Homeಕರ್ನಾಟಕಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಸಿಂಧೂತಾಯಿ ಸಪ್ಕಾಲ್‌ ಅವರು ಭೇಟಿ ನೀಡಿದ್ದ ಕ್ಷಣಗಳನ್ನು ರಂಗಾಯಣದ ಮಾಜಿ ನಿರ್ದೇಶಕಿ ಭಾಗೀರಥಿಬಾಯಿ ಕದಂ ಅವರು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

“ನಾನು ನನ್ನ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೆ. ಒಮ್ಮೆ ಬಸ್‌ನಲ್ಲಿ ಹೋಗುತ್ತಿದ್ದಾಗ ಟಿಕೆಟ್ ಪರೀಕ್ಷಕರು ಬಂದು ಟಿಕೆಟ್ ಇಲ್ಲದ ನನ್ನನ್ನು ಬಸ್‌‌ನಿಂದ ಹೊರದೂಡಿದರು. ನಾನು ಗಾಯಗೊಂಡೆ. ಬಸ್‌‌ ಸ್ಪಲ್ಪ ದೂರ ಸಾಗಿತ್ತಷ್ಟೇ. ಸಿಡಿಲು ಬಡಿದು ಸಂಪೂರ್ಣ ಹೊತ್ತಿ ಉರಿಯಿತು. ನನ್ನ ಕಣ್ಣುಗಳ ಮುಂದೆಯೇ ನಡೆದ ಭಯಾನಕ ದೃಶ್ಯವಿದು. ನಾನು ಮತ್ತೆ ಹೇಗೆ ಉಳಿದೆ ಎಂದು ಯೋಚಿಸಿದೆ. ದೇವರು ನನ್ನನ್ನು ಒಂದು ಉದ್ದೇಶಕ್ಕಾಗಿ ಬದುಕಿಸಲು ಇಚ್ಛಿಸಿರಬೇಕು ಎಂದು ಭಾವಿಸಿದೆ…”

…ಹೀಗೆ ತಮ್ಮ ಬದುಕಿನ ಅನುಭವಗಳನ್ನು ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಂಚಿಕೊಂಡಿದ್ದರು ಮಹಾರಾಷ್ಟ್ರದ ಅನಾಥಮಕ್ಕಳ ಮಹಾತಾಯಿ ಸಿಂಧೂತಾಯಿ ಸಪ್ಕಾಲ್‌. ಮೈಸೂರು ರಂಗಾಯಣಕ್ಕೆ ನಿರ್ದೇಶಕರಾಗಿದ್ದ ಭಾಗೀರಥಿಬಾಯಿ ಕದಂ ಅವರು ತಮ್ಮ ಅಧಿಕಾರವಧಿಯಲ್ಲಿ (2018) ನಡೆದ ಚಿಣ್ಣರ ನಾಟಕೋತ್ಸವಕ್ಕೆ ಸಿಂಧೂತಾಯಿಯವರನ್ನು ಕರೆಸಿದ್ದರು.

ಮೈಸೂರು ರಂಗಾಯಣ ಸಿಂಧೂತಾಯಿ ಅವರಿಂದ ಮಕ್ಕಳಿಗೆ ಕೈತುತ್ತು ನೀಡುವ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದ ಸಿಂಧೂತಾಯಿ, ಅನಾಥ ಮಕ್ಕಳಿಗೆ ತಾವು ಆಶ್ರಯ ನೀಡಿದ್ದನ್ನು ಹಂಚಿಕೊಂಡಿದ್ದರು. “ಕೆಲವು ಕೌಟುಂಬಿಕ ಸಮಸ್ಯೆಗಳಿಂದ ನಾನು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದೆ. ನೀರು ಕೇಳುತ್ತಾ ಸಾಯುತ್ತಿರುವ ವ್ಯಕ್ತಿಯನ್ನು ನಾನು ನೋಡಿದೆ. ನಾನು ಅವನಿಗೆ ನೀರು ಕೊಟ್ಟೆ. ಆತ ಹೇಳಿದ- ‘ನೀವು ನೀಡಿದ ನೀರಿನಿಂದ ನನ್ನ ಜೀವ ಉಳಿಯಿತು’ ಎಂದು. ಒಬ್ಬ ವ್ಯಕ್ತಿಗೆ ನೀರು ಕೊಡುವುದರಿಂದ ನಾನು ಒಂದು ಜೀವವನ್ನು ಉಳಿಸಬಹುದೇ ಎಂದು ನಾನು ನಿರ್ಧರಿಸಿದೆ. ನಂತರ ನಾನು ಇನ್ನೂ ಕೆಲವು ಜೀವಗಳನ್ನು ಉಳಿಸಲು ಬದುಕಬೇಕು ಎಂದು ನಿರ್ಧರಿಸಿದೆ” ಎಂದು ಅವರು ಹೇಳಿದ್ದನ್ನು ಭಾಗೀರಥಿಬಾಯಿ ಕದಂ ನೆನೆಯುತ್ತಾರೆ.

