Homeಕರ್ನಾಟಕಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಸಿಂಧೂತಾಯಿ ಸಪ್ಕಾಲ್‌ ಅವರು ಭೇಟಿ ನೀಡಿದ್ದ ಕ್ಷಣಗಳನ್ನು ರಂಗಾಯಣದ ಮಾಜಿ ನಿರ್ದೇಶಕಿ ಭಾಗೀರಥಿಬಾಯಿ ಕದಂ ಅವರು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

“ನಾನು ನನ್ನ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೆ. ಒಮ್ಮೆ ಬಸ್‌ನಲ್ಲಿ ಹೋಗುತ್ತಿದ್ದಾಗ ಟಿಕೆಟ್ ಪರೀಕ್ಷಕರು ಬಂದು ಟಿಕೆಟ್ ಇಲ್ಲದ ನನ್ನನ್ನು ಬಸ್‌‌ನಿಂದ ಹೊರದೂಡಿದರು. ನಾನು ಗಾಯಗೊಂಡೆ. ಬಸ್‌‌ ಸ್ಪಲ್ಪ ದೂರ ಸಾಗಿತ್ತಷ್ಟೇ. ಸಿಡಿಲು ಬಡಿದು ಸಂಪೂರ್ಣ ಹೊತ್ತಿ ಉರಿಯಿತು. ನನ್ನ ಕಣ್ಣುಗಳ ಮುಂದೆಯೇ ನಡೆದ ಭಯಾನಕ ದೃಶ್ಯವಿದು. ನಾನು ಮತ್ತೆ ಹೇಗೆ ಉಳಿದೆ ಎಂದು ಯೋಚಿಸಿದೆ. ದೇವರು ನನ್ನನ್ನು ಒಂದು ಉದ್ದೇಶಕ್ಕಾಗಿ ಬದುಕಿಸಲು ಇಚ್ಛಿಸಿರಬೇಕು ಎಂದು ಭಾವಿಸಿದೆ…”

…ಹೀಗೆ ತಮ್ಮ ಬದುಕಿನ ಅನುಭವಗಳನ್ನು ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಂಚಿಕೊಂಡಿದ್ದರು ಮಹಾರಾಷ್ಟ್ರದ ಅನಾಥಮಕ್ಕಳ ಮಹಾತಾಯಿ ಸಿಂಧೂತಾಯಿ ಸಪ್ಕಾಲ್‌. ಮೈಸೂರು ರಂಗಾಯಣಕ್ಕೆ ನಿರ್ದೇಶಕರಾಗಿದ್ದ ಭಾಗೀರಥಿಬಾಯಿ ಕದಂ ಅವರು ತಮ್ಮ ಅಧಿಕಾರವಧಿಯಲ್ಲಿ (2018) ನಡೆದ ಚಿಣ್ಣರ ನಾಟಕೋತ್ಸವಕ್ಕೆ ಸಿಂಧೂತಾಯಿಯವರನ್ನು ಕರೆಸಿದ್ದರು.

ಮೈಸೂರು ರಂಗಾಯಣ ಸಿಂಧೂತಾಯಿ ಅವರಿಂದ ಮಕ್ಕಳಿಗೆ ಕೈತುತ್ತು ನೀಡುವ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದ ಸಿಂಧೂತಾಯಿ, ಅನಾಥ ಮಕ್ಕಳಿಗೆ ತಾವು ಆಶ್ರಯ ನೀಡಿದ್ದನ್ನು ಹಂಚಿಕೊಂಡಿದ್ದರು. “ಕೆಲವು ಕೌಟುಂಬಿಕ ಸಮಸ್ಯೆಗಳಿಂದ ನಾನು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದೆ. ನೀರು ಕೇಳುತ್ತಾ ಸಾಯುತ್ತಿರುವ ವ್ಯಕ್ತಿಯನ್ನು ನಾನು ನೋಡಿದೆ. ನಾನು ಅವನಿಗೆ ನೀರು ಕೊಟ್ಟೆ. ಆತ ಹೇಳಿದ- ‘ನೀವು ನೀಡಿದ ನೀರಿನಿಂದ ನನ್ನ ಜೀವ ಉಳಿಯಿತು’ ಎಂದು. ಒಬ್ಬ ವ್ಯಕ್ತಿಗೆ ನೀರು ಕೊಡುವುದರಿಂದ ನಾನು ಒಂದು ಜೀವವನ್ನು ಉಳಿಸಬಹುದೇ ಎಂದು ನಾನು ನಿರ್ಧರಿಸಿದೆ. ನಂತರ ನಾನು ಇನ್ನೂ ಕೆಲವು ಜೀವಗಳನ್ನು ಉಳಿಸಲು ಬದುಕಬೇಕು ಎಂದು ನಿರ್ಧರಿಸಿದೆ” ಎಂದು ಅವರು ಹೇಳಿದ್ದನ್ನು ಭಾಗೀರಥಿಬಾಯಿ ಕದಂ ನೆನೆಯುತ್ತಾರೆ.

