Homeಕರ್ನಾಟಕಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಸಿಂಧೂತಾಯಿ ಸಪ್ಕಾಲ್‌ ಅವರು ಭೇಟಿ ನೀಡಿದ್ದ ಕ್ಷಣಗಳನ್ನು ರಂಗಾಯಣದ ಮಾಜಿ ನಿರ್ದೇಶಕಿ ಭಾಗೀರಥಿಬಾಯಿ ಕದಂ ಅವರು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

“ನಾನು ನನ್ನ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೆ. ಒಮ್ಮೆ ಬಸ್‌ನಲ್ಲಿ ಹೋಗುತ್ತಿದ್ದಾಗ ಟಿಕೆಟ್ ಪರೀಕ್ಷಕರು ಬಂದು ಟಿಕೆಟ್ ಇಲ್ಲದ ನನ್ನನ್ನು ಬಸ್‌‌ನಿಂದ ಹೊರದೂಡಿದರು. ನಾನು ಗಾಯಗೊಂಡೆ. ಬಸ್‌‌ ಸ್ಪಲ್ಪ ದೂರ ಸಾಗಿತ್ತಷ್ಟೇ. ಸಿಡಿಲು ಬಡಿದು ಸಂಪೂರ್ಣ ಹೊತ್ತಿ ಉರಿಯಿತು. ನನ್ನ ಕಣ್ಣುಗಳ ಮುಂದೆಯೇ ನಡೆದ ಭಯಾನಕ ದೃಶ್ಯವಿದು. ನಾನು ಮತ್ತೆ ಹೇಗೆ ಉಳಿದೆ ಎಂದು ಯೋಚಿಸಿದೆ. ದೇವರು ನನ್ನನ್ನು ಒಂದು ಉದ್ದೇಶಕ್ಕಾಗಿ ಬದುಕಿಸಲು ಇಚ್ಛಿಸಿರಬೇಕು ಎಂದು ಭಾವಿಸಿದೆ…”

…ಹೀಗೆ ತಮ್ಮ ಬದುಕಿನ ಅನುಭವಗಳನ್ನು ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಂಚಿಕೊಂಡಿದ್ದರು ಮಹಾರಾಷ್ಟ್ರದ ಅನಾಥಮಕ್ಕಳ ಮಹಾತಾಯಿ ಸಿಂಧೂತಾಯಿ ಸಪ್ಕಾಲ್‌. ಮೈಸೂರು ರಂಗಾಯಣಕ್ಕೆ ನಿರ್ದೇಶಕರಾಗಿದ್ದ ಭಾಗೀರಥಿಬಾಯಿ ಕದಂ ಅವರು ತಮ್ಮ ಅಧಿಕಾರವಧಿಯಲ್ಲಿ (2018) ನಡೆದ ಚಿಣ್ಣರ ನಾಟಕೋತ್ಸವಕ್ಕೆ ಸಿಂಧೂತಾಯಿಯವರನ್ನು ಕರೆಸಿದ್ದರು.

ಮೈಸೂರು ರಂಗಾಯಣ ಸಿಂಧೂತಾಯಿ ಅವರಿಂದ ಮಕ್ಕಳಿಗೆ ಕೈತುತ್ತು ನೀಡುವ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದ ಸಿಂಧೂತಾಯಿ, ಅನಾಥ ಮಕ್ಕಳಿಗೆ ತಾವು ಆಶ್ರಯ ನೀಡಿದ್ದನ್ನು ಹಂಚಿಕೊಂಡಿದ್ದರು. “ಕೆಲವು ಕೌಟುಂಬಿಕ ಸಮಸ್ಯೆಗಳಿಂದ ನಾನು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದೆ. ನೀರು ಕೇಳುತ್ತಾ ಸಾಯುತ್ತಿರುವ ವ್ಯಕ್ತಿಯನ್ನು ನಾನು ನೋಡಿದೆ. ನಾನು ಅವನಿಗೆ ನೀರು ಕೊಟ್ಟೆ. ಆತ ಹೇಳಿದ- ‘ನೀವು ನೀಡಿದ ನೀರಿನಿಂದ ನನ್ನ ಜೀವ ಉಳಿಯಿತು’ ಎಂದು. ಒಬ್ಬ ವ್ಯಕ್ತಿಗೆ ನೀರು ಕೊಡುವುದರಿಂದ ನಾನು ಒಂದು ಜೀವವನ್ನು ಉಳಿಸಬಹುದೇ ಎಂದು ನಾನು ನಿರ್ಧರಿಸಿದೆ. ನಂತರ ನಾನು ಇನ್ನೂ ಕೆಲವು ಜೀವಗಳನ್ನು ಉಳಿಸಲು ಬದುಕಬೇಕು ಎಂದು ನಿರ್ಧರಿಸಿದೆ” ಎಂದು ಅವರು ಹೇಳಿದ್ದನ್ನು ಭಾಗೀರಥಿಬಾಯಿ ಕದಂ ನೆನೆಯುತ್ತಾರೆ.

