Homeಕರ್ನಾಟಕಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಬಂದು ಮಕ್ಕಳಿಗೆ ‘ಕೈತುತ್ತು’ ನೀಡಿದ್ದರು ಅನಾಥ ಮಕ್ಕಳ ತಾಯಿ ‘ಸಪ್ಕಾಲ್‌’

ಮೈಸೂರು ರಂಗಾಯಣಕ್ಕೆ ಸಿಂಧೂತಾಯಿ ಸಪ್ಕಾಲ್‌ ಅವರು ಭೇಟಿ ನೀಡಿದ್ದ ಕ್ಷಣಗಳನ್ನು ರಂಗಾಯಣದ ಮಾಜಿ ನಿರ್ದೇಶಕಿ ಭಾಗೀರಥಿಬಾಯಿ ಕದಂ ಅವರು ಇಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

“ನಾನು ನನ್ನ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೆ. ಒಮ್ಮೆ ಬಸ್‌ನಲ್ಲಿ ಹೋಗುತ್ತಿದ್ದಾಗ ಟಿಕೆಟ್ ಪರೀಕ್ಷಕರು ಬಂದು ಟಿಕೆಟ್ ಇಲ್ಲದ ನನ್ನನ್ನು ಬಸ್‌‌ನಿಂದ ಹೊರದೂಡಿದರು. ನಾನು ಗಾಯಗೊಂಡೆ. ಬಸ್‌‌ ಸ್ಪಲ್ಪ ದೂರ ಸಾಗಿತ್ತಷ್ಟೇ. ಸಿಡಿಲು ಬಡಿದು ಸಂಪೂರ್ಣ ಹೊತ್ತಿ ಉರಿಯಿತು. ನನ್ನ ಕಣ್ಣುಗಳ ಮುಂದೆಯೇ ನಡೆದ ಭಯಾನಕ ದೃಶ್ಯವಿದು. ನಾನು ಮತ್ತೆ ಹೇಗೆ ಉಳಿದೆ ಎಂದು ಯೋಚಿಸಿದೆ. ದೇವರು ನನ್ನನ್ನು ಒಂದು ಉದ್ದೇಶಕ್ಕಾಗಿ ಬದುಕಿಸಲು ಇಚ್ಛಿಸಿರಬೇಕು ಎಂದು ಭಾವಿಸಿದೆ…”

…ಹೀಗೆ ತಮ್ಮ ಬದುಕಿನ ಅನುಭವಗಳನ್ನು ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಂಚಿಕೊಂಡಿದ್ದರು ಮಹಾರಾಷ್ಟ್ರದ ಅನಾಥಮಕ್ಕಳ ಮಹಾತಾಯಿ ಸಿಂಧೂತಾಯಿ ಸಪ್ಕಾಲ್‌. ಮೈಸೂರು ರಂಗಾಯಣಕ್ಕೆ ನಿರ್ದೇಶಕರಾಗಿದ್ದ ಭಾಗೀರಥಿಬಾಯಿ ಕದಂ ಅವರು ತಮ್ಮ ಅಧಿಕಾರವಧಿಯಲ್ಲಿ (2018) ನಡೆದ ಚಿಣ್ಣರ ನಾಟಕೋತ್ಸವಕ್ಕೆ ಸಿಂಧೂತಾಯಿಯವರನ್ನು ಕರೆಸಿದ್ದರು.

ಮೈಸೂರು ರಂಗಾಯಣ ಸಿಂಧೂತಾಯಿ ಅವರಿಂದ ಮಕ್ಕಳಿಗೆ ಕೈತುತ್ತು ನೀಡುವ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ್ದ ಸಿಂಧೂತಾಯಿ, ಅನಾಥ ಮಕ್ಕಳಿಗೆ ತಾವು ಆಶ್ರಯ ನೀಡಿದ್ದನ್ನು ಹಂಚಿಕೊಂಡಿದ್ದರು. “ಕೆಲವು ಕೌಟುಂಬಿಕ ಸಮಸ್ಯೆಗಳಿಂದ ನಾನು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದೆ. ನೀರು ಕೇಳುತ್ತಾ ಸಾಯುತ್ತಿರುವ ವ್ಯಕ್ತಿಯನ್ನು ನಾನು ನೋಡಿದೆ. ನಾನು ಅವನಿಗೆ ನೀರು ಕೊಟ್ಟೆ. ಆತ ಹೇಳಿದ- ‘ನೀವು ನೀಡಿದ ನೀರಿನಿಂದ ನನ್ನ ಜೀವ ಉಳಿಯಿತು’ ಎಂದು. ಒಬ್ಬ ವ್ಯಕ್ತಿಗೆ ನೀರು ಕೊಡುವುದರಿಂದ ನಾನು ಒಂದು ಜೀವವನ್ನು ಉಳಿಸಬಹುದೇ ಎಂದು ನಾನು ನಿರ್ಧರಿಸಿದೆ. ನಂತರ ನಾನು ಇನ್ನೂ ಕೆಲವು ಜೀವಗಳನ್ನು ಉಳಿಸಲು ಬದುಕಬೇಕು ಎಂದು ನಿರ್ಧರಿಸಿದೆ” ಎಂದು ಅವರು ಹೇಳಿದ್ದನ್ನು ಭಾಗೀರಥಿಬಾಯಿ ಕದಂ ನೆನೆಯುತ್ತಾರೆ.

