Homeಕರ್ನಾಟಕಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

ಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

2015ರಲ್ಲಿ ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ, ಆತನ ಕುಟುಂಬಕ್ಕೆ ನೆರವು ನೀಡುವ ಭರವಸೆ ಭರಪೂರ ಸಿಕ್ಕಿತು. ಅಂದು ಕೂಡ ಶಿವಮೊಗ್ಗ ಬಂದ್ ಆಗಿತ್ತು. ಆದರೆ 7 ವರ್ಷಗಳ ನಂತರ ತಿರುಗಿ ನೋಡಿದರೆ ವಿಶ್ವನಾಥ್ ತಾಯಿ ಮೀನಾಕ್ಷಮ್ಮ ಇಂದು ರಸ್ತೆ ಬದಿ ಚಿಂದಿ ಆಯುತ್ತಿದ್ದಾರೆ...

- Advertisement -
- Advertisement -

ಮುರಕಲು ಮನೆ, ಸುತ್ತಲು ಹಬ್ಬಿದ ಗಿಡಗಂಟಿ. ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ವಿದ್ಯುತ್‌ ಸಂಪರ್ಕವಿಲ್ಲ. ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ ಮಗ ಕೊಲೆಯಾದ. ಸೊಸೆ ಸಾವಿಗೀಡಾದಳು. ಮಗಳು ಸತ್ತಳು. 12 ವರ್ಷದ ಮೊಮ್ಮಗನ ಶಿಕ್ಷಣ ಭಾರ ಹೊತ್ತ ಮುದುಕಿ, ಜೀವನಕ್ಕಾಗಿ ಆಯ್ದುಕೊಂಡಿದ್ದು ಚಿಂದಿ ಆಯುವ ಬದುಕು.- ಇದು ಶಿವಮೊಗ್ಗದ ಮೀನಾಕ್ಷಮ್ಮನ ನೋವಿನ ಕಥನ.

ಸಂಘಪರಿವಾರದ ರಾಜಕೀಯ ಮುಖಂಡರು ಬಡವರು, ದಲಿತಾದಿ ಶೂದ್ರರ ಮಕ್ಕಳನ್ನು ಹಿಂದುತ್ವದ ಗಲಭೆಗಳಿಗೆ ತಳ್ಳಿ, ಆ ಯುವಕರು ಅನ್ಯಕೋಮಿನಿಂದ ಕೊಲೆಯಾದಾಗ, ಆ ಸಾವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಾರೆಂಬ ಆರೋಪಗಳು ಸಾಮಾನ್ಯವಾಗಿವೆ. ಮಕ್ಕಳು ಬಲಿಪಶುಗಳಾದ ಮೇಲೆ ಪೋಷಕರು ಕಣ್ಣೀರಲ್ಲಿ ಕೈತೊಳೆಯುವಂತಾಗುತ್ತದೆ. ಇಂತಹದ್ದೇ ಮನಕಲಕುವ ಮತ್ತೊಂದು ಘಟನೆಗೆ ಶಿವಮೊಗ್ಗ ಜಿಲ್ಲೆ ಸಾಕ್ಷಿಯಾಗಿದೆ.