ಮೈಸೂರಿನ ರಂಗಾಯಣಕ್ಕೆ ಅನಾಥ ಮಕ್ಕಳ ತಾಯಿ ಸಿಂಧೂತಾಯಿ ಸಪ್ಕಾಲ್‌ ಭೇಟಿ ನೀಡಿದ್ದ ಸಂದರ್ಭ. ರಂಗಾಯಣದ ಅಂದಿನ ನಿರ್ದೇಶಕಿ ಭಾಗೀರಥಿಬಾಯಿ ಕದಂ ಚಿತ್ರದಲ್ಲಿದ್ದಾರೆ.

“ಅವರು ಒಬ್ಬರ ಮಕ್ಕಳ ತಾಯಿಯಾಗಿರಲ್ಲ. ಸಾವಿರಾರು ಅನಾಥ ಮಕ್ಕಳ ತಾಯಿಯಾಗಿದ್ದರು. ಅಂತಹ ತಾಯಿಯನ್ನು ಚಿಣ್ಣರ ಮೇಳದ ನಾಟಕೋತ್ಸವಕ್ಕೆ ಕರೆಸಿದ್ದು ಒಂದು ಅವಿಸ್ಮರಣೀಯ ಕ್ಷಣ. ಅವರ ಸಾವಿನ ಸುದ್ದಿ ಕೇಳಿದ ಬಳಿಕ ಸಾವಿರಾರು ಮಕ್ಕಳು ಅನಾಥರಾದರೇನೋ ಅನಿಸುತ್ತಿದೆ. ಸಿಂಧೂ ತಾಯಿಯವರ ಮಾತುಗಳನ್ನು ಕೇಳಿದವರು ಸ್ಫೂರ್ತಿಯಿಂದ ಪುಟಿದೇಳುತ್ತಿದ್ದರು. ಚಿಣ್ಣರೊಂದಿಗೆ ಅಮ್ಮಂದಿರ ಕೈತುತ್ತು ಕಾರ್ಯಕ್ರಮವನ್ನು ರಂಗಾಯಣ ಆಯೋಜಿಸಿತ್ತು. ನೂರಾರು ಮಕ್ಕಳು ಸಿಂಧೂತಾಯಿಯವರ ಕೈತುತ್ತು ಸೇವಿಸಿದರು” ಎಂದು ಅವರು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಂಧೂತಾಯಿ, ”ನನ್ನನ್ನು ದೇವರು ಎನ್ನುತ್ತಾರೆ. ನಾನು ದೇವರಲ್ಲ, ನಾನು ತಾಯಿ. ಸಂಸಾರ ಎನ್ನುವುದು ಸೈಕಲ್‌ನ ಹಾಗೇ ಸೈಕಲ್‌ನ ಮುಂದಿನ ಚಕ್ರ ತಂದೆಯಾದರೆ, ಹಿಂದಿನ ಚಕ್ರ ತಾಯಿ. ಸೈಕಲ್‌ನಲ್ಲಿ ಹಿಂದಿನ ಚಕ್ರಕ್ಕೆ ಹೇಗೆ ಭಾರ ಜಾಸ್ತಿಯೋ ಹಾಗೇ ತಾಯಿಗೂ ಕೂಡ ಸಂಸಾರದ ಭಾರ ಜಾಸ್ತಿಯಾಗಿರುತ್ತದೆ. ತಂದೆ, ತಾಯಿ ತಮ್ಮ ಬಟ್ಟೆ ಹರಿದಿದ್ದರೂ, ಮಕ್ಕಳಿಗೆ ಉತ್ತಮ ಬಟ್ಟೆಯನ್ನು ಕೊಡಿಸುತ್ತಾರೆ. ಹಾಗೆಯೇ ಮಕ್ಕಳು ವೃದ್ಧಾಪ್ಯದಲ್ಲಿ ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳಬೇಕು” ಎಂದು ಆಶಿಸಿದ್ದರು.

