Homeಕರ್ನಾಟಕಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

ಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

2015ರಲ್ಲಿ ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ, ಆತನ ಕುಟುಂಬಕ್ಕೆ ನೆರವು ನೀಡುವ ಭರವಸೆ ಭರಪೂರ ಸಿಕ್ಕಿತು. ಅಂದು ಕೂಡ ಶಿವಮೊಗ್ಗ ಬಂದ್ ಆಗಿತ್ತು. ಆದರೆ 7 ವರ್ಷಗಳ ನಂತರ ತಿರುಗಿ ನೋಡಿದರೆ ವಿಶ್ವನಾಥ್ ತಾಯಿ ಮೀನಾಕ್ಷಮ್ಮ ಇಂದು ರಸ್ತೆ ಬದಿ ಚಿಂದಿ ಆಯುತ್ತಿದ್ದಾರೆ...

- Advertisement -
- Advertisement -

ಮುರಕಲು ಮನೆ, ಸುತ್ತಲು ಹಬ್ಬಿದ ಗಿಡಗಂಟಿ. ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ವಿದ್ಯುತ್‌ ಸಂಪರ್ಕವಿಲ್ಲ. ಹಿಂದುತ್ವಕ್ಕಾಗಿ ಹೋರಾಡುತ್ತಿದ್ದ ಮಗ ಕೊಲೆಯಾದ. ಸೊಸೆ ಸಾವಿಗೀಡಾದಳು. ಮಗಳು ಸತ್ತಳು. 12 ವರ್ಷದ ಮೊಮ್ಮಗನ ಶಿಕ್ಷಣ ಭಾರ ಹೊತ್ತ ಮುದುಕಿ, ಜೀವನಕ್ಕಾಗಿ ಆಯ್ದುಕೊಂಡಿದ್ದು ಚಿಂದಿ ಆಯುವ ಬದುಕು.- ಇದು ಶಿವಮೊಗ್ಗದ ಮೀನಾಕ್ಷಮ್ಮನ ನೋವಿನ ಕಥನ.

ಸಂಘಪರಿವಾರದ ರಾಜಕೀಯ ಮುಖಂಡರು ಬಡವರು, ದಲಿತಾದಿ ಶೂದ್ರರ ಮಕ್ಕಳನ್ನು ಹಿಂದುತ್ವದ ಗಲಭೆಗಳಿಗೆ ತಳ್ಳಿ, ಆ ಯುವಕರು ಅನ್ಯಕೋಮಿನಿಂದ ಕೊಲೆಯಾದಾಗ, ಆ ಸಾವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಾರೆಂಬ ಆರೋಪಗಳು ಸಾಮಾನ್ಯವಾಗಿವೆ. ಮಕ್ಕಳು ಬಲಿಪಶುಗಳಾದ ಮೇಲೆ ಪೋಷಕರು ಕಣ್ಣೀರಲ್ಲಿ ಕೈತೊಳೆಯುವಂತಾಗುತ್ತದೆ. ಇಂತಹದ್ದೇ ಮನಕಲಕುವ ಮತ್ತೊಂದು ಘಟನೆಗೆ ಶಿವಮೊಗ್ಗ ಜಿಲ್ಲೆ ಸಾಕ್ಷಿಯಾಗಿದೆ.