ಮೈಸೂರಿನ ರಂಗಾಯಣಕ್ಕೆ ಅನಾಥ ಮಕ್ಕಳ ತಾಯಿ ಸಿಂಧೂತಾಯಿ ಸಪ್ಕಾಲ್‌ ಭೇಟಿ ನೀಡಿದ್ದ ಸಂದರ್ಭ. ರಂಗಾಯಣದ ಅಂದಿನ ನಿರ್ದೇಶಕಿ ಭಾಗೀರಥಿಬಾಯಿ ಕದಂ ಚಿತ್ರದಲ್ಲಿದ್ದಾರೆ.

“ಅವರು ಒಬ್ಬರ ಮಕ್ಕಳ ತಾಯಿಯಾಗಿರಲ್ಲ. ಸಾವಿರಾರು ಅನಾಥ ಮಕ್ಕಳ ತಾಯಿಯಾಗಿದ್ದರು. ಅಂತಹ ತಾಯಿಯನ್ನು ಚಿಣ್ಣರ ಮೇಳದ ನಾಟಕೋತ್ಸವಕ್ಕೆ ಕರೆಸಿದ್ದು ಒಂದು ಅವಿಸ್ಮರಣೀಯ ಕ್ಷಣ. ಅವರ ಸಾವಿನ ಸುದ್ದಿ ಕೇಳಿದ ಬಳಿಕ ಸಾವಿರಾರು ಮಕ್ಕಳು ಅನಾಥರಾದರೇನೋ ಅನಿಸುತ್ತಿದೆ. ಸಿಂಧೂ ತಾಯಿಯವರ ಮಾತುಗಳನ್ನು ಕೇಳಿದವರು ಸ್ಫೂರ್ತಿಯಿಂದ ಪುಟಿದೇಳುತ್ತಿದ್ದರು. ಚಿಣ್ಣರೊಂದಿಗೆ ಅಮ್ಮಂದಿರ ಕೈತುತ್ತು ಕಾರ್ಯಕ್ರಮವನ್ನು ರಂಗಾಯಣ ಆಯೋಜಿಸಿತ್ತು. ನೂರಾರು ಮಕ್ಕಳು ಸಿಂಧೂತಾಯಿಯವರ ಕೈತುತ್ತು ಸೇವಿಸಿದರು” ಎಂದು ಅವರು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಂಧೂತಾಯಿ, ”ನನ್ನನ್ನು ದೇವರು ಎನ್ನುತ್ತಾರೆ. ನಾನು ದೇವರಲ್ಲ, ನಾನು ತಾಯಿ. ಸಂಸಾರ ಎನ್ನುವುದು ಸೈಕಲ್‌ನ ಹಾಗೇ ಸೈಕಲ್‌ನ ಮುಂದಿನ ಚಕ್ರ ತಂದೆಯಾದರೆ, ಹಿಂದಿನ ಚಕ್ರ ತಾಯಿ. ಸೈಕಲ್‌ನಲ್ಲಿ ಹಿಂದಿನ ಚಕ್ರಕ್ಕೆ ಹೇಗೆ ಭಾರ ಜಾಸ್ತಿಯೋ ಹಾಗೇ ತಾಯಿಗೂ ಕೂಡ ಸಂಸಾರದ ಭಾರ ಜಾಸ್ತಿಯಾಗಿರುತ್ತದೆ. ತಂದೆ, ತಾಯಿ ತಮ್ಮ ಬಟ್ಟೆ ಹರಿದಿದ್ದರೂ, ಮಕ್ಕಳಿಗೆ ಉತ್ತಮ ಬಟ್ಟೆಯನ್ನು ಕೊಡಿಸುತ್ತಾರೆ. ಹಾಗೆಯೇ ಮಕ್ಕಳು ವೃದ್ಧಾಪ್ಯದಲ್ಲಿ ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳಬೇಕು” ಎಂದು ಆಶಿಸಿದ್ದರು.

