Homeಮುಖಪುಟಮೊಮ್ಮಗನ ಸುಪರ್ದಿ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ತಾಯಿ

ಮೊಮ್ಮಗನ ಸುಪರ್ದಿ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ತಾಯಿ

- Advertisement -
- Advertisement -

ಮಾಜಿ ಸೊಸೆ ನಿಕಿತಾ ಸಿಂಘಾನಿಯಾ ಜೊತೆಯಲ್ಲಿರುವ ಮೊಮ್ಮಗನನ್ನು ತಮ್ಮ ಸುಪರ್ದಿಗೆ ಒಪ್ಪಿಸುವಂತೆ ಕೋರಿ ಡಿಸೆಂಬರ್ 9ರಂದು ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಅವರ ತಾಯಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಡಿಸೆಂಬರ್ 20ರಂದು ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಎನ್.ಕೋಟೀಶ್ವರ್ ಸಿಂಗ್ ಅವರಿದ್ದ ಪೀಠ ಕರ್ನಾಟಕ, ಉತ್ತರ ಪ್ರದೇಶ ಹಾಗೂ ಹರಿಯಾಣ ಸರ್ಕಾರಗಳ ಪ್ರತಿಕ್ರಿಯೆ ಕೇಳಿದ್ದು, ಅಪ್ರಾಪ್ತ ಮಗುವಿನ ಸ್ಥಳ ಖಚಿತಪಡಿಸಿಕೊಳ್ಳುವಂತೆ ಸೂಚಿಸಿದೆ.

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಸುಭಾಷ್‌ ಅವರಿಂದ ದೂರವಾಗಿದ್ದ ನಿಕಿತಾ ಹರಿಯಾಣದ ಗುರುಗ್ರಾಮದಲ್ಲಿ ನೆಲೆಸಿದ್ದರು. ಆಕೆಯ ತಾಯಿ ಮತ್ತು ಸಹೋದರ ಉತ್ತರ ಪ್ರದೇಶದ ನಿವಾಸಿಗಳು. ಹೀಗಾಗಿ, ಮೂರು ರಾಜ್ಯ ಸರ್ಕಾರಗಳನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಮಾಡಲಾಗಿದೆ.

ಮಗು ಇರುವ ಸ್ಥಳವನ್ನು ಮಾಜಿ ಸೊಸೆ ಬಹಿರಂಗಪಡಿಸುತ್ತಿಲ್ಲ ಎಂದು ಆರೋಪಿಸಿ ಅತುಲ್ ಅವರ ತಾಯಿ ನ್ಯಾಯಾಲಯದ ಮೊರೆ ಹೋಗಿದ್ದರು. ಹಿರಿಯ ವಕೀಲ ಗೌರವ್ ಅಗರವಾಲ್ ಹಾಗೂ ವಕೀಲ ಕುಮಾರ್ ದುಶ್ಯಂತ್ ಸಿಂಗ್ ತಾಯಿ ಪರ ವಾದ ಮಂಡಿಸಿದ್ದಾರೆ.

ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ 34 ವರ್ಷದ ಅತುಲ್ ಸುಭಾಷ್ ಡಿ.9ರಂದು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪತ್ನಿ ವಿಚ್ಚೇದಿತ ಪತ್ನಿ ನಿಕಿತಾ ಸಿಂಘಾನಿಯಾ ಮತ್ತು ಅವರ ಕುಟುಂಬ ತನಗೆ ಕಿರುಕುಳ ನೀಡಿದೆ ಎಂದು ಸಾಯುವ ಮುನ್ನ ಅತುಲ್ ಡೆತ್‌ ನೋಟ್‌ ಬರೆದಿಟ್ಟಿದ್ದರು. ಅಲ್ಲದೆ, 90 ನಿಮಿಷಗಳ ವಿಡಿಯೋ ಕೂಡ ರೆಕಾರ್ಡ್‌ ಮಾಡಿದ್ದರು.

ಉತ್ತರ ಪ್ರದೇಶದ ಜೌನ್‌ಪುರದ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ, ಜೀವನಾಂಶ ಮತ್ತು ಮಕ್ಕಳ ಪಾಲನೆಗೆ ಸಂಬಂಧಿಸಿದಂತೆ ಕಾನೂನು ಹೋರಾಟ ನಡೆಯುತ್ತಿರುವಾಗಲೇ, ವಿಚ್ಚೇದಿತ ಪತ್ನಿ ನಿಕಿತಾ ಸಿಂಘಾನಿಯಾ ಮತ್ತವರ ಕುಟುಂಬ ತನ್ನ ವಿರುದ್ಧ ಅನೇಕ ವೈವಾಹಿಕ ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುತ್ತಿದೆ ಎಂದು ಅತುಲ್ ಅವರು ಸಾಯುವ ಮುನ್ನ ಮಾಡಿದ ವಿಡಿಯೋದಲ್ಲಿ ಆರೋಪಿಸಿದ್ದರು.

ವಿಡಿಯೋ ವೈರಲ್ ಆದ ಬಳಿಕ ಅತುಲ್ ಅವರ ವಿಚ್ಚೇದಿತ ಪತ್ನಿ ನಿಕಿತಾ ಸಿಂಘಾನಿಯಾ ಮತ್ತು ಆಕೆಯ ಕುಟುಂಬಸ್ಥರನ್ನು ಬಂಧಿಸುವಂತೆ ಜನರು ಒತ್ತಾಯಿಸಿದ್ದರು. ನಂತರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು ಅತುಲ್ ಸುಭಾಷ್ ಅವರ ವಿಚ್ಛೇದಿತ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಮತ್ತು ಸಹೋದರ ಅನುರಾಗ್ ಅವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : ‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...