ಮೈಸೂರಿನ ರಂಗಾಯಣಕ್ಕೆ ಅನಾಥ ಮಕ್ಕಳ ತಾಯಿ ಸಿಂಧೂತಾಯಿ ಸಪ್ಕಾಲ್‌ ಭೇಟಿ ನೀಡಿದ್ದ ಸಂದರ್ಭ. ರಂಗಾಯಣದ ಅಂದಿನ ನಿರ್ದೇಶಕಿ ಭಾಗೀರಥಿಬಾಯಿ ಕದಂ ಚಿತ್ರದಲ್ಲಿದ್ದಾರೆ.

“ಅವರು ಒಬ್ಬರ ಮಕ್ಕಳ ತಾಯಿಯಾಗಿರಲ್ಲ. ಸಾವಿರಾರು ಅನಾಥ ಮಕ್ಕಳ ತಾಯಿಯಾಗಿದ್ದರು. ಅಂತಹ ತಾಯಿಯನ್ನು ಚಿಣ್ಣರ ಮೇಳದ ನಾಟಕೋತ್ಸವಕ್ಕೆ ಕರೆಸಿದ್ದು ಒಂದು ಅವಿಸ್ಮರಣೀಯ ಕ್ಷಣ. ಅವರ ಸಾವಿನ ಸುದ್ದಿ ಕೇಳಿದ ಬಳಿಕ ಸಾವಿರಾರು ಮಕ್ಕಳು ಅನಾಥರಾದರೇನೋ ಅನಿಸುತ್ತಿದೆ. ಸಿಂಧೂ ತಾಯಿಯವರ ಮಾತುಗಳನ್ನು ಕೇಳಿದವರು ಸ್ಫೂರ್ತಿಯಿಂದ ಪುಟಿದೇಳುತ್ತಿದ್ದರು. ಚಿಣ್ಣರೊಂದಿಗೆ ಅಮ್ಮಂದಿರ ಕೈತುತ್ತು ಕಾರ್ಯಕ್ರಮವನ್ನು ರಂಗಾಯಣ ಆಯೋಜಿಸಿತ್ತು. ನೂರಾರು ಮಕ್ಕಳು ಸಿಂಧೂತಾಯಿಯವರ ಕೈತುತ್ತು ಸೇವಿಸಿದರು” ಎಂದು ಅವರು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಂಧೂತಾಯಿ, ”ನನ್ನನ್ನು ದೇವರು ಎನ್ನುತ್ತಾರೆ. ನಾನು ದೇವರಲ್ಲ, ನಾನು ತಾಯಿ. ಸಂಸಾರ ಎನ್ನುವುದು ಸೈಕಲ್‌ನ ಹಾಗೇ ಸೈಕಲ್‌ನ ಮುಂದಿನ ಚಕ್ರ ತಂದೆಯಾದರೆ, ಹಿಂದಿನ ಚಕ್ರ ತಾಯಿ. ಸೈಕಲ್‌ನಲ್ಲಿ ಹಿಂದಿನ ಚಕ್ರಕ್ಕೆ ಹೇಗೆ ಭಾರ ಜಾಸ್ತಿಯೋ ಹಾಗೇ ತಾಯಿಗೂ ಕೂಡ ಸಂಸಾರದ ಭಾರ ಜಾಸ್ತಿಯಾಗಿರುತ್ತದೆ. ತಂದೆ, ತಾಯಿ ತಮ್ಮ ಬಟ್ಟೆ ಹರಿದಿದ್ದರೂ, ಮಕ್ಕಳಿಗೆ ಉತ್ತಮ ಬಟ್ಟೆಯನ್ನು ಕೊಡಿಸುತ್ತಾರೆ. ಹಾಗೆಯೇ ಮಕ್ಕಳು ವೃದ್ಧಾಪ್ಯದಲ್ಲಿ ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳಬೇಕು” ಎಂದು ಆಶಿಸಿದ್ದರು.

