Homeಕರ್ನಾಟಕಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

ಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

2015ರಲ್ಲಿ ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ, ಆತನ ಕುಟುಂಬಕ್ಕೆ ನೆರವು ನೀಡುವ ಭರವಸೆ ಭರಪೂರ ಸಿಕ್ಕಿತು. ಅಂದು ಕೂಡ ಶಿವಮೊಗ್ಗ ಬಂದ್ ಆಗಿತ್ತು. ಆದರೆ 7 ವರ್ಷಗಳ ನಂತರ ತಿರುಗಿ ನೋಡಿದರೆ ವಿಶ್ವನಾಥ್ ತಾಯಿ ಮೀನಾಕ್ಷಮ್ಮ ಇಂದು ರಸ್ತೆ ಬದಿ ಚಿಂದಿ ಆಯುತ್ತಿದ್ದಾರೆ...

- Advertisement -
- Advertisement -

ಮುರಕಲು ಮನೆ, ಸುತ್ತಲು ಹಬ್ಬಿದ ಗಿಡಗಂಟಿ. ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ವಿದ್ಯುತ್‌ ಸಂಪರ್ಕವಿಲ್ಲ. ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ ಮಗ ಕೊಲೆಯಾದ. ಸೊಸೆ ಸಾವಿಗೀಡಾದಳು. ಮಗಳು ಸತ್ತಳು. 12 ವರ್ಷದ ಮೊಮ್ಮಗನ ಶಿಕ್ಷಣ ಭಾರ ಹೊತ್ತ ಮುದುಕಿ, ಜೀವನಕ್ಕಾಗಿ ಆಯ್ದುಕೊಂಡಿದ್ದು ಚಿಂದಿ ಆಯುವ ಬದುಕು.- ಇದು ಶಿವಮೊಗ್ಗದ ಮೀನಾಕ್ಷಮ್ಮನ ನೋವಿನ ಕಥನ.

ಸಂಘಪರಿವಾರದ ರಾಜಕೀಯ ಮುಖಂಡರು ಬಡವರು, ದಲಿತಾದಿ ಶೂದ್ರರ ಮಕ್ಕಳನ್ನು ಹಿಂದುತ್ವದ ಗಲಭೆಗಳಿಗೆ ತಳ್ಳಿ, ಆ ಯುವಕರು ಅನ್ಯಕೋಮಿನಿಂದ ಕೊಲೆಯಾದಾಗ, ಆ ಸಾವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಾರೆಂಬ ಆರೋಪಗಳು ಸಾಮಾನ್ಯವಾಗಿವೆ. ಮಕ್ಕಳು ಬಲಿಪಶುಗಳಾದ ಮೇಲೆ ಪೋಷಕರು ಕಣ್ಣೀರಲ್ಲಿ ಕೈತೊಳೆಯುವಂತಾಗುತ್ತದೆ. ಇಂತಹದ್ದೇ ಮನಕಲಕುವ ಮತ್ತೊಂದು ಘಟನೆಗೆ ಶಿವಮೊಗ್ಗ ಜಿಲ್ಲೆ ಸಾಕ್ಷಿಯಾಗಿದೆ.