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದನು. (ಕೊಲೆಯ ಕಾರಣ ಇನ್ನೂ ಬಹಿರಂಗವಾಗಿಲ್ಲ.) ನಿಷೇದಾಜ್ಞೆಯ ನಡುವೆ ಹರ್ಷನ ಮೃತ ಶರೀರವನ್ನು ಮೆರವಣಿಗೆ ಮಾಡಿದಾಗ ಹಲವು ಅಹಿತಕರ ಘಟನೆಗಳೂ ನಡೆದಿವೆ. ಕೆಲವು ಬಿಜೆಪಿ ನಾಯಕರು ಶವ ಮೆರವಣಿಗೆಯ ಮುಂದಾಳತ್ವ ವಹಿಸಿದ್ದರು. ಅಲ್ಲದೆ ಹರ್ಷ ಕೊಲೆಯನ್ನು ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳಾಗಿವೆ. ಹರ್ಷ ಸಾವನ್ನು ಕಾರಣವಾಗಿಟ್ಟುಕೊಂಡು ಮುಸ್ಲಿಂ ಸಮುದಾಯದ ವಿರುದ್ಧ ಕೆಲವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಹರ್ಷನ ಕುಟುಂಬಕ್ಕೆ ನೆರವು ಕೂಡ ಹರಿದು ಬರುತ್ತಿದೆ. ಆದರೆ 2015ರಲ್ಲಿ ಕೊಲೆಯಾದ ಹಿಂದುತ್ವ ಕಾರ್ಯಕರ್ತ ವಿಶ್ವನಾಥ ಶೆಟ್ಟಿಯ ಕುಟುಂಬ ಏನಾಯಿತೆಂದು ಯೋಚಿಸಿದ್ದಾರಾ? ವಿಶ್ವನಾಥ್ ಅವರ ತಾಯಿ ಮೀನಾಕ್ಷಮ್ಮ ಅನಾಥರಾಗಿ, ಚಿಂದಿ ಆಯುತ್ತ ಬದುಕುವಂತಾಯಿಲ್ಲತ್ತಲ್ಲ, ಇದಕ್ಕೆ ಹೊಣೆ ಯಾರು?

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: BJP ಮತ್ತು ಅದರ ನಾಯಕರನ್ನು ಟೀಕಿಸುತ್ತಿರುವ ಈ ವ್ಯಕ್ತಿ ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ‘ಹರ್ಷ’ ಅಲ್ಲ

ತಮ್ಮ ಮುರುಕಲು ಮನೆಯ ಮುಂದೆ ಮೀನಾಕ್ಷಮ್ಮ

ಶಿವಮೊಗ್ಗ ನಗರದಲ್ಲಿ 2015ರಲ್ಲಿ ನಡೆದ ಪಿಎಫ್‌ಐ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಕೆಲವರು ಗಾಜನೂರು ಬಳಿ ಆಲ್ಕೊಳದ ವಿಶ್ವನಾಥ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ ಹಿಂದುತ್ವ ಸಂಘಟನೆಗಳು ಶಿವಮೊಗ್ಗ ನಗರವನ್ನು ಬಂದ್ ಮಾಡಿದ್ದವು. ಭಾರೀ ಪ್ರತಿಭಟನೆ ನಡೆಸಿದ್ದವು. ವಿಶ್ವನಾಥ್‌ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು.

“ನಿಮಗೆ ನಾವು ಮಕ್ಕಳಾಗಿ ಇರುತ್ತೇವೆ. ನಿಮ್ಮನ್ನು ಕಡೆಯವರೆಗೂ ನೋಡಿಕೊಳ್ಳುತ್ತೇವೆ” ಎಂದು ವೀರಾವೇಶದಿಂದ ಮಾತನಾಡಿದ ಯಾವ ಮುಖಂಡನೂ ಮೀನಾಕ್ಷಮ್ಮನ ಸಹಾಯಕಕ್ಕೆ ಬಂದಿಲ್ಲ. ಮೀನಾಕ್ಷಮ್ಮನವರು ನ್ಯಾಯಬೆಲೆ ಅಂಗಡಿಯಲ್ಲಿ ಕೊಡುವ ಅಕ್ಕಿ ಪಡೆದು ಜೀವನ ಸಾಗಿಸುತ್ತಿದ್ದಾರೆ. ಅಲ್ಲಿ ಇಲ್ಲಿ ಪುಳ್ಳೆ ಆಯ್ದು ತಂದು ಅಡುಗೆ ಮಾಡಿಕೊಳ್ಳುತ್ತಿದ್ದಾರೆ.

