Homeಕರ್ನಾಟಕಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

ಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

2015ರಲ್ಲಿ ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ, ಆತನ ಕುಟುಂಬಕ್ಕೆ ನೆರವು ನೀಡುವ ಭರವಸೆ ಭರಪೂರ ಸಿಕ್ಕಿತು. ಅಂದು ಕೂಡ ಶಿವಮೊಗ್ಗ ಬಂದ್ ಆಗಿತ್ತು. ಆದರೆ 7 ವರ್ಷಗಳ ನಂತರ ತಿರುಗಿ ನೋಡಿದರೆ ವಿಶ್ವನಾಥ್ ತಾಯಿ ಮೀನಾಕ್ಷಮ್ಮ ಇಂದು ರಸ್ತೆ ಬದಿ ಚಿಂದಿ ಆಯುತ್ತಿದ್ದಾರೆ...

- Advertisement -
- Advertisement -

ಮುರಕಲು ಮನೆ, ಸುತ್ತಲು ಹಬ್ಬಿದ ಗಿಡಗಂಟಿ. ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ವಿದ್ಯುತ್‌ ಸಂಪರ್ಕವಿಲ್ಲ. ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ ಮಗ ಕೊಲೆಯಾದ. ಸೊಸೆ ಸಾವಿಗೀಡಾದಳು. ಮಗಳು ಸತ್ತಳು. 12 ವರ್ಷದ ಮೊಮ್ಮಗನ ಶಿಕ್ಷಣ ಭಾರ ಹೊತ್ತ ಮುದುಕಿ, ಜೀವನಕ್ಕಾಗಿ ಆಯ್ದುಕೊಂಡಿದ್ದು ಚಿಂದಿ ಆಯುವ ಬದುಕು.- ಇದು ಶಿವಮೊಗ್ಗದ ಮೀನಾಕ್ಷಮ್ಮನ ನೋವಿನ ಕಥನ.

ಸಂಘಪರಿವಾರದ ರಾಜಕೀಯ ಮುಖಂಡರು ಬಡವರು, ದಲಿತಾದಿ ಶೂದ್ರರ ಮಕ್ಕಳನ್ನು ಹಿಂದುತ್ವದ ಗಲಭೆಗಳಿಗೆ ತಳ್ಳಿ, ಆ ಯುವಕರು ಅನ್ಯಕೋಮಿನಿಂದ ಕೊಲೆಯಾದಾಗ, ಆ ಸಾವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಾರೆಂಬ ಆರೋಪಗಳು ಸಾಮಾನ್ಯವಾಗಿವೆ. ಮಕ್ಕಳು ಬಲಿಪಶುಗಳಾದ ಮೇಲೆ ಪೋಷಕರು ಕಣ್ಣೀರಲ್ಲಿ ಕೈತೊಳೆಯುವಂತಾಗುತ್ತದೆ. ಇಂತಹದ್ದೇ ಮನಕಲಕುವ ಮತ್ತೊಂದು ಘಟನೆಗೆ ಶಿವಮೊಗ್ಗ ಜಿಲ್ಲೆ ಸಾಕ್ಷಿಯಾಗಿದೆ.