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದನು. (ಕೊಲೆಯ ಕಾರಣ ಇನ್ನೂ ಬಹಿರಂಗವಾಗಿಲ್ಲ.) ನಿಷೇದಾಜ್ಞೆಯ ನಡುವೆ ಹರ್ಷನ ಮೃತ ಶರೀರವನ್ನು ಮೆರವಣಿಗೆ ಮಾಡಿದಾಗ ಹಲವು ಅಹಿತಕರ ಘಟನೆಗಳೂ ನಡೆದಿವೆ. ಕೆಲವು ಬಿಜೆಪಿ ನಾಯಕರು ಶವ ಮೆರವಣಿಗೆಯ ಮುಂದಾಳತ್ವ ವಹಿಸಿದ್ದರು. ಅಲ್ಲದೆ ಹರ್ಷ ಕೊಲೆಯನ್ನು ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳಾಗಿವೆ. ಹರ್ಷ ಸಾವನ್ನು ಕಾರಣವಾಗಿಟ್ಟುಕೊಂಡು ಮುಸ್ಲಿಂ ಸಮುದಾಯದ ವಿರುದ್ಧ ಕೆಲವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಹರ್ಷನ ಕುಟುಂಬಕ್ಕೆ ನೆರವು ಕೂಡ ಹರಿದು ಬರುತ್ತಿದೆ. ಆದರೆ 2015ರಲ್ಲಿ ಕೊಲೆಯಾದ ಹಿಂದುತ್ವ ಕಾರ್ಯಕರ್ತ ವಿಶ್ವನಾಥ ಶೆಟ್ಟಿಯ ಕುಟುಂಬ ಏನಾಯಿತೆಂದು ಯೋಚಿಸಿದ್ದಾರಾ? ವಿಶ್ವನಾಥ್ ಅವರ ತಾಯಿ ಮೀನಾಕ್ಷಮ್ಮ ಅನಾಥರಾಗಿ, ಚಿಂದಿ ಆಯುತ್ತ ಬದುಕುವಂತಾಯಿಲ್ಲತ್ತಲ್ಲ, ಇದಕ್ಕೆ ಹೊಣೆ ಯಾರು?

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: BJP ಮತ್ತು ಅದರ ನಾಯಕರನ್ನು ಟೀಕಿಸುತ್ತಿರುವ ಈ ವ್ಯಕ್ತಿ ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ‘ಹರ್ಷ’ ಅಲ್ಲ

ತಮ್ಮ ಮುರುಕಲು ಮನೆಯ ಮುಂದೆ ಮೀನಾಕ್ಷಮ್ಮ

ಶಿವಮೊಗ್ಗ ನಗರದಲ್ಲಿ 2015ರಲ್ಲಿ ನಡೆದ ಪಿಎಫ್‌ಐ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಕೆಲವರು ಗಾಜನೂರು ಬಳಿ ಆಲ್ಕೊಳದ ವಿಶ್ವನಾಥ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ ಹಿಂದುತ್ವ ಸಂಘಟನೆಗಳು ಶಿವಮೊಗ್ಗ ನಗರವನ್ನು ಬಂದ್ ಮಾಡಿದ್ದವು. ಭಾರೀ ಪ್ರತಿಭಟನೆ ನಡೆಸಿದ್ದವು. ವಿಶ್ವನಾಥ್‌ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು.

“ನಿಮಗೆ ನಾವು ಮಕ್ಕಳಾಗಿ ಇರುತ್ತೇವೆ. ನಿಮ್ಮನ್ನು ಕಡೆಯವರೆಗೂ ನೋಡಿಕೊಳ್ಳುತ್ತೇವೆ” ಎಂದು ವೀರಾವೇಶದಿಂದ ಮಾತನಾಡಿದ ಯಾವ ಮುಖಂಡನೂ ಮೀನಾಕ್ಷಮ್ಮನ ಸಹಾಯಕಕ್ಕೆ ಬಂದಿಲ್ಲ. ಮೀನಾಕ್ಷಮ್ಮನವರು ನ್ಯಾಯಬೆಲೆ ಅಂಗಡಿಯಲ್ಲಿ ಕೊಡುವ ಅಕ್ಕಿ ಪಡೆದು ಜೀವನ ಸಾಗಿಸುತ್ತಿದ್ದಾರೆ. ಅಲ್ಲಿ ಇಲ್ಲಿ ಪುಳ್ಳೆ ಆಯ್ದು ತಂದು ಅಡುಗೆ ಮಾಡಿಕೊಳ್ಳುತ್ತಿದ್ದಾರೆ.

