Homeಕರ್ನಾಟಕಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

ಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

2015ರಲ್ಲಿ ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ, ಆತನ ಕುಟುಂಬಕ್ಕೆ ನೆರವು ನೀಡುವ ಭರವಸೆ ಭರಪೂರ ಸಿಕ್ಕಿತು. ಅಂದು ಕೂಡ ಶಿವಮೊಗ್ಗ ಬಂದ್ ಆಗಿತ್ತು. ಆದರೆ 7 ವರ್ಷಗಳ ನಂತರ ತಿರುಗಿ ನೋಡಿದರೆ ವಿಶ್ವನಾಥ್ ತಾಯಿ ಮೀನಾಕ್ಷಮ್ಮ ಇಂದು ರಸ್ತೆ ಬದಿ ಚಿಂದಿ ಆಯುತ್ತಿದ್ದಾರೆ...

- Advertisement -
- Advertisement -

ಮುರಕಲು ಮನೆ, ಸುತ್ತಲು ಹಬ್ಬಿದ ಗಿಡಗಂಟಿ. ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ವಿದ್ಯುತ್‌ ಸಂಪರ್ಕವಿಲ್ಲ. ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ ಮಗ ಕೊಲೆಯಾದ. ಸೊಸೆ ಸಾವಿಗೀಡಾದಳು. ಮಗಳು ಸತ್ತಳು. 12 ವರ್ಷದ ಮೊಮ್ಮಗನ ಶಿಕ್ಷಣ ಭಾರ ಹೊತ್ತ ಮುದುಕಿ, ಜೀವನಕ್ಕಾಗಿ ಆಯ್ದುಕೊಂಡಿದ್ದು ಚಿಂದಿ ಆಯುವ ಬದುಕು.- ಇದು ಶಿವಮೊಗ್ಗದ ಮೀನಾಕ್ಷಮ್ಮನ ನೋವಿನ ಕಥನ.

ಸಂಘಪರಿವಾರದ ರಾಜಕೀಯ ಮುಖಂಡರು ಬಡವರು, ದಲಿತಾದಿ ಶೂದ್ರರ ಮಕ್ಕಳನ್ನು ಹಿಂದುತ್ವದ ಗಲಭೆಗಳಿಗೆ ತಳ್ಳಿ, ಆ ಯುವಕರು ಅನ್ಯಕೋಮಿನಿಂದ ಕೊಲೆಯಾದಾಗ, ಆ ಸಾವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಾರೆಂಬ ಆರೋಪಗಳು ಸಾಮಾನ್ಯವಾಗಿವೆ. ಮಕ್ಕಳು ಬಲಿಪಶುಗಳಾದ ಮೇಲೆ ಪೋಷಕರು ಕಣ್ಣೀರಲ್ಲಿ ಕೈತೊಳೆಯುವಂತಾಗುತ್ತದೆ. ಇಂತಹದ್ದೇ ಮನಕಲಕುವ ಮತ್ತೊಂದು ಘಟನೆಗೆ ಶಿವಮೊಗ್ಗ ಜಿಲ್ಲೆ ಸಾಕ್ಷಿಯಾಗಿದೆ.