ಮೈಸೂರಿನ ರಂಗಾಯಣಕ್ಕೆ ಅನಾಥ ಮಕ್ಕಳ ತಾಯಿ ಸಿಂಧೂತಾಯಿ ಸಪ್ಕಾಲ್‌ ಭೇಟಿ ನೀಡಿದ್ದ ಸಂದರ್ಭ. ರಂಗಾಯಣದ ಅಂದಿನ ನಿರ್ದೇಶಕಿ ಭಾಗೀರಥಿಬಾಯಿ ಕದಂ ಚಿತ್ರದಲ್ಲಿದ್ದಾರೆ.

“ಅವರು ಒಬ್ಬರ ಮಕ್ಕಳ ತಾಯಿಯಾಗಿರಲ್ಲ. ಸಾವಿರಾರು ಅನಾಥ ಮಕ್ಕಳ ತಾಯಿಯಾಗಿದ್ದರು. ಅಂತಹ ತಾಯಿಯನ್ನು ಚಿಣ್ಣರ ಮೇಳದ ನಾಟಕೋತ್ಸವಕ್ಕೆ ಕರೆಸಿದ್ದು ಒಂದು ಅವಿಸ್ಮರಣೀಯ ಕ್ಷಣ. ಅವರ ಸಾವಿನ ಸುದ್ದಿ ಕೇಳಿದ ಬಳಿಕ ಸಾವಿರಾರು ಮಕ್ಕಳು ಅನಾಥರಾದರೇನೋ ಅನಿಸುತ್ತಿದೆ. ಸಿಂಧೂ ತಾಯಿಯವರ ಮಾತುಗಳನ್ನು ಕೇಳಿದವರು ಸ್ಫೂರ್ತಿಯಿಂದ ಪುಟಿದೇಳುತ್ತಿದ್ದರು. ಚಿಣ್ಣರೊಂದಿಗೆ ಅಮ್ಮಂದಿರ ಕೈತುತ್ತು ಕಾರ್ಯಕ್ರಮವನ್ನು ರಂಗಾಯಣ ಆಯೋಜಿಸಿತ್ತು. ನೂರಾರು ಮಕ್ಕಳು ಸಿಂಧೂತಾಯಿಯವರ ಕೈತುತ್ತು ಸೇವಿಸಿದರು” ಎಂದು ಅವರು ಮೆಲುಕು ಹಾಕಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಂಧೂತಾಯಿ, ”ನನ್ನನ್ನು ದೇವರು ಎನ್ನುತ್ತಾರೆ. ನಾನು ದೇವರಲ್ಲ, ನಾನು ತಾಯಿ. ಸಂಸಾರ ಎನ್ನುವುದು ಸೈಕಲ್‌ನ ಹಾಗೇ ಸೈಕಲ್‌ನ ಮುಂದಿನ ಚಕ್ರ ತಂದೆಯಾದರೆ, ಹಿಂದಿನ ಚಕ್ರ ತಾಯಿ. ಸೈಕಲ್‌ನಲ್ಲಿ ಹಿಂದಿನ ಚಕ್ರಕ್ಕೆ ಹೇಗೆ ಭಾರ ಜಾಸ್ತಿಯೋ ಹಾಗೇ ತಾಯಿಗೂ ಕೂಡ ಸಂಸಾರದ ಭಾರ ಜಾಸ್ತಿಯಾಗಿರುತ್ತದೆ. ತಂದೆ, ತಾಯಿ ತಮ್ಮ ಬಟ್ಟೆ ಹರಿದಿದ್ದರೂ, ಮಕ್ಕಳಿಗೆ ಉತ್ತಮ ಬಟ್ಟೆಯನ್ನು ಕೊಡಿಸುತ್ತಾರೆ. ಹಾಗೆಯೇ ಮಕ್ಕಳು ವೃದ್ಧಾಪ್ಯದಲ್ಲಿ ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳಬೇಕು” ಎಂದು ಆಶಿಸಿದ್ದರು.

