Homeಕರ್ನಾಟಕಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

ಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

2015ರಲ್ಲಿ ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ, ಆತನ ಕುಟುಂಬಕ್ಕೆ ನೆರವು ನೀಡುವ ಭರವಸೆ ಭರಪೂರ ಸಿಕ್ಕಿತು. ಅಂದು ಕೂಡ ಶಿವಮೊಗ್ಗ ಬಂದ್ ಆಗಿತ್ತು. ಆದರೆ 7 ವರ್ಷಗಳ ನಂತರ ತಿರುಗಿ ನೋಡಿದರೆ ವಿಶ್ವನಾಥ್ ತಾಯಿ ಮೀನಾಕ್ಷಮ್ಮ ಇಂದು ರಸ್ತೆ ಬದಿ ಚಿಂದಿ ಆಯುತ್ತಿದ್ದಾರೆ...

- Advertisement -
- Advertisement -

ಮುರಕಲು ಮನೆ, ಸುತ್ತಲು ಹಬ್ಬಿದ ಗಿಡಗಂಟಿ. ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ವಿದ್ಯುತ್‌ ಸಂಪರ್ಕವಿಲ್ಲ. ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ ಮಗ ಕೊಲೆಯಾದ. ಸೊಸೆ ಸಾವಿಗೀಡಾದಳು. ಮಗಳು ಸತ್ತಳು. 12 ವರ್ಷದ ಮೊಮ್ಮಗನ ಶಿಕ್ಷಣ ಭಾರ ಹೊತ್ತ ಮುದುಕಿ, ಜೀವನಕ್ಕಾಗಿ ಆಯ್ದುಕೊಂಡಿದ್ದು ಚಿಂದಿ ಆಯುವ ಬದುಕು.- ಇದು ಶಿವಮೊಗ್ಗದ ಮೀನಾಕ್ಷಮ್ಮನ ನೋವಿನ ಕಥನ.

ಸಂಘಪರಿವಾರದ ರಾಜಕೀಯ ಮುಖಂಡರು ಬಡವರು, ದಲಿತಾದಿ ಶೂದ್ರರ ಮಕ್ಕಳನ್ನು ಹಿಂದುತ್ವದ ಗಲಭೆಗಳಿಗೆ ತಳ್ಳಿ, ಆ ಯುವಕರು ಅನ್ಯಕೋಮಿನಿಂದ ಕೊಲೆಯಾದಾಗ, ಆ ಸಾವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಾರೆಂಬ ಆರೋಪಗಳು ಸಾಮಾನ್ಯವಾಗಿವೆ. ಮಕ್ಕಳು ಬಲಿಪಶುಗಳಾದ ಮೇಲೆ ಪೋಷಕರು ಕಣ್ಣೀರಲ್ಲಿ ಕೈತೊಳೆಯುವಂತಾಗುತ್ತದೆ. ಇಂತಹದ್ದೇ ಮನಕಲಕುವ ಮತ್ತೊಂದು ಘಟನೆಗೆ ಶಿವಮೊಗ್ಗ ಜಿಲ್ಲೆ ಸಾಕ್ಷಿಯಾಗಿದೆ.