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದನು. (ಕೊಲೆಯ ಕಾರಣ ಇನ್ನೂ ಬಹಿರಂಗವಾಗಿಲ್ಲ.) ನಿಷೇದಾಜ್ಞೆಯ ನಡುವೆ ಹರ್ಷನ ಮೃತ ಶರೀರವನ್ನು ಮೆರವಣಿಗೆ ಮಾಡಿದಾಗ ಹಲವು ಅಹಿತಕರ ಘಟನೆಗಳೂ ನಡೆದಿವೆ. ಕೆಲವು ಬಿಜೆಪಿ ನಾಯಕರು ಶವ ಮೆರವಣಿಗೆಯ ಮುಂದಾಳತ್ವ ವಹಿಸಿದ್ದರು. ಅಲ್ಲದೆ ಹರ್ಷ ಕೊಲೆಯನ್ನು ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳಾಗಿವೆ. ಹರ್ಷ ಸಾವನ್ನು ಕಾರಣವಾಗಿಟ್ಟುಕೊಂಡು ಮುಸ್ಲಿಂ ಸಮುದಾಯದ ವಿರುದ್ಧ ಕೆಲವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಹರ್ಷನ ಕುಟುಂಬಕ್ಕೆ ನೆರವು ಕೂಡ ಹರಿದು ಬರುತ್ತಿದೆ. ಆದರೆ 2015ರಲ್ಲಿ ಕೊಲೆಯಾದ ಹಿಂದುತ್ವ ಕಾರ್ಯಕರ್ತ ವಿಶ್ವನಾಥ ಶೆಟ್ಟಿಯ ಕುಟುಂಬ ಏನಾಯಿತೆಂದು ಯೋಚಿಸಿದ್ದಾರಾ? ವಿಶ್ವನಾಥ್ ಅವರ ತಾಯಿ ಮೀನಾಕ್ಷಮ್ಮ ಅನಾಥರಾಗಿ, ಚಿಂದಿ ಆಯುತ್ತ ಬದುಕುವಂತಾಯಿಲ್ಲತ್ತಲ್ಲ, ಇದಕ್ಕೆ ಹೊಣೆ ಯಾರು?

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: BJP ಮತ್ತು ಅದರ ನಾಯಕರನ್ನು ಟೀಕಿಸುತ್ತಿರುವ ಈ ವ್ಯಕ್ತಿ ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ‘ಹರ್ಷ’ ಅಲ್ಲ

ತಮ್ಮ ಮುರುಕಲು ಮನೆಯ ಮುಂದೆ ಮೀನಾಕ್ಷಮ್ಮ

ಶಿವಮೊಗ್ಗ ನಗರದಲ್ಲಿ 2015ರಲ್ಲಿ ನಡೆದ ಪಿಎಫ್‌ಐ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಕೆಲವರು ಗಾಜನೂರು ಬಳಿ ಆಲ್ಕೊಳದ ವಿಶ್ವನಾಥ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ ಹಿಂದುತ್ವ ಸಂಘಟನೆಗಳು ಶಿವಮೊಗ್ಗ ನಗರವನ್ನು ಬಂದ್ ಮಾಡಿದ್ದವು. ಭಾರೀ ಪ್ರತಿಭಟನೆ ನಡೆಸಿದ್ದವು. ವಿಶ್ವನಾಥ್‌ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು.

“ನಿಮಗೆ ನಾವು ಮಕ್ಕಳಾಗಿ ಇರುತ್ತೇವೆ. ನಿಮ್ಮನ್ನು ಕಡೆಯವರೆಗೂ ನೋಡಿಕೊಳ್ಳುತ್ತೇವೆ” ಎಂದು ವೀರಾವೇಶದಿಂದ ಮಾತನಾಡಿದ ಯಾವ ಮುಖಂಡನೂ ಮೀನಾಕ್ಷಮ್ಮನ ಸಹಾಯಕಕ್ಕೆ ಬಂದಿಲ್ಲ. ಮೀನಾಕ್ಷಮ್ಮನವರು ನ್ಯಾಯಬೆಲೆ ಅಂಗಡಿಯಲ್ಲಿ ಕೊಡುವ ಅಕ್ಕಿ ಪಡೆದು ಜೀವನ ಸಾಗಿಸುತ್ತಿದ್ದಾರೆ. ಅಲ್ಲಿ ಇಲ್ಲಿ ಪುಳ್ಳೆ ಆಯ್ದು ತಂದು ಅಡುಗೆ ಮಾಡಿಕೊಳ್ಳುತ್ತಿದ್ದಾರೆ.