“ನಾನು ಅನಾಥಳಾಗಿ ಬಂದೆ. ನನ್ನನ್ನು ಅನಾಥ ಮಕ್ಕಳು ತಾಯಿಯಾಗಿಸಿದರು. ಇಂದು ಅವರು ಅನಾಥರಲ್ಲ, ನಾನು ಅನಾಥಳಲ್ಲ. ನನ್ನೊಟ್ಟಿಗೆ ಅವರು, ಅವರೊಂದಿಗೆ ನಾನು ಇದ್ದೇನೆ. ಹಸಿವಿನ ನೋವು ಅನುಭವಿಸಿದ ನಾನು ಅದನ್ನು ದೂರಾಗಿಸಲು ಹಾಡು ಹಾಡಿ, ಭಿಕ್ಷೆ ಬೇಡಿ ಹಸಿವು ನೀಗಿಸುತ್ತಿದ್ದೆ. ಕುಟುಂಬದಿಂದ ದೂರ, ಅನಾಥೆ, ಹಸಿವು ಈ ಎಲ್ಲ ನೋವುಗಳಿಂದ ದೂರಾಗಬೇಕು ಎಂದು ಸಾಯಲು ನಿರ್ಧರಿಸಿದೆ. ಆ ಸಂದರ್ಭದಲ್ಲಿ ವೃದ್ಧರೊಬ್ಬರು ನೀರು ಕೇಳಿದರು ಅವರಿಗೆ ನೀರು ಕುಡಿಸಿದೆ. ನನ್ನ ಬದುಕಿಸಿದೆ ತಾಯಿ ಎಂದು ನುಡಿದರು. ಆ ಒಂದೇ, ಒಂದು ನುಡಿ ನನ್ನ ಬದುಕನ್ನು ಬದಲಿಸಿತು. ನನ್ನಲ್ಲಿಯೂ ಒಂದು ಶಕ್ತಿಯಿದೆ ಎಂದು ಅರಿತು ಅನಾಥರೆಲ್ಲರನ್ನೂ ನನ್ನ ಮಕ್ಕಳು ಎಂದು ಭಾವಿಸಿ ಅವರಿಗಾಗಿ ಬದುಕಿದೆ” ಎಂದು ಹೇಳಿದ್ದರು ಸಿಂಧೂತಾಯಿ.

ಈ ನೆನಪುಗಳನ್ನು ‘ನಾನುಗೌರಿ.ಕಾಂ’ ಜೊತೆ ಮೆಲುಕು ಹಾಕಿದ ಭಾಗೀರಥಿಬಾಯಿ ಕದಂ ಅವರು, “ಇಡೀ ಮಹಿಳೆಯರಿಗೆ ಸಿಂಧೂತಾಯಿ ಆದರ್ಶ ದೀಪವಾಗಿದ್ದರು. ಯಾವ ಹೆಣ್ಣು ತನ್ನಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಭಾವಿಸಿದ್ದಾಳೋ, ಹತಾಶೆಗೆ ಒಳಗಾಗಿದ್ದಾಳೋ ಆಕೆಯೂ ಎದ್ದು ನಿಂತು ಸಮಾಜದಲ್ಲಿ ಒಂದು ಒಳ್ಳೆಯ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಸಿಂಧೂತಾಯಿ ಉದಾಹರಣೆಯಾಗಿ ನಿಂತಿದ್ದಾರೆ. ಕಳೆದ ಐದಾರು ತಿಂಗಳ ಹಿಂದಿನವರೆಗೂ ಹಲವು ಮೆಸೇಜ್‌ಗಳನ್ನು ಅವರು ಕಳುಹಿಸುತ್ತಿದ್ದರು. ಓದು ಬರೆಯಲು ಬಾರದೇ ಇದ್ದ ಅವರು ತಾವಾಗಿಯೇ ವಿದ್ಯಾಭ್ಯಾಸ ಮಾಡಿ, ಎಲ್ಲವನ್ನೂ ಕಲಿತುಕೊಂಡು, ಮಕ್ಕಳಿಗೂ ವಿದ್ಯಾಭ್ಯಾಸ ಕಲಿಸಿ ಸಾಕಿ ಸಲುಹಿಸಿದರು. ಅವರ ಕಾರ್ಯಕ್ಕೆ ಅಸಂಖ್ಯಾತ ದಾನಿಗಳು ಸಹಾಯ ಮಾಡಿದ್ದರು. ಅವರ ಅಗಲಿಕೆಯಿಂದಾಗಿ ಮಹಿಳಾ ಸಮಾಜ ಒಂದು ದಾರಿದೀಪವನ್ನು ಕಳೆದುಕೊಂಡಂತಾಗಿದೆ” ಎಂದರು.


ಇದನ್ನೂ ಓದಿರಿ: ಅನಾಥ ಮಕ್ಕಳ ಮಹಾತಾಯಿ ‘ಸಿಂಧೂತಾಯಿ ಸಪ್ಕಾಲ್‌’ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...