Homeಕರ್ನಾಟಕಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಸಿಂಧೂತಾಯಿ ಸಪ್ಕಾಲ್‌ ಅವರು ಭೇಟಿ ನೀಡಿದ್ದ ಕ್ಷಣಗಳನ್ನು ರಂಗಾಯಣದ ಮಾಜಿ ನಿರ್ದೇಶಕಿ ಭಾಗೀರಥಿಬಾಯಿ ಕದಂ ಅವರು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

“ನಾನು ನನ್ನ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೆ. ಒಮ್ಮೆ ಬಸ್‌ನಲ್ಲಿ ಹೋಗುತ್ತಿದ್ದಾಗ ಟಿಕೆಟ್ ಪರೀಕ್ಷಕರು ಬಂದು ಟಿಕೆಟ್ ಇಲ್ಲದ ನನ್ನನ್ನು ಬಸ್‌‌ನಿಂದ ಹೊರದೂಡಿದರು. ನಾನು ಗಾಯಗೊಂಡೆ. ಬಸ್‌‌ ಸ್ಪಲ್ಪ ದೂರ ಸಾಗಿತ್ತಷ್ಟೇ. ಸಿಡಿಲು ಬಡಿದು ಸಂಪೂರ್ಣ ಹೊತ್ತಿ ಉರಿಯಿತು. ನನ್ನ ಕಣ್ಣುಗಳ ಮುಂದೆಯೇ ನಡೆದ ಭಯಾನಕ ದೃಶ್ಯವಿದು. ನಾನು ಮತ್ತೆ ಹೇಗೆ ಉಳಿದೆ ಎಂದು ಯೋಚಿಸಿದೆ. ದೇವರು ನನ್ನನ್ನು ಒಂದು ಉದ್ದೇಶಕ್ಕಾಗಿ ಬದುಕಿಸಲು ಇಚ್ಛಿಸಿರಬೇಕು ಎಂದು ಭಾವಿಸಿದೆ…”

…ಹೀಗೆ ತಮ್ಮ ಬದುಕಿನ ಅನುಭವಗಳನ್ನು ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಂಚಿಕೊಂಡಿದ್ದರು ಮಹಾರಾಷ್ಟ್ರದ ಅನಾಥಮಕ್ಕಳ ಮಹಾತಾಯಿ ಸಿಂಧೂತಾಯಿ ಸಪ್ಕಾಲ್‌. ಮೈಸೂರು ರಂಗಾಯಣಕ್ಕೆ ನಿರ್ದೇಶಕರಾಗಿದ್ದ ಭಾಗೀರಥಿಬಾಯಿ ಕದಂ ಅವರು ತಮ್ಮ ಅಧಿಕಾರವಧಿಯಲ್ಲಿ (2018) ನಡೆದ ಚಿಣ್ಣರ ನಾಟಕೋತ್ಸವಕ್ಕೆ ಸಿಂಧೂತಾಯಿಯವರನ್ನು ಕರೆಸಿದ್ದರು.

ಮೈಸೂರು ರಂಗಾಯಣ ಸಿಂಧೂತಾಯಿ ಅವರಿಂದ ಮಕ್ಕಳಿಗೆ ಕೈತುತ್ತು ನೀಡುವ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದ ಸಿಂಧೂತಾಯಿ, ಅನಾಥ ಮಕ್ಕಳಿಗೆ ತಾವು ಆಶ್ರಯ ನೀಡಿದ್ದನ್ನು ಹಂಚಿಕೊಂಡಿದ್ದರು. “ಕೆಲವು ಕೌಟುಂಬಿಕ ಸಮಸ್ಯೆಗಳಿಂದ ನಾನು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದೆ. ನೀರು ಕೇಳುತ್ತಾ ಸಾಯುತ್ತಿರುವ ವ್ಯಕ್ತಿಯನ್ನು ನಾನು ನೋಡಿದೆ. ನಾನು ಅವನಿಗೆ ನೀರು ಕೊಟ್ಟೆ. ಆತ ಹೇಳಿದ- ‘ನೀವು ನೀಡಿದ ನೀರಿನಿಂದ ನನ್ನ ಜೀವ ಉಳಿಯಿತು’ ಎಂದು. ಒಬ್ಬ ವ್ಯಕ್ತಿಗೆ ನೀರು ಕೊಡುವುದರಿಂದ ನಾನು ಒಂದು ಜೀವವನ್ನು ಉಳಿಸಬಹುದೇ ಎಂದು ನಾನು ನಿರ್ಧರಿಸಿದೆ. ನಂತರ ನಾನು ಇನ್ನೂ ಕೆಲವು ಜೀವಗಳನ್ನು ಉಳಿಸಲು ಬದುಕಬೇಕು ಎಂದು ನಿರ್ಧರಿಸಿದೆ” ಎಂದು ಅವರು ಹೇಳಿದ್ದನ್ನು ಭಾಗೀರಥಿಬಾಯಿ ಕದಂ ನೆನೆಯುತ್ತಾರೆ.