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದನು. (ಕೊಲೆಯ ಕಾರಣ ಇನ್ನೂ ಬಹಿರಂಗವಾಗಿಲ್ಲ.) ನಿಷೇದಾಜ್ಞೆಯ ನಡುವೆ ಹರ್ಷನ ಮೃತ ಶರೀರವನ್ನು ಮೆರವಣಿಗೆ ಮಾಡಿದಾಗ ಹಲವು ಅಹಿತಕರ ಘಟನೆಗಳೂ ನಡೆದಿವೆ. ಕೆಲವು ಬಿಜೆಪಿ ನಾಯಕರು ಶವ ಮೆರವಣಿಗೆಯ ಮುಂದಾಳತ್ವ ವಹಿಸಿದ್ದರು. ಅಲ್ಲದೆ ಹರ್ಷ ಕೊಲೆಯನ್ನು ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳಾಗಿವೆ. ಹರ್ಷ ಸಾವನ್ನು ಕಾರಣವಾಗಿಟ್ಟುಕೊಂಡು ಮುಸ್ಲಿಂ ಸಮುದಾಯದ ವಿರುದ್ಧ ಕೆಲವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಹರ್ಷನ ಕುಟುಂಬಕ್ಕೆ ನೆರವು ಕೂಡ ಹರಿದು ಬರುತ್ತಿದೆ. ಆದರೆ 2015ರಲ್ಲಿ ಕೊಲೆಯಾದ ಹಿಂದುತ್ವ ಕಾರ್ಯಕರ್ತ ವಿಶ್ವನಾಥ ಶೆಟ್ಟಿಯ ಕುಟುಂಬ ಏನಾಯಿತೆಂದು ಯೋಚಿಸಿದ್ದಾರಾ? ವಿಶ್ವನಾಥ್ ಅವರ ತಾಯಿ ಮೀನಾಕ್ಷಮ್ಮ ಅನಾಥರಾಗಿ, ಚಿಂದಿ ಆಯುತ್ತ ಬದುಕುವಂತಾಯಿಲ್ಲತ್ತಲ್ಲ, ಇದಕ್ಕೆ ಹೊಣೆ ಯಾರು?

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: BJP ಮತ್ತು ಅದರ ನಾಯಕರನ್ನು ಟೀಕಿಸುತ್ತಿರುವ ಈ ವ್ಯಕ್ತಿ ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ‘ಹರ್ಷ’ ಅಲ್ಲ

ತಮ್ಮ ಮುರುಕಲು ಮನೆಯ ಮುಂದೆ ಮೀನಾಕ್ಷಮ್ಮ

ಶಿವಮೊಗ್ಗ ನಗರದಲ್ಲಿ 2015ರಲ್ಲಿ ನಡೆದ ಪಿಎಫ್‌ಐ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಕೆಲವರು ಗಾಜನೂರು ಬಳಿ ಆಲ್ಕೊಳದ ವಿಶ್ವನಾಥ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ ಹಿಂದುತ್ವ ಸಂಘಟನೆಗಳು ಶಿವಮೊಗ್ಗ ನಗರವನ್ನು ಬಂದ್ ಮಾಡಿದ್ದವು. ಭಾರೀ ಪ್ರತಿಭಟನೆ ನಡೆಸಿದ್ದವು. ವಿಶ್ವನಾಥ್‌ ಕುಟುಂಬವನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು.

“ನಿಮಗೆ ನಾವು ಮಕ್ಕಳಾಗಿ ಇರುತ್ತೇವೆ. ನಿಮ್ಮನ್ನು ಕಡೆಯವರೆಗೂ ನೋಡಿಕೊಳ್ಳುತ್ತೇವೆ” ಎಂದು ವೀರಾವೇಶದಿಂದ ಮಾತನಾಡಿದ ಯಾವ ಮುಖಂಡನೂ ಮೀನಾಕ್ಷಮ್ಮನ ಸಹಾಯಕಕ್ಕೆ ಬಂದಿಲ್ಲ. ಮೀನಾಕ್ಷಮ್ಮನವರು ನ್ಯಾಯಬೆಲೆ ಅಂಗಡಿಯಲ್ಲಿ ಕೊಡುವ ಅಕ್ಕಿ ಪಡೆದು ಜೀವನ ಸಾಗಿಸುತ್ತಿದ್ದಾರೆ. ಅಲ್ಲಿ ಇಲ್ಲಿ ಪುಳ್ಳೆ ಆಯ್ದು ತಂದು ಅಡುಗೆ ಮಾಡಿಕೊಳ್ಳುತ್ತಿದ್ದಾರೆ.