ವಿಶ್ವನಾಥ್‌ ಅವರ ಹೆಂಡತಿ ಕಾಯಿಲೆ ಬಿದ್ದರು. ಸರ್ಕಾರ ನೀಡಿದ್ದ ಐದು ಲಕ್ಷ ರೂ. ಪರಿಹಾರ ಹಣ ವಿಶ್ವನಾಥ್‌ ಅವರ ಪತ್ನಿಯ ಆಸ್ಪತ್ರೆಯ ಖರ್ಚಿಗಾಯಿತು. ಜಾಂಡೀಸ್ ಆಗಿ ಅವರು ತೀರಿಕೊಂಡ ಬಳಿಕ ಪುಟಾಣಿ ಆದಿತ್ಯನ ಭಾರ ಮೀನಾಕ್ಷಮ್ಮನ ಅವರ ಹೆಗಲ ಮೇಲೆ ಬಿತ್ತು. ಮಗಳು ಕೂಡ ತೀರಿಕೊಂಡ ಬಳಿಕ ಮೀನಾಕ್ಷಮ್ಮ ಅನಾಥೆಯಾದರು. ಮಗುವನ್ನು ಓದಿಸುವ ಭಾರಹೊತ್ತಿಕೊಂಡ ಅಜ್ಜಿ, ಚಿಂದಿ ಆಯುತ್ತ ಬದುಕು ಸವೆಸುತ್ತಿದ್ದಾರೆ.

ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ, ಮೃತನ ಪೋನ್ ನಾಪತ್ತೆ

“ಸರಕಾರದಿಂದ ಕೊಡುವ ಸಂಧ್ಯಾ ಸುರಕ್ಷಾ ಪಿಂಚಣಿ ಸಿಗುತ್ತಿಲ್ಲ. ಜೀವ ಇರುವವರೆಗೆ ಹೊಟ್ಟೆ ತುಂಬಿಸಿಕೊಳ್ಳಬೇಕಲ್ವಾ? ನ್ಯಾಯಬೆಲೆ ಅಂಗಡಿಯಿಂದ ತಿಂಗಳಿಗೆ 10 ಕೆ.ಜಿ. ಅಕ್ಕಿ ಕೊಡುತ್ತಾರೆ. ಪ್ರತಿದಿನ ಬೆಳಿಗ್ಗೆ ರಸ್ತೆ, ತಿಪ್ಪೆಗಳಲ್ಲಿ ಪ್ಲಾಸ್ಟಿಕ್‌ ಆಯುವುದರಿಂದ 10ರಿಂದ 20 ರೂಪಾಯಿ ಬರುತ್ತದೆ. ಅದರಲ್ಲಿ ತರಕಾರಿ, ದಿನಸಿ, ಮಾತ್ರೆ ಎಲ್ಲವನ್ನೂ ಸರಿದೂಗಿಸಬೇಕು ಎನ್ನುವಾಗ ಆ ತಾಯಿ ಕಣ್ಣೀರು ಸುರಿಸಿದರು” ಎಂದು ‘ವಿಜಯಕರ್ನಾಟಕ’ ವರದಿ ಮಾಡಿದೆ.

“ಮಗನಿಲ್ಲ, ಮಗಳಿಲ್ಲ, ಸೊಸೆ ಇಲ್ಲ. ಮಗ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಎರಡು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದರೂ ಪಿಂಚಣಿ ಸಿಕ್ಕಿಲ್ಲ. ಕರೆಂಟ್ ಬಿಲ್ ಕಟ್ಟಿಲ್ಲವೆಂದು ಮೂರು ವರ್ಷದ ಹಿಂದೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರಿಂದ ಮನೆಯಲ್ಲಿ ಬೆಳಕಿಲ್ಲ. ನೀರಿನ ಬಿಲ್‌ ಕಟ್ಟಿಲ್ಲವೆಂದು ನೀರಿನ ಸಂಪರ್ಕವಿಲ್ಲ”- ಹೀಗೆ ‘ಇಲ್ಲ’ಗಳ ಪಟ್ಟಿಯ ನಡುವೆ ಇಳಿಜೀವದ ಮೀನಾಕ್ಷಮ್ಮನ ಬದುಕು ಹಿಂಡಿ ಹಿಪ್ಪೆಯಾಗಿದೆ.