ವಿಶ್ವನಾಥ್‌ ಅವರ ಹೆಂಡತಿ ಕಾಯಿಲೆ ಬಿದ್ದರು. ಸರ್ಕಾರ ನೀಡಿದ್ದ ಐದು ಲಕ್ಷ ರೂ. ಪರಿಹಾರ ಹಣ ವಿಶ್ವನಾಥ್‌ ಅವರ ಪತ್ನಿಯ ಆಸ್ಪತ್ರೆಯ ಖರ್ಚಿಗಾಯಿತು. ಜಾಂಡೀಸ್ ಆಗಿ ಅವರು ತೀರಿಕೊಂಡ ಬಳಿಕ ಪುಟಾಣಿ ಆದಿತ್ಯನ ಭಾರ ಮೀನಾಕ್ಷಮ್ಮನ ಅವರ ಹೆಗಲ ಮೇಲೆ ಬಿತ್ತು. ಮಗಳು ಕೂಡ ತೀರಿಕೊಂಡ ಬಳಿಕ ಮೀನಾಕ್ಷಮ್ಮ ಅನಾಥೆಯಾದರು. ಮಗುವನ್ನು ಓದಿಸುವ ಭಾರಹೊತ್ತಿಕೊಂಡ ಅಜ್ಜಿ, ಚಿಂದಿ ಆಯುತ್ತ ಬದುಕು ಸವೆಸುತ್ತಿದ್ದಾರೆ.

ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ, ಮೃತನ ಪೋನ್ ನಾಪತ್ತೆ

“ಸರಕಾರದಿಂದ ಕೊಡುವ ಸಂಧ್ಯಾ ಸುರಕ್ಷಾ ಪಿಂಚಣಿ ಸಿಗುತ್ತಿಲ್ಲ. ಜೀವ ಇರುವವರೆಗೆ ಹೊಟ್ಟೆ ತುಂಬಿಸಿಕೊಳ್ಳಬೇಕಲ್ವಾ? ನ್ಯಾಯಬೆಲೆ ಅಂಗಡಿಯಿಂದ ತಿಂಗಳಿಗೆ 10 ಕೆ.ಜಿ. ಅಕ್ಕಿ ಕೊಡುತ್ತಾರೆ. ಪ್ರತಿದಿನ ಬೆಳಿಗ್ಗೆ ರಸ್ತೆ, ತಿಪ್ಪೆಗಳಲ್ಲಿ ಪ್ಲಾಸ್ಟಿಕ್‌ ಆಯುವುದರಿಂದ 10ರಿಂದ 20 ರೂಪಾಯಿ ಬರುತ್ತದೆ. ಅದರಲ್ಲಿ ತರಕಾರಿ, ದಿನಸಿ, ಮಾತ್ರೆ ಎಲ್ಲವನ್ನೂ ಸರಿದೂಗಿಸಬೇಕು ಎನ್ನುವಾಗ ಆ ತಾಯಿ ಕಣ್ಣೀರು ಸುರಿಸಿದರು” ಎಂದು ‘ವಿಜಯಕರ್ನಾಟಕ’ ವರದಿ ಮಾಡಿದೆ.

“ಮಗನಿಲ್ಲ, ಮಗಳಿಲ್ಲ, ಸೊಸೆ ಇಲ್ಲ. ಮಗ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಎರಡು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದರೂ ಪಿಂಚಣಿ ಸಿಕ್ಕಿಲ್ಲ. ಕರೆಂಟ್ ಬಿಲ್ ಕಟ್ಟಿಲ್ಲವೆಂದು ಮೂರು ವರ್ಷದ ಹಿಂದೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರಿಂದ ಮನೆಯಲ್ಲಿ ಬೆಳಕಿಲ್ಲ. ನೀರಿನ ಬಿಲ್‌ ಕಟ್ಟಿಲ್ಲವೆಂದು ನೀರಿನ ಸಂಪರ್ಕವಿಲ್ಲ”- ಹೀಗೆ ‘ಇಲ್ಲ’ಗಳ ಪಟ್ಟಿಯ ನಡುವೆ ಇಳಿಜೀವದ ಮೀನಾಕ್ಷಮ್ಮನ ಬದುಕು ಹಿಂಡಿ ಹಿಪ್ಪೆಯಾಗಿದೆ.