“ನಾನು ಅನಾಥಳಾಗಿ ಬಂದೆ. ನನ್ನನ್ನು ಅನಾಥ ಮಕ್ಕಳು ತಾಯಿಯಾಗಿಸಿದರು. ಇಂದು ಅವರು ಅನಾಥರಲ್ಲ, ನಾನು ಅನಾಥಳಲ್ಲ. ನನ್ನೊಟ್ಟಿಗೆ ಅವರು, ಅವರೊಂದಿಗೆ ನಾನು ಇದ್ದೇನೆ. ಹಸಿವಿನ ನೋವು ಅನುಭವಿಸಿದ ನಾನು ಅದನ್ನು ದೂರಾಗಿಸಲು ಹಾಡು ಹಾಡಿ, ಭಿಕ್ಷೆ ಬೇಡಿ ಹಸಿವು ನೀಗಿಸುತ್ತಿದ್ದೆ. ಕುಟುಂಬದಿಂದ ದೂರ, ಅನಾಥೆ, ಹಸಿವು ಈ ಎಲ್ಲ ನೋವುಗಳಿಂದ ದೂರಾಗಬೇಕು ಎಂದು ಸಾಯಲು ನಿರ್ಧರಿಸಿದೆ. ಆ ಸಂದರ್ಭದಲ್ಲಿ ವೃದ್ಧರೊಬ್ಬರು ನೀರು ಕೇಳಿದರು ಅವರಿಗೆ ನೀರು ಕುಡಿಸಿದೆ. ನನ್ನ ಬದುಕಿಸಿದೆ ತಾಯಿ ಎಂದು ನುಡಿದರು. ಆ ಒಂದೇ, ಒಂದು ನುಡಿ ನನ್ನ ಬದುಕನ್ನು ಬದಲಿಸಿತು. ನನ್ನಲ್ಲಿಯೂ ಒಂದು ಶಕ್ತಿಯಿದೆ ಎಂದು ಅರಿತು ಅನಾಥರೆಲ್ಲರನ್ನೂ ನನ್ನ ಮಕ್ಕಳು ಎಂದು ಭಾವಿಸಿ ಅವರಿಗಾಗಿ ಬದುಕಿದೆ” ಎಂದು ಹೇಳಿದ್ದರು ಸಿಂಧೂತಾಯಿ.

ಈ ನೆನಪುಗಳನ್ನು ‘ನಾನುಗೌರಿ.ಕಾಂ’ ಜೊತೆ ಮೆಲುಕು ಹಾಕಿದ ಭಾಗೀರಥಿಬಾಯಿ ಕದಂ ಅವರು, “ಇಡೀ ಮಹಿಳೆಯರಿಗೆ ಸಿಂಧೂತಾಯಿ ಆದರ್ಶ ದೀಪವಾಗಿದ್ದರು. ಯಾವ ಹೆಣ್ಣು ತನ್ನಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾಳೋ, ಹತಾಶೆಗೆ ಒಳಗಾಗಿದ್ದಾಳೋ ಆಕೆಯೂ ಎದ್ದು ನಿಂತು ಸಮಾಜದಲ್ಲಿ ಒಂದು ಒಳ್ಳೆಯ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಸಿಂಧೂತಾಯಿ ಉದಾಹರಣೆಯಾಗಿ ನಿಂತಿದ್ದಾರೆ. ಕಳೆದ ಐದಾರು ತಿಂಗಳ ಹಿಂದಿನವರೆಗೂ ಹಲವು ಮೆಸೇಜ್‌ಗಳನ್ನು ಅವರು ಕಳುಹಿಸುತ್ತಿದ್ದರು. ಓದು ಬರೆಯಲು ಬಾರದೇ ಇದ್ದ ಅವರು ತಾವಾಗಿಯೇ ವಿದ್ಯಾಭ್ಯಾಸ ಮಾಡಿ, ಎಲ್ಲವನ್ನೂ ಕಲಿತುಕೊಂಡು, ಮಕ್ಕಳಿಗೂ ವಿದ್ಯಾಭ್ಯಾಸ ಕಲಿಸಿ ಸಾಕಿ ಸಲುಹಿಸಿದರು. ಅವರ ಕಾರ್ಯಕ್ಕೆ ಅಸಂಖ್ಯಾತ ದಾನಿಗಳು ಸಹಾಯ ಮಾಡಿದ್ದರು. ಅವರ ಅಗಲಿಕೆಯಿಂದಾಗಿ ಮಹಿಳಾ ಸಮಾಜ ಒಂದು ದಾರಿದೀಪವನ್ನು ಕಳೆದುಕೊಂಡಂತಾಗಿದೆ” ಎಂದರು.


ಇದನ್ನೂ ಓದಿರಿ: ಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...