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದನು. (ಕೊಲೆಯ ಕಾರಣ ಇನ್ನೂ ಬಹಿರಂಗವಾಗಿಲ್ಲ.) ನಿಷೇದಾಜ್ಞೆಯ ನಡುವೆ ಹರ್ಷನ ಮೃತ ಶರೀರವನ್ನು ಮೆರವಣಿಗೆ ಮಾಡಿದಾಗ ಹಲವು ಅಹಿತಕರ ಘಟನೆಗಳೂ ನಡೆದಿವೆ. ಕೆಲವು ಬಿಜೆಪಿ ನಾಯಕರು ಶವ ಮೆರವಣಿಗೆಯ ಮುಂದಾಳತ್ವ ವಹಿಸಿದ್ದರು. ಅಲ್ಲದೆ ಹರ್ಷ ಕೊಲೆಯನ್ನು ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳಾಗಿವೆ. ಹರ್ಷ ಸಾವನ್ನು ಕಾರಣವಾಗಿಟ್ಟುಕೊಂಡು ಮುಸ್ಲಿಂ ಸಮುದಾಯದ ವಿರುದ್ಧ ಕೆಲವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಹರ್ಷನ ಕುಟುಂಬಕ್ಕೆ ನೆರವು ಕೂಡ ಹರಿದು ಬರುತ್ತಿದೆ. ಆದರೆ 2015ರಲ್ಲಿ ಕೊಲೆಯಾದ ಹಿಂದುತ್ವ ಕಾರ್ಯಕರ್ತ ವಿಶ್ವನಾಥ ಶೆಟ್ಟಿಯ ಕುಟುಂಬ ಏನಾಯಿತೆಂದು ಯೋಚಿಸಿದ್ದಾರಾ? ವಿಶ್ವನಾಥ್ ಅವರ ತಾಯಿ ಮೀನಾಕ್ಷಮ್ಮ ಅನಾಥರಾಗಿ, ಚಿಂದಿ ಆಯುತ್ತ ಬದುಕುವಂತಾಯಿಲ್ಲತ್ತಲ್ಲ, ಇದಕ್ಕೆ ಹೊಣೆ ಯಾರು?

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: BJP ಮತ್ತು ಅದರ ನಾಯಕರನ್ನು ಟೀಕಿಸುತ್ತಿರುವ ಈ ವ್ಯಕ್ತಿ ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ‘ಹರ್ಷ’ ಅಲ್ಲ

ತಮ್ಮ ಮುರುಕಲು ಮನೆಯ ಮುಂದೆ ಮೀನಾಕ್ಷಮ್ಮ

ಶಿವಮೊಗ್ಗ ನಗರದಲ್ಲಿ 2015ರಲ್ಲಿ ನಡೆದ ಪಿಎಫ್‌ಐ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಕೆಲವರು ಗಾಜನೂರು ಬಳಿ ಆಲ್ಕೊಳದ ವಿಶ್ವನಾಥ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ ಹಿಂದುತ್ವ ಸಂಘಟನೆಗಳು ಶಿವಮೊಗ್ಗ ನಗರವನ್ನು ಬಂದ್ ಮಾಡಿದ್ದವು. ಭಾರೀ ಪ್ರತಿಭಟನೆ ನಡೆಸಿದ್ದವು. ವಿಶ್ವನಾಥ್‌ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು.

“ನಿಮಗೆ ನಾವು ಮಕ್ಕಳಾಗಿ ಇರುತ್ತೇವೆ. ನಿಮ್ಮನ್ನು ಕಡೆಯವರೆಗೂ ನೋಡಿಕೊಳ್ಳುತ್ತೇವೆ” ಎಂದು ವೀರಾವೇಶದಿಂದ ಮಾತನಾಡಿದ ಯಾವ ಮುಖಂಡನೂ ಮೀನಾಕ್ಷಮ್ಮನ ಸಹಾಯಕಕ್ಕೆ ಬಂದಿಲ್ಲ. ಮೀನಾಕ್ಷಮ್ಮನವರು ನ್ಯಾಯಬೆಲೆ ಅಂಗಡಿಯಲ್ಲಿ ಕೊಡುವ ಅಕ್ಕಿ ಪಡೆದು ಜೀವನ ಸಾಗಿಸುತ್ತಿದ್ದಾರೆ. ಅಲ್ಲಿ ಇಲ್ಲಿ ಪುಳ್ಳೆ ಆಯ್ದು ತಂದು ಅಡುಗೆ ಮಾಡಿಕೊಳ್ಳುತ್ತಿದ್ದಾರೆ.