“ನಾನು ಅನಾಥಳಾಗಿ ಬಂದೆ. ನನ್ನನ್ನು ಅನಾಥ ಮಕ್ಕಳು ತಾಯಿಯಾಗಿಸಿದರು. ಇಂದು ಅವರು ಅನಾಥರಲ್ಲ, ನಾನು ಅನಾಥಳಲ್ಲ. ನನ್ನೊಟ್ಟಿಗೆ ಅವರು, ಅವರೊಂದಿಗೆ ನಾನು ಇದ್ದೇನೆ. ಹಸಿವಿನ ನೋವು ಅನುಭವಿಸಿದ ನಾನು ಅದನ್ನು ದೂರಾಗಿಸಲು ಹಾಡು ಹಾಡಿ, ಭಿಕ್ಷೆ ಬೇಡಿ ಹಸಿವು ನೀಗಿಸುತ್ತಿದ್ದೆ. ಕುಟುಂಬದಿಂದ ದೂರ, ಅನಾಥೆ, ಹಸಿವು ಈ ಎಲ್ಲ ನೋವುಗಳಿಂದ ದೂರಾಗಬೇಕು ಎಂದು ಸಾಯಲು ನಿರ್ಧರಿಸಿದೆ. ಆ ಸಂದರ್ಭದಲ್ಲಿ ವೃದ್ಧರೊಬ್ಬರು ನೀರು ಕೇಳಿದರು ಅವರಿಗೆ ನೀರು ಕುಡಿಸಿದೆ. ನನ್ನ ಬದುಕಿಸಿದೆ ತಾಯಿ ಎಂದು ನುಡಿದರು. ಆ ಒಂದೇ, ಒಂದು ನುಡಿ ನನ್ನ ಬದುಕನ್ನು ಬದಲಿಸಿತು. ನನ್ನಲ್ಲಿಯೂ ಒಂದು ಶಕ್ತಿಯಿದೆ ಎಂದು ಅರಿತು ಅನಾಥರೆಲ್ಲರನ್ನೂ ನನ್ನ ಮಕ್ಕಳು ಎಂದು ಭಾವಿಸಿ ಅವರಿಗಾಗಿ ಬದುಕಿದೆ” ಎಂದು ಹೇಳಿದ್ದರು ಸಿಂಧೂತಾಯಿ.

ಈ ನೆನಪುಗಳನ್ನು ‘ನಾನುಗೌರಿ.ಕಾಂ’ ಜೊತೆ ಮೆಲುಕು ಹಾಕಿದ ಭಾಗೀರಥಿಬಾಯಿ ಕದಂ ಅವರು, “ಇಡೀ ಮಹಿಳೆಯರಿಗೆ ಸಿಂಧೂತಾಯಿ ಆದರ್ಶ ದೀಪವಾಗಿದ್ದರು. ಯಾವ ಹೆಣ್ಣು ತನ್ನಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾಳೋ, ಹತಾಶೆಗೆ ಒಳಗಾಗಿದ್ದಾಳೋ ಆಕೆಯೂ ಎದ್ದು ನಿಂತು ಸಮಾಜದಲ್ಲಿ ಒಂದು ಒಳ್ಳೆಯ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಸಿಂಧೂತಾಯಿ ಉದಾಹರಣೆಯಾಗಿ ನಿಂತಿದ್ದಾರೆ. ಕಳೆದ ಐದಾರು ತಿಂಗಳ ಹಿಂದಿನವರೆಗೂ ಹಲವು ಮೆಸೇಜ್‌ಗಳನ್ನು ಅವರು ಕಳುಹಿಸುತ್ತಿದ್ದರು. ಓದು ಬರೆಯಲು ಬಾರದೇ ಇದ್ದ ಅವರು ತಾವಾಗಿಯೇ ವಿದ್ಯಾಭ್ಯಾಸ ಮಾಡಿ, ಎಲ್ಲವನ್ನೂ ಕಲಿತುಕೊಂಡು, ಮಕ್ಕಳಿಗೂ ವಿದ್ಯಾಭ್ಯಾಸ ಕಲಿಸಿ ಸಾಕಿ ಸಲುಹಿಸಿದರು. ಅವರ ಕಾರ್ಯಕ್ಕೆ ಅಸಂಖ್ಯಾತ ದಾನಿಗಳು ಸಹಾಯ ಮಾಡಿದ್ದರು. ಅವರ ಅಗಲಿಕೆಯಿಂದಾಗಿ ಮಹಿಳಾ ಸಮಾಜ ಒಂದು ದಾರಿದೀಪವನ್ನು ಕಳೆದುಕೊಂಡಂತಾಗಿದೆ” ಎಂದರು.


ಇದನ್ನೂ ಓದಿರಿ: ಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...