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದನು. (ಕೊಲೆಯ ಕಾರಣ ಇನ್ನೂ ಬಹಿರಂಗವಾಗಿಲ್ಲ.) ನಿಷೇದಾಜ್ಞೆಯ ನಡುವೆ ಹರ್ಷನ ಮೃತ ಶರೀರವನ್ನು ಮೆರವಣಿಗೆ ಮಾಡಿದಾಗ ಹಲವು ಅಹಿತಕರ ಘಟನೆಗಳೂ ನಡೆದಿವೆ. ಕೆಲವು ಬಿಜೆಪಿ ನಾಯಕರು ಶವ ಮೆರವಣಿಗೆಯ ಮುಂದಾಳತ್ವ ವಹಿಸಿದ್ದರು. ಅಲ್ಲದೆ ಹರ್ಷ ಕೊಲೆಯನ್ನು ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳಾಗಿವೆ. ಹರ್ಷ ಸಾವನ್ನು ಕಾರಣವಾಗಿಟ್ಟುಕೊಂಡು ಮುಸ್ಲಿಂ ಸಮುದಾಯದ ವಿರುದ್ಧ ಕೆಲವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಹರ್ಷನ ಕುಟುಂಬಕ್ಕೆ ನೆರವು ಕೂಡ ಹರಿದು ಬರುತ್ತಿದೆ. ಆದರೆ 2015ರಲ್ಲಿ ಕೊಲೆಯಾದ ಹಿಂದುತ್ವ ಕಾರ್ಯಕರ್ತ ವಿಶ್ವನಾಥ ಶೆಟ್ಟಿಯ ಕುಟುಂಬ ಏನಾಯಿತೆಂದು ಯೋಚಿಸಿದ್ದಾರಾ? ವಿಶ್ವನಾಥ್ ಅವರ ತಾಯಿ ಮೀನಾಕ್ಷಮ್ಮ ಅನಾಥರಾಗಿ, ಚಿಂದಿ ಆಯುತ್ತ ಬದುಕುವಂತಾಯಿಲ್ಲತ್ತಲ್ಲ, ಇದಕ್ಕೆ ಹೊಣೆ ಯಾರು?

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: BJP ಮತ್ತು ಅದರ ನಾಯಕರನ್ನು ಟೀಕಿಸುತ್ತಿರುವ ಈ ವ್ಯಕ್ತಿ ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ‘ಹರ್ಷ’ ಅಲ್ಲ

ತಮ್ಮ ಮುರುಕಲು ಮನೆಯ ಮುಂದೆ ಮೀನಾಕ್ಷಮ್ಮ

ಶಿವಮೊಗ್ಗ ನಗರದಲ್ಲಿ 2015ರಲ್ಲಿ ನಡೆದ ಪಿಎಫ್‌ಐ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಕೆಲವರು ಗಾಜನೂರು ಬಳಿ ಆಲ್ಕೊಳದ ವಿಶ್ವನಾಥ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ ಹಿಂದುತ್ವ ಸಂಘಟನೆಗಳು ಶಿವಮೊಗ್ಗ ನಗರವನ್ನು ಬಂದ್ ಮಾಡಿದ್ದವು. ಭಾರೀ ಪ್ರತಿಭಟನೆ ನಡೆಸಿದ್ದವು. ವಿಶ್ವನಾಥ್‌ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು.

“ನಿಮಗೆ ನಾವು ಮಕ್ಕಳಾಗಿ ಇರುತ್ತೇವೆ. ನಿಮ್ಮನ್ನು ಕಡೆಯವರೆಗೂ ನೋಡಿಕೊಳ್ಳುತ್ತೇವೆ” ಎಂದು ವೀರಾವೇಶದಿಂದ ಮಾತನಾಡಿದ ಯಾವ ಮುಖಂಡನೂ ಮೀನಾಕ್ಷಮ್ಮನ ಸಹಾಯಕಕ್ಕೆ ಬಂದಿಲ್ಲ. ಮೀನಾಕ್ಷಮ್ಮನವರು ನ್ಯಾಯಬೆಲೆ ಅಂಗಡಿಯಲ್ಲಿ ಕೊಡುವ ಅಕ್ಕಿ ಪಡೆದು ಜೀವನ ಸಾಗಿಸುತ್ತಿದ್ದಾರೆ. ಅಲ್ಲಿ ಇಲ್ಲಿ ಪುಳ್ಳೆ ಆಯ್ದು ತಂದು ಅಡುಗೆ ಮಾಡಿಕೊಳ್ಳುತ್ತಿದ್ದಾರೆ.