ಮೈಸೂರಿನ ರಂಗಾಯಣಕ್ಕೆ ಅನಾಥ ಮಕ್ಕಳ ತಾಯಿ ಸಿಂಧೂತಾಯಿ ಸಪ್ಕಾಲ್‌ ಭೇಟಿ ನೀಡಿದ್ದ ಸಂದರ್ಭ. ರಂಗಾಯಣದ ಅಂದಿನ ನಿರ್ದೇಶಕಿ ಭಾಗೀರಥಿಬಾಯಿ ಕದಂ ಚಿತ್ರದಲ್ಲಿದ್ದಾರೆ.

“ಅವರು ಒಬ್ಬರ ಮಕ್ಕಳ ತಾಯಿಯಾಗಿರಲ್ಲ. ಸಾವಿರಾರು ಅನಾಥ ಮಕ್ಕಳ ತಾಯಿಯಾಗಿದ್ದರು. ಅಂತಹ ತಾಯಿಯನ್ನು ಚಿಣ್ಣರ ಮೇಳದ ನಾಟಕೋತ್ಸವಕ್ಕೆ ಕರೆಸಿದ್ದು ಒಂದು ಅವಿಸ್ಮರಣೀಯ ಕ್ಷಣ. ಅವರ ಸಾವಿನ ಸುದ್ದಿ ಕೇಳಿದ ಬಳಿಕ ಸಾವಿರಾರು ಮಕ್ಕಳು ಅನಾಥರಾದರೇನೋ ಅನಿಸುತ್ತಿದೆ. ಸಿಂಧೂ ತಾಯಿಯವರ ಮಾತುಗಳನ್ನು ಕೇಳಿದವರು ಸ್ಫೂರ್ತಿಯಿಂದ ಪುಟಿದೇಳುತ್ತಿದ್ದರು. ಚಿಣ್ಣರೊಂದಿಗೆ ಅಮ್ಮಂದಿರ ಕೈತುತ್ತು ಕಾರ್ಯಕ್ರಮವನ್ನು ರಂಗಾಯಣ ಆಯೋಜಿಸಿತ್ತು. ನೂರಾರು ಮಕ್ಕಳು ಸಿಂಧೂತಾಯಿಯವರ ಕೈತುತ್ತು ಸೇವಿಸಿದರು” ಎಂದು ಅವರು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಂಧೂತಾಯಿ, ”ನನ್ನನ್ನು ದೇವರು ಎನ್ನುತ್ತಾರೆ. ನಾನು ದೇವರಲ್ಲ, ನಾನು ತಾಯಿ. ಸಂಸಾರ ಎನ್ನುವುದು ಸೈಕಲ್‌ನ ಹಾಗೇ ಸೈಕಲ್‌ನ ಮುಂದಿನ ಚಕ್ರ ತಂದೆಯಾದರೆ, ಹಿಂದಿನ ಚಕ್ರ ತಾಯಿ. ಸೈಕಲ್‌ನಲ್ಲಿ ಹಿಂದಿನ ಚಕ್ರಕ್ಕೆ ಹೇಗೆ ಭಾರ ಜಾಸ್ತಿಯೋ ಹಾಗೇ ತಾಯಿಗೂ ಕೂಡ ಸಂಸಾರದ ಭಾರ ಜಾಸ್ತಿಯಾಗಿರುತ್ತದೆ. ತಂದೆ, ತಾಯಿ ತಮ್ಮ ಬಟ್ಟೆ ಹರಿದಿದ್ದರೂ, ಮಕ್ಕಳಿಗೆ ಉತ್ತಮ ಬಟ್ಟೆಯನ್ನು ಕೊಡಿಸುತ್ತಾರೆ. ಹಾಗೆಯೇ ಮಕ್ಕಳು ವೃದ್ಧಾಪ್ಯದಲ್ಲಿ ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳಬೇಕು” ಎಂದು ಆಶಿಸಿದ್ದರು.

