಷ್ಟ್ರೀಯ ಮಾತೃಭಾಷಾ ದಿನದ ಧ್ಯೇಯ ವಾಕ್ಯವಾಗಿ “ಬಹುಭಾಷಾ ಕಲಿಕೆಗೆ ತಂತ್ರಜ್ಞಾನ ಬಳಕೆ- ಸವಾಲುಗಳು ಮತ್ತು ಅವಕಾಶಗಳು” ಎಂಬ ಥೀಮ್​ ಆಯ್ಕೆ ಮಾಡಿಕೊಂಡಿದೆ.

ಇದನ್ನೂ ಓದಿ: ಕೊಡಗು: ವಿದ್ಯಾರ್ಥಿಗಳಿಗೆ ಬಜರಂಗದಳದಿಂದ ಕೇಸರಿ ಶಲ್ಯ ವಿತರಣೆ; ವಿಡಿಯೊ ವೈರಲ್

UNESCO ವೆಬ್‌ಸೈಟ್‌ನ ಪ್ರಕಾರ 2000 ನೇ ವರ್ಷದಿಂದ ಪ್ರಪಂಚದಾದ್ಯಂತ ಈ ದಿನವನ್ನು ಆಚರಿಸಲಾಗುತ್ತದೆ. ಪ್ರಪಂಚದಾದ್ಯಂತ ಭಾಷೆಗಳು ಕಣ್ಮರೆಯಾಗುತ್ತಿರುವ ಬಗ್ಗೆ ಯುನೆಸ್ಕೋ ಕಳವಳ ವ್ಯಕ್ತಪಡಿಸಿದೆ.  “ಸುಸ್ಥಿರ ಸಮಾಜಗಳ ಉಳಿವಿಗೆ ಸಾಂಸ್ಕೃತಿಕ ಮತ್ತು ಭಾಷಾ ವೈವಿಧ್ಯತೆಯ ಪ್ರಾಮುಖ್ಯತೆ ಹೆಚ್ಚಿದೆ ಎಂದು ಯುನೆಸ್ಕೊ ನಂಬುತ್ತದೆ” ಎಂದು ತಿಳಿಸಿದೆ.

ವಿಶೇಷವಾಗಿ ಆರಂಭಿಕ ಶಾಲಾ ಶಿಕ್ಷಣದಲ್ಲಿ ಮಾತೃಭಾಷೆಯ (ತಾಯ್ನುಡಿ) ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಳ್ಳುವುದಕ್ಕಾಗಿ ಯುನೆಸ್ಕೋ ಈ ದಿನವನ್ನು ಆಚರಿಸಲು ನಿರ್ಧರಿಸಿತು. ಅಂತರಾಷ್ಟ್ರೀಯ ಮಾತೃಭಾಷಾ ದಿನವು ಸಾರ್ವಜನಿಕ ಜೀವನದಲ್ಲಿ ಮಾತೃಭಾಷೆಯ ಬೆಳವಣಿಗೆಗೆ ತಾವು ನೀಡಬೇಕಾದ ಬದ್ಧತೆಯೆಡೆಗೆ ಒಂದು ಹೆಜ್ಜೆಯಾಗಿದೆ.

ಇತ್ತೀಚಿನ ಜನಗಣತಿ ಮಾಹಿತಿಯ ಪ್ರಕಾರ ಭಾರತದಲ್ಲಿ 19,500 ಕ್ಕೂ ಹೆಚ್ಚು ಭಾಷೆಗಳು ಅಥವಾ ಉಪಭಾಷೆಗಳನ್ನು ಮಾತೃಭಾಷೆಯಾಗಿ ಮಾತನಾಡುತ್ತಾರೆ. ಭಾರತದಲ್ಲಿ 10,000 ಅಥವಾ ಅದಕ್ಕಿಂತ ಹೆಚ್ಚು ಜನರು ಮಾತನಾಡುವ 121 ಭಾಷೆಗಳಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಗುಜರಾತ್‌ ಬಿಜೆಪಿಯ ವಿವಾದಾತ್ಮಕ ಪೋಸ್ಟ್‌‌ ರದ್ದು ಮಾಡಿದ ಟ್ವಿಟರ್‌ ಸಂಸ್ಥೆ

Image

 

10,000 ಅಥವಾ ಅದಕ್ಕಿಂತ ಹೆಚ್ಚು ಜನರು ಮಾತನಾಡುವ 121 ಭಾಷೆಗಳನ್ನು ಎರಡು ಭಾಗಗಳಲ್ಲಿ ವಿಭಾಗಿಸಲಾಗಿದೆ. ಭಾರತೀಯ ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ 22 ಭಾಷೆಗಳಿದ್ದು ಇದು ಒಂದು ವಿಭಾಗವಾಗಿದೆ. ಎರಡನೇ ವಿಭಾಗದಲ್ಲಿ, ಎಂಟನೇ ಶೆಡ್ಯೂಲ್‌ನಲ್ಲಿ ಸೇರಿಸದ ಭಾಷೆಗಳು 99 ಭಾಷೆಗಳಿವೆ.

ಸಂವಿಧಾನದ ಎಂಟನೇ ಶೆಡ್ಯೂಲ್‌ನಲ್ಲಿ ಉಲ್ಲೇಖಿಸಲಾಗಿರುವ ಅನುಸೂಚಿತ ಭಾಷೆಗಳು: ಅಸ್ಸಾಮಿ, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ಸಂಸ್ಕೃತ, ಸಿಂಧಿ, ತಮಿಳು, ತೆಲುಗು, ಉರ್ದು, ಬೋಡೋ, ಸಂತಾಲಿ, ಮೈಥಿಲಿ ಮತ್ತು ಡೋಗ್ರಿ.

ಇವುಗಳಲ್ಲಿ 14 ಭಾಷೆಗಳನ್ನು ಮಾತ್ರ ಸಂವಿಧಾನದಲ್ಲಿ ಮೊದಲು ಸೇರಿಸಲಾಗಿತ್ತು. 1967 ರಲ್ಲಿ ಸಿಂಧಿ ಭಾಷೆಯನ್ನು ಸೇರಿಸಲಾಯಿತು. ನಂತರ 1992 ರಲ್ಲಿ ಕೊಂಕಣಿ, ಮಣಿಪುರಿ ಮತ್ತು ನೇಪಾಳಿ ಮೂರು ಭಾಷೆಗಳನ್ನು ಸೇರಿಸಲಾಯಿತು. ಬೋಡೋ, ಡೋಗ್ರಿ, ಮೈಥಿಲಿ ಮತ್ತು ಸಂತಾಲಿ ಭಾಷೆಗಳನ್ನು 2004 ರಲ್ಲಿ ಸೇರಿಸಲಾಗಿದೆ.


ಇದನ್ನೂ ಓದಿ: ಇಂದು ವಿಶ್ವ ಸಾಮಾಜಿಕ ನ್ಯಾಯ ದಿನ; ಚರ್ಚೆಯಾಗಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...