ವಿಶ್ವನಾಥ್‌ ಅವರ ಹೆಂಡತಿ ಕಾಯಿಲೆ ಬಿದ್ದರು. ಸರ್ಕಾರ ನೀಡಿದ್ದ ಐದು ಲಕ್ಷ ರೂ. ಪರಿಹಾರ ಹಣ ವಿಶ್ವನಾಥ್‌ ಅವರ ಪತ್ನಿಯ ಆಸ್ಪತ್ರೆಯ ಖರ್ಚಿಗಾಯಿತು. ಜಾಂಡೀಸ್ ಆಗಿ ಅವರು ತೀರಿಕೊಂಡ ಬಳಿಕ ಪುಟಾಣಿ ಆದಿತ್ಯನ ಭಾರ ಮೀನಾಕ್ಷಮ್ಮನ ಅವರ ಹೆಗಲ ಮೇಲೆ ಬಿತ್ತು. ಮಗಳು ಕೂಡ ತೀರಿಕೊಂಡ ಬಳಿಕ ಮೀನಾಕ್ಷಮ್ಮ ಅನಾಥೆಯಾದರು. ಮಗುವನ್ನು ಓದಿಸುವ ಭಾರಹೊತ್ತಿಕೊಂಡ ಅಜ್ಜಿ, ಚಿಂದಿ ಆಯುತ್ತ ಬದುಕು ಸವೆಸುತ್ತಿದ್ದಾರೆ.

ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ, ಮೃತನ ಪೋನ್ ನಾಪತ್ತೆ

“ಸರಕಾರದಿಂದ ಕೊಡುವ ಸಂಧ್ಯಾ ಸುರಕ್ಷಾ ಪಿಂಚಣಿ ಸಿಗುತ್ತಿಲ್ಲ. ಜೀವ ಇರುವವರೆಗೆ ಹೊಟ್ಟೆ ತುಂಬಿಸಿಕೊಳ್ಳಬೇಕಲ್ವಾ? ನ್ಯಾಯಬೆಲೆ ಅಂಗಡಿಯಿಂದ ತಿಂಗಳಿಗೆ 10 ಕೆ.ಜಿ. ಅಕ್ಕಿ ಕೊಡುತ್ತಾರೆ. ಪ್ರತಿದಿನ ಬೆಳಿಗ್ಗೆ ರಸ್ತೆ, ತಿಪ್ಪೆಗಳಲ್ಲಿ ಪ್ಲಾಸ್ಟಿಕ್‌ ಆಯುವುದರಿಂದ 10ರಿಂದ 20 ರೂಪಾಯಿ ಬರುತ್ತದೆ. ಅದರಲ್ಲಿ ತರಕಾರಿ, ದಿನಸಿ, ಮಾತ್ರೆ ಎಲ್ಲವನ್ನೂ ಸರಿದೂಗಿಸಬೇಕು ಎನ್ನುವಾಗ ಆ ತಾಯಿ ಕಣ್ಣೀರು ಸುರಿಸಿದರು” ಎಂದು ‘ವಿಜಯಕರ್ನಾಟಕ’ ವರದಿ ಮಾಡಿದೆ.

“ಮಗನಿಲ್ಲ, ಮಗಳಿಲ್ಲ, ಸೊಸೆ ಇಲ್ಲ. ಮಗ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಎರಡು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದರೂ ಪಿಂಚಣಿ ಸಿಕ್ಕಿಲ್ಲ. ಕರೆಂಟ್ ಬಿಲ್ ಕಟ್ಟಿಲ್ಲವೆಂದು ಮೂರು ವರ್ಷದ ಹಿಂದೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರಿಂದ ಮನೆಯಲ್ಲಿ ಬೆಳಕಿಲ್ಲ. ನೀರಿನ ಬಿಲ್‌ ಕಟ್ಟಿಲ್ಲವೆಂದು ನೀರಿನ ಸಂಪರ್ಕವಿಲ್ಲ”- ಹೀಗೆ ‘ಇಲ್ಲ’ಗಳ ಪಟ್ಟಿಯ ನಡುವೆ ಇಳಿಜೀವದ ಮೀನಾಕ್ಷಮ್ಮನ ಬದುಕು ಹಿಂಡಿ ಹಿಪ್ಪೆಯಾಗಿದೆ.