ವಿಶ್ವನಾಥ್‌ ಅವರ ಹೆಂಡತಿ ಕಾಯಿಲೆ ಬಿದ್ದರು. ಸರ್ಕಾರ ನೀಡಿದ್ದ ಐದು ಲಕ್ಷ ರೂ. ಪರಿಹಾರ ಹಣ ವಿಶ್ವನಾಥ್‌ ಅವರ ಪತ್ನಿಯ ಆಸ್ಪತ್ರೆಯ ಖರ್ಚಿಗಾಯಿತು. ಜಾಂಡೀಸ್ ಆಗಿ ಅವರು ತೀರಿಕೊಂಡ ಬಳಿಕ ಪುಟಾಣಿ ಆದಿತ್ಯನ ಭಾರ ಮೀನಾಕ್ಷಮ್ಮನ ಅವರ ಹೆಗಲ ಮೇಲೆ ಬಿತ್ತು. ಮಗಳು ಕೂಡ ತೀರಿಕೊಂಡ ಬಳಿಕ ಮೀನಾಕ್ಷಮ್ಮ ಅನಾಥೆಯಾದರು. ಮಗುವನ್ನು ಓದಿಸುವ ಭಾರಹೊತ್ತಿಕೊಂಡ ಅಜ್ಜಿ, ಚಿಂದಿ ಆಯುತ್ತ ಬದುಕು ಸವೆಸುತ್ತಿದ್ದಾರೆ.

ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ, ಮೃತನ ಪೋನ್ ನಾಪತ್ತೆ

“ಸರಕಾರದಿಂದ ಕೊಡುವ ಸಂಧ್ಯಾ ಸುರಕ್ಷಾ ಪಿಂಚಣಿ ಸಿಗುತ್ತಿಲ್ಲ. ಜೀವ ಇರುವವರೆಗೆ ಹೊಟ್ಟೆ ತುಂಬಿಸಿಕೊಳ್ಳಬೇಕಲ್ವಾ? ನ್ಯಾಯಬೆಲೆ ಅಂಗಡಿಯಿಂದ ತಿಂಗಳಿಗೆ 10 ಕೆ.ಜಿ. ಅಕ್ಕಿ ಕೊಡುತ್ತಾರೆ. ಪ್ರತಿದಿನ ಬೆಳಿಗ್ಗೆ ರಸ್ತೆ, ತಿಪ್ಪೆಗಳಲ್ಲಿ ಪ್ಲಾಸ್ಟಿಕ್‌ ಆಯುವುದರಿಂದ 10ರಿಂದ 20 ರೂಪಾಯಿ ಬರುತ್ತದೆ. ಅದರಲ್ಲಿ ತರಕಾರಿ, ದಿನಸಿ, ಮಾತ್ರೆ ಎಲ್ಲವನ್ನೂ ಸರಿದೂಗಿಸಬೇಕು ಎನ್ನುವಾಗ ಆ ತಾಯಿ ಕಣ್ಣೀರು ಸುರಿಸಿದರು” ಎಂದು ‘ವಿಜಯಕರ್ನಾಟಕ’ ವರದಿ ಮಾಡಿದೆ.

“ಮಗನಿಲ್ಲ, ಮಗಳಿಲ್ಲ, ಸೊಸೆ ಇಲ್ಲ. ಮಗ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಎರಡು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದರೂ ಪಿಂಚಣಿ ಸಿಕ್ಕಿಲ್ಲ. ಕರೆಂಟ್ ಬಿಲ್ ಕಟ್ಟಿಲ್ಲವೆಂದು ಮೂರು ವರ್ಷದ ಹಿಂದೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರಿಂದ ಮನೆಯಲ್ಲಿ ಬೆಳಕಿಲ್ಲ. ನೀರಿನ ಬಿಲ್‌ ಕಟ್ಟಿಲ್ಲವೆಂದು ನೀರಿನ ಸಂಪರ್ಕವಿಲ್ಲ”- ಹೀಗೆ ‘ಇಲ್ಲ’ಗಳ ಪಟ್ಟಿಯ ನಡುವೆ ಇಳಿಜೀವದ ಮೀನಾಕ್ಷಮ್ಮನ ಬದುಕು ಹಿಂಡಿ ಹಿಪ್ಪೆಯಾಗಿದೆ.

