Homeಕರ್ನಾಟಕಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಸಿಂಧೂತಾಯಿ ಸಪ್ಕಾಲ್‌ ಅವರು ಭೇಟಿ ನೀಡಿದ್ದ ಕ್ಷಣಗಳನ್ನು ರಂಗಾಯಣದ ಮಾಜಿ ನಿರ್ದೇಶಕಿ ಭಾಗೀರಥಿಬಾಯಿ ಕದಂ ಅವರು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

“ನಾನು ನನ್ನ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೆ. ಒಮ್ಮೆ ಬಸ್‌ನಲ್ಲಿ ಹೋಗುತ್ತಿದ್ದಾಗ ಟಿಕೆಟ್ ಪರೀಕ್ಷಕರು ಬಂದು ಟಿಕೆಟ್ ಇಲ್ಲದ ನನ್ನನ್ನು ಬಸ್‌‌ನಿಂದ ಹೊರದೂಡಿದರು. ನಾನು ಗಾಯಗೊಂಡೆ. ಬಸ್‌‌ ಸ್ಪಲ್ಪ ದೂರ ಸಾಗಿತ್ತಷ್ಟೇ. ಸಿಡಿಲು ಬಡಿದು ಸಂಪೂರ್ಣ ಹೊತ್ತಿ ಉರಿಯಿತು. ನನ್ನ ಕಣ್ಣುಗಳ ಮುಂದೆಯೇ ನಡೆದ ಭಯಾನಕ ದೃಶ್ಯವಿದು. ನಾನು ಮತ್ತೆ ಹೇಗೆ ಉಳಿದೆ ಎಂದು ಯೋಚಿಸಿದೆ. ದೇವರು ನನ್ನನ್ನು ಒಂದು ಉದ್ದೇಶಕ್ಕಾಗಿ ಬದುಕಿಸಲು ಇಚ್ಛಿಸಿರಬೇಕು ಎಂದು ಭಾವಿಸಿದೆ…”

…ಹೀಗೆ ತಮ್ಮ ಬದುಕಿನ ಅನುಭವಗಳನ್ನು ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಂಚಿಕೊಂಡಿದ್ದರು ಮಹಾರಾಷ್ಟ್ರದ ಅನಾಥಮಕ್ಕಳ ಮಹಾತಾಯಿ ಸಿಂಧೂತಾಯಿ ಸಪ್ಕಾಲ್‌. ಮೈಸೂರು ರಂಗಾಯಣಕ್ಕೆ ನಿರ್ದೇಶಕರಾಗಿದ್ದ ಭಾಗೀರಥಿಬಾಯಿ ಕದಂ ಅವರು ತಮ್ಮ ಅಧಿಕಾರವಧಿಯಲ್ಲಿ (2018) ನಡೆದ ಚಿಣ್ಣರ ನಾಟಕೋತ್ಸವಕ್ಕೆ ಸಿಂಧೂತಾಯಿಯವರನ್ನು ಕರೆಸಿದ್ದರು.

ಮೈಸೂರು ರಂಗಾಯಣ ಸಿಂಧೂತಾಯಿ ಅವರಿಂದ ಮಕ್ಕಳಿಗೆ ಕೈತುತ್ತು ನೀಡುವ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದ ಸಿಂಧೂತಾಯಿ, ಅನಾಥ ಮಕ್ಕಳಿಗೆ ತಾವು ಆಶ್ರಯ ನೀಡಿದ್ದನ್ನು ಹಂಚಿಕೊಂಡಿದ್ದರು. “ಕೆಲವು ಕೌಟುಂಬಿಕ ಸಮಸ್ಯೆಗಳಿಂದ ನಾನು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದೆ. ನೀರು ಕೇಳುತ್ತಾ ಸಾಯುತ್ತಿರುವ ವ್ಯಕ್ತಿಯನ್ನು ನಾನು ನೋಡಿದೆ. ನಾನು ಅವನಿಗೆ ನೀರು ಕೊಟ್ಟೆ. ಆತ ಹೇಳಿದ- ‘ನೀವು ನೀಡಿದ ನೀರಿನಿಂದ ನನ್ನ ಜೀವ ಉಳಿಯಿತು’ ಎಂದು. ಒಬ್ಬ ವ್ಯಕ್ತಿಗೆ ನೀರು ಕೊಡುವುದರಿಂದ ನಾನು ಒಂದು ಜೀವವನ್ನು ಉಳಿಸಬಹುದೇ ಎಂದು ನಾನು ನಿರ್ಧರಿಸಿದೆ. ನಂತರ ನಾನು ಇನ್ನೂ ಕೆಲವು ಜೀವಗಳನ್ನು ಉಳಿಸಲು ಬದುಕಬೇಕು ಎಂದು ನಿರ್ಧರಿಸಿದೆ” ಎಂದು ಅವರು ಹೇಳಿದ್ದನ್ನು ಭಾಗೀರಥಿಬಾಯಿ ಕದಂ ನೆನೆಯುತ್ತಾರೆ.