“ಹರ್ಷ ಕುಟುಂಬಕ್ಕೆ ಹಲವರು ನೆರವು ನೀಡಿದ್ದಾರೆ. ಒಂದು ಕೋಟಿ ರೂ. ಕುಟುಂಬಕ್ಕೆ ಹರಿದುಬಂದಿದೆ. ಆದರೆ ವಿಶ್ವನಾಥ್ ಅವರ ತಾಯಿ ಮಾತ್ರ ಪುಟ್ಟ ಮನೆಯಲ್ಲಿ ಕತ್ತಲೆಯಲ್ಲೇ ಬದುಕು ಸಾಗಿಸುತ್ತಿದ್ದಾರೆ” ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಶಿವಮೊಗ್ಗ ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್ ಅವರು ಮೀನಾಕ್ಷಮ್ಮನವರನ್ನು ಭೇಟಿಯಾಗಿ ನೆರವು ನೀಡಿದರು.

ವಿಶ್ವನಾಥ್‌ ತಾಯಿಯವರನ್ನು ಭೇಟಿಯಾಗಿ ನೆರವು ನೀಡಿರುವ ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್‌ ಅವರು ‘ನಾನುಗೌರಿ.ಕಾಂ’ನೊಂದಿಗೆ ಮಾತನಾಡಿ, “ಮೀನಾಕ್ಷಮ್ಮನವರ ಸ್ಥಿತಿ ನೋಡಿದರೆ ಬಹಳ ನೋವಾಗುತ್ತದೆ. ಕುಡಿಯಲು ನೀರಿನ ಸಂಪರ್ಕವಿರಲಿಲ್ಲ. ಮನೆಯಂತೂ ಬಹಳ ದುಸ್ಥಿತಿಯಲ್ಲಿದೆ. ಕರೆಂಟ್‌ ಬಿಲ್ ಕಟ್ಟಿಲ್ಲವೆಂದು ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ತುರ್ತಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಡಲು ಕ್ರಮ ವಹಿಸಿದೆ. ನೀರಿನ ವ್ಯವಸ್ಥೆ ಮಾಡಿಕೊಡಲಾಗಿದೆ. ಮನೆಗೆ ಸುಣ್ಣ ಬಣ್ಣ ಬಳಿಸಲಾಗುವುದು. ವಿಷಯ ತಿಳಿದ ಅನೇಕ ಸಂಘಟನೆಗಳು ಮೀನಾಕ್ಷಮ್ಮನವರಿಗೆ ನೆರವು ನೀಡಲು ಮುಂದಾಗಿವೆ. 12 ವರ್ಷದ ಮೊಮ್ಮಗನನ್ನು ಸಾಕಲು ಆ ತಾಯಿ ಬಹಳ ಕಷ್ಟಪಡುತ್ತಿದ್ದಾರೆ. ಈ ಕಷ್ಟ ಯಾರಿಗೂ ಬರಬಾರದು” ಎಂದರು.

ಮೀನಾಕ್ಷಮ್ಮನವರಿಗೆ ನೆರವು ನೀಡಲು ಬಯಸುವವರು ಈ ಖಾತೆಗೆ ಹಣ ಕಳುಹಿಸಬಹುದು.

ಮೀನಾಕ್ಷಮ್ಮನವರ ಬ್ಯಾಂಕ್‌ ಅಕೌಂಟ್‌ ವಿವರ. ಧನಸಹಾಯ ಮಾಡುವವರು ಈ ಖಾತೆಗೆ ಹಣ ಜಮೆ ಮಾಡಬಹುದು.

ಇದನ್ನೂ ಓದಿರಿ: ‘ಬಾಳಿಗ ಕೊಲೆಯ ಬಗ್ಗೆ ಬಾಯಿಬಿಡದವರು, ದಲಿತ ವ್ಯಕ್ತಿ ಕೊಲೆಯಾದದ್ದು ಖಂಡಿಸುತ್ತಾರಾ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...