“ನಾನು ಅನಾಥಳಾಗಿ ಬಂದೆ. ನನ್ನನ್ನು ಅನಾಥ ಮಕ್ಕಳು ತಾಯಿಯಾಗಿಸಿದರು. ಇಂದು ಅವರು ಅನಾಥರಲ್ಲ, ನಾನು ಅನಾಥಳಲ್ಲ. ನನ್ನೊಟ್ಟಿಗೆ ಅವರು, ಅವರೊಂದಿಗೆ ನಾನು ಇದ್ದೇನೆ. ಹಸಿವಿನ ನೋವು ಅನುಭವಿಸಿದ ನಾನು ಅದನ್ನು ದೂರಾಗಿಸಲು ಹಾಡು ಹಾಡಿ, ಭಿಕ್ಷೆ ಬೇಡಿ ಹಸಿವು ನೀಗಿಸುತ್ತಿದ್ದೆ. ಕುಟುಂಬದಿಂದ ದೂರ, ಅನಾಥೆ, ಹಸಿವು ಈ ಎಲ್ಲ ನೋವುಗಳಿಂದ ದೂರಾಗಬೇಕು ಎಂದು ಸಾಯಲು ನಿರ್ಧರಿಸಿದೆ. ಆ ಸಂದರ್ಭದಲ್ಲಿ ವೃದ್ಧರೊಬ್ಬರು ನೀರು ಕೇಳಿದರು ಅವರಿಗೆ ನೀರು ಕುಡಿಸಿದೆ. ನನ್ನ ಬದುಕಿಸಿದೆ ತಾಯಿ ಎಂದು ನುಡಿದರು. ಆ ಒಂದೇ, ಒಂದು ನುಡಿ ನನ್ನ ಬದುಕನ್ನು ಬದಲಿಸಿತು. ನನ್ನಲ್ಲಿಯೂ ಒಂದು ಶಕ್ತಿಯಿದೆ ಎಂದು ಅರಿತು ಅನಾಥರೆಲ್ಲರನ್ನೂ ನನ್ನ ಮಕ್ಕಳು ಎಂದು ಭಾವಿಸಿ ಅವರಿಗಾಗಿ ಬದುಕಿದೆ” ಎಂದು ಹೇಳಿದ್ದರು ಸಿಂಧೂತಾಯಿ.

ಈ ನೆನಪುಗಳನ್ನು ‘ನಾನುಗೌರಿ.ಕಾಂ’ ಜೊತೆ ಮೆಲುಕು ಹಾಕಿದ ಭಾಗೀರಥಿಬಾಯಿ ಕದಂ ಅವರು, “ಇಡೀ ಮಹಿಳೆಯರಿಗೆ ಸಿಂಧೂತಾಯಿ ಆದರ್ಶ ದೀಪವಾಗಿದ್ದರು. ಯಾವ ಹೆಣ್ಣು ತನ್ನಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾಳೋ, ಹತಾಶೆಗೆ ಒಳಗಾಗಿದ್ದಾಳೋ ಆಕೆಯೂ ಎದ್ದು ನಿಂತು ಸಮಾಜದಲ್ಲಿ ಒಂದು ಒಳ್ಳೆಯ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಸಿಂಧೂತಾಯಿ ಉದಾಹರಣೆಯಾಗಿ ನಿಂತಿದ್ದಾರೆ. ಕಳೆದ ಐದಾರು ತಿಂಗಳ ಹಿಂದಿನವರೆಗೂ ಹಲವು ಮೆಸೇಜ್‌ಗಳನ್ನು ಅವರು ಕಳುಹಿಸುತ್ತಿದ್ದರು. ಓದು ಬರೆಯಲು ಬಾರದೇ ಇದ್ದ ಅವರು ತಾವಾಗಿಯೇ ವಿದ್ಯಾಭ್ಯಾಸ ಮಾಡಿ, ಎಲ್ಲವನ್ನೂ ಕಲಿತುಕೊಂಡು, ಮಕ್ಕಳಿಗೂ ವಿದ್ಯಾಭ್ಯಾಸ ಕಲಿಸಿ ಸಾಕಿ ಸಲುಹಿಸಿದರು. ಅವರ ಕಾರ್ಯಕ್ಕೆ ಅಸಂಖ್ಯಾತ ದಾನಿಗಳು ಸಹಾಯ ಮಾಡಿದ್ದರು. ಅವರ ಅಗಲಿಕೆಯಿಂದಾಗಿ ಮಹಿಳಾ ಸಮಾಜ ಒಂದು ದಾರಿದೀಪವನ್ನು ಕಳೆದುಕೊಂಡಂತಾಗಿದೆ” ಎಂದರು.


ಇದನ್ನೂ ಓದಿರಿ: ಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...