“ನಾನು ಅನಾಥಳಾಗಿ ಬಂದೆ. ನನ್ನನ್ನು ಅನಾಥ ಮಕ್ಕಳು ತಾಯಿಯಾಗಿಸಿದರು. ಇಂದು ಅವರು ಅನಾಥರಲ್ಲ, ನಾನು ಅನಾಥಳಲ್ಲ. ನನ್ನೊಟ್ಟಿಗೆ ಅವರು, ಅವರೊಂದಿಗೆ ನಾನು ಇದ್ದೇನೆ. ಹಸಿವಿನ ನೋವು ಅನುಭವಿಸಿದ ನಾನು ಅದನ್ನು ದೂರಾಗಿಸಲು ಹಾಡು ಹಾಡಿ, ಭಿಕ್ಷೆ ಬೇಡಿ ಹಸಿವು ನೀಗಿಸುತ್ತಿದ್ದೆ. ಕುಟುಂಬದಿಂದ ದೂರ, ಅನಾಥೆ, ಹಸಿವು ಈ ಎಲ್ಲ ನೋವುಗಳಿಂದ ದೂರಾಗಬೇಕು ಎಂದು ಸಾಯಲು ನಿರ್ಧರಿಸಿದೆ. ಆ ಸಂದರ್ಭದಲ್ಲಿ ವೃದ್ಧರೊಬ್ಬರು ನೀರು ಕೇಳಿದರು ಅವರಿಗೆ ನೀರು ಕುಡಿಸಿದೆ. ನನ್ನ ಬದುಕಿಸಿದೆ ತಾಯಿ ಎಂದು ನುಡಿದರು. ಆ ಒಂದೇ, ಒಂದು ನುಡಿ ನನ್ನ ಬದುಕನ್ನು ಬದಲಿಸಿತು. ನನ್ನಲ್ಲಿಯೂ ಒಂದು ಶಕ್ತಿಯಿದೆ ಎಂದು ಅರಿತು ಅನಾಥರೆಲ್ಲರನ್ನೂ ನನ್ನ ಮಕ್ಕಳು ಎಂದು ಭಾವಿಸಿ ಅವರಿಗಾಗಿ ಬದುಕಿದೆ” ಎಂದು ಹೇಳಿದ್ದರು ಸಿಂಧೂತಾಯಿ.

ಈ ನೆನಪುಗಳನ್ನು ‘ನಾನುಗೌರಿ.ಕಾಂ’ ಜೊತೆ ಮೆಲುಕು ಹಾಕಿದ ಭಾಗೀರಥಿಬಾಯಿ ಕದಂ ಅವರು, “ಇಡೀ ಮಹಿಳೆಯರಿಗೆ ಸಿಂಧೂತಾಯಿ ಆದರ್ಶ ದೀಪವಾಗಿದ್ದರು. ಯಾವ ಹೆಣ್ಣು ತನ್ನಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾಳೋ, ಹತಾಶೆಗೆ ಒಳಗಾಗಿದ್ದಾಳೋ ಆಕೆಯೂ ಎದ್ದು ನಿಂತು ಸಮಾಜದಲ್ಲಿ ಒಂದು ಒಳ್ಳೆಯ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಸಿಂಧೂತಾಯಿ ಉದಾಹರಣೆಯಾಗಿ ನಿಂತಿದ್ದಾರೆ. ಕಳೆದ ಐದಾರು ತಿಂಗಳ ಹಿಂದಿನವರೆಗೂ ಹಲವು ಮೆಸೇಜ್‌ಗಳನ್ನು ಅವರು ಕಳುಹಿಸುತ್ತಿದ್ದರು. ಓದು ಬರೆಯಲು ಬಾರದೇ ಇದ್ದ ಅವರು ತಾವಾಗಿಯೇ ವಿದ್ಯಾಭ್ಯಾಸ ಮಾಡಿ, ಎಲ್ಲವನ್ನೂ ಕಲಿತುಕೊಂಡು, ಮಕ್ಕಳಿಗೂ ವಿದ್ಯಾಭ್ಯಾಸ ಕಲಿಸಿ ಸಾಕಿ ಸಲುಹಿಸಿದರು. ಅವರ ಕಾರ್ಯಕ್ಕೆ ಅಸಂಖ್ಯಾತ ದಾನಿಗಳು ಸಹಾಯ ಮಾಡಿದ್ದರು. ಅವರ ಅಗಲಿಕೆಯಿಂದಾಗಿ ಮಹಿಳಾ ಸಮಾಜ ಒಂದು ದಾರಿದೀಪವನ್ನು ಕಳೆದುಕೊಂಡಂತಾಗಿದೆ” ಎಂದರು.


ಇದನ್ನೂ ಓದಿರಿ: ಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...