ವಿಶ್ವನಾಥ್‌ ಅವರ ಹೆಂಡತಿ ಕಾಯಿಲೆ ಬಿದ್ದರು. ಸರ್ಕಾರ ನೀಡಿದ್ದ ಐದು ಲಕ್ಷ ರೂ. ಪರಿಹಾರ ಹಣ ವಿಶ್ವನಾಥ್‌ ಅವರ ಪತ್ನಿಯ ಆಸ್ಪತ್ರೆಯ ಖರ್ಚಿಗಾಯಿತು. ಜಾಂಡೀಸ್ ಆಗಿ ಅವರು ತೀರಿಕೊಂಡ ಬಳಿಕ ಪುಟಾಣಿ ಆದಿತ್ಯನ ಭಾರ ಮೀನಾಕ್ಷಮ್ಮನ ಅವರ ಹೆಗಲ ಮೇಲೆ ಬಿತ್ತು. ಮಗಳು ಕೂಡ ತೀರಿಕೊಂಡ ಬಳಿಕ ಮೀನಾಕ್ಷಮ್ಮ ಅನಾಥೆಯಾದರು. ಮಗುವನ್ನು ಓದಿಸುವ ಭಾರಹೊತ್ತಿಕೊಂಡ ಅಜ್ಜಿ, ಚಿಂದಿ ಆಯುತ್ತ ಬದುಕು ಸವೆಸುತ್ತಿದ್ದಾರೆ.

ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ, ಮೃತನ ಪೋನ್ ನಾಪತ್ತೆ

“ಸರಕಾರದಿಂದ ಕೊಡುವ ಸಂಧ್ಯಾ ಸುರಕ್ಷಾ ಪಿಂಚಣಿ ಸಿಗುತ್ತಿಲ್ಲ. ಜೀವ ಇರುವವರೆಗೆ ಹೊಟ್ಟೆ ತುಂಬಿಸಿಕೊಳ್ಳಬೇಕಲ್ವಾ? ನ್ಯಾಯಬೆಲೆ ಅಂಗಡಿಯಿಂದ ತಿಂಗಳಿಗೆ 10 ಕೆ.ಜಿ. ಅಕ್ಕಿ ಕೊಡುತ್ತಾರೆ. ಪ್ರತಿದಿನ ಬೆಳಿಗ್ಗೆ ರಸ್ತೆ, ತಿಪ್ಪೆಗಳಲ್ಲಿ ಪ್ಲಾಸ್ಟಿಕ್‌ ಆಯುವುದರಿಂದ 10ರಿಂದ 20 ರೂಪಾಯಿ ಬರುತ್ತದೆ. ಅದರಲ್ಲಿ ತರಕಾರಿ, ದಿನಸಿ, ಮಾತ್ರೆ ಎಲ್ಲವನ್ನೂ ಸರಿದೂಗಿಸಬೇಕು ಎನ್ನುವಾಗ ಆ ತಾಯಿ ಕಣ್ಣೀರು ಸುರಿಸಿದರು” ಎಂದು ‘ವಿಜಯಕರ್ನಾಟಕ’ ವರದಿ ಮಾಡಿದೆ.

“ಮಗನಿಲ್ಲ, ಮಗಳಿಲ್ಲ, ಸೊಸೆ ಇಲ್ಲ. ಮಗ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಎರಡು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದರೂ ಪಿಂಚಣಿ ಸಿಕ್ಕಿಲ್ಲ. ಕರೆಂಟ್ ಬಿಲ್ ಕಟ್ಟಿಲ್ಲವೆಂದು ಮೂರು ವರ್ಷದ ಹಿಂದೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರಿಂದ ಮನೆಯಲ್ಲಿ ಬೆಳಕಿಲ್ಲ. ನೀರಿನ ಬಿಲ್‌ ಕಟ್ಟಿಲ್ಲವೆಂದು ನೀರಿನ ಸಂಪರ್ಕವಿಲ್ಲ”- ಹೀಗೆ ‘ಇಲ್ಲ’ಗಳ ಪಟ್ಟಿಯ ನಡುವೆ ಇಳಿಜೀವದ ಮೀನಾಕ್ಷಮ್ಮನ ಬದುಕು ಹಿಂಡಿ ಹಿಪ್ಪೆಯಾಗಿದೆ.