ವಿಶ್ವನಾಥ್‌ ಅವರ ಹೆಂಡತಿ ಕಾಯಿಲೆ ಬಿದ್ದರು. ಸರ್ಕಾರ ನೀಡಿದ್ದ ಐದು ಲಕ್ಷ ರೂ. ಪರಿಹಾರ ಹಣ ವಿಶ್ವನಾಥ್‌ ಅವರ ಪತ್ನಿಯ ಆಸ್ಪತ್ರೆಯ ಖರ್ಚಿಗಾಯಿತು. ಜಾಂಡೀಸ್ ಆಗಿ ಅವರು ತೀರಿಕೊಂಡ ಬಳಿಕ ಪುಟಾಣಿ ಆದಿತ್ಯನ ಭಾರ ಮೀನಾಕ್ಷಮ್ಮನ ಅವರ ಹೆಗಲ ಮೇಲೆ ಬಿತ್ತು. ಮಗಳು ಕೂಡ ತೀರಿಕೊಂಡ ಬಳಿಕ ಮೀನಾಕ್ಷಮ್ಮ ಅನಾಥೆಯಾದರು. ಮಗುವನ್ನು ಓದಿಸುವ ಭಾರಹೊತ್ತಿಕೊಂಡ ಅಜ್ಜಿ, ಚಿಂದಿ ಆಯುತ್ತ ಬದುಕು ಸವೆಸುತ್ತಿದ್ದಾರೆ.

ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ, ಮೃತನ ಪೋನ್ ನಾಪತ್ತೆ

“ಸರಕಾರದಿಂದ ಕೊಡುವ ಸಂಧ್ಯಾ ಸುರಕ್ಷಾ ಪಿಂಚಣಿ ಸಿಗುತ್ತಿಲ್ಲ. ಜೀವ ಇರುವವರೆಗೆ ಹೊಟ್ಟೆ ತುಂಬಿಸಿಕೊಳ್ಳಬೇಕಲ್ವಾ? ನ್ಯಾಯಬೆಲೆ ಅಂಗಡಿಯಿಂದ ತಿಂಗಳಿಗೆ 10 ಕೆ.ಜಿ. ಅಕ್ಕಿ ಕೊಡುತ್ತಾರೆ. ಪ್ರತಿದಿನ ಬೆಳಿಗ್ಗೆ ರಸ್ತೆ, ತಿಪ್ಪೆಗಳಲ್ಲಿ ಪ್ಲಾಸ್ಟಿಕ್‌ ಆಯುವುದರಿಂದ 10ರಿಂದ 20 ರೂಪಾಯಿ ಬರುತ್ತದೆ. ಅದರಲ್ಲಿ ತರಕಾರಿ, ದಿನಸಿ, ಮಾತ್ರೆ ಎಲ್ಲವನ್ನೂ ಸರಿದೂಗಿಸಬೇಕು ಎನ್ನುವಾಗ ಆ ತಾಯಿ ಕಣ್ಣೀರು ಸುರಿಸಿದರು” ಎಂದು ‘ವಿಜಯಕರ್ನಾಟಕ’ ವರದಿ ಮಾಡಿದೆ.

“ಮಗನಿಲ್ಲ, ಮಗಳಿಲ್ಲ, ಸೊಸೆ ಇಲ್ಲ. ಮಗ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಎರಡು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದರೂ ಪಿಂಚಣಿ ಸಿಕ್ಕಿಲ್ಲ. ಕರೆಂಟ್ ಬಿಲ್ ಕಟ್ಟಿಲ್ಲವೆಂದು ಮೂರು ವರ್ಷದ ಹಿಂದೆ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರಿಂದ ಮನೆಯಲ್ಲಿ ಬೆಳಕಿಲ್ಲ. ನೀರಿನ ಬಿಲ್‌ ಕಟ್ಟಿಲ್ಲವೆಂದು ನೀರಿನ ಸಂಪರ್ಕವಿಲ್ಲ”- ಹೀಗೆ ‘ಇಲ್ಲ’ಗಳ ಪಟ್ಟಿಯ ನಡುವೆ ಇಳಿಜೀವದ ಮೀನಾಕ್ಷಮ್ಮನ ಬದುಕು ಹಿಂಡಿ ಹಿಪ್ಪೆಯಾಗಿದೆ.