“ಹರ್ಷ ಕುಟುಂಬಕ್ಕೆ ಹಲವರು ನೆರವು ನೀಡಿದ್ದಾರೆ. ಒಂದು ಕೋಟಿ ರೂ. ಕುಟುಂಬಕ್ಕೆ ಹರಿದುಬಂದಿದೆ. ಆದರೆ ವಿಶ್ವನಾಥ್ ಅವರ ತಾಯಿ ಮಾತ್ರ ಪುಟ್ಟ ಮನೆಯಲ್ಲಿ ಕತ್ತಲೆಯಲ್ಲೇ ಬದುಕು ಸಾಗಿಸುತ್ತಿದ್ದಾರೆ” ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಶಿವಮೊಗ್ಗ ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್ ಅವರು ಮೀನಾಕ್ಷಮ್ಮನವರನ್ನು ಭೇಟಿಯಾಗಿ ನೆರವು ನೀಡಿದರು.

ವಿಶ್ವನಾಥ್‌ ತಾಯಿಯವರನ್ನು ಭೇಟಿಯಾಗಿ ನೆರವು ನೀಡಿರುವ ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್‌ ಅವರು ‘ನಾನುಗೌರಿ.ಕಾಂ’ನೊಂದಿಗೆ ಮಾತನಾಡಿ, “ಮೀನಾಕ್ಷಮ್ಮನವರ ಸ್ಥಿತಿ ನೋಡಿದರೆ ಬಹಳ ನೋವಾಗುತ್ತದೆ. ಕುಡಿಯಲು ನೀರಿನ ಸಂಪರ್ಕವಿರಲಿಲ್ಲ. ಮನೆಯಂತೂ ಬಹಳ ದುಸ್ಥಿತಿಯಲ್ಲಿದೆ. ಕರೆಂಟ್‌ ಬಿಲ್ ಕಟ್ಟಿಲ್ಲವೆಂದು ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ತುರ್ತಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಡಲು ಕ್ರಮ ವಹಿಸಿದೆ. ನೀರಿನ ವ್ಯವಸ್ಥೆ ಮಾಡಿಕೊಡಲಾಗಿದೆ. ಮನೆಗೆ ಸುಣ್ಣ ಬಣ್ಣ ಬಳಿಸಲಾಗುವುದು. ವಿಷಯ ತಿಳಿದ ಅನೇಕ ಸಂಘಟನೆಗಳು ಮೀನಾಕ್ಷಮ್ಮನವರಿಗೆ ನೆರವು ನೀಡಲು ಮುಂದಾಗಿವೆ. 12 ವರ್ಷದ ಮೊಮ್ಮಗನನ್ನು ಸಾಕಲು ಆ ತಾಯಿ ಬಹಳ ಕಷ್ಟಪಡುತ್ತಿದ್ದಾರೆ. ಈ ಕಷ್ಟ ಯಾರಿಗೂ ಬರಬಾರದು” ಎಂದರು.

ಮೀನಾಕ್ಷಮ್ಮನವರಿಗೆ ನೆರವು ನೀಡಲು ಬಯಸುವವರು ಈ ಖಾತೆಗೆ ಹಣ ಕಳುಹಿಸಬಹುದು.

ಮೀನಾಕ್ಷಮ್ಮನವರ ಬ್ಯಾಂಕ್‌ ಅಕೌಂಟ್‌ ವಿವರ. ಧನಸಹಾಯ ಮಾಡುವವರು ಈ ಖಾತೆಗೆ ಹಣ ಜಮೆ ಮಾಡಬಹುದು.

ಇದನ್ನೂ ಓದಿರಿ: ‘ಬಾಳಿಗ ಕೊಲೆಯ ಬಗ್ಗೆ ಬಾಯಿಬಿಡದವರು, ದಲಿತ ವ್ಯಕ್ತಿ ಕೊಲೆಯಾದದ್ದು ಖಂಡಿಸುತ್ತಾರಾ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...