“ಹರ್ಷ ಕುಟುಂಬಕ್ಕೆ ಹಲವರು ನೆರವು ನೀಡಿದ್ದಾರೆ. ಒಂದು ಕೋಟಿ ರೂ. ಕುಟುಂಬಕ್ಕೆ ಹರಿದುಬಂದಿದೆ. ಆದರೆ ವಿಶ್ವನಾಥ್ ಅವರ ತಾಯಿ ಮಾತ್ರ ಪುಟ್ಟ ಮನೆಯಲ್ಲಿ ಕತ್ತಲೆಯಲ್ಲೇ ಬದುಕು ಸಾಗಿಸುತ್ತಿದ್ದಾರೆ” ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಶಿವಮೊಗ್ಗ ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್ ಅವರು ಮೀನಾಕ್ಷಮ್ಮನವರನ್ನು ಭೇಟಿಯಾಗಿ ನೆರವು ನೀಡಿದರು.

ವಿಶ್ವನಾಥ್‌ ತಾಯಿಯವರನ್ನು ಭೇಟಿಯಾಗಿ ನೆರವು ನೀಡಿರುವ ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್‌ ಅವರು ‘ನಾನುಗೌರಿ.ಕಾಂ’ನೊಂದಿಗೆ ಮಾತನಾಡಿ, “ಮೀನಾಕ್ಷಮ್ಮನವರ ಸ್ಥಿತಿ ನೋಡಿದರೆ ಬಹಳ ನೋವಾಗುತ್ತದೆ. ಕುಡಿಯಲು ನೀರಿನ ಸಂಪರ್ಕವಿರಲಿಲ್ಲ. ಮನೆಯಂತೂ ಬಹಳ ದುಸ್ಥಿತಿಯಲ್ಲಿದೆ. ಕರೆಂಟ್‌ ಬಿಲ್ ಕಟ್ಟಿಲ್ಲವೆಂದು ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ತುರ್ತಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಡಲು ಕ್ರಮ ವಹಿಸಿದೆ. ನೀರಿನ ವ್ಯವಸ್ಥೆ ಮಾಡಿಕೊಡಲಾಗಿದೆ. ಮನೆಗೆ ಸುಣ್ಣ ಬಣ್ಣ ಬಳಿಸಲಾಗುವುದು. ವಿಷಯ ತಿಳಿದ ಅನೇಕ ಸಂಘಟನೆಗಳು ಮೀನಾಕ್ಷಮ್ಮನವರಿಗೆ ನೆರವು ನೀಡಲು ಮುಂದಾಗಿವೆ. 12 ವರ್ಷದ ಮೊಮ್ಮಗನನ್ನು ಸಾಕಲು ಆ ತಾಯಿ ಬಹಳ ಕಷ್ಟಪಡುತ್ತಿದ್ದಾರೆ. ಈ ಕಷ್ಟ ಯಾರಿಗೂ ಬರಬಾರದು” ಎಂದರು.

ಮೀನಾಕ್ಷಮ್ಮನವರಿಗೆ ನೆರವು ನೀಡಲು ಬಯಸುವವರು ಈ ಖಾತೆಗೆ ಹಣ ಕಳುಹಿಸಬಹುದು.

ಮೀನಾಕ್ಷಮ್ಮನವರ ಬ್ಯಾಂಕ್‌ ಅಕೌಂಟ್‌ ವಿವರ. ಧನಸಹಾಯ ಮಾಡುವವರು ಈ ಖಾತೆಗೆ ಹಣ ಜಮೆ ಮಾಡಬಹುದು.

ಇದನ್ನೂ ಓದಿರಿ: ‘ಬಾಳಿಗ ಕೊಲೆಯ ಬಗ್ಗೆ ಬಾಯಿಬಿಡದವರು, ದಲಿತ ವ್ಯಕ್ತಿ ಕೊಲೆಯಾದದ್ದು ಖಂಡಿಸುತ್ತಾರಾ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...