“ಹರ್ಷ ಕುಟುಂಬಕ್ಕೆ ಹಲವರು ನೆರವು ನೀಡಿದ್ದಾರೆ. ಒಂದು ಕೋಟಿ ರೂ. ಕುಟುಂಬಕ್ಕೆ ಹರಿದುಬಂದಿದೆ. ಆದರೆ ವಿಶ್ವನಾಥ್ ಅವರ ತಾಯಿ ಮಾತ್ರ ಪುಟ್ಟ ಮನೆಯಲ್ಲಿ ಕತ್ತಲೆಯಲ್ಲೇ ಬದುಕು ಸಾಗಿಸುತ್ತಿದ್ದಾರೆ” ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಶಿವಮೊಗ್ಗ ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್ ಅವರು ಮೀನಾಕ್ಷಮ್ಮನವರನ್ನು ಭೇಟಿಯಾಗಿ ನೆರವು ನೀಡಿದರು.

ವಿಶ್ವನಾಥ್‌ ತಾಯಿಯವರನ್ನು ಭೇಟಿಯಾಗಿ ನೆರವು ನೀಡಿರುವ ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್‌ ಅವರು ‘ನಾನುಗೌರಿ.ಕಾಂ’ನೊಂದಿಗೆ ಮಾತನಾಡಿ, “ಮೀನಾಕ್ಷಮ್ಮನವರ ಸ್ಥಿತಿ ನೋಡಿದರೆ ಬಹಳ ನೋವಾಗುತ್ತದೆ. ಕುಡಿಯಲು ನೀರಿನ ಸಂಪರ್ಕವಿರಲಿಲ್ಲ. ಮನೆಯಂತೂ ಬಹಳ ದುಸ್ಥಿತಿಯಲ್ಲಿದೆ. ಕರೆಂಟ್‌ ಬಿಲ್ ಕಟ್ಟಿಲ್ಲವೆಂದು ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ತುರ್ತಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಡಲು ಕ್ರಮ ವಹಿಸಿದೆ. ನೀರಿನ ವ್ಯವಸ್ಥೆ ಮಾಡಿಕೊಡಲಾಗಿದೆ. ಮನೆಗೆ ಸುಣ್ಣ ಬಣ್ಣ ಬಳಿಸಲಾಗುವುದು. ವಿಷಯ ತಿಳಿದ ಅನೇಕ ಸಂಘಟನೆಗಳು ಮೀನಾಕ್ಷಮ್ಮನವರಿಗೆ ನೆರವು ನೀಡಲು ಮುಂದಾಗಿವೆ. 12 ವರ್ಷದ ಮೊಮ್ಮಗನನ್ನು ಸಾಕಲು ಆ ತಾಯಿ ಬಹಳ ಕಷ್ಟಪಡುತ್ತಿದ್ದಾರೆ. ಈ ಕಷ್ಟ ಯಾರಿಗೂ ಬರಬಾರದು” ಎಂದರು.

ಮೀನಾಕ್ಷಮ್ಮನವರಿಗೆ ನೆರವು ನೀಡಲು ಬಯಸುವವರು ಈ ಖಾತೆಗೆ ಹಣ ಕಳುಹಿಸಬಹುದು.

ಮೀನಾಕ್ಷಮ್ಮನವರ ಬ್ಯಾಂಕ್‌ ಅಕೌಂಟ್‌ ವಿವರ. ಧನಸಹಾಯ ಮಾಡುವವರು ಈ ಖಾತೆಗೆ ಹಣ ಜಮೆ ಮಾಡಬಹುದು.

ಇದನ್ನೂ ಓದಿರಿ: ‘ಬಾಳಿಗ ಕೊಲೆಯ ಬಗ್ಗೆ ಬಾಯಿಬಿಡದವರು, ದಲಿತ ವ್ಯಕ್ತಿ ಕೊಲೆಯಾದದ್ದು ಖಂಡಿಸುತ್ತಾರಾ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...