“ಹರ್ಷ ಕುಟುಂಬಕ್ಕೆ ಹಲವರು ನೆರವು ನೀಡಿದ್ದಾರೆ. ಒಂದು ಕೋಟಿ ರೂ. ಕುಟುಂಬಕ್ಕೆ ಹರಿದುಬಂದಿದೆ. ಆದರೆ ವಿಶ್ವನಾಥ್ ಅವರ ತಾಯಿ ಮಾತ್ರ ಪುಟ್ಟ ಮನೆಯಲ್ಲಿ ಕತ್ತಲೆಯಲ್ಲೇ ಬದುಕು ಸಾಗಿಸುತ್ತಿದ್ದಾರೆ” ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ಶಿವಮೊಗ್ಗ ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್ ಅವರು ಮೀನಾಕ್ಷಮ್ಮನವರನ್ನು ಭೇಟಿಯಾಗಿ ನೆರವು ನೀಡಿದರು.

ವಿಶ್ವನಾಥ್‌ ತಾಯಿಯವರನ್ನು ಭೇಟಿಯಾಗಿ ನೆರವು ನೀಡಿರುವ ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್‌ ಅವರು ‘ನಾನುಗೌರಿ.ಕಾಂ’ನೊಂದಿಗೆ ಮಾತನಾಡಿ, “ಮೀನಾಕ್ಷಮ್ಮನವರ ಸ್ಥಿತಿ ನೋಡಿದರೆ ಬಹಳ ನೋವಾಗುತ್ತದೆ. ಕುಡಿಯಲು ನೀರಿನ ಸಂಪರ್ಕವಿರಲಿಲ್ಲ. ಮನೆಯಂತೂ ಬಹಳ ದುಸ್ಥಿತಿಯಲ್ಲಿದೆ. ಕರೆಂಟ್‌ ಬಿಲ್ ಕಟ್ಟಿಲ್ಲವೆಂದು ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ತುರ್ತಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಡಲು ಕ್ರಮ ವಹಿಸಿದೆ. ನೀರಿನ ವ್ಯವಸ್ಥೆ ಮಾಡಿಕೊಡಲಾಗಿದೆ. ಮನೆಗೆ ಸುಣ್ಣ ಬಣ್ಣ ಬಳಿಸಲಾಗುವುದು. ವಿಷಯ ತಿಳಿದ ಅನೇಕ ಸಂಘಟನೆಗಳು ಮೀನಾಕ್ಷಮ್ಮನವರಿಗೆ ನೆರವು ನೀಡಲು ಮುಂದಾಗಿವೆ. 12 ವರ್ಷದ ಮೊಮ್ಮಗನನ್ನು ಸಾಕಲು ಆ ತಾಯಿ ಬಹಳ ಕಷ್ಟಪಡುತ್ತಿದ್ದಾರೆ. ಈ ಕಷ್ಟ ಯಾರಿಗೂ ಬರಬಾರದು” ಎಂದರು.

ಮೀನಾಕ್ಷಮ್ಮನವರಿಗೆ ನೆರವು ನೀಡಲು ಬಯಸುವವರು ಈ ಖಾತೆಗೆ ಹಣ ಕಳುಹಿಸಬಹುದು.

ಮೀನಾಕ್ಷಮ್ಮನವರ ಬ್ಯಾಂಕ್‌ ಅಕೌಂಟ್‌ ವಿವರ. ಧನಸಹಾಯ ಮಾಡುವವರು ಈ ಖಾತೆಗೆ ಹಣ ಜಮೆ ಮಾಡಬಹುದು.

ಇದನ್ನೂ ಓದಿರಿ: ‘ಬಾಳಿಗ ಕೊಲೆಯ ಬಗ್ಗೆ ಬಾಯಿಬಿಡದವರು, ದಲಿತ ವ್ಯಕ್ತಿ ಕೊಲೆಯಾದದ್ದು ಖಂಡಿಸುತ್ತಾರಾ?’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...