ಮೈಸೂರಿನ ರಂಗಾಯಣಕ್ಕೆ ಅನಾಥ ಮಕ್ಕಳ ತಾಯಿ ಸಿಂಧೂತಾಯಿ ಸಪ್ಕಾಲ್‌ ಭೇಟಿ ನೀಡಿದ್ದ ಸಂದರ್ಭ. ರಂಗಾಯಣದ ಅಂದಿನ ನಿರ್ದೇಶಕಿ ಭಾಗೀರಥಿಬಾಯಿ ಕದಂ ಚಿತ್ರದಲ್ಲಿದ್ದಾರೆ.

“ಅವರು ಒಬ್ಬರ ಮಕ್ಕಳ ತಾಯಿಯಾಗಿರಲ್ಲ. ಸಾವಿರಾರು ಅನಾಥ ಮಕ್ಕಳ ತಾಯಿಯಾಗಿದ್ದರು. ಅಂತಹ ತಾಯಿಯನ್ನು ಚಿಣ್ಣರ ಮೇಳದ ನಾಟಕೋತ್ಸವಕ್ಕೆ ಕರೆಸಿದ್ದು ಒಂದು ಅವಿಸ್ಮರಣೀಯ ಕ್ಷಣ. ಅವರ ಸಾವಿನ ಸುದ್ದಿ ಕೇಳಿದ ಬಳಿಕ ಸಾವಿರಾರು ಮಕ್ಕಳು ಅನಾಥರಾದರೇನೋ ಅನಿಸುತ್ತಿದೆ. ಸಿಂಧೂ ತಾಯಿಯವರ ಮಾತುಗಳನ್ನು ಕೇಳಿದವರು ಸ್ಫೂರ್ತಿಯಿಂದ ಪುಟಿದೇಳುತ್ತಿದ್ದರು. ಚಿಣ್ಣರೊಂದಿಗೆ ಅಮ್ಮಂದಿರ ಕೈತುತ್ತು ಕಾರ್ಯಕ್ರಮವನ್ನು ರಂಗಾಯಣ ಆಯೋಜಿಸಿತ್ತು. ನೂರಾರು ಮಕ್ಕಳು ಸಿಂಧೂತಾಯಿಯವರ ಕೈತುತ್ತು ಸೇವಿಸಿದರು” ಎಂದು ಅವರು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಂಧೂತಾಯಿ, ”ನನ್ನನ್ನು ದೇವರು ಎನ್ನುತ್ತಾರೆ. ನಾನು ದೇವರಲ್ಲ, ನಾನು ತಾಯಿ. ಸಂಸಾರ ಎನ್ನುವುದು ಸೈಕಲ್‌ನ ಹಾಗೇ ಸೈಕಲ್‌ನ ಮುಂದಿನ ಚಕ್ರ ತಂದೆಯಾದರೆ, ಹಿಂದಿನ ಚಕ್ರ ತಾಯಿ. ಸೈಕಲ್‌ನಲ್ಲಿ ಹಿಂದಿನ ಚಕ್ರಕ್ಕೆ ಹೇಗೆ ಭಾರ ಜಾಸ್ತಿಯೋ ಹಾಗೇ ತಾಯಿಗೂ ಕೂಡ ಸಂಸಾರದ ಭಾರ ಜಾಸ್ತಿಯಾಗಿರುತ್ತದೆ. ತಂದೆ, ತಾಯಿ ತಮ್ಮ ಬಟ್ಟೆ ಹರಿದಿದ್ದರೂ, ಮಕ್ಕಳಿಗೆ ಉತ್ತಮ ಬಟ್ಟೆಯನ್ನು ಕೊಡಿಸುತ್ತಾರೆ. ಹಾಗೆಯೇ ಮಕ್ಕಳು ವೃದ್ಧಾಪ್ಯದಲ್ಲಿ ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳಬೇಕು” ಎಂದು ಆಶಿಸಿದ್ದರು.