“ಹರ್ಷ ಕುಟುಂಬಕ್ಕೆ ಹಲವರು ನೆರವು ನೀಡಿದ್ದಾರೆ. ಒಂದು ಕೋಟಿ ರೂ. ಕುಟುಂಬಕ್ಕೆ ಹರಿದುಬಂದಿದೆ. ಆದರೆ ವಿಶ್ವನಾಥ್ ಅವರ ತಾಯಿ ಮಾತ್ರ ಪುಟ್ಟ ಮನೆಯಲ್ಲಿ ಕತ್ತಲೆಯಲ್ಲೇ ಬದುಕು ಸಾಗಿಸುತ್ತಿದ್ದಾರೆ” ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಶಿವಮೊಗ್ಗ ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್ ಅವರು ಮೀನಾಕ್ಷಮ್ಮನವರನ್ನು ಭೇಟಿಯಾಗಿ ನೆರವು ನೀಡಿದರು.

ವಿಶ್ವನಾಥ್‌ ತಾಯಿಯವರನ್ನು ಭೇಟಿಯಾಗಿ ನೆರವು ನೀಡಿರುವ ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್‌ ಅವರು ‘ನಾನುಗೌರಿ.ಕಾಂ’ನೊಂದಿಗೆ ಮಾತನಾಡಿ, “ಮೀನಾಕ್ಷಮ್ಮನವರ ಸ್ಥಿತಿ ನೋಡಿದರೆ ಬಹಳ ನೋವಾಗುತ್ತದೆ. ಕುಡಿಯಲು ನೀರಿನ ಸಂಪರ್ಕವಿರಲಿಲ್ಲ. ಮನೆಯಂತೂ ಬಹಳ ದುಸ್ಥಿತಿಯಲ್ಲಿದೆ. ಕರೆಂಟ್‌ ಬಿಲ್ ಕಟ್ಟಿಲ್ಲವೆಂದು ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ತುರ್ತಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಡಲು ಕ್ರಮ ವಹಿಸಿದೆ. ನೀರಿನ ವ್ಯವಸ್ಥೆ ಮಾಡಿಕೊಡಲಾಗಿದೆ. ಮನೆಗೆ ಸುಣ್ಣ ಬಣ್ಣ ಬಳಿಸಲಾಗುವುದು. ವಿಷಯ ತಿಳಿದ ಅನೇಕ ಸಂಘಟನೆಗಳು ಮೀನಾಕ್ಷಮ್ಮನವರಿಗೆ ನೆರವು ನೀಡಲು ಮುಂದಾಗಿವೆ. 12 ವರ್ಷದ ಮೊಮ್ಮಗನನ್ನು ಸಾಕಲು ಆ ತಾಯಿ ಬಹಳ ಕಷ್ಟಪಡುತ್ತಿದ್ದಾರೆ. ಈ ಕಷ್ಟ ಯಾರಿಗೂ ಬರಬಾರದು” ಎಂದರು.

ಮೀನಾಕ್ಷಮ್ಮನವರಿಗೆ ನೆರವು ನೀಡಲು ಬಯಸುವವರು ಈ ಖಾತೆಗೆ ಹಣ ಕಳುಹಿಸಬಹುದು.

ಮೀನಾಕ್ಷಮ್ಮನವರ ಬ್ಯಾಂಕ್‌ ಅಕೌಂಟ್‌ ವಿವರ. ಧನಸಹಾಯ ಮಾಡುವವರು ಈ ಖಾತೆಗೆ ಹಣ ಜಮೆ ಮಾಡಬಹುದು.

ಇದನ್ನೂ ಓದಿರಿ: ‘ಬಾಳಿಗ ಕೊಲೆಯ ಬಗ್ಗೆ ಬಾಯಿಬಿಡದವರು, ದಲಿತ ವ್ಯಕ್ತಿ ಕೊಲೆಯಾದದ್ದು ಖಂಡಿಸುತ್ತಾರಾ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...