“ನಾನು ಅನಾಥಳಾಗಿ ಬಂದೆ. ನನ್ನನ್ನು ಅನಾಥ ಮಕ್ಕಳು ತಾಯಿಯಾಗಿಸಿದರು. ಇಂದು ಅವರು ಅನಾಥರಲ್ಲ, ನಾನು ಅನಾಥಳಲ್ಲ. ನನ್ನೊಟ್ಟಿಗೆ ಅವರು, ಅವರೊಂದಿಗೆ ನಾನು ಇದ್ದೇನೆ. ಹಸಿವಿನ ನೋವು ಅನುಭವಿಸಿದ ನಾನು ಅದನ್ನು ದೂರಾಗಿಸಲು ಹಾಡು ಹಾಡಿ, ಭಿಕ್ಷೆ ಬೇಡಿ ಹಸಿವು ನೀಗಿಸುತ್ತಿದ್ದೆ. ಕುಟುಂಬದಿಂದ ದೂರ, ಅನಾಥೆ, ಹಸಿವು ಈ ಎಲ್ಲ ನೋವುಗಳಿಂದ ದೂರಾಗಬೇಕು ಎಂದು ಸಾಯಲು ನಿರ್ಧರಿಸಿದೆ. ಆ ಸಂದರ್ಭದಲ್ಲಿ ವೃದ್ಧರೊಬ್ಬರು ನೀರು ಕೇಳಿದರು ಅವರಿಗೆ ನೀರು ಕುಡಿಸಿದೆ. ನನ್ನ ಬದುಕಿಸಿದೆ ತಾಯಿ ಎಂದು ನುಡಿದರು. ಆ ಒಂದೇ, ಒಂದು ನುಡಿ ನನ್ನ ಬದುಕನ್ನು ಬದಲಿಸಿತು. ನನ್ನಲ್ಲಿಯೂ ಒಂದು ಶಕ್ತಿಯಿದೆ ಎಂದು ಅರಿತು ಅನಾಥರೆಲ್ಲರನ್ನೂ ನನ್ನ ಮಕ್ಕಳು ಎಂದು ಭಾವಿಸಿ ಅವರಿಗಾಗಿ ಬದುಕಿದೆ” ಎಂದು ಹೇಳಿದ್ದರು ಸಿಂಧೂತಾಯಿ.

ಈ ನೆನಪುಗಳನ್ನು ‘ನಾನುಗೌರಿ.ಕಾಂ’ ಜೊತೆ ಮೆಲುಕು ಹಾಕಿದ ಭಾಗೀರಥಿಬಾಯಿ ಕದಂ ಅವರು, “ಇಡೀ ಮಹಿಳೆಯರಿಗೆ ಸಿಂಧೂತಾಯಿ ಆದರ್ಶ ದೀಪವಾಗಿದ್ದರು. ಯಾವ ಹೆಣ್ಣು ತನ್ನಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾಳೋ, ಹತಾಶೆಗೆ ಒಳಗಾಗಿದ್ದಾಳೋ ಆಕೆಯೂ ಎದ್ದು ನಿಂತು ಸಮಾಜದಲ್ಲಿ ಒಂದು ಒಳ್ಳೆಯ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಸಿಂಧೂತಾಯಿ ಉದಾಹರಣೆಯಾಗಿ ನಿಂತಿದ್ದಾರೆ. ಕಳೆದ ಐದಾರು ತಿಂಗಳ ಹಿಂದಿನವರೆಗೂ ಹಲವು ಮೆಸೇಜ್‌ಗಳನ್ನು ಅವರು ಕಳುಹಿಸುತ್ತಿದ್ದರು. ಓದು ಬರೆಯಲು ಬಾರದೇ ಇದ್ದ ಅವರು ತಾವಾಗಿಯೇ ವಿದ್ಯಾಭ್ಯಾಸ ಮಾಡಿ, ಎಲ್ಲವನ್ನೂ ಕಲಿತುಕೊಂಡು, ಮಕ್ಕಳಿಗೂ ವಿದ್ಯಾಭ್ಯಾಸ ಕಲಿಸಿ ಸಾಕಿ ಸಲುಹಿಸಿದರು. ಅವರ ಕಾರ್ಯಕ್ಕೆ ಅಸಂಖ್ಯಾತ ದಾನಿಗಳು ಸಹಾಯ ಮಾಡಿದ್ದರು. ಅವರ ಅಗಲಿಕೆಯಿಂದಾಗಿ ಮಹಿಳಾ ಸಮಾಜ ಒಂದು ದಾರಿದೀಪವನ್ನು ಕಳೆದುಕೊಂಡಂತಾಗಿದೆ” ಎಂದರು.


ಇದನ್ನೂ ಓದಿರಿ: ಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...